Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

Exclusive | ಮತ್ತೊಂದು ಭಂಡಾಟ ಬಯಲು – ಸಿಬ್ಬಂದಿ, ಸಮಯಾವಕಾಶದ ಕೊರತೆ ಅಂದ್ರೂ ಡೋಂಟ್ ಕೇರ್ ಅಂದಿದ್ದ ಸರ್ಕಾರ

Public TV
Last updated: June 8, 2025 2:09 pm
Public TV
Share
3 Min Read
Chinnaswamy Stampede
SHARE

– ಕಾರ್ಯಕ್ರಮಕ್ಕೆ ಸಮಯಾವಕಾಶ ಕೇಳಿ ಜೂ.4ರಂದೇ ಪತ್ರ ಬರೆದಿದ್ದ ಡಿಸಿಪಿ

ಬೆಂಗಳೂರು: ಆರ್‌ಸಿಬಿ (RCB) ವಿಜಯೋತ್ಸವ ಹಿನ್ನೆಲೆಯಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣ (Stampede Case) ಈಗ ರಾಜಕೀಯ ಸ್ವರೂಪ ಪಡೆದುಕೊಂಡಿದೆ. ಸಿಎಂ, ಡಿಸಿಎಂ, ಪರಮೇಶ್ವರ್ ರಾಜೀನಾಮೆಗೆ ವಿಪಕ್ಷಗಳು ಪಟ್ಟು ಹಿಡಿವೆ. ಈ ನಡುವೆ ಜೂನ್‌ ನಾಲ್ಕರಂದೇ ಭದ್ರತೆ ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನಸೌದ ಭದ್ರತಾ ವಿಭಾಗದ ಡಿಸಿಪಿ ಬರೆದ ಪತ್ರ ಸಂಚಲನ ಮೂಡಿಸಿದೆ.‌ ಇದರಿಂದ ಪೊಲೀಸರು ಬೇಡವೆಂದರೂ ಸರ್ಕಾರ ಹಠಕ್ಕೆ ಬಿದ್ದು ಕಾರ್ಯಕ್ರಮ ಮಾಡಿಸಿತಾ ಅನ್ನೋ ಪ್ರಶ್ನೆ ಹುಟ್ಟುಹಾಕಿದೆ.

Stampede 2

ಹೌದು.. ಡಿಸಿಪಿ (Vidhan Soudha DCP) ಕರಿಬಸವನಗೌಡ ಅವರು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಿಗೆ ಬರೆದ ಪತ್ರದಲ್ಲಿ ಸರ್ಕಾರದ ಮತ್ತೊಂದು ಭಂಡಾಟ ಬಯಲಾಗಿದೆ. ಆರ್‌ಸಿಬಿ ಅಭಿಮಾನಿಗಳ ಸಂಖ್ಯೆ ದೇಶಾದ್ಯಂತ ಇದೆ. ಆದ್ರೆ ನಮ್ಮಲ್ಲಿ ಸಿಬ್ಬಂದಿ ಕೊರತೆ ಇರೋದ್ರಿಂದ ಬಂದೋಬಸ್ತ್‌ಗೆ ತೊಂದರೆಯಾಗಲಿದೆ ಅನ್ನೋ ಅಂಶವನ್ನೂ ಪತ್ರದಲ್ಲಿ ಉಲ್ಲೇಖಿಸಿರುವುದು ಬೆಳಕಿಗೆ ಬಂದಿದೆ. ಇದರ ಇನ್ನಷ್ಟು ಎಕ್ಸ್‌ಕ್ಲೂಸಿವ್‌ ಮಾಹಿತಿ ತಿಳಿಯು ಕುತೂಹಲ ನಿಮಗಿದ್ದರೆ ಮುಂದೆ ಓದಿ..

Stampede 1

ಭದ್ರತಾ ವಿಭಾಗದ ಡಿಸಿಪಿ ಬರೆದ ಪತ್ರದಲ್ಲಿ ಏನಿತ್ತು?
ರಾಯಲ್ ಚಾಲೆಂಜರ್ಸ್ ಬೆಂಗಳೂರು ಕ್ರಿಕೆಟ್ ತಂಡಕ್ಕೆ Fan Following ದೇಶಾದ್ಯಂತ ಇದ್ದು.. ವಿಧಾನಸೌಧ ಭವ್ಯ ಮೆಟ್ಟಿಲುಗಳ ಮುಂಭಾಗ, ಕಾರ್ಯಕ್ರಮವನ್ನು ಆತರುದಲ್ಲಿ ಆಯೋಜಿಸುವುದರಿಂದ ಲಕ್ಷಾಂತರ ಸಂಖ್ಯೆಯಲ್ಲಿ ಕ್ರಿಕೆಟ್ ಅಭಿಮಾನಿಗಳು ವಿಧಾನಸೌಧಕ್ಕೆ ಆಗಮಿಸುವ ಸಾಧ್ಯತೆಯಿದೆ. ವಿಧಾನಸೌಧ ಭದ್ರತಾ ವಿಭಾಗದಲ್ಲಿ ಅಧಿಕಾರಿ/ಸಿಬ್ಬಂದಿಗಳ ಕೊರತೆ ಇರುವುದರಿಂದ ಬಂದೋಬಸ್ತ್ ಕರ್ತವ್ಯ ನಿರ್ವಹಣೆ ತೊಂದರೆಯಾಗುವ ಸಾಧ್ಯತೆ ಇರುತ್ತದೆ.

Stampede 3

ಜೂನ್‌ 4ರಂದು ಕಾರ್ಯಕ್ರಮವನ್ನು ವಿಧಾನಸೌಧ ಭವ್ಯ ಮೆಟ್ಟಿಲುಗಳ ಮುಂಭಾಗ ಆಯೋಜನೆ ಮಾಡುತ್ತಿರುವುದರಿಂದ, ಸದರಿ ದಿನದಂದು ಸಾರ್ವಜನಿಕರಿಗೆ ವಿಧಾನಸೌಧ ಪ್ರವೇಶಿಸಲು ವಿತರಣೆ ಮಾಡುವ ಆನ್ ಲೈನ್ ಮತ್ತು ಆಫ್ ಲೈನ್ ಪಾಸುಗಳನ್ನು ಸಂಪೂರ್ಣವಾಗಿ ನಿರ್ಭಂದಿಸಲು ಕೋರಿದೆ.

stampede in bengaluru rcb fans

ರಾಯಲ್ ಚಾಲೆಂಜರ್ಸ್ ಬೆಂಗಳೂರು ರವರ ಸಮಾರಂಭ ಭವ್ಯ ಮೆಟ್ಟಿಲುಗಳ ಮುಂಭಾಗ ಜೂನ್‌ 4ರಂದು ಸಂಜೆ 4 ಗಂಟೆಗೆ ಆಯೋಜನೆಗೊಳ್ಳುತ್ತಿದ್ದು, ಸಚಿವಾಲಯದ ಅಧಿಕಾರಿ/ಸಿಬ್ಬಂದಿಗಳು ತಮ್ಮ ತಮ್ಮ ಕುಟುಂಬ ವರ್ಗದವರನ್ನು ಕರೆತರುವ ಸಾಧ್ಯತೆಗಳು ಹೆಚ್ಚಾಗಿದೆ. ಸಚಿವಾಲಯದ ಅಧಿಕಾರಿ/ಸಿಬ್ಬಂದಿಗಳಿಗೆ ಕುಟುಂಬ ವರ್ಗದವರನ್ನು ಕರೆತರದಂತೆ ಆದೇಶ ನೀಡಲು ಮತ್ತು ಸಚಿವಾಲಯದ ಅಧಿಕಾರಿ/ಸಿಬ್ಬಂದಿಗಳಿಗೆ ಅಂದು ಮಧ್ಯಾಹ್ನ ರಜೆ ಘೋಷಿಸಬೇಕು. ಸಚಿವಾಲಯದ ಅಧಿಕಾರಿ/ಸಿಬ್ಬಂದಿಗಳು ಕಾರ್ಯಕ್ರಮದ ಸ್ಥಳಕ್ಕೆ ಬರದಂತೆ ಸೂಚನೆ ಕಳುಹಿಸಬೇಕೆಂದು ಕೋರುತ್ತೇವೆ.

