Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೊಬ್ಬಿರಿದ ಶ್ರೀಮುರಳಿಯ ಭರ್ಜರಿ ಭರಾಟೆ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಬೊಬ್ಬಿರಿದ ಶ್ರೀಮುರಳಿಯ ಭರ್ಜರಿ ಭರಾಟೆ!

Cinema

ಬೊಬ್ಬಿರಿದ ಶ್ರೀಮುರಳಿಯ ಭರ್ಜರಿ ಭರಾಟೆ!

Public TV
Last updated: October 18, 2019 3:52 pm
Public TV
Share
2 Min Read
collage
SHARE

ಬೆಂಗಳೂರು: ಶ್ರೀಮುರಳಿ ಇತ್ತೀಚಿನ ವರ್ಷಗಳಲ್ಲಿ ಯಾವುದೇ ಸಿನಿಮಾ ಮಾಡಿದರೂ ಮಾಸ್ ಅವತಾರದಲ್ಲಿ ಮಿಂಚುತ್ತಾ ಬರುತ್ತಿದ್ದಾರೆ. ಉಗ್ರಂ ಚಿತ್ರದ ಮೂಲಕ ಶುರವಾಗಿದ್ದ ಆ ಹಂಗಾಮಾ ರಥಾವರ ಮತ್ತು ಮಫ್ತಿ ಮೂಲಕ ಮತ್ತಷ್ಟು ಕಳೆಗಟ್ಟಿಕೊಂಡಿದೆ. ಹೀಗೆ ಸಾಗಿ ಬಂದಿರೋ ಶ್ರೀಮುರಳಿ ಭರಾಟೆಯಲ್ಲಿಯೂ ಮತ್ತದೇ ಮಾಸ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆಂಬುದು ಈ ಹಿಂದೆಯೇ ಸಾಬೀತಾಗಿತ್ತು. ಆದರೆ ಟ್ರೇಲರ್ ಮೂಲಕ ಕಾಣಿಸಿದ್ದು ಮಾತ್ರ ಮತ್ತೊಂದು ಥರದ ಛಾಯೆ. ಯಾವ ಕ್ರಿಯಾಶೀಲ ನಟರೂ ಮತ್ತೆ ಮತ್ತೆ ಒಂದೇ ಥರದ ಗೆಟಪ್ಪಿನಲ್ಲಿ ಕಾಣಿಸಿಕೊಳ್ಳಲು ಇಷ್ಟ ಪಡುವುದಿಲ್ಲ. ಅಂಥಾ ಬದಲಾವಣೆಯ ಪರ್ವ ಕಾಲದಲ್ಲಿದ್ದ ಶ್ರೀಮುರಳಿಯೀಗ ಅತ್ಯಂತ ಭಿನ್ನವಾದ ಕಥೆ ಮತ್ತು ಪಾತ್ರದ ಮೂಲಕ ಪ್ರೇಕ್ಷಕರ ಮುಂದೆ ಬಂದಿದ್ದಾರೆ. ಅಂಥಾ ಬದಲಾವಣೆಗೆ ಕಾರವಾಗಿರೋ ‘ಭರಾಟೆ’ ಇದೀಗ ಶುರುವಾಗಿದೆ.

SRIMURALI

ಇದು ಬೊಬ್ಬಿರಿದು ಅಬ್ಬರಿಸಿದ ಶ್ರೀಮುರಳಿಯ ಭರ್ಜರಿ ಭರಾಟೆ ಅಂತ ನಿಸ್ಸಂಶಯವಾಗಿ ಯಾರಿಗಾದರೂ ಅನ್ನಿಸದಿರೋದಿಲ್ಲ. ಅಂಥಾ ರುಚಿಕಟ್ಟಾದ ಚಿತ್ರವನ್ನೇ ಚೇತನ್ ಕುಮಾರ್ ಕಟ್ಟಿ ಕೊಟ್ಟಿದ್ದಾರೆ. ಆರಂಭದಿಂದಲೂ ಇದೊಂದು ವಿಶೇಷವಾದ ಕಥೆಯ ಚಿತ್ರ ಎಂಬ ಬಗ್ಗೆ ಚಿತ್ರತಂಡ ಸುಳಿವುಗಳನ್ನು ಬಿಟ್ಟು ಕೊಡುತ್ತಲೇ ಬಂದಿತ್ತು. ಅದಕ್ಕೆ ತಕ್ಕುದಾದ ಕಥೆಯೊಂದಿಗೆ ಈ ಚಿತ್ರ ಶ್ರೀಮುರಳಿಯವರನ್ನು ಹಲವಾರು ಶೇಡುಗಳಲ್ಲಿ ಪ್ರೇಕ್ಷಕರ ಮುಂದೆ ಅನಾವರಣಗೊಳಿಸುವಲ್ಲಿ ಗೆದ್ದಿದೆ. ಥರ ಥರದ ಶೇಡುಗಳಿರೋ ಪಾತ್ರದ ಮೂಲಕ ಶ್ರೀಮುರಳಿ ಕೂಡಾ ಎಲ್ಲರೂ ಅಚ್ಚರಿಗೊಳ್ಳುವಂಥಾ ಅಭಿನಯ ನೀಡಿದ್ದಾರೆ.

