Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೊಸದಾಗಿ ಜಾತಿ ಜನಗಣತಿ ಸಮೀಕ್ಷೆಗೆ ರಾಜ್ಯ ಸರ್ಕಾರ ಅಸ್ತು – ಸೆ.22ರಿಂದ ಅ.7ರ ವರೆಗೆ ಸಮೀಕ್ಷೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಹೊಸದಾಗಿ ಜಾತಿ ಜನಗಣತಿ ಸಮೀಕ್ಷೆಗೆ ರಾಜ್ಯ ಸರ್ಕಾರ ಅಸ್ತು – ಸೆ.22ರಿಂದ ಅ.7ರ ವರೆಗೆ ಸಮೀಕ್ಷೆ

Bengaluru City

ಹೊಸದಾಗಿ ಜಾತಿ ಜನಗಣತಿ ಸಮೀಕ್ಷೆಗೆ ರಾಜ್ಯ ಸರ್ಕಾರ ಅಸ್ತು – ಸೆ.22ರಿಂದ ಅ.7ರ ವರೆಗೆ ಸಮೀಕ್ಷೆ

Public TV
Last updated: September 12, 2025 1:29 pm
Public TV
Share
4 Min Read
siddaramaiah 1 3
SHARE

– ಕಾಂತರಾಜು ಅಧ್ಯಕ್ಷತೆಯಲ್ಲಿ ನಡೆದಿದ್ದ ಗಣತಿ ವರದಿ ತಿರಸ್ಕಾರ
– ಮಧುಸೂದನ್ ನಾಯಕ್ ಕಮಿಟಿಗೆ ಸಮೀಕ್ಷೆ ಹೊಣೆ; ಡಿಸೆಂಬರ್‌ ಒಳಗೆ ವರದಿ
– ಮರು ಸಮೀಕ್ಷೆಗೆ 420 ಕೋಟಿ ಮೀಸಲು, 1.75 ಲಕ್ಷ ಶಿಕ್ಷಕರ ಬಳಕೆ

ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗದ ನೇತೃತ್ವದಲ್ಲಿ ಹೊಸದಾಗಿ ಜಾತಿ ಜನಗಣತಿ ನಡೆಸಲು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಸೆಪ್ಟೆಂಬರ್‌ 22ರಿಂದ ಅಕ್ಟೋಬರ್‌ 7ರ ವರೆಗೆ ಮಧುಸೂದನ್ ನಾಯಕ್ ಸಮಿತಿ ನೇತೃತ್ವದಲ್ಲಿ ಸಮೀಕ್ಷೆ ನಡೆಯಲಿದೆ. ಮರು ಸಮೀಕ್ಷೆಗೆ ಸದ್ಯ 420 ಕೋಟಿ ರೂ. ಖರ್ಚಾಗಲಿದ್ದು, ಅಗತ್ಯಬಿದ್ದರೆ ಹೆಚ್ಚಿನ ಅನುದಾನ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದರು. ಪ್ರತಿಯೊಬ್ಬರಿಗೂ ಸಮಾನತೆ ಕಲ್ಪಿಸುವ ಉದ್ದೇಶದಿಂದ ಈ ಗಣತಿ ಮುಖ್ಯವಾಗಿದ್ದು, ಎಲ್ಲಾ ನಾಗರಿಕರೂ ಪಾಲ್ಗೊಳ್ಳಬೇಕು, ಸಮೀಕ್ಷೆಯಲ್ಲಿ ಕೇಳುವ 60 ಪ್ರಶ್ನೆಗಳಿಗೆ ಉತ್ತರಿಸಬೇಕು ಎಂದು ಸಿದ್ದರಾಮಯ್ಯ ಕರೆ ನೀಡಿದರು.

ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ, ಜಾತಿ ಜನಗಣತಿ ವರದಿ ಬಗ್ಗೆ ಸಂಪೂರ್ಣ ವಿವರಣೆ ನೀಡಿದರು. ಸಮಾಜದಲ್ಲಿ ಅನೇಕ ಜಾತಿ, ಧರ್ಮಗಳಿವೆ. ವೈರುಧ್ಯ, ಅಸಮಾನತೆ ಇದೆ. ಆದ್ರೆ ಸಂವಿಧಾನ ಎಲ್ಲರಿಗೂ ಸಮಾನ ಅವಕಾಶ, ಸಾಮಾಜಿಕ ನ್ಯಾಯ ಕೊಡಬೇಕು ಅಂತ ಹೇಳುತ್ತೆ. ಅಂಬೇಡ್ಕರ್ ಕೂಡ ಇದನ್ನೇ ಹೇಳಿದ್ದಾರೆ. ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ರಾಜಕೀಯ ಅಸಮಾನತೆ ಇದೆ ಅಂತ ಅಂಬೇಡ್ಕರ್ ಹೇಳಿದ್ರು. ಈ ಪ್ರಜಾಪ್ರಭುತ್ವ ಉಳಿಯಬೇಕಾದ್ರೆ ಅಸಮಾನತೆ ಹೋಗಲಾಡಿಸಬೇಕು. ಅಸಮಾನತೆ ಇದ್ದರೆ ಅದರಿಂದ ನರಳೊ ಜನರು ಪ್ರಜಾಪ್ರಭುತ್ವದ ಸೌಧ ಧ್ವಂಸ ಮಾಡ್ತಾರೆ ಅಂತ ಹೇಳಿದ್ರು. ಹಾಗಾಗಿ ಸಮಾಜದಲ್ಲಿ ಅಸಮಾನತೆ ಉಳಿಯಲು ಅವಕಾಶ ಕೊಡಬಾರದು ಎಂದು ಸಿಎಂ ಕಿವಿಮಾತು ಹೇಳಿದರು.

ರಾಜ್ಯದಲ್ಲಿದ್ದಾರೆ 7 ಕೋಟಿ ಜನ
ಮುಂದುವರಿದು… ನಮ್ಮ ರಾಜ್ಯದಲ್ಲಿ ಸದ್ಯ 7 ಕೋಟಿ ಜನಸಂಖ್ಯೆ ಇದೆ. ಸುಮಾರು 2 ಕೋಟಿ ಕುಟುಂಬಗಳು ಇವೆ. ಇವರಿಗೆ ಸಮಾನ ಅವಕಾಶ ಒದಗಿಸಬೇಕು. ಸಮಾನತೆ ಸಮವಾಗಿ ಕೊಡಬೇಕು. ಅದನ್ನೇ ಸಂವಿಧಾನ ಹೇಳಿರೋದು. ಸಮಾನತೆ, ಸಮಾನ ಅವಕಾಶ ಒದಗಿಸೋದು ನಮ್ಮ ಕರ್ತವ್ಯ ಹೀಗಾಗಿ 2015 ರಲ್ಲೇ ಸಮೀಕ್ಷೆ ಮಾಡಿಸಿದ್ದೆ. ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಮಾಡಿದ್ವಿ. ಕಾಂತರಾಜು ಸರ್ವೆ ಮಾಡಿದ್ರು, ಶಿಕ್ಷಣ, ಉದ್ಯೋಗ, ಜಾತಿ, ಧರ್ಮ ಅಂತ ಗೊತ್ತಾಗಲು ಸರ್ವೆ ಮಾಡಿಸಿದ್ದೆ. ಅವರ ಮಾಹಿತಿ ಗೊತ್ತಾದರೆ ಅವರಿಗೆ ಯೋಜನೆ ಕೊಡಲು ಅನುಕೂಲ ಆಗುತ್ತದೆ ಅನ್ನೋದು ಇದರ ಹಿಂದಿನ ಉದ್ದೇಶವಾಗಿತ್ತು ಎಂದು ತಿಳಿಸಿದರು.

ಗ್ಯಾರಂಟಿ ಯೋಜನೆ ಮೂಲಕ ಅಸಮಾನತೆ ಸ್ವಲ್ಪ ಕಡಿಮೆ ಮಾಡೋ ಪ್ರಯತ್ನ ಮಾಡಿದ್ದೇವೆ. ಭಾಗ್ಯಗಳ ಮೂಲಕ ಸಮಾನತೆ ಕೊಡೋ ಕೆಲಸ ಮಾಡ್ತಿದ್ದೇವೆ. ಇದರ ಹೊರತಾಗಿಯೂ ಅವಕಾಶ ವಂಚಿತರಿಗೆ ಅವಕಾಶ ಕೊಡಲು ಅವರ ಬಗ್ಗೆ ಮಾಹಿತಿ ಇರಬೇಕು. ವಿಶೇಷ ಕಾರ್ಯಕ್ರಮ ಕೊಡಲು ದತ್ತಾಂಶಗಳು ನಮಗೆ ಗೊತ್ತಾಗಬೇಕು. ಅಮೆರಿಕದಲ್ಲಿ ಕರಿಯರಿಗೆ ಮೀಸಲಾತಿ ಇದೆ. ನಾವು ಹಿಂದುಳಿದವರಿಗೆ ಶಕ್ತಿ ತುಂಬೋ ಕೆಲಸ ಮಾಡಬೇಕು. ಹೀಗಾಗಿ ದತ್ತಾಂಶದ ಅವಶ್ಯಕತೆ ಇದೆ ಎಂದು ಹೇಳಿದರು.

ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7 ವರೆಗೆ ಸಮೀಕ್ಷೆ
ಕಾಂತರಾಜು ಅಧ್ಯಕ್ಷತೆಯಲ್ಲಿ ಸರ್ವೆ ಮಾಡಿಸಿದ್ವಿ. ಆದ್ರೆ ವರದಿ 10 ವರ್ಷ ಮೀರಿದೆ, ಹಾಗಾಗಿ ಕಾಂತರಾಜು ವರದಿಯನ್ನ ರಿಜೆಕ್ಟ್‌ ಮಾಡಿದ್ದೇವೆ. ಈಗ ಹೊಸದಾಗಿ ಸರ್ವೆ ಮಾಡಿಸ್ತಿದ್ದೇವೆ. ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7 ವರೆಗೆ ಸಮೀಕ್ಷೆ ನಡೆಯಲಿದೆ. 7 ಕೋಟಿ ಜನರ ಸಾಮಾಜಿಕ, ಶೈಕ್ಷಣಿಕ ಮಾಹಿತಿ ಪಡೆಯಲು ಹಿಂದುಳಿದ ವರ್ಗಗಳ ಆಯೋಗದಿಂದ ಸಮೀಕ್ಷೆ ಮಾಡಿಸ್ತಾ ಇದ್ದೇವೆ. ಮಧುಸೂದನ್ ನಾಯಕ್ ನೇತೃತ್ವದ ಆಯೋಗದಿಂದ ಸಮೀಕ್ಷೆ ನಡೆಯಲಿದೆ. ಜಾಗ್ರತೆಯಿಂದ ಸರ್ವೆ ಮಾಡಿ ವರದಿ ಕೊಡಲು ಸೂಚನೆ ನೀಡಲಾಗಿದೆ. ಡಿಸೆಂಬರ್ ಒಳಗೆ ವರದಿ ಕೊಡುವುದಾಗಿ ಹೇಳಿದ್ದಾರೆ ಎಂದು ಮಾಹಿತಿ ನೀಡಿದರು.

ಸಮೀಕ್ಷೆ ಕಾರ್ಯಕ್ಕರ 1.75 ಲಕ್ಷ ಶಿಕ್ಷಕರ ಬಳಕೆ
ಈ ಅವಧಿಯಲ್ಲಿ ದಸರಾ ರಜೆ ಇದೆ. ಹಾಗಾಗಿ ಶಿಕ್ಷಕರನ್ನ ಸರ್ವೇ ಕಾರ್ಯಕ್ಕೆ ಬಳಕೆ ಮಾಡಿಕೊಳ್ತೇವೆ. ಟೀಚರ್ ಗಳನ್ನ ಸರ್ವೆಗೆ ಬಳಕೆ ಮಾಡಿಕೊಳ್ತೀವಿ. 1.75 ಲಕ್ಷ ಶಿಕ್ಷಕರಿಂದ ಸಮೀಕ್ಷೆ ನಡೆಯುತ್ತದೆ. ಸಮೀಕ್ಷೆಯಲ್ಲಿ ಭಾಗವಹಿಸಿದ ಎಲ್ಲ ಶಿಕ್ಷಕರಿಗೆ ವಿಶೇಷ ಗೌರವ ಧನ ಕೊಡ್ತೀವಿ. ಪ್ರತಿಯೊಬ್ಬರಿಗೆ 20 ಸಾವಿರ ಗೌರವ ಧನ ಸಿಗಲಿದೆ. ಇದಕ್ಕಾಗಿ 325 ಕೋಟಿ ಖರ್ಚು ಆಗಲಿದೆ. ಜೊತೆಗೆ ಮರು ಸಮೀಕ್ಷಗೆ 420 ಕೋಟಿ ಹಣ ಕೊಡುತ್ತೇವೆ. ಇನ್ನೂ ಅಗ್ಯವಿದ್ದರೆ ಮತ್ತೆ ಹಣ ಕೊಡುತ್ತೇವೆ ಎಂದು ವಿವರಿಸಿದ್ದಾರೆ.

ಪ್ರತಿಯೊಬ್ಬರೂ ಸಮೀಕ್ಷೆಯಲ್ಲಿ ಪಾಲ್ಗೊಳ್ಳಿ, 60 ಪ್ರಶ್ನೆಗೆ ಉತ್ತರಿಸಿ
ಇನ್ನೂ ಮಧುಸೂದನ್ ನಾಯಕ್ ಕಮಿಟಿ ವೈಜ್ಞಾನಿಕ ಸರ್ವೆ ಮಾಡಬೇಕು. ವರದಿಯನ್ನ ಡಿಸೆಂಬರ್ ಒಳಗೆ ಕೊಡಬೇಕು. ಈ ಬಾರಿ ವಿನೂತನ ಸರ್ವೇ ಪದ್ದತಿ ಮಾಡ್ತಿದ್ದೇವೆ. ಮೀಟರ್ ರೀಡರ್‌ಗಳು, ಆರ್‌ಆರ್‌ ನಂಬರ್, ಜಿಯೊ ಟ್ಯಾಗ್ ಮಾಡಿ ಮನೆ ಮನೆಗೆ ಪಟ್ಟಿ ಮಾಡಿ ನಂಬರ್ ಕೊಡ್ತಾರೆ. UHI ನಂಬರ್ ಮೀಟರ್ ರೀಡರ್ ಹಾಕ್ತಾರೆ. 2 ಕೋಟಿ ಮನೆಗೂ ಸ್ಟಿಕ್ಕರ್‌ ಅಂಟಿಸುವ ಅಂಟಿಸೋ ಕೆಲಸ ಮಾಡ್ತಾರೆ. ಇವತ್ತಿನವರೆಗೂ 1.55 ಕೋಟಿ ಮನೆಗಳಿಗೆ ಸ್ಟಿಕ್ಕರ್‌ (ಸ್ಲಿಪ್‌) ಅಂಟಿಸಿದ್ದಾರೆ. ಇದಾದ ಮೇಲೆ ಮನೆ ಮನೆಗೆ ಟೀಚರ್ ಸರ್ವೆ ಮಾಡ್ತಾರೆ. BPL ಕಾರ್ಡ್, ಆಧಾರ್ ಕಾರ್ಡ್ ಇದ್ದರೆ ಮೊಬೈಲ್ ಗೆ ಲಿಂಕ್ ಮಾಡ್ತಾರೆ. ಮೊಬೈಲ್ ಇಲ್ಲದೇ ಹೋದ್ರೆ ಆ ಮನೆಗಳ ಸರ್ವೆ ಮಾಡ್ತಾರೆ. ಎಲ್ಲರು ಈ ಸರ್ವೆಯಲ್ಲಿ ಭಾಗವಹಿಸಬೇಕು. ಈ ಸರ್ವೆಯಲ್ಲಿ 60 ಪ್ರಶ್ನೆ ಕೇಳ್ತಾರೆ. ಜಾತಿ, ಧರ್ಮ, ಉದ್ಯೋಗ, ಶಿಕ್ಷಣ, ಸೇರಿ ಕುಟುಂಬದ ಸಂಪೂರ್ಣ ಮಾಹಿತಿ ಇರೋ 60 ಪ್ರಶ್ನೆ ಕೇಳ್ತಾರೆ. ಎಲ್ಲಾ ಜನರು ಇದರಲ್ಲಿ ಭಾಗಿಯಾಗಬೇಕು. ಪ್ರತಿಯೊಬ್ಬರೂ 60 ಪ್ರಶ್ನೆಗೆ ಉತ್ತರ ಕೊಡಬೇಕು. ಯಾರೂ ಸರ್ವೆಯಿಂದ ತಪ್ಪಿಸಿಕೊಳ್ಳಬಾರದು ಎಂದು ಸಿಎಂ ಕಿವಿಮಾತು ಹೇಳಿದ್ದಾರೆ.

TAGGED:Backward Classes CommissionCaste CensusCaste Census Surveykarnatakasiddaramaiahಕರ್ನಾಟಕಜಾತಿ ಜನಗಣತಿಜಾತಿ ಜನಗಣತಿ ಸಮೀಕ್ಷೆಸಿದ್ದರಾಮಯ್ಯಹಿಂದುಳಿದ ವರ್ಗಗಳ ಆಯೋಗ
Share This Article
Facebook Whatsapp Whatsapp Telegram

Cinema news

Sudeep
`ಯುದ್ಧಕ್ಕೆ ಸಿದ್ಧ.. ನಾವು ನಮ್ಮ ಮಾತಿಗೆ ಬದ್ಧ’ – ಸುದೀಪ್ `ಯುದ್ಧ’ ಸಾರಿದ್ದು ಯಾರ ವಿರುದ್ಧ..?
Bengaluru City Cinema Dharwad Districts Karnataka Latest Main Post Sandalwood
chandrachuda
ಪೈರಸಿ ವಿರುದ್ಧ ಕಿಚ್ಚನ ನಡೆ, ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿಕೊಳ್ಳೋದು ಯಾಕೆ? – ಚಕ್ರವರ್ತಿ ಚಂದ್ರಚೂಡ್
Cinema Latest Sandalwood Top Stories
The Devil
10,500ಕ್ಕೂ ಹೆಚ್ಚು ಪೈರಸಿ ಲಿಂಕ್ ಡಿಲಿಟ್ – ಡೆವಿಲ್ ಚಿತ್ರತಂಡ ಅಧಿಕೃತ ಪೋಸ್ಟ್
Bengaluru City Cinema Latest Main Post Sandalwood
Samantha Ruth Prabhu 1
ಮೊದಲು ನಿಧಿ ಅಗರ್ವಾಲ್‌, ನಂತ್ರ ಸಮಂತಾ – ಫ್ಯಾನ್ಸ್‌ನಿಂದಲೇ ಕಸಿವಿಸಿ
Cinema Latest South cinema Top Stories

You Might Also Like

Yellow Line Metro
Bengaluru City

ಹಳದಿ ಮಾರ್ಗದ ಮೆಟ್ರೋಗೆ ನಾಳೆ 6ನೇ ರೈಲು ಸೇರ್ಪಡೆ

Public TV
By Public TV
19 minutes ago
Chinnaswamy Stadium
Cricket

ಬೆಂಗಳೂರಿನ ಕೊಹ್ಲಿ ಫ್ಯಾನ್ಸ್‌ಗೆ ನಿರಾಸೆ – ಅಭಿಮಾನಿಗಳಿಲ್ಲದೇ ನಡೆಯುತ್ತಾ ವಿಜಯ್‌ ಹಜಾರೆ ಪಂದ್ಯ?

Public TV
By Public TV
42 minutes ago
Finance Ministry
Latest

ಕರ್ನಾಟಕಕ್ಕೆ ವಿಶೇಷ ಅನುದಾನ ಬಾಕಿ ಇರಿಸಿಕೊಂಡಿಲ್ಲ: ಕೇಂದ್ರ ಸ್ಪಷ್ಟನೆ

Public TV
By Public TV
43 minutes ago
indian railways
Bengaluru City

ಕೆಂಗೇರಿ, ಹೆಜ್ಜಾಲ ರೈಲ್ವೇ ನಿಲ್ದಾಣಗಳ ಮಧ್ಯೆ ಗರ್ಡರ್‌ ಆಳವಡಿಕೆ – ಕೆಲ ರೈಲುಗಳ ಸೇವೆ ರದ್ದು

Public TV
By Public TV
1 hour ago
Love with a married man Married woman commits live suicide Ballari
Bellary

ವಿವಾಹಿತನ ಜೊತೆ ಪ್ರೀತಿ, ಮದುವೆಗೆ ನಿರಾಕರಣೆ – ವಿವಾಹಿತೆ ಲೈವ್ ಸೂಸೈಡ್

Public TV
By Public TV
2 hours ago
Pralhad Joshi
Dharwad

ರೈಲ್ವೆ ಟಿಕೆಟ್ ದರ ಏರಿಕೆ – ಕಿ.ಮೀಗೆ ಒಂದು ಪೈಸೆ ಮಾತ್ರ ಹೆಚ್ಚಾಗಿದೆ: ಜೋಶಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?