Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹತ್ರಾಸ್ ಸತ್ಸಂಗದಿಂದ ನಾಸಿಕ್‌ನ ಕುಂಭಮೇಳದವರೆಗೆ; ಭಾರತದಲ್ಲಿ ನಡೆದ ಕಾಲ್ತುಳಿತ ದುರಂತಗಳಿವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಹತ್ರಾಸ್ ಸತ್ಸಂಗದಿಂದ ನಾಸಿಕ್‌ನ ಕುಂಭಮೇಳದವರೆಗೆ; ಭಾರತದಲ್ಲಿ ನಡೆದ ಕಾಲ್ತುಳಿತ ದುರಂತಗಳಿವು

Latest

ಹತ್ರಾಸ್ ಸತ್ಸಂಗದಿಂದ ನಾಸಿಕ್‌ನ ಕುಂಭಮೇಳದವರೆಗೆ; ಭಾರತದಲ್ಲಿ ನಡೆದ ಕಾಲ್ತುಳಿತ ದುರಂತಗಳಿವು

Public TV
Last updated: July 9, 2024 10:44 pm
Public TV
Share
5 Min Read
Stampede Incidents
SHARE

ಉತ್ತರಪ್ರದೇಶದ ಸತ್ಸಂಗ ಕಾರ್ಯಕ್ರಮದ ವೇಳೆ ಕಾಲ್ತುಳಿತ (Stampede) ಉಂಟಾಗಿ 121 ಮಂದಿ ಸಾವನ್ನಪ್ಪಿರುವ ಸುದ್ದಿ ಸದ್ಯ ದೇಶದೆಲ್ಲೆಡೆ ಸದ್ದು ಮಾಡುತ್ತಿದೆ. ಧಾರ್ಮಿಕ ಕಾರ್ಯಕ್ರಮದ ವೇಳೆ ಕಾಲ್ತುಳಿತಗಳು ಇದೇ ಮೊದಲೇನಲ್ಲ. ಅದರಲ್ಲೂ ಉತ್ತರ ಭಾರತದಲ್ಲಿ ಪ್ರವಚನ, ಸತ್ಸಂಗದಂತಹ ಕಾರ್ಯಕ್ರಮಗಳು ಹೆಚ್ಚಾಗಿ ನಡೆಯುತ್ತವೆ. ಈ ಹಿನ್ನೆಲೆ ಉತ್ತರ ಭಾರತದಲ್ಲಿ ಅನೇಕ ಕಾಲ್ತುಳಿತ ಪ್ರಕರಣಗಳು ನಡೆದಿವೆ. ಹಾಗಿದ್ರೆ ಈ ಮೊದಲು ನಡೆದಿರುವ ಕಾಲ್ತುಳಿತ ದುರಂತಗಳು ಯಾವುವು? ಯಾವ ದುರಂತದಲ್ಲಿ ಎಷ್ಟು ಜನ ಮೃತಪಟ್ಟಿದ್ದಾರೆ ಎಂಬ ಕುರಿತು ವಿವರವಾದ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ. 

ಹತ್ರಾಸ್‌ ಸತ್ಸಂಗ ಕಾರ್ಯಕ್ರಮ (2024):
ಉತ್ತರ ಪ್ರದೇಶ ರಾಜ್ಯದ ಹತ್ರಾಸ್‌ನಲ್ಲಿ ಮಹಿಳೆಯರೂ, ಮಕ್ಕಳೂ ಸೇರಿದಂತೆ ಸಾವಿರಾರು ಜನರು ಸೇರಿದ್ದ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಉಂಟಾದ ಕಾಲ್ತುಳಿತದ ವೇಳೆ ನೂರಾರು ಮಂದಿ ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ಇತ್ತೀಚಿನ ವರ್ಷಗಳಲ್ಲಿ ನಡೆದ ಅತಿ ದೊಡ್ಡ ಧಾರ್ಮಿಕ ದುರಂತ ಎಂದೇ ಬಿಂಬಿತವಾಗಿದೆ.

