Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗಣರಾಜ್ಯೋತ್ಸವಕ್ಕೆ ಕೆಂಪುಕೋಟೆ ಸಜ್ಜು – 10,000 ಗಣ್ಯರಿಗೆ ಆಹ್ವಾನ, ಮಿಲಿಟರಿ ಶಕ್ತಿ ಅನಾವರಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಗಣರಾಜ್ಯೋತ್ಸವಕ್ಕೆ ಕೆಂಪುಕೋಟೆ ಸಜ್ಜು – 10,000 ಗಣ್ಯರಿಗೆ ಆಹ್ವಾನ, ಮಿಲಿಟರಿ ಶಕ್ತಿ ಅನಾವರಣ

Latest

ಗಣರಾಜ್ಯೋತ್ಸವಕ್ಕೆ ಕೆಂಪುಕೋಟೆ ಸಜ್ಜು – 10,000 ಗಣ್ಯರಿಗೆ ಆಹ್ವಾನ, ಮಿಲಿಟರಿ ಶಕ್ತಿ ಅನಾವರಣ

Public TV
Last updated: January 26, 2025 8:06 am
Public TV
Share
2 Min Read
republic day parade
SHARE

– 139 ಸಾಧಕರಿಗೆ ಪದ್ಮ ಪ್ರಶಸ್ತಿ
– 5,000 ಕಲಾವಿದರಿಂದ ಸಾಂಸ್ಕೃತಿಕ ಮೆರವಣಿಗೆ

ನವದೆಹಲಿ: ದೇಶದೆಲ್ಲೆಡೆ 76ನೇ ಗಣರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ರಾಜ್ಯದಲ್ಲೂ ಸಂಭ್ರಮ, ಸಡಗರದಿಂದ ಗಣರಾಜ್ಯೋತ್ಸವ ಆಚರಿಸಲಾಗುತ್ತಿದೆ. ಈ ಹಿನ್ನೆಲೆ ಬೆಂಗಳೂರು ಸೇರಿದಂತೆ ಆಯಾ ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಲಿದೆ. ಇಂದು ದೆಹಲಿಯ ಕರ್ಥವ್ಯ ಪಥದಲ್ಲಿ ಆಕರ್ಷಕ ಪಥ ಸಂಚಲನ ನಡೆಯಲಿದೆ.

76ನೇ ಗಣರಾಜೋತ್ಸವ ಆಚರಣೆಗೆ ದೆಹಲಿಯ ಕೆಂಪುಕೋಟೆ ಸಜ್ಜಾಗಿದ್ದು, ಪರೇಡ್‌ನಲ್ಲಿ ದೇಶದ ಮಿಲಿಟರಿ ಶಕ್ತಿ ಜೊತೆಗೆ ದೇಶದ ಭವ್ಯ ಪರಂಪರೆ, ಸಂಸ್ಕೃತಿಯ ಅನಾವರಣ ಆಗಲಿದೆ. ಕರ್ನಾಟಕದ ಲಕ್ಕುಂಡಿ ಶಿಲ್ಪಕಲೆಯ ಸ್ತಬ್ಧಚಿತ್ರ ಮೆರವಣಿಗೆಯಲ್ಲಿ ಕಾಣಿಸಿಕೊಳ್ಳಲಿದೆ.

Republic Day 2 1

ಈ ಬಾರಿ ಸುವರ್ಣ ಭಾರತ, ಪರಂಪರೆ ಮತ್ತು ಅಭಿವೃದ್ಧಿ ಥೀಮ್‌ನಲ್ಲಿ ಗಣರಾಜೋತ್ಸವ ಆಚರಣೆ ಮಾಡಲಾಗುತ್ತಿದ್ದು, ಇಂಡೋನೇಷ್ಯಾದ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ ಸಮ್ಮುಖದಲ್ಲಿ ಪರೇಡ್ ನಡೆಯಲಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ ಸೇರಿ ಗಣ್ಯರು ಭಾಗಿಯಾಗಲಿದ್ದಾರೆ. ಈ ಐತಿಹಾಸಿಕ ಕ್ಷಣಕ್ಕೆ ಪ್ರಧಾನಿ ನರೇಂದ್ರ ಮೋದಿ, ಈ ಬಾರಿಯ ವಿಶೇಷ ಅತಿಥಿ ಇಂಡೋನೇಷ್ಯಾ ಅಧ್ಯಕ್ಷರು ಸೇರಿ ಇತರ ಗಣ್ಯರು ಸಾಕ್ಷಿಯಾಗಲಿದ್ದಾರೆ. 10,000 ಗಣ್ಯರಿಗೆ ಆಹ್ವಾನ ನೀಡಲಾಗಿದೆ. ಜೊತೆಗೆ ಇದೇ ಮೊದಲಬಾರಿಗೆ 5,000 ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಪ್ರದರ್ಶಿಸಲಾಗುತ್ತಿದೆ.