SRIMURALI

ಭರಾಟೆಯ ಕಥೆ ತೆರೆದುಕೊಳ್ಳುವುದೇ ರಾಜಸ್ಥಾನದಿಂದ. ಇಲ್ಲಿ ಶ್ರೀಮುರಳಿ ಜಗನ್ ಎಂಬ ಪಾತ್ರದಲ್ಲಿ ನಟಿಸಿದ್ದಾರೆ. ಈತನಿಗೆ ನಾಟಿ ಔಷಧದ ವಿದ್ಯೆ ಎಂಬುದು ತಂದೆಯಿಂದ ಬಂದ ಬಳುವಳಿ. ನಾನಾ ರೀತಿಯ ಕಾಯಿಲೆಗಳಿಗೆ ಈ ಮೂಲಕವೇ ಔಷಧಿ ಕೊಡುತ್ತಾ ಅದರ ನಡುವೆಯೇ ಪ್ರವಾಸಿಗರ ಪಾಲಿಗೆ ಗೈಡ್ ಆಗಿಯೂ ಜನ್ ಕಾರ್ಯ ನಿರ್ವಹಿಸುತ್ತಿರುತ್ತಾನೆ. ಈ ನಾಟಿ ವೈದ್ಯ ಮತ್ತು ಗೈಡ್ ಕೆಲಸದ ನಡುವೆಯೇ ಜನುಮಾಂತರದ್ದೆಂಬಂತಿರೋ ವೈಶಮ್ಯದ ಕಥೆಯೊಂದು ಬಿಚ್ಚಿಕೊಳ್ಳುತ್ತದೆ. ಇದೇ ಹೊತ್ತಿನಲ್ಲಿ ಜಗನ್ ಕರ್ನಾಟಕಕ್ಕೆ ಪ್ರವೇಶಿಸುವಂಥಾ ಸಂದರ್ಭ ಸೃಷ್ಟಿಯಾಗುತ್ತೆ. ಅಲ್ಲೆಯೇ ತಾಜಸ್ಥಾನದಲ್ಲಿ ಗೈಡ್ ಆಗಿದ್ದಾಗ ಸಿಕ್ಕಿದ್ದ ಹುಡುಗಿ ಮತ್ತೆ ಮುಖಾ ಮುಖಿಯಾಗುತ್ತಾಳೆ.

ಅಲ್ಲಿಂದ ಗಾಢ ಪ್ರೇಮ ಮತ್ತು ನಖಶಿಖಾಂತ ಉರಿದು ಬೀಳುವಂಥಾ ದ್ವೇಷದ ಕಥಾನಕ ಗರಿಗೆದರಿಕೊಳ್ಳುತ್ತದೆ. ಅಲ್ಲಿಂದಾಚೆಗೆ ರೋಮ ರೋಮವೂ ನಿಮಿರಿಕೊಳ್ಳುವಂತಾ ಮಾಸ್ ಸನ್ನಿವೇಶಗಳು, ರೋಮಾಂಚನಗೊಳಿಸೋ ಪ್ರೇಮ ಸನ್ನಿವೇಶಗಳು ಮತ್ತು ಮನಮಿಡಿಯುವ ಕೌಟುಂಬಿಕ ಕಥನದೊಂದಿಗೆ ಕಥೆ ಮುಂದುವರೆಯುತ್ತೆ. ಮೊದಲೇ ತಿಳಿದಿರುವಂತೆ ಇಲ್ಲಿ ಖಳ ನಟರ ದಂಡೇ ಇದೆ. ಅವರೆಲ್ಲರ ಪಾತ್ರಗಳನ್ನೂ ಕೂಡಾ ಚೇತನ್ ಕುಮಾರ್ ಅಷ್ಟೇ ಆಸ್ಥೆಯಿಂದ ಎದುರಾಳಿಗಳ ಎದೆ ಅದುರುವಂತೆ ಕಟ್ಟಿ ಕೊಟ್ಟಿದ್ದಾರೆ. ಇದೊಂದು ಸಂಕೀರ್ಣವಾದ ಕಥೆ. ಒಂದೆಳೆ ಆಚೀಚೆಯಾದರೂ ಗೊತ್ತುಗುರಿಗಳೆಲ್ಲ ಚೆದುರಿ ಚೆಲ್ಲಾಪಿಲ್ಲಿಯಾಗುವ ದುರಂತವೆದುರಾಗುತ್ತಿತ್ತು.

