ಶ್ರೀನಗರ: ಪುಲ್ವಾಮಾದಲ್ಲಿ ಇಬ್ಬರು ವಲಸೆ ಕಾರ್ಮಿಕರ ಮೇಲೆ ಗುಂಡಿನ ದಾಳಿ ನಡೆದ ಕೆಲವೇ ಗಂಟೆಗಳ ನಂತರ ಉಗ್ರರು ನಡೆಸಿದ ದಾಳಿಯ ವೇಳೆ ಸಿಆರ್ಪಿಎಫ್ ಸಿಬ್ಬಂದಿಯೊಬ್ಬರು ಹುತಾತ್ಮರಾಗಿದ್ದು, ಇನ್ನೊಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ.
ಶ್ರೀನಗರದ ಭದ್ರತಾ ಪಡೆಗಳ ಜಂಟಿ ಚೆಕ್ ಪಾಯಿಂಟ್ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ದಾಳಿ ಬಳಿಕ ಉಗ್ರರು ಪರಾರಿಯಾಗುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಹಿನ್ನೆಲೆಯಲ್ಲಿ ಘಟನೆ ನಡೆದ ಪ್ರದೇಶದಲ್ಲಿ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದೆ. ಭಯೋತ್ಪಾದಕರ ಪತ್ತೆಗಾಗಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ತನ್ನ ಸಮಸ್ತ ಆಸ್ತಿಯನ್ನು ರಾಹುಲ್ ಗಾಂಧಿ ಹೆಸರಿಗೆ ವಿಲ್ ಮಾಡಿದ 78ರ ಮಹಿಳೆ
ಇಂದು ಮುಂಜಾನೆ, ಪುಲ್ವಾಮಾ ಜಿಲ್ಲೆಯಲ್ಲಿ ನಡೆದ ಉಗ್ರರ ದಾಳಿಯಲ್ಲಿ ಬಿಹಾರ ಮೂಲದ ಇಬ್ಬರು ಸ್ಥಳೀಯೇತರ ಕಾರ್ಮಿಕರು ಗಾಯಗೊಂಡಿದ್ದಾರೆ. ಭಾನುವಾರದಿಂದ ವಲಸೆ ಕಾರ್ಮಿಕರ ಮೇಲೆ ನಡೆದ ಎರಡನೇ ದಾಳಿ ಇದಾಗಿದೆ. ಗಾಯಗೊಂಡ ಭದ್ರತಾ ಸಿಬ್ಬಂದಿಯನ್ನು ಎಸ್ಎಂಎಚ್ಎಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ: ಬಿಜೆಪಿ, ಅವರ ದೊಡ್ಡ ಪರಿವಾರದವರು ಅನೇಕ ಭಾವನಾತ್ಮಕ ವಿಚಾರಗಳನ್ನು ಎತ್ತುತ್ತಿದ್ದಾರೆ: ರಾಮಲಿಂಗಾ ರೆಡ್ಡಿ