Republic Day 2025 Karnataka lakkundi Tableau 1

ಹೇಗಿದೆ ಭದ್ರತೆ?
ಪರೇಡ್‌ನಲ್ಲಿ 15 ರಾಜ್ಯಗಳು, ಕೇಂದ್ರಾಳಿತ ಪ್ರದೇಶಗಳು ಹಾಗೂ ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳಿಂದ ಸ್ತಬ್ಧಚಿತ್ರ ಪ್ರದರ್ಶನ, ಹತ್ತು ಸಾವಿರಕ್ಕೂ ಅಧಿಕ ವಿಶೇಷ ಅತಿಥಿಗಳು, ಒಂದು ಲಕ್ಷಕ್ಕೂ ಅಧಿಕ ಮಂದಿ ಸಾಕ್ಷಿಯಾಗಲಿದ್ದಾರೆ. ಹಾಗಾಗಿ ಕರ್ತವ್ಯ ಪಥದ ಸುತ್ತ ಭದ್ರತೆಯನ್ನು ಹೆಚ್ಚಿಸಲಾಗಿದ್ದು, 15,000ಕ್ಕೂ ಅಧಿಕ ಪೊಲೀಸರು, 70 ಪ್ಯಾರಾ ಮಿಲಿಟರಿ ಕಂಪನಿಗಳ ನಿಯೋಜನೆ ಮಾಡಲಾಗಿದೆ.

ಒಟ್ಟು 6 ಹಂತಗಳಲ್ಲಿ ಭದ್ರತೆಯನ್ನು ಮಾಡಿಕೊಳ್ಳಲಾಗಿದ್ದು, ಎಲ್ಲ ಕಡೆಗಳಲ್ಲಿಯೂ ಸಿಸಿಟಿವಿ ಕ್ಯಾಮೆರಾ, 500 ಎಐ ಕ್ಯಾಮೆರಾಗಳ ಅಳವಡಿಸಲಾಗಿದೆ. 40 ಅಧಿಕ ಕಂಟ್ರೋಲ್ ರೂಂಗಳಿಂದ ಇಡೀ ಕಾರ್ಯಕ್ರಮದ ಮೇಲೆ ಹದ್ದಿನ ಕಣ್ಣು ಇರಿಸಲಾಗಿದೆ.

Republic Day 2

139 ಸಾಧಕರಿಗೆ ಪದ್ಮ ಪ್ರಶಸ್ತಿ:
ಗಣರಾಜ್ಯೋತ್ಸವದ ಮುನ್ನಾದಿನ ಪದ್ಮ ಪ್ರಶಸ್ತಿಗಳನ್ನು ಘೋಷಿಸಲಾಯಿತು. ಇದರ ಅಡಿಯಲ್ಲಿ, ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ಪ್ರಶಸ್ತಿಗಳಿಗೆ ಪಾತ್ರರಾಗುವ ವ್ಯಕ್ತಿಗಳ ಹೆಸರನ್ನು ಘೋಷಿಸಲಾಯಿತು. ಈ ಬಾರಿ ರಾಷ್ಟ್ರಪತಿಗಳು 139 ಪದ್ಮ ಪ್ರಶಸ್ತಿಗಳನ್ನು ಅನುಮೋದಿಸಿದ್ದಾರೆ.

ಪಟ್ಟಿಯಲ್ಲಿ ಏಳು ಪದ್ಮವಿಭೂಷಣ ಮತ್ತು 19 ಪದ್ಮಭೂಷಣ ಪ್ರಶಸ್ತಿಗಳು ಸೇರಿವೆ. ಇದಲ್ಲದೇ, 113 ಪದ್ಮಶ್ರೀ ಪ್ರಶಸ್ತಿಗಳನ್ನು ಸಹ ಘೋಷಿಸಲಾಗಿದೆ. ಪ್ರಶಸ್ತಿ ಪುರಸ್ಕೃತರಲ್ಲಿ 23 ಮಹಿಳೆಯರು ಸೇರಿದ್ದಾರೆ. ಈ ಪಟ್ಟಿಯಲ್ಲಿ 10 ವಿದೇಶಿಯರು, NRIಗಳು, ಪಿಐಒಗಳು, ಒಸಿಐ ವರ್ಗದ ವ್ಯಕ್ತಿಗಳು ಸೇರಿದ್ದಾರೆ. ಅದೇ ಸಮಯದಲ್ಲಿ, 13 ಮರಣೋತ್ತರ ಪ್ರಶಸ್ತಿಗಳನ್ನು ಸಹ ಘೋಷಿಸಲಾಗಿದೆ. ಇದರಲ್ಲಿ ಭೋಜ್‌ಪುರಿ ಗಾಯಕಿ ಶಾರದಾ ಸಿನ್ಹಾ (ಮರಣೋತ್ತರ), ನ್ಯಾಯಮೂರ್ತಿ (ನಿವೃತ್ತ) ಜಗದೀಶ್ ಸಿಂಗ್ ಖೇಹರ್ ಮತ್ತು ಸುಜುಕಿ ಕಂಪನಿಯ ಒಸಾಮು ಸುಜುಕಿ (ಮರಣೋತ್ತರ), ಬಿಬೇಕ್ ಡೆಬ್ರಾಯ್, ಸುಶೀಲ್ ಮೋದಿ ಮತ್ತು ಮನೋಹರ್ ಜೋಶಿ (ಮರಣೋತ್ತರ) ಅವರ ಹೆಸರುಗಳು ಸೇರಿವೆ. ಪ್ರಮುಖವಾಗಿ ತಮಿಳು ನಟ ಅಜಿತ್‌ ಕುಮಾರ್‌ ಹಾಗೂ ತೆಲುಗು ನಟ ನಂದಮೂರಿ ಬಾಲಕೃಷ್ಣ ಅವರಿಗೆ ಪದ್ಬಭೂಷಣ, ಟೀಂ ಇಂಡಿಯಾದ ನಿರ್ಗಮಿತ ಸ್ಟಾರ್‌ ಆಟಗಾರ ಆರ್‌. ಅಶ್ವಿನ್‌ ಅವರಿಗೆ ಪದ್ಮಶ್ರೀ ಪ್ರಶಸ್ತಿ ಘೋಷಿಸಲಾಗಿದೆ.

