Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮರೆಯಾದ ನಿಷ್ಕಳಂಕ ರಾಜಕಾರಣಿ – ಸಿಎಂ, ಡಿಸಿಎಂ ಸೇರಿದಂತೆ ಗಣ್ಯರಿಂದ ಶ್ರೀನಿವಾಸ್ ಪ್ರಸಾದ್ ಅಂತಿಮ ದರ್ಶನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಮರೆಯಾದ ನಿಷ್ಕಳಂಕ ರಾಜಕಾರಣಿ – ಸಿಎಂ, ಡಿಸಿಎಂ ಸೇರಿದಂತೆ ಗಣ್ಯರಿಂದ ಶ್ರೀನಿವಾಸ್ ಪ್ರಸಾದ್ ಅಂತಿಮ ದರ್ಶನ

Districts

ಮರೆಯಾದ ನಿಷ್ಕಳಂಕ ರಾಜಕಾರಣಿ – ಸಿಎಂ, ಡಿಸಿಎಂ ಸೇರಿದಂತೆ ಗಣ್ಯರಿಂದ ಶ್ರೀನಿವಾಸ್ ಪ್ರಸಾದ್ ಅಂತಿಮ ದರ್ಶನ

Public TV
Last updated: April 29, 2024 10:45 pm
Public TV
Share
2 Min Read
V Srinivas prasad 1
SHARE

– ಮಂಗಳವಾರ ಬೌದ್ಧ ಧರ್ಮದ ಪ್ರಕಾರ ಶ್ರೀನಿವಾಸ್ ಅಂತ್ಯಕ್ರಿಯೆ

ಮೈಸೂರು: ಹಳೆ ಮೈಸೂರು ಭಾಗದ ಪ್ರಭಾವಿ ದಲಿತ ಮುಖಂಡ, ಸ್ವಾಭಿಮಾನಿ ರಾಜಕಾರಣಿ, ದಲಿತ ಸಮುದಾಯದ ಬಹುದೊಡ್ಡ ಧ್ವನಿ, ನಿಷ್ಕಳಂಕ ರಾಜಕೀಯ ಜೀವನ ಪೂರೈಸಿದ್ದ ವಿ. ಶ್ರೀನಿವಾಸ್ ಪ್ರಸಾದ್ (V Srinivasa Prasad) ಅಸ್ತಂಗತರಾಗಿದ್ದಾರೆ. ಈ ಮೂಲಕ ರಾಜ್ಯ ರಾಜಕೀಯದ ಮಹಾನ್ ಕೊಂಡಿ ಕಳಚಿದಂತಾಗಿದೆ.

ಮೈಸೂರಿನ (Mysuru) ಅಶೋಕಪುರಂನ ಶ್ರೀನಿವಾಸ ಪ್ರಸಾದ್ ಚಾಮರಾಜನಗರ (Chamarajanagar) ಮೀಸಲು ಲೋಕಸಭಾ ಕ್ಷೇತ್ರದಿಂದ ಆರು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. ನಂಜನಗೂಡು ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿದ್ದರು. ಕೇಂದ್ರ ಮತ್ತು ರಾಜ್ಯದಲ್ಲಿ ಒಮ್ಮೆ ಸಚಿವರಾಗಿ ಕೆಲಸ ಮಾಡಿ ಕಳೆದ ತಿಂಗಳು ರಾಜಕೀಯ ನಿವೃತ್ತಿ ಪಡೆದು ವಿಶ್ರಾಂತಿ ಜೀವನ ಆರಂಭಿಸಿದ್ದರು. ಶ್ರೀನಿವಾಸ್ ಪ್ರಸಾದ್ ಅವರಿಗೆ ಪತ್ನಿ ಹಾಗೂ ಮೂವರು ಹೆಣ್ಣು ಮಕ್ಕಳಿದ್ದಾರೆ. ಇದನ್ನೂ ಓದಿ: ಪ್ರವಾಸಿಗರೇ ಗಮನಿಸಿ – ಊಟಿ, ಕೊಡೈಕೆನಾಲ್‌ಗೆ ಹೋಗಬೇಕಾದ್ರೆ ಇ-ಪಾಸ್‌ ಕಡ್ಡಾಯ