Bholenath Baba Hathras

80 ಸಾವಿರ ಮಂದಿಗೆ ಅನುಮತಿ ಪಡೆದು 2.5 ಲಕ್ಷ ಜನರನ್ನು ಸಂಘಟಕರು ಸೇರಿಸಿದ ಪರಿಣಾಮ ಉತ್ತರ ಪ್ರದೇಶದ ಹತ್ರಾಸ್‌ ಸತ್ಸಂಗ ಕಾರ್ಯಕ್ರಮದಲ್ಲಿ ಕಾಲ್ತುಳಿತ ಸಂಭವಿಸಿ 121 ಮಂದಿ ಮೃತಪಟ್ಟಿದ್ದಾರೆ.

ಸತ್ಸಂಗ ಕಾರ್ಯಕ್ರಮ ಮುಗಿದ ಬಳಿಕ ಸ್ವಯಂ ಘೋಷಿತ ಗುರು ಭೋಲೆ ಬಾಬಾ ನಾರಾಯಣ್ ಸಾಕರ್ ಹರಿ ಕಾರು ಹತ್ತಿದ್ದಾರೆ. ಕಾರು ಮುಂದಕ್ಕೆ ಹೋಗುತ್ತಿದ್ದಂತೆ ಚಕ್ರದ ಧೂಳನ್ನು ಸಂಗ್ರಹಿಸಲು ಅನುಯಾಯಿಗಳು ಮುಗಿಬಿದ್ದಿದ್ದಾರೆ. ಭಾರೀ ಸಂಖ್ಯೆಯಲ್ಲಿದ್ದ ಅನುಯಾಯಿಗಳು ಧೂಳು ಸಂಗ್ರಹಿಸಲು ಓಡಿದ ಪರಿಣಾಮ ಪುರುಷರು, ಮಹಿಳೆಯರು ಮತ್ತು ಮಕ್ಕಳು ಒಬ್ಬರ ಮೇಲೊಬ್ಬರು ಬಿದ್ದಿದ್ದಾರೆ. ಬಿದ್ದವರ ಮೇಲೆಯೇ ಜನರು ಓಡಿದ್ದರಿಂದ ಸಾವು, ನೋವಿನ ಸಂಖ್ಯೆ ಹೆಚ್ಚಾಗಿದೆ.

Hathras Stampede

ರಾಮನವಮಿ ವೇಳೆ ಇಂದೋರ್‌ನಲ್ಲಿ ದುರಂತ (2023):
ಮಧ್ಯ ಪ್ರದೇಶದ ಇಂಧೋರ್ ನಗರದಲ್ಲಿ ರಾಮನವಮಿ ವೇಳೆ ಪವಿತ್ರ ಬಾವಿಯೊಂದರ ಮೇಲ್ಛಾವಣಿ ಕುಸಿದ ಪರಿಣಾಮ 36 ಮಂದಿ ಸಾವನ್ನಪ್ಪಿದ್ದರು. 

ಇಂದೋರ್‌ನ ಬೇಲೇಶ್ವರ ದೇವಸ್ಥಾನದಲ್ಲಿ ರಾಮನವಮಿ ವೇಳೆ ಹೋಮ-ಹವನ ಏರ್ಪಡಿಸಲಾಗಿತ್ತು. ಈ ಹಿನ್ನೆಲೆ ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಿದ್ದರು. ಭಾರೀ ಜನಸಂಖ್ಯೆಯಲ್ಲಿ ಭಕ್ತರು ಸೇರಿದ್ದರಿಂದ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಉಂಟಾಯಿತು. ಇದರಿಂದ ದೇವಸ್ಥಾನದ ಆವರಣದಲ್ಲಿದ್ದ ಬಾವಿಯ ಬಳಿ ಭೂಕುಸಿತ ಉಂಟಾಗಿ 36 ಮಂದಿ ಮೃತಪಟ್ಟರು.

ವೈಷ್ಣೋದೇವಿಯಲ್ಲಿ ಕಾಲ್ತುಳಿತಕ್ಕೊಳಗಾಗಿ 12 ಮಂದಿ ಸಾವು (2022):
ಜಮ್ಮು ಮತ್ತು ಕಾಶ್ಮೀರದ ವೈಷ್ಣೋದೇವಿಯಲ್ಲಿ ಭಕ್ತರು ಭಾರೀ ಸಂಖ್ಯೆಯಲ್ಲಿ ಸೇರಿದ್ದ ಹಿನ್ನೆಲೆಯಲ್ಲಿ ಕಾಲ್ತುಳಿತ ಉಂಟಾಗಿ 12 ಮಂದಿ ಸಾವನ್ನಪ್ಪಿದ್ದರು.