ವಿಧಾನಸೌದ ಕಟ್ಟಡವು Vital Installation ಕಟ್ಟಡವಾಗಿದ್ದು, ಕಟ್ಟಡದ ಸುರಕ್ಷತೆಯ ಸಂಬಂಧ ವಿಧಾನಸೌಧ ಅವರಣದ ಮತ್ತು ಮುಂಭಾಗಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು. ಈ ಸನ್ಮಾನ ಕಾರ್ಯಕ್ರಮಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಕ್ರಿಕೆಟ್ ಆಗಮಿಸುತ್ತಿರುವುದರಿಂದ ಭದ್ರತೆಯ ದೃಷ್ಟಿಯಿಂದ ಸಿಸಿಟಿವಿಯ ಅವಶ್ಯಕತೆ ಇರುತ್ತದೆ. ಈಗ ಇರುವ ಇರುವ ಭದ್ರತಾ ವ್ಯವಸ್ಥೆಯಲ್ಲಿ ವ್ಯತಯ ಉಂಟಾಗುವ ಸಾಧ್ಯತೆ ಇರುತ್ತದೆ.

ಅಲ್ಲದೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ಕ್ರಿಕೆಟ್ ತಂಡಕ್ಕೆ Fan Following ದೊಡ್ಡದಾಗಿರುವುದರಿಂದ ಹೊರಗಡೆಯಿಂದ ಅಧಿಕಾರಿ/ಸಿಬ್ಬಂದಿಗಳನ್ನು ಬಂದೋಬಸ್ತ್‌ಗೆ ತೆಗೆದುಕೊಳ್ಳಬೇಕಾಗಿದ್ದು, ಇದಕ್ಕೆ ಸಮಯದ ಅವಶ್ಯಕತೆ ಇದೆ. ಈ ರೀತಿಯ ಬೃಹತ್ ಕಾರ್ಯಕ್ರಮಕ್ಕೆ ಕಾನೂನು ಮತ್ತು ಸುವ್ಯವಸ್ಥೆ ಮತ್ತು ಸಂಚಾರಿ ಪೊಲೀಸ್ ರೊಂದಿಗೆ co-ordination ಮಾಡಿಕೊಳ್ಳುವ ಅವಶ್ಯಕತೆ ಇದ್ದು, ಸಮಯವಕಾಶದ ಕೊರತೆ ಎನ್ನಿಸುತ್ತಿದೆ. ಅಲ್ಲದೇ ಇಂತಹ ಕಾರ್ಯಕ್ರಮಹಳಲ್ಲಿ ಡ್ರೋನ್‌ ಕ್ಯಾಮೆರಾ ಬಳಸುವ ಅವಶ್ಯಕತೆ ಇರುವುದರಿಂದ ಆಂಟಿ ಡ್ರೋನ್‌ ವ್ಯವಸ್ಥೆ ಅಳವಡಿಸುವ ಅವಶ್ಯಕತೆ ಇದೆ.

