ಆಜಾನ್ ವಿರುದ್ಧ ಮತ್ತೆ ಸಮರ – 23ರಂದು ರಾಜ್ಯಾದ್ಯಂತ ಹೋರಾಟಕ್ಕೆ ಶ್ರೀರಾಮಸೇನೆ ಕರೆ

Public TV
1 Min Read
mosque-loudspeakers
ಸಾಂದರ್ಭಿಕ ಚಿತ್ರ

ಕಲಬುರಗಿ: ರಾಜ್ಯದಲ್ಲಿ ಸ್ವಲ್ಪ ದಿನ ಬಿಡುವು ನೀಡಿದ್ದ ಆಜಾನ್ ಯುದ್ಧ ಮತ್ತೆ ಸದ್ದು ಮಾಡ್ತಿದೆ. ಮಸೀದಿಗಳು ಧ್ವನಿ ವರ್ಧಕಗಳ ನಿಯಮ ಉಲ್ಲಂಘನೆ ಮಾಡುತ್ತಿದ್ದರೂ ಅವುಗಳ ವಿರುದ್ಧ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಆಜಾನ್ ವಿರುದ್ಧ ಹಿಂದೂ ಸಂಘಟನೆಗಳು ಹೋರಾಟಕ್ಕೆ ನಿರ್ಧರಿಸಿವೆ.

andola shree

ಮಸೀದಿ ಧ್ವನಿವರ್ಧಕ ವಿರುದ್ಧ ಆಗಸ್ಟ್ 23ರಂದು, ರಾಜ್ಯಾದ್ಯಂತ ಶ್ರೀರಾಮಸೇನೆ ಬೃಹತ್ ಪ್ರತಿಭಟನೆಗೆ ಕರೆ ನೀಡಿದೆ. ಎಲ್ಲಾ ಜಿಲ್ಲೆಯ ಎಸ್‌ಪಿ ಕಚೇರಿಗಳ ಎದುರು ಪ್ರತಿಭಟನೆ ಮಾಡೋದಾಗಿ ಶ್ರೀರಾಮಸೇನೆ ಕರೆ ನೀಡಿದೆ. ಇದನ್ನೂ ಓದಿ: ಇಂಡಿಗೋ ವಿಮಾನದಲ್ಲಿ ಹೊಗೆ ಎಚ್ಚರಿಕೆ – ಕೋಲ್ಕತ್ತಾದಲ್ಲಿ ಲ್ಯಾಂಡಿಂಗ್

loudspeakers

ಈ ಕುರಿತು ಮಾತನಾಡಿರುವ ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಅವರು, ರಾಜ್ಯದ ಅನೇಕ ಮಸೀದಿಗಳಲ್ಲಿ ಇನ್ನೂ ಅನಧಿಕೃತವಾಗಿ ಆಜಾನ್ ಕೂಗಲು ಮೈಕ್‌ಗಳನ್ನು ಬಳಸಲಾಗುತ್ತಿದೆ. ಸರ್ಕಾರದ ಸುತ್ತೋಲೆಯಂತೆ ಕಡಿಮೆ ಡೆಸಿಬಲ್ ಬಳಸುತ್ತಿಲ್ಲ. ಹೀಗಾಗಿ ಆಗಸ್ಟ್ 23 ರಂದು ಹೋರಾಟದ ಜೊತೆಗೆ ಬೃಹತ್ ಪ್ರತಿಭಟನೆ ನಡೆಸಲು ಮುಂದಾಗಿದ್ದೇವೆ ಎಂದು ಹೇಳಿದ್ದಾರೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *