ನವದೆಹಲಿ: ನೂಪುರ್ ಶರ್ಮಾರ ಶಿರಚ್ಛೇದನ ಮಾಡುವಂತೆ ಚಿತ್ರಿಸಲಾಗಿದ್ದ ವೀಡಿಯೋ ಅಪ್ಲೋಡ್ ಮಾಡಿ ಜಮ್ಮು ಕಾಶ್ಮೀರ ಪೊಲೀಸರಿಂದ ಬಂಧಿತನಾಗಿದ್ದ ಯೂಟ್ಯೂಬರ್ ಫೈಸಲ್ ವಾನಿಗೆ ಶ್ರೀನಗರ ನ್ಯಾಯಾಲಯ ಜಾಮೀನು ನೀಡಿದೆ.
ಆರೋಪಿಯ ವಿರುದ್ಧದ ಅಪರಾಧಗಳು ಕಾನೂನಿನಡಿ ಕಠಿಣ ಶಿಕ್ಷೆಗೆ ಒಳಗಾಗುವಂತಹದ್ದಲ್ಲ. ಅಲ್ಲದೆ ಆರೋಪಿ ದೇಶದಿಂದ ಪಲಾಯನ ಮಾಡುವ ಸಂದರ್ಭವಾಗಲಿ ಕ್ರಿಮಿನಲ್ ಹಿನ್ನೆಲೆಯಾಗಲಿ ಇಲ್ಲ. ಹಾಗಾಗಿ ಇಂತಹ ಪ್ರಕರಣದಲ್ಲಿ ಜಾಮೀನು ನಿರಾಕರಿಸುವುದು ಅನ್ಯಾಯವಾಗುತ್ತದೆ ಎಂದು ಜಾಮೀನು ನೀಡುವ ವೇಳೆ ಶ್ರೀನಗರದ ಪ್ರಥಮ ದರ್ಜೆ ನ್ಯಾಯಾಲಯದ ಮ್ಯಾಜಿಸ್ಟ್ರೇಟ್ ಅಜಯ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: RSS ಕಾರ್ಯಕರ್ತರು ಸೇನೆಗೆ ಸೇರೋದ್ರಲ್ಲಿ ತಪ್ಪೇನು: ಸುಧಾಕರ್ ಪ್ರಶ್ನೆ
ಆರೋಪಿ ಕಳೆದ 7 ದಿನಗಳಿಂದ ಪೊಲೀಸ್ ಬಂಧನದಲ್ಲಿದ್ದಾನೆ. ಆತನನ್ನು ಇನ್ನಷ್ಟು ಕಾಲ ಬಂಧನದಲ್ಲಿಡುವುದರಿಂದ ಉಪಯುಕ್ತ ಉದ್ದೇಶ ಈಡೇರುವುದಿಲ್ಲ. ಹಾಗಾಗಿ ಆರೋಪಿಗೆ ಜಾಮೀನು ನಿರಾಕರಿಸುವುದು ಅನ್ಯಾಯವಾಗುತ್ತದೆ ಎಂದು ನ್ಯಾಯಾಧೀಶರು ತಿಳಿಸಿದ್ದಾರೆ. ಇದನ್ನೂ ಓದಿ: ಮೋದಿ ನನ್ನ ತಾಯಿಯನ್ನು ನೆನಪಿಸಿಕೊಂಡರು ಎಂದು ಕಣ್ಣೀರಿಟ್ಟ ರಾಮದಾಸ್ – ಇದು ಕೌಟುಂಬಿಕ ಸಂಬಂಧ
ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಪ್ರವಾದಿ ಮೊಹಮ್ಮದ್ ಪೈಗಂಬರ್ ವಿರುದ್ಧ ಅವಹೇಳಕಾರಿ ಹೇಳಿಕೆ ನೀಡಿದ್ದಾರೆಂದು ದೇಶವ್ಯಾಪಿ ಹಲವೆಡೆ ಪ್ರತಿಭಟನೆ ನಡೆಯುತ್ತಿದ್ದವು. ಇದೇ ವೇಳೆ ಯುಟ್ಯೂಬರ್ ಒಬ್ಬರು ಅವರ ಶಿರಚ್ಛೇದನ ಮಾಡಿರುವಂತೆ ವೀಡಿಯೋ ಮಾಡಿ ಅಪ್ಲೋಡ್ ಮಾಡಿದ್ದರು. ಈ ಸಂಬಂಧ ಐಪಿಸಿ ಸೆಕ್ಷನ್ 505(2) (ಸಮುದಾಯಗಳ ನಡುವೆ ದ್ವೇಷ ಮೂಡಿಸುವ ಹೇಳಿಕೆ), ಐಪಿಸಿ 506ರ(ಬೆದರಿಕೆ) ಅಡಿ ಆರೋಪಿಯನ್ನು ಬಂಧಿಸಲಾಗಿತ್ತು.
ಅಪ್ಲೋಡ್ ಮಾಡಿದ ಕೂಡಲೇ ವೀಡಿಯೋ ಡಿಲೀಟ್ ಮಾಡಿ ನಂತರ ಕ್ಷಮೆ ಕೋರುವ ಮತ್ತೊಂದು ವೀಡಿಯೋವನ್ನು ಆರೋಪಿ ಹಾಕಿದ್ದ ಎಂದು ವಾನಿ ಪರ ವಕೀಲರು ವಾದಿಸಿದ್ದರು.