ರಾಜ್ಯ ಒಕ್ಕಲಿಗ ಸಂಘದಿಂದಲೇ ಅಧ್ಯಕ್ಷ ಬೆಟ್ಟೇಗೌಡ ಪದಚ್ಯುತಿ

Public TV
1 Min Read
Bettegowda

ಬೆಂಗಳೂರು: ರಾಜ್ಯ ಒಕ್ಕಲಿಗ ಸಂಘದ 19 ನಿರ್ದೇಶಕರು ಅವಿಶ್ವಾಸ ನಿರ್ಣಯ ಮಂಡಿಸಿದ ಹಿನ್ನೆಲೆಯಲ್ಲಿ ಸಂಘದಿಂದಲೇ ಅಧ್ಯಕ್ಷ ಬೆಟ್ಟೇಗೌಡ ಅವರನ್ನು ಪದಚ್ಯುತಿಗೊಳಿಸಲಾಗಿದೆ.

ಚಾಮರಾಜಪೇಟೆಯಲ್ಲಿರುವ ಒಕ್ಕಲಿಗ ಸಂಘದಲ್ಲಿ ನಡೆದ ಸಭೆಯಲ್ಲಿ ನಿರ್ದೇಶಕರು, ಪದಾಧಿಕಾರಿಗಳು ಸೇರಿ ಈ ಮಹತ್ವದ ತೀರ್ಮಾನವನ್ನು ಕೈಗೊಂಡಿದ್ದಾರೆ. ಇದೇ ತಿಂಗಳ 18 ರಂದು ಅವಿಶ್ವಾಸ ನಿರ್ಣಯ ಪತ್ರಕ್ಕೆ ಸಂಘದ ನಿರ್ದೇಶಕರು ಸಹಿ ಹಾಕಿದ್ದರು.

ರಾಜ್ಯ ಒಕ್ಕಲಿಗ ಸಂಘಕ್ಕೆ 35 ನಿರ್ದೇಶಕರಿದ್ದು 7 ದಿನಗಳೊಳಗೆ ವಿಶ್ವಾಸಮತ ಸಾಬೀತಿಗೆ ವಿರೋಧಿ ಬಣ ಪಟ್ಟು ಹಿಡಿದಿತ್ತು. ಹೀಗಾಗಿ ಇಂದು ವಿಶ್ವಾತಮತ ಸಾಬೀತು ಪಡಿಸುವಲ್ಲಿ ವಿಫಲರಾದ ಹಿನ್ನೆಲೆಯಲ್ಲಿ ಬೆಟ್ಟೇಗೌಡ ಅವರನ್ನು ಪದಚ್ಯುತಿಗೊಳಿಸಲಾಗಿದೆ. ಅಗಸ್ಟ್ 7ರಂದು ಹೊಸ ಅಧ್ಯಕ್ಷರ ಆಯ್ಕೆಗೆ ದಿನಾಂಕ ನಿಗದಿಯಾಗಿದ್ದು ಹಂಗಾಮಿ ಕಾರ್ಯಧ್ಯಕ್ಷರಾಗಿ ನಾರಾಯಣ ಮೂರ್ತಿ ನೇಮಕಗೊಂಡಿದ್ದಾರೆ.

ಹಿಂದಿನ ಅಧ್ಯಕ್ಷರಾಗಿದ್ದ ಡಾ. ಅಪ್ಪಾಜಿಗೌಡ ಅವರನ್ನು 2017ರಲ್ಲಿ ಹುದ್ದೆಯಿಂದ ಪದಚ್ಯುತಗೊಳಿಸಿ ನಿರ್ಣಯ ಕೈಗೊಂಡ ಪರಿಣಾಮ ಬೆಟ್ಟೇಗೌಡ ಅವರು ಅಧ್ಯಕ್ಷರಾಗಿ ಆಯ್ಕೆ ಆಗಿದ್ದರು. ಆದರೆ ಈಗ ಬೆಟ್ಟೇಗೌಡ ಪದಚ್ಯುತಿಗೊಳ್ಳುವುದರೊಂದಿಗೆ ಒಂದುವರೆ ವರ್ಷದ ಆಡಳಿತ ಅಂತ್ಯಗೊಂಡಿದೆ.

Share This Article
Leave a Comment

Leave a Reply

Your email address will not be published. Required fields are marked *