Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೈಸೂರು | ಹಿರಿಯ ಪತ್ರಕರ್ತ ಕೆ.ಬಿ.ಗಣಪತಿ ನಿಧನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಮೈಸೂರು | ಹಿರಿಯ ಪತ್ರಕರ್ತ ಕೆ.ಬಿ.ಗಣಪತಿ ನಿಧನ

Districts

ಮೈಸೂರು | ಹಿರಿಯ ಪತ್ರಕರ್ತ ಕೆ.ಬಿ.ಗಣಪತಿ ನಿಧನ

Public TV
Last updated: July 13, 2025 1:20 pm
Public TV
Share
3 Min Read
KB Ganapathy
SHARE

ಮೈಸೂರು: ಹಿರಿಯ ಪತ್ರಕರ್ತರಾದ ಕೆ.ಬಿ ಗಣಪತಿ (KB Ganapathy) ಅವರಿಂದು ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.‌

88 ವರ್ಷದ ಕೆ.ಬಿ. ಗಣಪತಿ ಅವರು ತಮ್ಮ ಬದುಕಿನ ಕಡೆಯ ದಿನದವರೆಗೂ ಪತ್ರಿಕಾಲಯದಲ್ಲಿ ಸಕ್ರಿಯರಾಗಿದ್ದರು. ಕೆಬಿ ಗಣಪತಿ ಅವರು ತಮ್ಮ ಒಡೆತನದ ಕನ್ನಡದ ʻಮೈಸೂರು ಮಿತ್ರʼ ಹಾಗೂ ಇಂಗ್ಲೀಷ್‌ನ ಸ್ಟಾರ್ ಆಫ್ ಮೈಸೂರು (Star of Mysore) ಪತ್ರಿಕೆಗಳ ಮೂಲಕ ಹಳೇ ಮೈಸೂರು ಪ್ರಾಂತ್ಯದಲ್ಲಿ ದೊಡ್ಡ ಓದುಗ ವರ್ಗವನ್ನು ಸೃಷ್ಟಿಸುವಲ್ಲಿ ಯಶಸ್ವಿಯಾದವರು. ಇದರ ಜೊತೆಗೆ ನೂರಾರು ಪತ್ರಕರ್ತರನ್ನ ಈ ನಾಡಿಗೆ ಕೊಡುಗೆ ನೀಡಿದ ಹಿರಿಮೆ ಗಣಪತಿ ಅವರಿಗೆ ಸಲ್ಲುತ್ತದೆ.

ತಮ್ಮ ಅಂಕಣ ಬರಹಗಳ ಮೂಲಕ ಪತ್ರಕರ್ತರ (Journalists) ಸಾಮಾಜಿಕ ಬದ್ಧತೆಯನ್ನ ಸಮಾಜಕ್ಕೆ ತೋರಿಸಿದವರು ಗಣಪತಿ. ಯಶಸ್ವಿ ಪತ್ರಿಕೋದ್ಯಮದ ಮೂಲಕ ಇಡೀ ರಾಜ್ಯದ ಪತ್ರಿಕ ಸಮೂಹ ಮೈಸೂರಿನ ಕಡೆ ನೋಡುವ ಹಾಗೆ ಮಾಡುವಲ್ಲಿ ಯಶಸ್ವಿಯಾಗಿದ್ದರು. ಸುಮಾರು 50 ವರ್ಷಗಳ ನಿರಂತರ ಪತ್ರಿಕೋದ್ಯಮದಲ್ಲಿ ಮೈಲಿಗಲ್ಲಿನಂತಹ ನೂರಾರು ಸಾಧನೆಗಳನ್ನು ಗಣಪತಿ ಅವರು ಮಾಡಿದ್ದಾರೆ. ಅವರನ್ನು ಕಳೆದುಕೊಳ್ಳುವ ಮೂಲಕ ಪತ್ರಿಕೋದ್ಯಮ ಶೂನ್ಯ ಸೃಷ್ಟಿಸಿಕೊಂಡಿದೆ.

