ಬೆಂಗಳೂರು: ರಾಜ್ಯ ಒಕ್ಕಲಿಗ ಸಂಘದ 19 ನಿರ್ದೇಶಕರು ಅವಿಶ್ವಾಸ ನಿರ್ಣಯ ಮಂಡಿಸಿದ ಹಿನ್ನೆಲೆಯಲ್ಲಿ ಸಂಘದಿಂದಲೇ ಅಧ್ಯಕ್ಷ ಬೆಟ್ಟೇಗೌಡ ಅವರನ್ನು ಪದಚ್ಯುತಿಗೊಳಿಸಲಾಗಿದೆ.
ಚಾಮರಾಜಪೇಟೆಯಲ್ಲಿರುವ ಒಕ್ಕಲಿಗ ಸಂಘದಲ್ಲಿ ನಡೆದ ಸಭೆಯಲ್ಲಿ ನಿರ್ದೇಶಕರು, ಪದಾಧಿಕಾರಿಗಳು ಸೇರಿ ಈ ಮಹತ್ವದ ತೀರ್ಮಾನವನ್ನು ಕೈಗೊಂಡಿದ್ದಾರೆ. ಇದೇ ತಿಂಗಳ 18 ರಂದು ಅವಿಶ್ವಾಸ ನಿರ್ಣಯ ಪತ್ರಕ್ಕೆ ಸಂಘದ ನಿರ್ದೇಶಕರು ಸಹಿ ಹಾಕಿದ್ದರು.
- Advertisement 2
ರಾಜ್ಯ ಒಕ್ಕಲಿಗ ಸಂಘಕ್ಕೆ 35 ನಿರ್ದೇಶಕರಿದ್ದು 7 ದಿನಗಳೊಳಗೆ ವಿಶ್ವಾಸಮತ ಸಾಬೀತಿಗೆ ವಿರೋಧಿ ಬಣ ಪಟ್ಟು ಹಿಡಿದಿತ್ತು. ಹೀಗಾಗಿ ಇಂದು ವಿಶ್ವಾತಮತ ಸಾಬೀತು ಪಡಿಸುವಲ್ಲಿ ವಿಫಲರಾದ ಹಿನ್ನೆಲೆಯಲ್ಲಿ ಬೆಟ್ಟೇಗೌಡ ಅವರನ್ನು ಪದಚ್ಯುತಿಗೊಳಿಸಲಾಗಿದೆ. ಅಗಸ್ಟ್ 7ರಂದು ಹೊಸ ಅಧ್ಯಕ್ಷರ ಆಯ್ಕೆಗೆ ದಿನಾಂಕ ನಿಗದಿಯಾಗಿದ್ದು ಹಂಗಾಮಿ ಕಾರ್ಯಧ್ಯಕ್ಷರಾಗಿ ನಾರಾಯಣ ಮೂರ್ತಿ ನೇಮಕಗೊಂಡಿದ್ದಾರೆ.
- Advertisement 3
ಹಿಂದಿನ ಅಧ್ಯಕ್ಷರಾಗಿದ್ದ ಡಾ. ಅಪ್ಪಾಜಿಗೌಡ ಅವರನ್ನು 2017ರಲ್ಲಿ ಹುದ್ದೆಯಿಂದ ಪದಚ್ಯುತಗೊಳಿಸಿ ನಿರ್ಣಯ ಕೈಗೊಂಡ ಪರಿಣಾಮ ಬೆಟ್ಟೇಗೌಡ ಅವರು ಅಧ್ಯಕ್ಷರಾಗಿ ಆಯ್ಕೆ ಆಗಿದ್ದರು. ಆದರೆ ಈಗ ಬೆಟ್ಟೇಗೌಡ ಪದಚ್ಯುತಿಗೊಳ್ಳುವುದರೊಂದಿಗೆ ಒಂದುವರೆ ವರ್ಷದ ಆಡಳಿತ ಅಂತ್ಯಗೊಂಡಿದೆ.