Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಂದು ಮಕ್ಕಳಿಲ್ಲದೇ ಮುಚ್ಚಿದ್ದ ಸರ್ಕಾರಿ ಕಾಲೇಜು ಇಂದು ರಾಜ್ಯಕ್ಕೆ ಮಾದರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಅಂದು ಮಕ್ಕಳಿಲ್ಲದೇ ಮುಚ್ಚಿದ್ದ ಸರ್ಕಾರಿ ಕಾಲೇಜು ಇಂದು ರಾಜ್ಯಕ್ಕೆ ಮಾದರಿ

Districts

ಅಂದು ಮಕ್ಕಳಿಲ್ಲದೇ ಮುಚ್ಚಿದ್ದ ಸರ್ಕಾರಿ ಕಾಲೇಜು ಇಂದು ರಾಜ್ಯಕ್ಕೆ ಮಾದರಿ

Public TV
Last updated: December 18, 2019 11:25 am
Public TV
Share
3 Min Read
KWR Sirsi College
SHARE

ಕಾರವಾರ: ಇಂದಿನ ದಿನಗಳಲ್ಲಿ ಪೋಷಕರು ಖಾಸಗಿ ಕಾಲೇಜಿಗೆ ಲಕ್ಷ ಲಕ್ಷ ಡೊನೇಷನ್ ನೀಡಿ ತಮ್ಮ ಮಕ್ಕಳನ್ನು ಸೇರಿಸುವ ಮೂಲಕ ಅವರ ಉಜ್ವಲ ಭವಿಷ್ಯದ ಕನಸು ಕಾಣುತ್ತಾರೆ. ಆದರೆ ಕೆಲ ಖಾಸಗಿ ಸಂಸ್ಥೆಗಳು ಹಣ ಮಾಡುವ ಉದ್ಯಮವಾದರೆ ಸರ್ಕಾರಿ ಕಾಲೇಜುಗಳು ಸಂಬಳ ಪಡೆಯುವ ಸಂಸ್ಥೆಯಾಗಿ ಮಾತ್ರ ನಿಂತಿದೆ. ಇಂತಹ ದಿನಗಳಲ್ಲಿ ಶಿರಸಿಯ ವೆಂಕಟರಾವ್ ನಿಲೇಕಣಿ ಸರ್ಕಾರಿ ಪದವಿಪೂರ್ವ ಕಾಲೇಜು ವಿಶೇಷ ಮುತುವರ್ಜಿಯಿಂದ ಖಾಸಗಿ ಕಾಲೇಜಗಳನ್ನು ಹಿಂದಿಕ್ಕಿದೆ.

ಈ ಹಿಂದೆ ವಿದ್ಯಾರ್ಥಿಗಳಿಲ್ಲದೇ ಚಿಕ್ಕಮಗಳೂರಿನ ಕುದುರೆಮುಖದಲ್ಲಿದ್ದ ಈ ಕಾಲೇಜು ಶಿರಸಿಯ ನೀಲಕಣಿಗೆ ಸ್ಥಳಾಂತರಿಸಲಾಯಿತು. ಇನ್ಫೋಸಿಸ್‍ನ ನಂದನ್ ನೀಲಕಣಿಯವರ ಕುಟುಂಬ ಎರಡು ಎಕರೆ ಜಮೀನನ್ನು ದಾನವಾಗಿ ನೀಡಿತು. ಇದರಿಂದ ಅತ್ಯಲ್ಪ ಕಡಿಮೆ ವಿದ್ಯಾರ್ಥಿಗಳಿಂದ ಒಂಬತ್ತು ವರ್ಷಗಳ ಹಿಂದೆ ಪ್ರಾರಂಭವಾಗಿ ಇಂದು 500 ಬಡ ಹಾಗೂ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಇಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.