ಮುಂದುವರಿದು… ವಿಧಾನಸೌಧ ಕಟ್ಟಡವು ಪಾರಂಪರಿಕ ಕಟ್ಟಡವಾಗುವುದರಿಂದ ಮತ್ತು Vital Installation ಕಟ್ಟಡದ ವ್ಯಾಪ್ತಿಗೆ ಒಳಪಡುವುದರಿಂದ, ಭದ್ರತೆಯ ದೃಷ್ಟಿಯಿಂದ ಕಟ್ಟಡಕ್ಕೆ ಯಾವುದೇ ಧಕ್ಕೆಯಾಗದಂತೆ, ನಿಯಮಗಳನುಸಾರ ಕಾರ್ಯಕ್ರಮ ನಡೆಸಲು ಸಮಯದ ಅವಶ್ಯಕತೆ ಇರುತ್ತದೆ. ಅದಾಗ್ಯೂ ಸರ್ಕಾರ ತೆಗೆದುಕೊಳ್ಳುವ ನಿರ್ಣಯದಂತೆ ನಡೆದುಕೊಳ್ಳಲಾಗುವುದು ಎಂಬ ಅಭಿಪ್ರಾಯವನ್ನು ವರದಿಯನ್ನು ಸಲ್ಲಿಸಲಾಗಿದೆ ಎಂದು ಡಿಸಿಪಿ ಕರಿಬಸವನಗೌಡ ಅವರು ಸರ್ಕಾರದ ಕಾರ್ಯದರ್ಶಿಗಳಿಗೆ ಪತ್ರದಲ್ಲಿ ಬರೆದಿದ್ದಾರೆ.

TAGGED:chinnaswamy stadiumChinnaswamy StampedeIPL 2025KSCArcbstampedeಕಾಲ್ತುಳಿತ ಪ್ರಕರಣಚಿನ್ನಸ್ವಾಮಿ ಕ್ರೀಡಾಂಗಣಡಿ.ಕೆ.ಶಿವಕುಮಾರ್ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema Updates

Timmana Mottegalu
ಜೂ.27ಕ್ಕೆ `ತಿಮ್ಮನ ಮೊಟ್ಟೆಗಳು’ ರಿಲೀಸ್
11 minutes ago
Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
10 hours ago
Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
1 day ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
1 day ago

You Might Also Like

Anju Sharma
Crime

ಅಹಮದಾಬಾದ್ ವಿಮಾನ ದುರಂತ – ಮಗಳ ಸೇರುವ ತವಕದಲ್ಲಿದ್ದ ತಾಯಿ ಸಾವಿನ ಮನೆಗೆ!

Public TV
By Public TV
18 minutes ago
dentist Nirali patel died in plane crash
Latest

ಅಹಮದಾಬಾದ್ ವಿಮಾನ ದುರಂತ – ದಂತವೈದ್ಯೆಯಾಗಿದ್ದ ಭಾರತೀಯ ಮೂಲದ ಕೆನಡಾ ಪ್ರಜೆ ಸಾವು

Public TV
By Public TV
51 minutes ago
Foreign woman arrested for smuggling drugs worth Rs 10 crore in Bengaluru
Bengaluru City

ಬೆಂಗಳೂರು | 10 ಕೋಟಿ ಮೌಲ್ಯದ ಮಾದಕವಸ್ತು ಸಾಗಾಟ – ವಿದೇಶಿ ಮಹಿಳೆ ಅರೆಸ್ಟ್

Public TV
By Public TV
60 minutes ago
Arjun Patolia
Crime

Plane Crash – ಪತ್ನಿಯ ಕೊನೆಯ ಆಸೆಯನ್ನು ಈಡೇರಿಸಿ ಹಿಂತಿರುಗುವಾಗ ಪತಿ ಸಾವು!

Public TV
By Public TV
1 hour ago
Team India Tribute to Plane crash in london
Cricket

ಏರ್ ಇಂಡಿಯಾ ವಿಮಾನ ದುರಂತ – ಕಪ್ಪು ಪಟ್ಟಿ ಧರಿಸಿ ಟೀಂ ಇಂಡಿಯಾ ಆಟಗಾರರಿಂದ ಮೌನಾಚರಣೆ

Public TV
By Public TV
2 hours ago
wild elephant crops destroys
Chamarajanagar

ಚಾ.ನಗರ| ಜಮೀನಿಗೆ ನುಗ್ಗಿ ತೆಂಗು ಬೆಳೆ ನಾಶಪಡಿಸಿದ ಕಾಡಾನೆಗಳ ಹಿಂಡು

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?