ರಾಜ್ಯಶಾಸ್ತ್ರದಲ್ಲಿ ಎಂ.ಎ ಮಾಡಿದ್ದ ಶ್ರೀನಿವಾಸ್ ಪ್ರಸಾದ್ 1974ರಲ್ಲಿ ಮೈಸೂರಿನ ಕೃಷ್ಣರಾಜ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸುವ ಮೂಲಕ ಚುನಾವಣಾ ರಾಜಕೀಯ ಪ್ರವೇಶಿಸಿದ್ದರು. ಮೊದಲ ಚುನಾವಣೆಯಲ್ಲಿ ಸೋತಿದ್ದರು. 1978ರಲ್ಲಿ ಟಿ.ನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋತಿದ್ದರು. ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್‌ನಿಂದ ಕಣಕ್ಕೆ ಇಳಿದು ನಾಲ್ಕು ಬಾರಿ ಗೆದ್ದರು. ಒಮ್ಮೆ ಜೆಡಿಯು ಅಭ್ಯರ್ಥಿಯಾಗಿ ಗೆದ್ದು ಕೇಂದ್ರದ ಮಂತ್ರಿಯಾಗಿದ್ದರು. 2019ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಸಂಸದನಾಗಿ ಆಯ್ಕೆ ಆಗಿದ್ದರು. ಅಲ್ಲದೆ ನಂಜನಗೂಡು ವಿಧಾನಸಭಾ ಕ್ಷೇತ್ರದಿಂದ 2008 ಹಾಗೂ 2013 ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಕಂದಾಯ ಸಚಿವರಾಗಿದ್ದ ಶ್ರೀನಿವಾಸ್ ಪ್ರಸಾದ್ ಅವಿವಾಹಿತ ಮಹಿಳೆಯರಿಗೆ ಮಾಶಾಸನ ನೀಡುವ ಮಹತ್ವದ ಮನಸ್ವಿನಿ ಯೋಜನೆಯನ್ನು ಜಾರಿಗೆ ತಂದಿದ್ದರು. ಇದನ್ನೂ ಓದಿ: ಬೈರತಿ ಬಸವರಾಜ್ ಕಾರು ಪಲ್ಟಿ – ಚಾಲಕ, ಗನ್ ಮ್ಯಾನ್‍ಗೆ ಗಾಯ

ತಮ್ಮ ಸಂಪುಟದಿಂದ ಕೈ ಬಿಟ್ಟ ಕಾರಣ ಕೋಪಗೊಂಡಿದ್ದ ಶ್ರೀನಿವಾಸ್ ಪ್ರಸಾದ್ ಸಿದ್ದರಾಮಯ್ಯ ವಿರುದ್ಧ ಬೇಸರಗೊಂಡು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ತ್ಯಜಿಸಿ ಬಿಜೆಪಿ ಸೇರ್ಪಡೆಯಾದರು. ಬಳಿಕ 2018ರಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಸೋಲು ಕಂಡಿದ್ದರು. ಇದನ್ನೂ ಓದಿ: ಮುರುಘಾ ಶ್ರೀಗೆ ಮೇ 27ರವರೆಗೆ ನ್ಯಾಯಾಂಗ ಬಂಧನ

ಆರು ಬಾರಿ ಸಂಸದರು ಹಾಗೂ ಎರಡು ಬಾರಿ ಶಾಸಕರಾಗಿ 40 ವರ್ಷಗಳ ಕಾಲ ಅಧಿಕಾರ ಇದ್ದರೂ ಕೂಡ ಎಂದಿಗೂ ಹೆಸರು ಕೆಡಿಸಿಕೊಳ್ಳದೇ ಕಳಂಕರಹಿತ ರಾಜಕೀಯ ಮಾಡಿದ್ದ ಖ್ಯಾತಿ ಶ್ರೀನಿವಾಸ್ ಪ್ರಸಾದ್ ಅವರಿಗಿದೆ. ದೀರ್ಘಕಾಲ ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿದ್ದ ಶ್ರೀನಿವಾಸ್ ಪ್ರಸಾದ್ ಇತ್ತೀಚಿಗೆ ಸಂಪೂರ್ಣ ವಿಶ್ರಾಂತಿಗೆ ಮೊರೆ ಹೋಗಿದ್ದರು. ಮೂತ್ರಪಿಂಡ ಕಾಯಿಲೆ ಉಲ್ಪಣಗೊಂಡು ಕೆಲ ದಿನಗಳ ಹಿಂದೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ. ಇದನ್ನೂ ಓದಿ: ಅಮಿತ್‌ ಶಾ ಫೇಕ್‌ ವಿಡಿಯೋ ಕೇಸ್‌ – ರೇವಂತ್‌ ರೆಡ್ಡಿಗೆ ಸಮನ್ಸ್‌, ಓರ್ವ ಕಾಂಗ್ರೆಸ್‌ ಕಾರ್ಯಕರ್ತ ಅರೆಸ್ಟ್‌