ವರ್ಷದ ಮೊದಲ ದಿನವೇ ಜಮ್ಮು ಮತ್ತು ಕಾಶ್ಮೀರದ ಕತ್ರಾದಲ್ಲಿರುವ ವೈಷ್ಣೋದೇವಿ ದೇಗುಲಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತರು ನೆರೆದಿದ್ದರು. ದೇವಸ್ಥಾನದ ಗೇಟ್‌ ನಂ.3ರ ಸಮೀಪ ಜನಸಂದಣಿಯಿಂದ ಕಾಲ್ತುಳಿತ ಉಂಟಾಗಿ 12 ಮಂದಿ ಸಾವನ್ನಪ್ಪಿದ್ದು, 16ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.

Vaishnodevi Stampede

ಪುಷ್ಕರ ಉತ್ಸವದಲ್ಲಿ 27 ಭಕ್ತರು ದುರ್ಮರಣ (2015):
ಆಂಧ್ರ ಪ್ರದೇಶದ ರಾಜಮಂಡ್ರಿಯಲ್ಲಿ ಪುಷ್ಕರ ಉತ್ಸವದ ವೇಳೆ ಗೋಧಾವರಿ ನದಿಯಲ್ಲಿ ಭಕ್ತಾದಿಗಳು ಸ್ನಾನ ಮಾಡುವಾಗ ಕಾಲ್ತುಳಿತ ಉಂಟಾಗಿ 27 ಮಂದಿ ಸಾವನ್ನಪ್ಪಿದ್ದರು.

ದಕ್ಷಿಣದ ಕುಂಭಮೇಳ ಎಂದೇ ಹೆಸರುವಾಸಿಯಾಗಿರುವ ಆಂಧ್ರದ ಪುಷ್ಕರ ಮೇಳ 2015ರಲ್ಲಿ ನಡೆದಿತ್ತು. ಈ ಮೇಳದಲ್ಲಿ ಲಕ್ಷಾಂತರ ಭಕ್ತರು ಪುಷ್ಕರ ಘಾಟ್‌ನ ನದಿಯಲ್ಲಿ ಸ್ನಾನ ಮಾಡಲು ಬರುತ್ತಾರೆ. 2022ರ ಜು.14ರಂದು  ಕೂಡ ಲಕ್ಷಾಂತರ ಭಕ್ತರು ಪುಣ್ಯ ಸ್ನಾನಕ್ಕೆಂದು ಬಂದಿದ್ದರು. ಈ ವೇಳೆ ನೂಕುನುಗ್ಗಲು ಉಂಟಾಗಿ, ಉಸಿರಾಡಲು ಕಷ್ಟವಾಗಿ 27 ಮಂದಿ ಭಕ್ತರು ಕೊನೆಯುಸಿರೆಳೆದಿದ್ದರು.. 

ದಸರಾ ಸಂಭ್ರಮಾಚರಣೆ ವೇಳೆ ಕಾಲ್ತುಳಿತ (2014):
ಬಿಹಾರದ ಪಾಟ್ನಾದಲ್ಲಿ ದಸರಾ ಆಚರಣೆ ಮುಗಿದ ಬಳಿಕ ಗಾಂಧಿ ಮೈದಾನದಲ್ಲಿ ಸಂಭವಿಸಿದ ಕಾಲ್ತುಳಿತದಿಂದ 32 ಮಂದಿ ಸಾವನ್ನಪ್ಪಿದ್ದು, 26 ಮಂದಿ ಗಾಯಗೊಂಡಿದ್ದರು.

ನವರಾತ್ರಿಯಲ್ಲೂ ನಡೆದಿತ್ತು ಕಾಲ್ತುಳಿತ (2013):
ಮಧ್ಯ ಪ್ರದೇಶದ ರತ್ನಘರ್ ದೇಗುಲದಲ್ಲಿ ನವರಾತ್ರಿ ಸಂಭ್ರಮಾಚರಣೆ ವೇಳೆ ನದಿ ಮೇಲಿನ ಸೇತುವೆ ಕುಸಿಯುತ್ತದೆ ಎಂಬ ವದಂತಿ ಹರಡಿದ ವೇಳೆ ಉಂಟಾದ ಕಾಲ್ತುಳಿತದಲ್ಲಿ 115 ಮಂದಿ ಸಾವನ್ನಪ್ಪಿದ್ದರು. ಈ ಘಟನೆಯಲ್ಲಿ ಸುಮಾರು 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.

