ನಟಸಾರ್ವಭೌಮ ಚಿತ್ರ ಅಭಿಮಾನಿಗಳ ಮನತಣಿಸಿ, ಯಶಸ್ವಿಯಾಗಲಿ: ಪುನೀತ್‍ಗೆ ಸ್ಟಾರ್ ನಟ ವಿಶ್

Public TV
1 Min Read
natasarvabouma letter

ಬೆಂಗಳೂರು: ಸ್ಯಾಂಡಲ್‍ವುಡ್ ಬಹುನಿರೀಕ್ಷಿತ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರು ನಟಿಸಿದ ‘ನಟಸಾರ್ವಭೌಮ’ ಚಿತ್ರ ಬಿಡುಗಡೆಯಾಗಿದ್ದು ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈ ನಡುವೆ ರಾಕಿಂಗ್ ಸ್ಟಾರ್ ಯಶ್ ಅವರು ಪುನೀತ್ ಅವರ ಚಿತ್ರಕ್ಕೆ ಶುಭ ಹಾರೈಸಿದ್ದಾರೆ.

ರಾಕಿಂದ ಸ್ಟಾರ್ ಯಶ್ ತಮ್ಮ ಟ್ವಿಟ್ಟರಿನಲ್ಲಿ, “ತಮ್ಮ ವಿಶಿಷ್ಟ ರೀತಿಯ ನೃತ್ಯ ಹಾಗೂ ವಿಭಿನ್ನ ಪಾತ್ರ ಪೋಷಣೆಯ ಮೂಲಕ ಅಪಾರ ನಿರೀಕ್ಷೆಯನ್ನು ಹುಟ್ಟು ಹಾಕಿರುವ ಪವರ್ ಸ್ಟಾರ್ ಅಪ್ಪು ಸರ್ ಅಭಿನಯದ ‘ನಟಸಾರ್ವಭೌಮ’ ಚಿತ್ರವು ಅಭಿಮಾನಿಗಳ ಮನತಣಿಸಿ, ಪ್ರೇಕ್ಷಕರ ಮನಗೆದ್ದು ಯಶಸ್ವಿಯಾಗಲಿ ಎಂದು ಹಾರೈಸುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.

ಅಲ್ಲದೇ ಯಶ್ ಅವರು ಪುನೀತ್ ಜೊತೆಯಿರುವ ಫೋಟೋ ಹಾಕಿ ಅದಕ್ಕೆ, “ಪವರ್ ಸ್ಟಾರ್ ಅಪ್ಪು ಅವರು, ಸಹೃದಯಿ ನಿರ್ಮಾಪಕರಾದ ರಾಕ್‍ಲೈನ್ ವೆಂಕಟೇಶ್, ನಿರ್ದೇಶಕರಾದ ಸಹೋದರ ಪವನ್ ಒಡೆಯರ್, ಛಾಯಾಗ್ರಾಹಕ ರಾ ವೈದಿ ಸೇರಿದಂತೆ ನಟಸಾರ್ವಭೌಮ ಇಡೀ ಚಿತ್ರತಂಡಕ್ಕೆ ನನ್ನ ಶುಭಾಶಯಗಳು” ಎಂದು ಯಶ್ ಟ್ವೀಟ್ ಮಾಡಿದ್ದಾರೆ.

puneeth rajkumar

ಇಂದು ನಟಸಾರ್ವಭೌಮ ಚಿತ್ರ ಬಿಡುಗಡೆ ಆಗಿದ್ದು, ಪ್ರೇಕ್ಷಕರು ಭರ್ಜರಿಯಾಗಿ ಸಿನಿಮಾವನ್ನು ಸ್ವಾಗತಿಸಿದ್ದಾರೆ. ಇದೇ ವೇಳೆ ಪುನೀತ್ ರಾಜ್‍ಕುಮಾರ್ ಅವರು ಚಿತ್ರ ಬಿಡುಗಡೆ ಆದ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಹೋಗಿ ಪೂಜೆ ಸಲ್ಲಿಸಿದ್ದಾರೆ.

ಬೆಂಗಳೂರಿನ ಮಾಗಡಿ ರಸ್ತೆಯ ಪ್ರಸನ್ನ ಚಿತ್ರಮಂದಿರದಲ್ಲಿ ಬುಧವಾರ ರಾತ್ರಿ 10 ಗಂಟೆಗೆ ಫಸ್ಟ್ ಶೋ ನಡೆದಿದೆ. ಅಭಿಮಾನಿಗಳು ನಟಸಾರ್ವಭೌಮ ಚಿತ್ರವನ್ನು ಭರ್ಜರಿಯಾಗಿ ಸ್ವಾಗತ ಮಾಡಿಕೊಂಡಿದ್ದಾರೆ. ಅಲ್ಲದೆ ಚಿತ್ರದ ನಿರ್ಮಾಪಕ ರಾಕ್‍ಲೈನ್ ವೆಂಕಟೇಶ್ ಚಿತ್ರಮಂದಿರಕ್ಕೆ ಭೇಟಿ ನೀಡಿ ಚಿತ್ರ ವೀಕ್ಷಿಸಿದ್ದಾರೆ.

ಒಟ್ಟು 500ಕ್ಕೂ ಹೆಚ್ಚಿನ ಸ್ಕ್ರೀನ್‍ಗಳಲ್ಲಿ ನಟಸಾರ್ವಭೌಮ ರಿಲೀಸ್ ಆಗಿದ್ದು, ಹೌಸ್‍ಫುಲ್ ಪ್ರದರ್ಶನ ಕಾಣುತ್ತಿದೆ. ನಟಸಾರ್ವಭೌಮ ಚಿತ್ರ 2 ಚಿತ್ರಮಂದಿರಗಳಲ್ಲಿ 24 ಗಂಟೆಗಳ ಪ್ರದರ್ಶನ ಕಾಣಲಿದೆ. ಬೆಂಗಳೂರಿನ ಊರ್ವಶಿ ಮತ್ತು ಗೌಡನಪಾಳ್ಯದ ಶ್ರೀನಿವಾಸ ಚಿತ್ರಮಂದಿರದಲ್ಲಿ ಒಂದೇ ದಿನದಲ್ಲಿ 8 ಬಾರಿ ಸಿನಿಮಾ ಪ್ರದರ್ಶನ ಕಾಣುವ ಮೂಲಕ ಹೊಸ ದಾಖಲೆ ನಿರ್ಮಾಣವಾಗಲಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *