ಮೈಸೂರು: ಕೋವಿಡ್ನಿಂದ ಮೃತಪಟ್ಟವರ ಮನೆಗೆ ಬ್ಯಾಂಕ್ ನೋಟಿಸ್ ಕೊಟ್ಟರೆ ಕ್ರಮ ನಿಶ್ಚಿತ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ಗಳಲ್ಲಿ ಸಾಲ ಪಡೆದವರು ಕೋವಿಡ್ನಿಂದ ಮೃತಪಟ್ಟಿದ್ದರೆ, ಅವರು ಪಡೆದಿದ್ದ ಎಲ್ಲಾ ಸಾಲವನ್ನ ಮನ್ನಾ ಮಾಡಲಾಗಿದೆ. ಇದನ್ನು ಮೀರಿ ಯಾವುದಾದರೂ ಬ್ಯಾಂಕ್, ಮೃತಪಟ್ಟವರ ಮನೆಗೆ ನೋಟಿಸ್ ಕೊಟ್ಟರೆ ಬ್ಯಾಂಕ್ನವರ ಮೇಲೆ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಫೋಟೋಶೂಟ್ಗಾಗಿ ಬಂದಿದ್ದ ಮಹಿಳೆ ಮೇಲೆ ಲಾಡ್ಜ್ನಲ್ಲಿ ಗ್ಯಾಂಗ್ರೇಪ್
ಮಹಾನ್ ಮಾನವತಾವಾದಿ, ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್.ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನದಂದು ಧೀಮಂತ ನಾಯಕನಿಗೆ ಗೌರವಪೂರ್ಣ ನಮನಗಳು.
ಇಂದು ಮೈಸೂರಿನಲ್ಲಿ ಡಾ ಬಿ.ಆರ್ ಅಂಬೇಡ್ಕರ್ ಅವರ ಪುತ್ತಳಿಗೆ ಮಾಲಾರ್ಪಣೆ ಮಾಡಿ ನಂತರ ಮೈಸೂರಿನ ಬಿಜೆಪಿ ಕಚೇರಿಗೆ ಭೇಟಿ ನೀಡಿ ಅಣ್ಣನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. pic.twitter.com/dao86RQMvt
— S T Somashekar Gowda (@STSomashekarMLA) December 6, 2021
ದಾವಣಗೆರೆಯ ಒಂದು ಸಹಕಾರ ಬ್ಯಾಂಕ್ ನೋಟಿಸ್ ನೀಡಿದೆ ಎಂಬ ವಿಚಾರ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರ ಆಗಿದೆ. ಆದರೆ ಬ್ಯಾಂಕ್ನವರು ನೋಟಿಸ್ ಕೊಟ್ಟಿಲ್ಲ ಎಂದಿದ್ದಾರೆ. ನಾನು ಬೆಂಗಳೂರಿಗೆ ಹೋಗಿ ಇಲಾಖಾ ಅಧಿಕಾರಿಗಳ ಜೊತೆ ಸಭೆ ನಡೆಸುತ್ತೇನೆ. ಈ ವಿಚಾರದಲ್ಲಿ ತಪ್ಪಾಗಿದ್ದರೆ ಕ್ರಮ ನಿಶ್ಚಿತ ಎಂzದು ತಿಳಿಸಿದ್ದಾರೆ. ಇದನ್ನೂ ಓದಿ: ನಾನ್ ಬೆಡ್ಶೀಟ್, ತಲೆದಿಂಬು- ಬೆಡ್ರೂಮ್ ಫೋಟೋ ವೈರಲ್