Pushkar Stampede

ಅದಾಲತ್‌ ಘಾಟ್‌ನಲ್ಲಿ ಕಾಲ್ತುಳಿತಕ್ಕೆ 20 ಸಾವು (2012):
ಪಾಟ್ನಾದ ಗಂಗಾ ನದಿ ತಟದಲ್ಲಿ ಇರುವ ಅದಾಲತ್ ಘಾಟ್‌ನಲ್ಲಿ ಛತ್‌ ಪೂಜೆ ನೆರವೇರುವಾಗ ಸೇತುವೆ ಕುಸಿತವಾಗಿ 20 ಮಂದಿ ಸಾವನ್ನಪ್ಪಿದ್ದರು.

ಹರಿದ್ವಾರದಲ್ಲಿ ಕಾಲ್ತುಳಿತ (2012):
ಹರಿದ್ವಾರದ ಗಂಗಾ ನದಿ ತೀರದಲ್ಲಿ ಹರ್ – ಕಿ – ಪೌರಿ ಘಾಟ್‌ನಲ್ಲಿ ಕಾಲ್ತುಳಿತ ಉಂಟಾಗಿ 20 ಮಂದಿ ಸಾವನ್ನಪ್ಪಿದ್ದರು.

ಜೀಪ್‌ ಪತನವಾಗಿ ಶಬರಿಮಲೆ ಭಕ್ತರ ದುರ್ಮರಣ (2011):
ಕೇರಳದ ಇಡುಕ್ಕಿ ಜಿಲ್ಲೆಯಲ್ಲಿ ಜೀಪ್ ಪತನವಾದ ಕಾರಣ ಉಂಟಾದ ಕಾಲ್ತುಳಿತದ ವೇಳೆ 104 ಶಬರಿಮಲೆ ಯಾತ್ರಿಕರು ಸಾವನ್ನಪ್ಪಿದ್ದರು.

ಘಟನೆಯಿಂದ ನೂರಾರು ಭಕ್ತರ ನಡುವೆ ನೂಕುನುಗ್ಗಲು ಉಂಟಾಗಿತ್ತು. ಈ ಹಿನ್ನೆಲೆ ಕಾಲ್ತುಳಿತ ಉಂಟಾಗಿ ಕನಿಷ್ಟ 104 ಮಂದಿ ಭಕ್ತರು ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.

Indore Stampede

ದೇವಮಾನವನ ಕಾರ್ಯಕ್ರಮದಲ್ಲಿ ಕಾಲ್ತುಳಿತ (2010):
ಉತ್ತರ ಪ್ರದೇಶದ ಪ್ರತಾಪ್‌ಗಢ ಜಿಲ್ಲೆಯ ಕೃಪಾಲು ಮಹಾರಾಜನ ರಾಮ್ ಜಾಂಕಿ ದೇವಸ್ಥಾನದಲ್ಲಿ ಸ್ವಯಂಘೋಷಿತ ದೇವಮಾನವ ಬಾಬಾರೊಬ್ಬರು ಉಚಿತ ಬಟ್ಟೆ ಮತ್ತು ಆಹಾರವನ್ನು ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಈ ಕಾರ್ಯಕ್ರಮದಲ್ಲಿ ಸಾವಿರಾರು ಮಂದಿ ಭಾಗಿಯಾಗಿದ್ದಾಗ ಉಂಟಾದ ಕಾಲ್ತುಳಿತದಲ್ಲಿ ಸುಮಾರು 63 ಜನರು ಸಾವನ್ನಪ್ಪಿದ್ದರು.

