ಯತ್ನಾಳ್‍ಗೆ ಸಚಿವ ಸ್ಥಾನ ನೀಡ್ಲೇಬೇಕು- ಜಯಮೃತ್ಯುಂಜಯ ಸ್ವಾಮೀಜಿ ಆಗ್ರಹ

Public TV
1 Min Read
bij swamiji

ವಿಜಯಪುರ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೇವಲ ಪಂಚಮಸಾಲಿ ಸಮಾಜದ ಮುಖಂಡರಲ್ಲ. ಅವರು ಉತ್ತರ ಕರ್ನಾಟಕ ಜನರ ಪರವಾಗಿ ನಿಂತವರು. ಅವರಿಗೆ ಸಚಿವ ಸ್ಥಾನ ನೀಡಲೇಬೇಕು ಎಂದು ವಿಜಯಪುರದಲ್ಲಿ ಕೂಡಲಸಂಗಮದ ಜಯಮೃತ್ಯುಂಜಯ ಸ್ವಾಮೀಜಿ ಯತ್ನಾಳ್ ಪರ ಬ್ಯಾಟಿಂಗ್ ಮಾಡಿದ್ದಾರೆ.

15 ಜನ ಪಂಚಮಸಾಲಿ ಸಮುದಾಯದವರಲ್ಲಿ 15 ಜನ ಆಯ್ಕೆಯಾಗಿದ್ದಾರೆ. ಇದರಲ್ಲಿ ಮೂವರಿಗಾದರೂ ಸಚಿವ ಸ್ಥಾನ ನೀಡಲೇಬೇಕು. ಯತ್ನಾಳ್ ಹಿರಿಯ ನಾಯಕ ಜೊತೆಗೆ ಯಡಿಯೂರಪ್ಪನವರ ಕಷ್ಟ ಕಾಲದಲ್ಲಿ ಬೆನ್ನೆಲುಬಾಗಿ ನಿಂತವರು. ಅವರಿಗೆ ಸಚಿವ ಸ್ಥಾನ ನೀಡಲೇಬೇಕು ಎಂದು ಸ್ವಾಮೀಜಿ ಒತ್ತಾಯಿಸಿದರು.

bij swamiji 1

ಉಭಯ ಜಿಲ್ಲೆಗಳ ಪರವಾಗಿ ನಿರಾಣಿ ಹಾಗೂ ಯತ್ನಾಳ್ ಅವರಿಗೆ ಸಚಿವ ಸ್ಥಾನ ನೀಡಲೇಬೇಕು. ಅದರ ಜೊತೆ ಸಾಧ್ಯವಾದರೆ ಸಿದ್ದು ಸವದಿಗೂ ಸಚಿವ ಸ್ಥಾನ ಕೊಡಬೇಕು ಎಂದು ಸ್ವಾಮೀಜಿ ಆಗ್ರಹಿಸಿದರು. ಒಂದು ವೇಳೆ ಸಚಿವ ಸ್ಥಾನ ಸಿಗದೇ ಹೋದರೆ ಸಮುದಾಯದ ಮುಖಂಡರೊಂದಿಗೆ ಡಿ. 29ರಂದು ಚರ್ಚಿಸಿ ಮುಂದಿನ ನಿರ್ಣಯ ಕೈಗೊಳ್ಳಲಾಗುವುದು ಎಂದು ಬಿಜೆಪಿ ಸರ್ಕಾರಕ್ಕೆ ಸ್ವಾಮೀಜಿ ಎಚ್ಚರಿಕೆ ನೀಡಿದರು.

bij yatnal 1

ವೀರ ರಾಣಿ ಕಿತ್ತೂರು ಚೆನ್ನಮ್ಮ ಜಯಂತಿಗೆ 70 ಲಕ್ಷ ರೂ. ಸರ್ಕಾರ ಪ್ರತಿ ವರ್ಷ ಪರಿಹಾರ ಕೊಡುತ್ತಿತ್ತು. ಆದರೆ ಈ ಬಾರಿ ಸರ್ಕಾರ ಸರಳವಾಗಿ ಚೆನ್ನಮ್ಮ ಜಯಂತಿಯನ್ನು ಆಚರಿಸುವ ಮೂಲಕ ಸಂಪೂರ್ಣ ಅನುದಾನವನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ಬಳಸಿಕೊಳ್ಳಬೇಕು ಎಂದು ಮನವಿ ಮಾಡಿದರು. ಪ್ರವಾಹ ಹಾಗೂ ಬರಗಾಲದ ಹಿನ್ನೆಲೆಯಲ್ಲಿ ಅನುದಾನವನ್ನು ಬಳಸಿಕೊಳ್ಳಬೇಕು ಎಂದರು. ಇದೇ ಡಿ. 29ರಂದು ವಿಜಯಪುರದಲ್ಲಿ ವೀರ ರಾಣಿ ಕಿತ್ತೂರು ಚೆನ್ನಮ್ಮ ಜಯಂತಿಯನ್ನು ಆಚರಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು ಎಂದು ಸ್ವಾಮೀಜಿ ತಿಳಿಸಿದರು.

ಪೌರತ್ವ ಕಾಯ್ದೆ ವಿಚಾರವಾಗಿ ಪ್ರತಿಕ್ರಿಯೆ ನೀಡಲ್ಲ. ಯಾವುದೇ ವಿಚಾರವಾದರೂ ಕುಳಿತು ಚರ್ಚೆ ಮಾಡಬೇಕು. ಕೆಲ ಧರ್ಮಗಳು ಅದರ ಪರ ಹಾಗೂ ವಿರೋಧವಾಗಿ ಮಾತನಾಡುತ್ತಿದ್ದಾರೆ ಇದು ಸರಿಯಲ್ಲ ಎಂದು ಸ್ವಾಮೀಜಿ ಅಭಿಪ್ರಾಯ ವ್ಯಕ್ತಪಡಿಸಿದರು.

Share This Article
Leave a Comment

Leave a Reply

Your email address will not be published. Required fields are marked *