Bengaluru CityCinemaKarnatakaLatestSandalwood
ಶ್ರುತಿ ಹರಿಹರನ್ಗೆ ಸಂಕಷ್ಟ – ಮಾನನಷ್ಟ ಮೊಕದ್ದಮೆ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

Advertisements
ಬೆಂಗಳೂರು: ನಟ ಅರ್ಜುನ್ ಸರ್ಜಾ ಪರವಾಗಿ ನಟ ದೃವ ಸರ್ಜಾ ಅವರು ನಟಿ ಶ್ರುತಿ ಹರಿಹರನ್ ವಿರುದ್ಧ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ಅರ್ಜಿ ರದ್ದು ಪಡಿಸಲು ನ್ಯಾಯಾಲಯ ನಿರಾಕರಿಸಿದೆ. ಪರಿಣಾಮ ದೃವ ಸರ್ಜಾರ ಅರ್ಜಿ ಊರ್ಜಿತವಾಗಿದ್ದು, ಶ್ರುತಿ ಹರಿಹರನ್ ಅವರಿಗೆ ಸಂಕಷ್ಟ ಎದುರಾಗಿದೆ.
ತಮ್ಮ ಮೇಲೆ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು ರದ್ದು ಪಡಿಸುವಂತೆ ಕೋರಿ ನಟಿ ಶ್ರುತಿ ಹರಿಹರನ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದ ಸಿಟಿ ಸಿವಿಲ್ ಕೋರ್ಟ್, ಶ್ರುತಿ ಹರಿಹರಿನ್ ಅವರ ಅರ್ಜಿಯನ್ನು ಇಂದು ವಜಾಗೊಳಿಸಿದೆ.
ನಟ ಅರ್ಜನ್ ಸರ್ಜಾ ವಿರುದ್ಧ ಮೀಟೂ ಆರೋಪ ಮಾಡಿದ್ದ ಶ್ರುತಿ ಹರಿಹರನ್ ಅವರ ವಿರುದ್ಧ ಅರ್ಜುನ್ ಸರ್ಜಾ ಅವರ ಕುಟುಂಬಸ್ಥರು ಮಾನನಷ್ಟ ಮೊಕದ್ದಮೆ ದಾಖಲಿಸಲು ನಿರ್ಧರಿಸಿದ್ದರು. ಈ ಹಿನ್ನೆಲೆಯಲ್ಲಿ ದೃವ ಸರ್ಜಾ ಅವರು ಶ್ರುತಿ ಹರಿಹರನ್ ಅವರ ವಿರುದ್ಧ 5 ಕೋಟಿ ರೂ. ಪರಿಹಾರ ಕೋರಿ ಮೊಕದ್ದಮೆ ದಾಖಲಿಸಿದ್ದರು.