KB Ganapathy 2

ಕೆಬಿಜೆ ಎಂದು ಖ್ಯಾತಿ ಪಡೆದಿದ್ದ ಕೆಬಿ ಗಣಪತಿ ಅವರು ಮೈಸೂರಿನಲ್ಲಿ ಸಂಜೆಯ ದಿನಪತ್ರಿಕೆ ‘ಸ್ಟಾರ್ ಆಫ್ ಮೈಸೂರು’ ಪತ್ರಿಕೆಯನ್ನು 1978ರಲ್ಲಿ ಆರಂಭಿಸಿದರು. ಇದು ಇಂಗ್ಲಿಷ್ ಪತ್ರಕರ್ತರಾಗುವ ಯುವಕರ ಪಾಲಿಗೆ ಅಕ್ಷರಶಃ ಕಾಲೇಜ್ ಆಗಿತ್ತು. ಇದರ ಜೊತೆಗೆ 1980ರಲ್ಲಿ ‘ಮೈಸೂರು ಮಿತ್ರ’ ದಿನಪತ್ರಿಕೆ ಆರಂಭಿಸಿದರು.

ಕೆಬಿಜೆ ಅವರು ಬರೆಯುತ್ತಿದ್ದ ʻಛೂಮಂತ್ರ, ಅಬ್ರಕಡಬ್ರʼ ಅಂಕಣಗಳು ಪ್ರಸಿದ್ಧವಾಗಿದ್ದವು. ಕೆಬಿಜೆ ಪತ್ರಿಕೋದ್ಯಮಕ್ಕೆ ಬರುವ ಮುನ್ನ ಬೆಂಗಳೂರಿನಲ್ಲಿ ಕಾನೂನು ಪದವಿ ಪಡೆದ ನಂತರ ಮುಂಬೈಗೆ ತೆರಳಿ ಅಲ್ಲಿಯ ಭಾರತೀಯ ವಿದ್ಯಾಭವನದಲ್ಲಿ ಪತ್ರಿಕೋದ್ಯಮದಲ್ಲಿ ಡಿಪ್ಲೊಮಾ ಪದವಿ ಗಳಿಸಿದರು. ಮುಂಬೈನಲ್ಲಿ ಪ್ರಿ-ಪ್ರೆಸ್ ಜರ್ನಲ್, ಎಕನಾಮಿಕ್ ಅಂಡ್ ಪೊಲಿಟಿಕಲ್ ವೀಕ್ಲಿ ಹಾಗೂ ಇಂಡಿಯನ್ ಎಕ್ಸ್‌ಪ್ರೆಸ್ ಪತ್ರಿಕೆಗಳಲ್ಲಿ ಕೆಲಸ ಮಾಡಿದ್ದರು. ಬಳಿಕ ಮೈಸೂರಿಗೆ ಬಂದು ಪತ್ರಿಕೆಗಳನ್ನು ಆರಂಭಿಸಿದ್ದು ಈಗ ಇತಿಹಾಸ.

ಆದರ್ಶವಾದಿ ಕಾದಂಬರಿ, ಅಮೆರಿಕ- ಆ್ಯನ್ ಏರಿಯಾ ಆಫ್ ಲೈಟ್ ಪ್ರವಾಸ ಕಥನ, ದಿ ಕ್ರಾಸ್ ಆ್ಯಂಡ್ ದಿ ಕೂರ್ಗ್‌ ಇಂಗ್ಲಿಷ್ ಕಾದಂಬರಿ, ಸ್ಟಾರ್ ಆಫ್ ಮೈಸೂರು- ಸ್ಟಾರ್ ‌ಆಫ್ ಎ ಯೂನಿಕ್ ಇವನಿಂಗ್ ಇಂಗ್ಲಿಷ್ ನ್ಯೂಸ್ ಪೇಪರ್, ಸ್ವಾಡ್೯ ಆಫ್ ಶಿವಾಜಿ ಜೀವನಚರಿತ್ರೆ ಇವರು ಬರೆದ ಕೃತಿಗಳಾಗಿವೆ.

ನನ್ನೂರಿನ‌ ಹಿರಿಯ ಪತ್ರಕರ್ತ ಮಿತ್ರರಾದ ಕೆ.ಬಿ.ಗಣಪತಿ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಗಣಪತಿಯವರ ಅಗಲಿಕೆಯಿಂದ ನಾಡಿನ‌ ಪತ್ರಿಕಾರಂಗ ಬಡವಾಗಿದೆ.

ಸುಮಾರು ಐದು ದಶಕಗಳ ಕಾಲ ಪತ್ರಿಕೋದ್ಯಮದಲ್ಲಿ ಅವಿರತ ದುಡಿದ ಗಣಪತಿ ಅವರು ವಸ್ತುನಿಷ್ಠ ಹಾಗೂ ವೃತ್ತಿಪರ ಬರಹಗಳಿಗೆ ಹೆಸರುವಾಸಿ. “ಸ್ಟಾರ್ ಆಫ್ ಮೈಸೂರು” ಪತ್ರಿಕೆಯ ಮೂಲಕ‌ ಸಾಂಸ್ಕೃತಿಕ… pic.twitter.com/BKA6U3MorY

— Siddaramaiah (@siddaramaiah) July 13, 2025

ಗಣ್ಯರಿಂದ ಸಂತಾಪ
ಹಿರಿಯ ಪತ್ರಕರ್ತ ಗಣಪತಿ ಅವರ ನಿಧನಕ್ಕೆ ಮುಖ್ಯಮಂತ್ರಿಗಳು ಸೇರಿದಂತೆ ಸಂತಾಪ ಸೂಚಿಸಿದ್ದಾರೆ. ಎಕ್ಸ್‌ ಖಾತೆಯಲ್ಲಿ ಫೋಟೋ ಜೊತೆಗೆ ಚುಟುಕು ಸಂದೇಶ ಹಂಚಿಕೊಳ್ಳುವ ಮೂಲಕ ಸಂತಾಪ ಸೂಚಿಸಿದ್ದಾರೆ.

ಸಿಎಂ ಸಂತಾಪ: ನನ್ನೂರಿನ‌ ಹಿರಿಯ ಪತ್ರಕರ್ತ ಮಿತ್ರರಾದ ಕೆ.ಬಿ.ಗಣಪತಿ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಗಣಪತಿಯವರ ಅಗಲಿಕೆಯಿಂದ ನಾಡಿನ‌ ಪತ್ರಿಕಾರಂಗ ಬಡವಾಗಿದೆ. ಸುಮಾರು ಐದು ದಶಕಗಳ ಕಾಲ ಪತ್ರಿಕೋದ್ಯಮದಲ್ಲಿ ಅವಿರತ ದುಡಿದ ಗಣಪತಿ ಅವರು ವಸ್ತುನಿಷ್ಠ ಹಾಗೂ ವೃತ್ತಿಪರ ಬರಹಗಳಿಗೆ ಹೆಸರುವಾಸಿ. “ಸ್ಟಾರ್ ಆಫ್ ಮೈಸೂರು” ಪತ್ರಿಕೆಯ ಮೂಲಕ‌ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅಪಾರ ಓದುಗ ಬಳಗ ಸೃಷ್ಟಿಸಿದ ಗಣಪತಿಯವರು “ಮೈಸೂರು ಮಿತ್ರ” ದಿನಪತ್ರಿಕೆಯ ಸ್ಥಾಪಕ ಸಂಪಾದಕರಾಗಿ ಕೂಡ ಸೇವೆ ಸಲ್ಲಿಸಿದ್ದರು. ಪತ್ರಿಕೋದ್ಯಮದಲ್ಲಿ ಅವರು ಮೂಡಿಸಿರುವ ಹೆಜ್ಜೆಗುರುತುಗಳು ಯುವ ಪತ್ರಕರ್ತರಿಗೆ ಸ್ಪೂರ್ತಿ ಮತ್ತು ಮಾದರಿಯಾಗಲಿ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬವರ್ಗಕ್ಕೆ ನೋವು ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ.