KWR Sirsi College C

ಕಾಲೇಜಿನ ವಿಶೇಷತೆ: ಈ ಕಾಲೇಜಿನಲ್ಲಿ 500 ವಿದ್ಯಾರ್ಥಿಗಳು ಪಿಯು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಬಹುತೇಕರು ಬಡ ಹಾಗೂ ದಲಿತ, ಹಿಂದುಳಿದ ವರ್ಗದ ವಿದ್ಯಾರ್ಥಿಗಳೇ ಇಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ. ಈ ಸರ್ಕಾರಿ ಕಾಲೇಜ್ ಬೆಳಗ್ಗೆ 8 ಗಂಟೆಗೆ ಪ್ರಾರಂಭವಾಗಿ ರಾತ್ರಿ 8ರವರೆಗೆ ತೆರೆದಿರುತ್ತದೆ. ಕಾಲೇಜಿನ ಸಮಯ ಮುಗಿದರೂ ವಿದ್ಯಾರ್ಥಿಗಳ ಭವಿಷ್ಯ ಮುಂದಿಟ್ಟುಕೊಂಡು ಇಲ್ಲಿನ ಸಿಬ್ಬಂದಿಒ ವಿಶೇಷ ಮುತುವರ್ಜಿ ವಹಿಸಿ ರಾತ್ರಿ ಕೂಡ ಪಾಠ ಮಾಡುತ್ತಾರೆ.

ರಾತ್ರಿ ಸಹ ಪಾಠ ಕೇಳುವುದರಿಂದ ಸಿಬ್ಬಂದಿಯೇ ಖರ್ಚು ಮಾಡಿ ವಿದ್ಯಾರ್ಥಿಗಳಿಗೆ ಉಪಹಾರದ ವ್ಯವಸ್ಥೆ ಕಲ್ಪಿಸಿದ್ದಾರೆ. ವಿದ್ಯಾರ್ಥಿನಿಯರಿಗೆ ದೂರದ ಹಳ್ಳಿಗಳಿಗೆ ತೆರಳಲು ತಡವಾದ್ರೆ ವಸತಿ ವ್ಯವಸ್ಥೆಯನ್ನು ಸಹ ಕಾಲೇಜು ಸಿಬ್ಬಂದಿ ಕಲ್ಪಿಸಿದ್ದಾರೆ. ಪಿಯು ವಿಜ್ಞಾನ ವಿದ್ಯಾರ್ಥಿಗಳಿಗಾಗಿ ಸ್ಮಾರ್ಟ್ ಕ್ಲಾಸ್, ವೃತ್ತಿ ಕೌಶಲ್ಯ ತರಬೇತಿ, ಸ್ಪರ್ಧಾತ್ಮಕ ಪರೀಕ್ಷೆಗಾಗಿ ವಿಶೇಷ ತರಬೇತಿಯನ್ನು ಉಚಿತವಾಗಿ ನೀಡಲಾಗುತ್ತಿದೆ. ಪ್ರತಿ ವರ್ಷ ಈ ಕಾಲೇಜು ಶೇಕಡ 80 ರಿಂದ 90 ಫಲಿತಾಂಶ ಬರುವ ಮೂಲಕ ರಾಜ್ಯದ ಗಮನ ಸೆಳೆದಿದೆ.

KWR Sirsi College A

ನಾಗರಾಜ್ ಗಾವಂಕ್ಕರ್ ಈ ಕಾಲೇಜಿನ ಪ್ರಾಚಾರ್ಯರಾಗಿದ್ದು, ಖಾಯಂ-ಅರೆಕಾಲಿಕ ಸೇರಿದಂತೆ 19 ಉಪನ್ಯಾಸಕರು ಪಾಠ ಮಾಡುತ್ತಾರೆ. ಈ ಕಾಲೇಜಿನ ಗುಣಮಟ್ಟದ ಶಿಕ್ಷಣ ನೋಡಿ ಜಿಲ್ಲೆಯ ಹೊರಗಿನ ವಿದ್ಯಾರ್ಥಿಗಳು ಸಹ ಇಲ್ಲಿ ಕಲಿಯುತ್ತಿದ್ದಾರೆ. ಈ ಕಾಲೇಜಿಗೆ ಮಕ್ಕಳನ್ನು ಸೇರಿಸಲು ಪೋಷಕರು ಸಹ ಮುಗಿಬೀಳುತಿದ್ದು ಯಾವ ಖಾಸಗಿ ಕಾಲೇಜಿಗೂ ಕಡಿಮೆ ಇಲ್ಲ ಎನ್ನುವಂತಿದೆ.