ಸುತ್ತೂರು ಶ್ರೀಗಳು, ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಸಚಿವರು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಹಲವು ಗಣ್ಯರು ಶ್ರೀನಿವಾಸ್ ಪ್ರಸಾದ್ ಅವರಿಗೆ ಅಂತಿಮ ನಮನ ಸಲ್ಲಿಸಿದರು. ನಾಳೆ (ಮಂಗಳವಾರ) ಶ್ರೀನಿವಾಸ್ ಪ್ರಸಾದ್ ಅವರ ಕುಟುಂಬದ ಟ್ರಸ್ಟ್ ಜಾಗದಲ್ಲಿ ಬೌದ್ಧ ಧರ್ಮದ ಪ್ರಕಾರ ಅಂತಿಮ ಸಂಸ್ಕಾರ ನಡೆಯಲಿದೆ. ಇದನ್ನೂ ಓದಿ: ಬಾಗಲಕೋಟೆಯಲ್ಲಿ ಬಾಲಾಕೋಟ್ ಏರ್‌ಸ್ಟ್ರೈಕ್‌ ರಹಸ್ಯ ರಿವೀಲ್‌ ಮಾಡಿದ ಮೋದಿ

TAGGED:bjpcongressDalit LeadermysuruSrinivasa Prasadಕಾಂಗ್ರೆಸ್ದಲಿತ ಮುಖಂಡಬಿಜೆಪಿಮೈಸೂರುಶ್ರೀನಿವಾಸ್ ಪ್ರಸಾದ್
Share This Article
Facebook Whatsapp Whatsapp Telegram

Cinema news

Bharti Singh Haarsh Limbachiyaa
ಹಾಸ್ಯನಟಿ ಭಾರ್ತಿ ಸಿಂಗ್‌, ಹರ್ಷ್‌ ಲಿಂಬಾಚಿಯಾ ದಂಪತಿಗೆ 2ನೇ ಮಗು ಜನನ
Bollywood Cinema Latest Top Stories
Koragajja Kannada Film 1
ಕೊರಗಜ್ಜ ಚಿತ್ರಕ್ಕಿದೆ ಮೆಸ್ಸಿ ಹಾಡು ಕ್ರಿಯೇಟ್ ಮಾಡಿದ ತಂಡದ ಲಿಂಕ್
Cinema Latest TV Shows
Ranya Rao 1
ಕಾಫಿಪೋಸಾ ಆದೇಶ ಪ್ರಶ್ನಿಸಿದ್ದ ರನ್ಯಾಗೆ ಮತ್ತೆ ಶಾಕ್ – ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru City Cinema Court Districts Karnataka Latest Top Stories
Vijay Deverakonda
ವಿಜಯ್ ದೇವರಕೊಂಡ ನಟನೆಯ ಹೊಸ ಚಿತ್ರದ ಅಪ್‌ಡೇಟ್‌
Cinema Latest South cinema

You Might Also Like

Yellow Line Metro
Bengaluru City

ಇದೇ ಭಾನುವಾರ ಹಳದಿ ಮಾರ್ಗದ ಮೆಟ್ರೋ ಸೇವೆ ಒಂದು ಗಂಟೆ ಲೇಟ್‌

Public TV
By Public TV
2 hours ago
Tilak Varma Hardik Pandya
Cricket

ಪಾಂಡ್ಯ ಸ್ಫೋಟಕ ಫಿಫ್ಟಿ – ಭಾರತಕ್ಕೆ 30 ರನ್‌ಗಳ ಜಯ

Public TV
By Public TV
2 hours ago
Anegondi Bridge collapse
Court

ಆನೆಗೊಂದಿ ಸೇತುವೆ ಕುಸಿತ ಕೇಸ್ – ರಾಜ್ಯ ಸರ್ಕಾರ ಬಡ್ಡಿ ಸಹಿತ 5.63 ಕೋಟಿ ಪರಿಹಾರ ನೀಡಬೇಕಿದ್ದ ಆದೇಶ ರದ್ದು: ಹೈಕೋರ್ಟ್‌

Public TV
By Public TV
2 hours ago
CET Exam
Bengaluru City

ಸಿಸಿಟಿವಿ ಕಣ್ಗಾವಲಿನಲ್ಲಿ ನೇಮಕಾತಿ ಪರೀಕ್ಷೆ: ಕೆಇಎ

Public TV
By Public TV
3 hours ago
SUPREME COURT
Court

ಕೇಂದ್ರದ ಪೂರ್ವಾನುಮತಿ ಇಲ್ಲದೆ ಅರಣ್ಯಭೂಮಿ ಗುತ್ತಿಗೆ ನೀಡಲು ಸಾಧ್ಯವಿಲ್ಲ: ಸುಪ್ರೀಂ

Public TV
By Public TV
3 hours ago
GBA
Bengaluru City

ಜಿಬಿಎ 5 ಪಾಲಿಕೆ ಚುನಾವಣೆ – ಸರ್ಕಾರದಿಂದ ಮೀಸಲಾತಿ ಮಾರ್ಗಸೂಚಿ ಪ್ರಕಟ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?