ಮೈಸೂರು ಮಿತ್ರ, ಸ್ಟಾರ್ ಆಫ್ ಮೈಸೂರು ಪತ್ರಿಕೆಗಳ ಸಂಸ್ಥಾಪಕ ಸಂಪಾದಕರು ಹಾಗೂ ಹಿರಿಯರೂ ಆಗಿದ್ದ ಶ್ರೀ ಕೆ.ಬಿ ಗಣಪತಿ ಅವರು ನಿಧನರಾದ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ.

ಮಧ್ಯಮ ಲೋಕದಲ್ಲಿ ಅಪಾರ ಸೇವೆ ಸಲ್ಲಿಸಿದ್ದ ಅವರು, ತಮ್ಮ ಗರಡಿಯಲ್ಲಿ ಅನೇಕ ಶ್ರೇಷ್ಠ ಪತ್ರಕರ್ತರನ್ನು ರೂಪಿಸಿದ್ದಾರೆ.

ಅವರ ಆತ್ಮಕ್ಕೆ ಭಗವಂತ ಸದ್ಗತಿ ನೀಡಲಿ.… pic.twitter.com/nIUonjWUV2

— Nikhil Kumar (@Nikhil_Kumar_k) July 13, 2025

ನಿಖಿಲ್‌ ಕುಮಾರಸ್ವಾಮಿ ಸಂತಾಪ: ಮೈಸೂರು ಮಿತ್ರ, ಸ್ಟಾರ್ ಆಫ್ ಮೈಸೂರು ಪತ್ರಿಕೆಗಳ ಸಂಸ್ಥಾಪಕ ಸಂಪಾದಕರು ಹಾಗೂ ಹಿರಿಯರೂ ಆಗಿದ್ದ ಶ್ರೀ ಕೆ.ಬಿ ಗಣಪತಿ ಅವರು ನಿಧನರಾದ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ. ಮಧ್ಯಮ ಲೋಕದಲ್ಲಿ ಅಪಾರ ಸೇವೆ ಸಲ್ಲಿಸಿದ್ದ ಅವರು, ತಮ್ಮ ಗರಡಿಯಲ್ಲಿ ಅನೇಕ ಶ್ರೇಷ್ಠ ಪತ್ರಕರ್ತರನ್ನು ರೂಪಿಸಿದ್ದಾರೆ. ಅವರ ಆತ್ಮಕ್ಕೆ ಭಗವಂತ ಸದ್ಗತಿ ನೀಡಲಿ. ಕುಟುಂಬ ಸದಸ್ಯರಿಗೆ ದುಃಖ ಭರಿಸುವ ಶಕ್ತಿ ಕರುಣಿಸಲೆಂದು ಪ್ರಾರ್ಥಿಸುವೆ ಎಂದು ಪೋಸ್ಟ್‌ ಹಂಚಿಕೊಂಡಿದ್ದಾರೆ.