ಬಾಂಬ್‌ ಸ್ಫೋಟದ ವದಂತಿಯಿಂದ ಕಾಲ್ತುಳಿತ (2008):
ರಾಜಸ್ಥಾನದ ಜೋಧಪುರ ನಗರದಲ್ಲಿ ಚಾಮುಂಡಾ ದೇವಿ ದೇವಸ್ಥಾನದಲ್ಲಿ ಭಕ್ತರು ನೆರದಿದ್ದ ವೇಳೆ ಬಾಂಬ್‌ ಸ್ಫೋಟಗೊಳ್ಳಲಿದೆ ಎನ್ನುವ ವದಂತಿಯ ಮಾತಿನಿಂದ ನೂರಾರು ಭಕ್ತರು ಚೆಲ್ಲಾಪಿಲ್ಲಿಯಾಗಿ ಓಡಿದ್ದರು. ಈ ವೇಳೆ ಉಂಟಾದ ಕಾಲ್ತುಳಿತದಿಂದ 250 ಮಂದಿ ಪ್ರಾಣ ಕಳೆದುಕೊಂಡಿದ್ದರು. 60ಕ್ಕೂ ಹೆಚ್ಚಿನ ಮಂದಿ ಗಾಯಗೊಂಡಿದ್ದರು.

Patna Stampede

ಬಂಡೆ ಕುಸಿತ ವದಂತಿ, ನೂರಾರು ಭಕ್ತರು ಸಾವು (2008):
ಹಿಮಾಚಲ ಪ್ರದೇಶದ ಬಿಲಾಸ್‌ಪುರ ಜಿಲ್ಲೆಯ ನೈನಾ ದೇವಿ ದೇವಸ್ಥಾನದಲ್ಲಿ ಅಂದು ಸಾವಿರಾರು ಭಕ್ತರು ನೆರೆದಿದ್ದರು. ಭಕ್ತರ ನಡುವೆ ಯಾರೋ ಬಂಡೆ ಕುಸಿತಗೊಳ್ಳಲಿದೆ ಎನ್ನುವ ಮಾತನ್ನು ಹೇಳಿದ್ದರು. ಬಂಡೆ ಕುಸಿತದ ಭೀತಿಯಿಂದ ಭಕ್ತರ ನಡುವೆ ನೂಕು ನುಗ್ಗಲು ಉಂಟಾಗಿ ಕಾಲ್ತುಳಿತ ಉಂಟಾಗಿತ್ತು. ಈ ಘಟನೆಯಲ್ಲಿ 162 ಜನರು ಸಾವನ್ನಪ್ಪಿ, 47 ಮಂದಿ ಗಾಯಗೊಂಡಿದ್ದರು.

ಮಹಾರಾಷ್ಟ್ರ ಮಂಧರದೇವಿ ದೇವಸ್ಥಾನದಲ್ಲಿ ಕಾಲ್ತುಳಿತ (2005):
ಮಂಧರದೇವಿ ದೇವಸ್ಥಾನದಲ್ಲಿ ವಾರ್ಷಿಕ ತೀರ್ಥಯಾತ್ರೆಯಲ್ಲಿ ಸಂಭವಿಸಿದ ಈ ಕಾಲ್ತುಳಿತ ದೇಶದಲ್ಲಿ ನಡೆದ ಕಾಲ್ತುಳಿತ ಘಟನೆಗಳಲ್ಲಿ ಅತ್ಯಂತ ಘನಘೋರ ಘಟನೆಗಳಲ್ಲಿ ಒಂದು.  ಮಹಾರಾಷ್ಟ್ರದ ಸತಾರಾ ಜಿಲ್ಲೆಯಲ್ಲಿ ಈ ಘಟನೆ ನಡೆದಿತ್ತು. ಭಕ್ತಾದಿಗಳು ತೆಂಗಿನಕಾಯಿ ಒಡೆಯುತ್ತಿದ್ದರಿಂದ ಜಾರುತ್ತಿದ್ದ ಮೆಟ್ಟಿಲುಗಳ ಮೇಲೆ ಕೆಲವರು ಬಿದ್ದು ಅವಘಡ ಸಂಭವಿಸಿತು.

Nashik Stampede

ನಾಸಿಕ್ ಕುಂಭಮೇಳದಲ್ಲಿ ಕಾಲ್ತುಳಿತ (2003):
ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಕುಂಭಮೇಳದಲ್ಲಿ ಪವಿತ್ರ ಸ್ನಾನದ ವೇಳೆ ಕಾಲ್ತುಳಿತದಲ್ಲಿ 39 ಜನರು ಸಾವನ್ನಪ್ಪಿದರು ಮತ್ತು ಸುಮಾರು 140 ಜನರು ಗಾಯಗೊಂಡಿದ್ದರು.

TAGGED:indiaNorth Indiastampede
Share This Article
Facebook Whatsapp Whatsapp Telegram

Cinema news

Maalu Spandana
ಹೆದರಬೇಡ ಅಪ್ಪಿ ಅಂತಿದ್ರು, ಆದ್ರೆ ಮಾಳು ಸ್ಟೇಟ್ಮೆಂಟ್‌ ಕೇಳಿ ಅಚ್ಚರಿ ಆಯ್ತು – ಸ್ಪಂದನಾ
Cinema Latest Top Stories TV Shows
Yash 2
ರಾಕಿಂಗ್ ಸ್ಟಾರ್‌ ಯಶ್ 40ನೇ ವರ್ಷದ ಹುಟ್ಟುಹಬ್ಬಕ್ಕೆ ಕೌಂಟ್‌ಡೌನ್!
Cinema Latest Sandalwood Top Stories
Salman khan and samantha raj nidimoru
ಸಮಂತಾ ಪತಿ ಜೊತೆಗೆ ಸಿನಿಮಾ ಮಾಡ್ತಾರಂತೆ ಸಲ್ಮಾನ್ ಖಾನ್..!
Bollywood Cinema Latest Top Stories
Gilli Nata Spandana BBK 12
`ಗಿಲ್ಲಿನೇ ಗೆಲ್ಬೇಕು, ಗಿಲ್ಲಿನೇ ಗೆಲ್ಲೋದು’ ಎಂದ ಸ್ಪಂದನ
Latest Top Stories TV Shows

You Might Also Like

great indian bustard
Latest

ʻಗ್ರೇಟ್ ಇಂಡಿಯನ್ ಬಸ್ಟರ್ಡ್‌ʼ ರಕ್ಷಣೆಗೆ ಮುಂದಾದ ಸುಪ್ರೀಂ – ಹೊಸ ವಿದ್ಯುತ್‌ ಯೋಜನೆಯಲ್ಲಿ ಏನೆಲ್ಲಾ ಬದಲಾವಣೆ?

Public TV
By Public TV
7 hours ago
UNSC
Latest

ವೆನೆಜುವೆಲಾ ಅಧ್ಯಕ್ಷ, ಪತ್ನಿ ಬಿಡುಗಡೆಗೆ ರಷ್ಯಾ, ಚೀನಾ ಪಟ್ಟು – ವಿಶ್ವಸಂಸ್ಥೆ ಭದ್ರತಾ ಮಂಡಳಿ ಸಭೆಯಲ್ಲಿ ಆಗ್ರಹ!

Public TV
By Public TV
8 hours ago
Humnabad
Bidar

MLA, MLC ಗಲಾಟೆಗೆ ಬೂದಿ ಮುಚ್ಚಿದ ಕೆಂಡದಂತಾದ ಹುಮನಾಬಾದ್ – 144 ಸೆಕ್ಷನ್ ಜಾರಿ

Public TV
By Public TV
8 hours ago
Tiger 1
Chamarajanagar

ಚಾಮರಾಜನಗರ | ರಾಜ್ಯದಲ್ಲಿ ಇಂದಿನಿಂದ ಹುಲಿ ಗಣತಿ ಶುರು

Public TV
By Public TV
8 hours ago
KSRTC VOLVO BUS
Bengaluru City

KSRTC ಯಿಂದ ಗುಡ್‌ನ್ಯೂಸ್ – ಮಾರ್ಚ್‌ವರೆಗೆ ಆಯ್ದ ಮಾರ್ಗಗಳಲ್ಲಿ ಪ್ರೀಮಿಯರ್ ಬಸ್‌ಗಳ ಟಿಕೆಟ್ ದರ 5-10% ಕಡಿತ

Public TV
By Public TV
9 hours ago
Cauvery Matha
Districts

ಕೊಡಗು | ಕಾವೇರಿ ಮಾತೆಗೆ ಹುಣ್ಣಿಮೆಯ ವಿಶೇಷ ಪೂಜೆ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?