ಆದರೆ ಚೇತನ್ ಕುಮಾರ್ ಅದನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ. ಯಾವ ಗೊಂದಲ ಗೋಜಲುಗಳಿಗೂ ಆಸ್ಪದವಿಲ್ಲದಂತೆ ಉಸಿರು ಬಿಗಿ ಹಿಡಿದು ನೋಡುವಂಥಾ ಆವೇಗದೊಂದಿಗೆ ಭರಾಟೆಯನ್ನು ಕಟ್ಟಿ ಕೊಟ್ಟಿದ್ದಾರೆ. ಜಗನ್ ಆಗಿ ಶ್ರೀಮುರಳಿ ನಟನೆಯ ವಿರಾಟ್ ರೂಪವನ್ನೇ ಪ್ರದರ್ಶಿಸಿದ್ದಾರೆ. ಕಿಸ್ ಮೂಲಕ ಗಮನ ಸೆಳೆದಿದ್ದ ಶ್ರೀಲೀಲಾ ಮಹತ್ವದ ತಮ್ಮ ಪಾತ್ರವನ್ನು ಸಮರ್ಥವಾಗಿಯೇ ನಿಭಾಯಿಸಿದ್ದಾರೆ. ಸಾಯಿಕುಮಾರ್ ಬ್ರದರ್ಸ್ ಸೇರಿದಂತೆ ಎಲ್ಲರ ಪಾತ್ರಗಳೂ ನೆನಪಿಟ್ಟುಕೊಳ್ಳುವಂತಿವೆ. ಕ್ಯಾಮೆರಾ ವರ್ಕ್, ಹಿನ್ನೆಲೆ ಸಂಗೀತ, ಸಂಕಲನ ಸೇರಿದಂತೆ ಎಲ್ಲವೂ ಫುಲ್ ಮಾಕ್ರ್ಸ್ ತೆಗೆದುಕೊಳ್ಳಬಹುದಾದ ಶೈಲಿಯಲ್ಲಿಯೇ ಮೂಡಿ ಬಂದಿವೆ. ಈ ಮೂಲಕ ನಿರ್ದೇಶಕ ಚೇತನ್ ಕುಮಾರ್ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದಾರೆ. ನಿರ್ಮಾಪಕ ಸುಪ್ರೀತ್ ಅವರ ಶ್ರದ್ಧೆಗೆ, ಕನಸುಗಾರಿಕೆಗೆ ಪ್ರತೀ ಫ್ರೇಮುಗಳಲ್ಲಿಯೂ ಸಾಕ್ಷಿಗಳು ಸಿಗುತ್ತವೆ. ಒಟ್ಟಾರೆಯಾಗಿ ಭರಾಟೆ ಫ್ಯಾಮಿಲಿ ಪ್ಯಾಕೇಜಿನಂತೆ ಮೂಡಿ ಬಂದಿದೆ.

ರೇಟಿಂಗ್ : 4/5 

TAGGED:bengaluruBharatePublic TVroaring starsrimuruliಪಬ್ಲಿಕ್ ಟಿವಿಬೆಂಗಳೂರುಭರಾಟೆರೋರಿಂಗ್ ಸ್ಟಾರ್ಶ್ರೀ ಮುರಳಿ
Share This Article
Facebook Whatsapp Whatsapp Telegram

Cinema news

Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories

You Might Also Like

Haveri Rain Effect
Districts

ಹಾವೇರಿಯಲ್ಲಿ ಬಿರುಗಾಳಿ ಸಹಿತ ಮಳೆ – ಧರೆಗೆ ಉರುಳಿದ ವಿದ್ಯುತ್ ಕಂಬಗಳು, ಮರ ಬಿದ್ದು ಆಟೋ ಜಖಂ

Public TV
By Public TV
36 minutes ago
NDA announces seat sharing pact BJP AIADMK
Latest

ತಮಿಳುನಾಡಿನಲ್ಲಿ ಎನ್‌ಡಿಎ ಸೀಟು ಹಂಚಿಕೆ ಅಂತಿಮ – 27 ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧೆ

Public TV
By Public TV
51 minutes ago
Laljit Singh Bhullar 1
Latest

ಅಧಿಕಾರಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ – ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ಭುಲ್ಲರ್ ಅರೆಸ್ಟ್

Public TV
By Public TV
1 hour ago
Supreme Court 1
Court

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ – ರಾಜ್ಯ ಸರ್ಕಾರ, ಸಿಬಿಐಗೆ ಸುಪ್ರೀಂ ನೋಟಿಸ್

Public TV
By Public TV
1 hour ago
gold silver price drop market crash
Latest

ಚಿನ್ನದ ದರ ದಾಖಲೆಯ ಕುಸಿತ – ಏರಿದ್ದ ಚಿನ್ನದ ಬೆಲೆ ದಿಢೀರ್‌ ಇಳಿಕೆಗೆ ಕಾರಣ ಏನು?

Public TV
By Public TV
2 hours ago
AI Image
Bengaluru City

ಮಕ್ಕಳಿಗೆ ಡಿಜಿಟಲ್ ಬಳಕೆ ಹೇಗೆ? – ಶಿಕ್ಷಣ, ಆರೋಗ್ಯ ಇಲಾಖೆ & ನಿಮ್ಹಾನ್ಸ್‌ನಿಂದ ಗೈಡಲೈನ್ಸ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?