ಚಿಕ್ಕಮಗಳೂರು: ದೇಶಕ್ಕೆ ಮಾರಕವಾಗಿರೋ ಕೊರೊನಾ ವೈರಸ್ನಿಂದ ಬಂದಿರುವ ಸಂಕಷ್ಟ ನಿವಾರಣೆಗಾಗಿ ಪ್ರಧಾನ ಮಂತ್ರಿ ಪರಿಹಾರ ನಿಧಿಗೆ ಜಿಲ್ಲೆಯ ಶೃಂಗೇರಿ ಮಠದ ಸಿಬ್ಬಂದಿ ವರ್ಗ 10 ಲಕ್ಷ ರೂಪಾಯಿಯನ್ನ ದೇಣಿಗೆಯಾಗಿ ನೀಡಿದೆ.
ಎಲ್ಲಾ ಸಿಬ್ಬಂದಿ ತಮ್ಮ ಮಾಸಿಕ ವೇತನದಲ್ಲಿ ಈ ಹಣ ನೀಡಿದ್ದಾರೆ. ಅಷ್ಟೇ ಅಲ್ಲದೇ ದೇಶವೇ ಲಾಕ್ಡೌನ್ ಆಗಿ ಕೆಲಸ ಕಾರ್ಯಗಳೆಲ್ಲಾ ನಿಂತಿರುವುದರಿಂದ ನಿರ್ಗತಿಕರು, ನಿರಾಶ್ರಿತರು ಹಾಗೂ ತಾಲೂಕಿನಾದ್ಯಂತ ಅವಶ್ಯಕತೆ ಇರುವ ಜನರಿಗೆ ಮಠದ ವತಿಯಿಂದ ಪ್ರತಿದಿನ ಬೆಳಗ್ಗೆ ತಿಂಡಿ, ಮಧ್ಯಾಹ್ನ ಹಾಗೂ ರಾತ್ರಿಯ ಊಟದ ವ್ಯವಸ್ಥೆ ಮಾಡುತ್ತಿದೆ. ಇದನ್ನೂ ಓದಿ: ಮೂರು ದಿನದಲ್ಲಿ ಪಿಎಂ ಕೇರ್ಸ್ ನಿಧಿಗೆ 7,314 ಕೋಟಿ ರೂ. ಜಮೆ
- Advertisement 2
- Advertisement 3
ಮಠದ ವಾಹನಗಳಲ್ಲಿ ಊಟ-ತಿಂಡಿಯನ್ನು ಜನರು ಇರುವಲ್ಲಿಗೆ ಹೋಗಿ ಮೂರು ಹೊತ್ತು ಕೂಡ ಆಹಾರ ತಲುಪಿಸಲಾಗುತ್ತಿದೆ. ಜನಸಾಮಾನ್ಯರು ಕೂಡ ಅಗತ್ಯವಿರುವವರಿಗೆ ಸಹಕಾರ ನೀಡಬೇಕೆಂದು ಮಠದ ಆಡಳಿತಾಧಿಕಾರಿ ಗೌರಿಶಂಕರ್ ಮನವಿ ಮಾಡಿದ್ದಾರೆ.
- Advertisement 4
ಜೊತೆಗೆ ಜನಸಾಮಾನ್ಯರು ಕೂಡ ತಮ್ಮ ಕೈಲಾದಷ್ಟು ಮಟ್ಟಿಗೆ ಪ್ರಧಾನಿ ನಿಧಿಗೆ ಸಹಕರಿಸುವಂತೆ ಭಕ್ತರಲ್ಲಿ ಮನವಿ ಮಾಡಿಕೊಂಡಿದ್ದಾರೆ.