TAGGED:76th Republic Day ParadeDroupadi MurmuKartavya Pathnarendra modiRepublic day Paradeಗಣರಾಜ್ಯೋತ್ಸವದ್ರೌಪದಿ ಮುರ್ಮುನರೇಂದ್ರ ಮೋದಿನವದೆಹಲಿ
Share This Article
Facebook Whatsapp Whatsapp Telegram

Cinema news

Jailer
ತಲೈವಾ ನಟನೆಯ ಜೈಲರ್-2 ಸಿನಿಮಾಗೆ ವಿದ್ಯಾ ಬಾಲನ್ ಎಂಟ್ರಿ!
Bollywood Cinema Latest South cinema Top Stories
Samantha Ruth Prabhu Raj Nidimoru
ಮದ್ವೆ ಬಳಿಕ ಕಾಣಿಸಿಕೊಂಡ ಸಮಂತಾ-ರಾಜ್ ನಿಡಿಮೋರು..!
Cinema Latest Top Stories
Miraj
ʻದೇವರು ರುಜು ಮಾಡಿದನುʼ ಚಿತ್ರದ ಸಾಂಗ್ ರಿಲೀಸ್ – ವಿರಾಜ್ ಬಿಂದಾಸ್ ಕುಣಿತ
Cinema Latest Sandalwood
gilli rajat
ರಜತ್‌ ಆಚೆ ಕಳಿಸಿಯೇ ನಾನು ಆಚೆ ಹೋಗೋದು: ಸುದೀಪ್‌ ಎದುರೇ ಗಿಲ್ಲಿ ಸವಾಲ್‌
Cinema Latest Top Stories TV Shows

You Might Also Like

Shamanuru
Bengaluru City

ಶಾಮನೂರು ಅಂತ್ಯಕ್ರಿಯೆಗೆ ಸ್ಥಳ ನಿಗದಿ – ಸೋಮವಾರ 12 ಗಂಟೆವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ

Public TV
By Public TV
7 hours ago
Shamanur Shivashankarappa
Bengaluru City

ಕಾಂಗ್ರೆಸ್‌ನ ಹಿರಿಯ ಶಾಸಕ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ

Public TV
By Public TV
7 hours ago
Team India 3
Cricket

ಧರ್ಮಶಾಲಾದಲ್ಲಿ ಟೀಂ ಇಂಡಿಯಾ ದರ್ಬಾರ್‌ – ಆಫ್ರಿಕಾ ವಿರುದ್ಧ 7 ವಿಕೆಟ್‌ಗಳ ಜಯ, ಸರಣಿ 2-1 ಮುನ್ನಡೆ

Public TV
By Public TV
8 hours ago
Nitin Nabin
Latest

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ಬಿಹಾರ ಸಚಿವ ನಿತಿನ್ ನಬಿನ್ ನೇಮಕ

Public TV
By Public TV
8 hours ago
Davangere DC office
Davanagere

ಶಾಮನೂರು ನಿಧನ – ಸೋಮವಾರ ದಾವಣಗೆರೆಯ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ

Public TV
By Public TV
8 hours ago
Shamanur Shivashankarappa 2
Bengaluru City

ದಾವಣಗೆರೆ ಧಣಿ ಶಾಮನೂರು ಶಿವಶಂಕರಪ್ಪ ನಿಧನ – ಸಿದ್ರಾಮಯ್ಯ, ದೇವೇಗೌಡ, ರಾಹುಲ್‌ ಗಾಂಧಿ ಸೇರಿ ಗಣ್ಯರಿಂದ ಸಂತಾಪ

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?