TAGGED:journalistKB GanapathymysuruStar of Mysoreಕೆಬಿ ಗಣಪತಿನಿಖಿಲ್ ಕುಮಾರಸ್ವಾಮಿಪತ್ರಕರ್ತಪತ್ರಿಕೋದ್ಯಮಮೈಸೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Supreme Court and Ramya
ಪುರುಷರ ಮನಸ್ಸನ್ನು ಅರ್ಥ ಮಾಡ್ಕೊಳ್ಳಕ್ಕೆ ಆಗಲ್ಲ, ಹಾಗಾದ್ರೆ ಎಲ್ಲರನ್ನೂ ಜೈಲಿಗೆ ಹಾಕ್ಬೇಕಾ? – ರಮ್ಯಾ ವಿವಾದಾತ್ಮಕ ಪೋಸ್ಟ್
Latest Sandalwood Top Stories
yash 4
ನಿಮ್ಮನ್ನ ನೋಡೋಕೆ ನಾನೂ ಕಾಯ್ತಿದ್ದೀನಿ ಎಂದ ಯಶ್
Cinema Latest Sandalwood Top Stories
katrina Kaif and vicky kaushal
ಪುತ್ರನಿಗೆ `ವಿಹಾನ್‌ʼ ಎಂದು ಹೆಸರಿಟ್ಟ ಕತ್ರೀನಾ-ವಿಕ್ಕಿ ಕೌಶಲ್ 
Bollywood Cinema Latest Top Stories
Koragajja Sudheer Atthavar
ಕೊರಗಜ್ಜ ಚಿತ್ರದ ಹಾಡುಗಳಿಗೆ ರೀಲ್ಸ್: ನಿರ್ದೇಶಕ ಸುಧೀರ್ ಅತ್ತಾವರ್ ಸ್ಪಷ್ಟನೆ
Cinema Latest Sandalwood Top Stories

You Might Also Like

Kogilu Layout Demolition 20 officials of Rajiv Gandhi Housing Scheme visited site
Bengaluru City

PUBLiC TV Impact | ಕೋಗಿಲು ಲೇಔಟ್ ಮನೆ ತೆರವು ಪ್ರಕರಣ – ಹಣ ಪಡೆದು ಸರ್ಕಾರಿ ಜಾಗ ಕೊಟ್ಟ ನಾಲ್ವರ ವಿರುದ್ಧ FIR

Public TV
By Public TV
12 minutes ago
US Forces Seize Russia Flagged Oil Tanker
Latest

ಅಟ್ಲಾಂಟಿಕ್‌ನಲ್ಲಿ ರಷ್ಯಾ ಧ್ವಜವಿದ್ದ ತೈಲ ಟ್ಯಾಂಕರ್ ವಶಪಡಿಸಿಕೊಂಡ ಯುಎಸ್ ಪಡೆಗಳು

Public TV
By Public TV
24 minutes ago
A.Chandrashekhar Udupa
Latest

ಸಾಲಿಗ್ರಾಮ ಡಿವೈನ್‌ ಪಾರ್ಕ್‌ ಸಂಸ್ಥಾಪಕ ಎ.ಚಂದ್ರಶೇಖರ್‌ ಉಡುಪ ಹೃದಯಾಘಾತದಿಂದ ನಿಧನ

Public TV
By Public TV
1 hour ago
supreme Court 1
Court

ನಾಯಿಯ ಮನಸ್ಸು ಓದಲು ಸಾಧ್ಯವಿಲ್ಲ – ಬೀದಿ ನಾಯಿಗಳ ಬಗ್ಗೆ ಸುಪ್ರೀಂ ಅಭಿಪ್ರಾಯ

Public TV
By Public TV
1 hour ago
Train
Bengaluru City

ಸಂಕ್ರಾಂತಿ; ಯಶವಂತಪುರ-ತಾಳಗುಪ್ಪ ನಡುವೆ ವಿಶೇಷ ರೈಲುಗಳ ಸಂಚಾರ

Public TV
By Public TV
2 hours ago
Bengaluru Bagalgunte Techie Suicide
Bengaluru City

Bengaluru | ಅಪಾರ್ಟ್‌ಮೆಂಟ್‌ನ 16ನೇ ಫ್ಲೋರ್‌ನಿಂದ ಬಿದ್ದು ಟೆಕ್ಕಿ ಆತ್ಮಹತ್ಯೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?