ವಿಶೇಷ ತರಬೇತಿ: ಪಿ.ಯು ವಿಜ್ಞಾನ ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿ ಉಚಿತ ಸ್ಪರ್ಧಾತ್ಮಕ ಪರೀಕ್ಷೆಯ ವಿಶೇಷ ತರಬೇತಿ ನೀಡಲಾಗುತ್ತದೆ. ಕೌಶಲ್ಯ, ವೃತ್ತಿಪರ ತರಬೇತಿಗಳು ಉಚಿತವಾಗಿ ನೀಡುತ್ತಿದ್ದು ಇದಕ್ಕೆ ತಗಲುವ ಎಲ್ಲಾ ಖರ್ಚನ್ನು ಸಿಬ್ಬಂದಿ ನೋಡಿಕೊಳ್ಳುವ ಮೂಲಕ ಪೋಷಕರಿಗೆ ಯಾವುದೇ ಪ್ರತ್ಯೇಕ ಶುಲ್ಕ ಬಾರದಂತೆ ನೋಡಿಕೊಳ್ಳುತ್ತಾರೆ.

KWR Sirsi College B

ಸಮಯ ಮೀಸಲಿಟ್ಟ ಸಿಬ್ಬಂದಿ: ಸರ್ಕಾರಿ ಕಾಲೇಜು ಅಂದರೆ ದಿನದ ಕೊನೆಯ ಬೆಲ್ ಹೊಡೆದರೆ ಸಾಕು ಶಿಕ್ಷಕರು ಮನೆಗೆ ಹೋಗಿಬಿಡುತ್ತಾರೆ. ಆದರೆ ಇಲ್ಲಿ ಶಿಕ್ಷಕರು ಮನೆಗೆ ಹೋಗುವುದಿಲ್ಲ. ಮಕ್ಕಳೊಂದಿಗೆ ಇದ್ದು ಅವರಿಗೆ ಕಷ್ಟವಾದ ಪಾಠವನ್ನು ಮತ್ತೆ ಹೇಳಿಕೊಡುತ್ತಾರೆ. ಯಾವ ಮಕ್ಕಳೂ ಶಿಕ್ಷಣದಲ್ಲಿ ಹಿಂದೆ ಬೀಳಬಾರದು ಎಂಬ ಕಾರಣಕ್ಕೆ ದೃಶ್ಯದ ಮೂಲಕವೂ ಸ್ಮಾರ್ಟ್ ಕ್ಲಾಸ್ ನಡೆಸುತ್ತಾರೆ.ಪ್ರತಿ ದಿನ ಇಲ್ಲಿನ ಉಪನ್ಯಾಸಕರು ಮನೆಯ ಮುಖ ನೋಡುವುದು ರಾತ್ರಿ ಹತ್ತರ ನಂತರ, ಅಲ್ಲಿಯವರೆಗೂ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಜೊತೆ ಇರುತ್ತಾರೆ.

ನಮ್ಮ ಕಾಲೇಜಿನಲ್ಲಿ ಕಲಿಯುವ ಬಹುತೇಕ ಮಕ್ಕಳು ಬಡವರಾಗಿದ್ದಾರೆ. ಪಿಯು ಶಿಕ್ಷಣ ಇವರ ಮುಂದಿನ ಭವಿಷ್ಯಕ್ಕೆ ಅತೀ ಮುಖ್ಯ. ಹೀಗಾಗಿ ಮುತವರ್ಜಿವಹಿಸಿ ಮಕ್ಕಳಿಗೆ ಕಾಲೇಜಿನ ಸಮಯದ ನಂತರವೂ ಅವರಿಗೆ ಶಿಕ್ಷಣ ನೀಡುತಿದ್ದೇವೆ. ಇಲ್ಲಿ ಕಲಿತ ಮಕ್ಕಳು ವೈದ್ಯಕೀಯ, ಇಂಜಿನಿಯರಿಂಗ್ ನಂತಹ ಶಿಕ್ಷಣ ಪಡೆದು ಸಮಾಜದಲ್ಲಿ ಉತ್ತಮ ಸ್ಥಾನಕ್ಕೆ ಹೋಗಿದ್ದಾರೆ. ನಮ್ಮ ಶ್ರಮಕ್ಕೆ ಇಲ್ಲಿನ ಮಕ್ಕಳು ಪ್ರತಿಫಲವಾಗಿ ಉತ್ತಮ ಫಲಿತಾಂಶ ಕೊಡುತ್ತಿದ್ದಾರೆ. ಈ ಬಾರಿ 100% ಫಲಿತಾಂಶವನ್ನು ತರುವ ಗುರಿ ನಮ್ಮದು ಎಂದು ಪ್ರಾಚಾರ್ಯ ನಾಗರಾಜ್ ಗಾಂವ್ಕರ್ ಹೇಳುತ್ತಾರೆ.

KWR Sirsi Collage D

ಇನ್ನು ತಾವು ಬಡವರಾಗಿದ್ದೇವೆ ಪಿಯುಸಿಯಲ್ಲಿ ಉತ್ತಮ ಅಂಕ ಗಳಿಸಿ ಇಂಜಿನಿಯರಿಂಗ್ ಮಾಡಬೇಕು ಎನ್ನುವ ಆಸೆಯಿದೆ. ಮನೆಯ ಬಡತನ ಹೊರಗೆ ಟ್ಯೂಷನ್ ಕೊಡಿಸಲು ಸಾಧ್ಯವಿಲ್ಲ. ಆದ್ರೆ ಇಲ್ಲಿ ಉಚಿತವಾಗಿ ವಸತಿ ಕೊಟ್ಟು ನಮಗೆ ತರಬೇತಿ ನೀಡುತತ್ತಿದ್ದಾರೆ. ಇದರಿಂದ ತಮಗೆ ಅನುಕೂಲವಾಗಿದೆ ಎಂದು ದ್ವಿತೀಯ ಪಿಯು ವಿದ್ಯಾರ್ಥಿನಿ ಐಶ್ವರ್ಯ ಹೇಳುತ್ತಾಳೆ.

ಸರ್ಕಾರಿ ಕಾಲೇಜು ಆಗಿದ್ದರೂ ತಮ್ಮ ವಿಶೇಷ ಕಾಳಜಿ ಮತ್ತು ಹಣ ಖರ್ಚು ಮಾಡಿ ಇಲ್ಲಿನ ಮಕ್ಕಳ ಮುಂದಿನ ಉಜ್ವಲ ಭವಿಷ್ಯ ಕಟ್ಟಲು ಇಲ್ಲಿನ ಉಪನ್ಯಾಸಕರು ಮುಂದಾಗಿರುವುದು ನಿಜವಾಗಿಯೂ ಶ್ಲಾಘನೀಯವಾಗಿದ್ದು ರಾಜ್ಯಕ್ಕೆ ಮಾದರಿಯಾಗಿದೆ.

TAGGED:Government CollegekarwarPublic TVSirsiಕಾರವಾರಪಬ್ಲಿಕ್ ಟಿವಿಶಿರಸಿಸರ್ಕಾರಿ ಕಾಲೇಜ್
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Abhishek Sharma 2
Cricket

ಹೈದರಾಬಾದ್‌ನಲ್ಲಿ ಸನ್‌ ಶೈನ್‌ – ಸಿಎಸ್‌ಕೆ ವಿರುದ್ಧ 10 ರನ್‌ಗಳ ಸೂಪರ್‌ ಜಯ

Public TV
By Public TV
4 hours ago
Mallikarjun kharge
Latest

543 ಸ್ಥಾನಗಳಲ್ಲೇ ಮಹಿಳೆಯರಿಗೆ 33% ಮೀಸಲಾತಿಯನ್ನು ತಕ್ಷಣವೇ ಜಾರಿಗೆ ತನ್ನಿ: ಮೋದಿಗೆ ಖರ್ಗೆ ಸವಾಲು

Public TV
By Public TV
4 hours ago
Iran Foreign Minister Abbas Araghchi
Latest

ಇರಾನ್‌ ವಿದೇಶಾಂಗ ಸಚಿವರನ್ನೇ ಮೂರ್ಖ ಎಂದ ಐಆರ್‌ಜಿಸಿ

Public TV
By Public TV
5 hours ago
Abhishek Sharma 1
Cricket

ಸಿಎಸ್‌ಕೆ ವಿರುದ್ಧ 15 ಎಸೆತಗಳಲ್ಲಿ ಫಿಫ್ಟಿ – ತನ್ನದೇ ದಾಖಲೆ ಮುರಿದ ಅಭಿ

Public TV
By Public TV
5 hours ago
01 13
Big Bulletin

ಬಿಗ್‌ ಬುಲೆಟಿನ್‌ 18 April 2026 ಭಾಗ-1

Public TV
By Public TV
5 hours ago
02 13
Big Bulletin

ಬಿಗ್‌ ಬುಲೆಟಿನ್‌ 18 April 2026 ಭಾಗ-2

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?