Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Belgaum

ಬೆಳಗಾವಿ ಜಿಲ್ಲೆಯಲ್ಲಿ ಜಾರಕಿಹೊಳಿ ಬ್ರದರ್ಸ್ ವರ್ಸಸ್ ಅದರ್ಸ್ ಸ್ಥಿತಿ ಮುಂದುವರಿಕೆ

Public TV
Last updated: March 7, 2023 12:51 pm
Public TV
Share
3 Min Read
Ramesh Jarkiholi
SHARE

ಬೆಳಗಾವಿ: ಚುನಾವಣೆ ಹೊಸ್ತಿಲಲ್ಲಿ ಬೆಳಗಾವಿ (Belagavi) ಬಿಜೆಪಿ (BJP) ನಾಯಕರ ಭಿನ್ನಮತ ಮುಂದುವರಿದಿದ್ದು, ಗೃಹ ಸಚಿವ ಅಮಿತ್ ಶಾ (Amit Shah) ಬಂದು ಪಾಠ ಮಾಡಿದರೂ ಬಿಜೆಪಿ ನಾಯಕರ ಮುನಿಸು ಮಾತ್ರ ತಣ್ಣಗಾಗಿಲ್ಲ. ಬೆಳಗಾವಿ ಜಿಲ್ಲೆಯಲ್ಲಿ ಜಾರಕಿಹೊಳಿ ಬ್ರದರ್ಸ್ (Jarkiholi Brothers) ವರ್ಸಸ್ ಅದರ್ಸ್ ಸ್ಥಿತಿ ಮುಂದುವರಿದಿದೆ.

ಬೆಳಗಾವಿ ಜಿಲ್ಲೆ ಗೋಕಾಕ್, ಮೂಡಲಗಿ ವಿಜಯ ಸಂಕಲ್ಪ ಯಾತ್ರೆಗೆ ಜಿಲ್ಲೆಯ ಬಿಜೆಪಿ ಲಿಂಗಾಯತ ನಾಯಕರು ಗೈರಾಗಿದ್ದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ, ಸಚಿವೆ ಶಶಿಕಲಾ ಜೊಲ್ಲೆ, ಸಂಸದ ಅಣ್ಣಾಸಾಹೇಬ್ ಜೊಲ್ಲೆ ಗೈರಾಗಿದ್ದಾರೆ. ರಮೇಶ್ ಜಾರಕಿಹೊಳಿ (Ramesh Jarkiholi) – ಲಕ್ಷ್ಮಣ್ ಸವದಿ (Laxman Savadi) ಮಧ್ಯೆ ಮುಸುಕಿನ ಗುದ್ದಾಟ ಇದ್ದರೆ ಮತ್ತೊಂದೆಡೆ ಜಾರಕಿಹೊಳಿ ಸಹೋದರರ ವಿರುದ್ಧ ಟ್ವೀಟ್ ಮೂಲಕ ಈರಣ್ಣ ಕಡಾಡಿ (Eranna Kadadi) ಅಸಮಾಧಾನ ಹೊರಹಾಕಿದ್ದಾರೆ.

AMITSHAH RAMESH JARAKIHOLI

ಇತ್ತೀಚೆಗೆ ಬೆಳಗಾವಿಯ ನ್ಯೂ ಸರ್ಕ್ಯೂಟ್ ಹೌಸ್‌ನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ನೇತೃತ್ವದಲ್ಲಿ ಬಿಜೆಪಿ ನಾಯಕರ ಜಂಟಿ ಸುದ್ದಿಗೋಷ್ಠಿ ಕರೆಯಲಾಗಿತ್ತು. ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ, ಸಚಿವರಾದ ಸಿಸಿ ಪಾಟೀಲ್, ಬೈರತಿ ಬಸವರಾಜ್, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಸಂಸದೆ ಮಂಗಲ ಅಂಗಡಿ ಸೇರಿ ಹಲವರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಈ ವೇಳೆ ಮೊದಲು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಗೋವಿಂದ ಕಾರಜೋಳ ಬಳಿಕ ಬೇರೆಯವರು ಮಾತನಾಡಿ ಎಂದು ಮಾಧ್ಯಮಗಳ ಮೈಕ್‌ಗಳ ಎದುರುಗಡೆಯ ಚೇರ್ ಮೇಲಿಂದ ಎದ್ದಿದ್ದರು. ಆಗ ರಮೇಶ್ ಜಾರಕಿಹೊಳಿಗೆ ಮಾತನಾಡಲು ಮಾಧ್ಯಮದವರು ಹೇಳಿದಾಗ ಮಾತನಾಡಲ್ಲ ಎಂದು ತಿಳಿಸಿದರು. ಬಳಿಕ ಲಕ್ಷ್ಮಣ್ ಸವದಿಗೆ ಮಾತನಾಡಲು ಗೋವಿಂದ ಕಾರಜೋಳ ಕರೆಯುತ್ತಿದ್ದಂತೆ ಸುದ್ದಿಗೋಷ್ಠಿಯಿಂದ ರಮೇಶ್ ಜಾರಕಿಹೊಳಿ ಹೊರನಡೆದರು.

Laxman Savadi

ಮತ್ತೊಂದೆಡೆ ಗೋಕಾಕ್‌ನಲ್ಲಿ ಜಾರಕಿಹೊಳಿ ಬ್ರದರ್ಸ್ ವರ್ಸಸ್ ಈರಣ್ಣ ಕಡಾಡಿ ಎಂಬ ಸ್ಥಿತಿಯಿದೆ. ಗೋಕಾಕ್, ಅರಭಾವಿಯಲ್ಲಿ ನಡೆಯುವ ಸರ್ಕಾರಿ ಕಾರ್ಯಕ್ರಮಗಳಿಗೆ ಆಹ್ವಾನಿಸದ್ದಕ್ಕೆ ರಮೇಶ್ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ ವಿರುದ್ಧ ಟ್ವೀಟ್ ಮಾಡಿ ಈರಣ್ಣ ಕಡಾಡಿ ಅಸಮಾಧಾನ ವ್ಯಕ್ತಪಡಿಸಿದ್ದರು. ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಶಿಷ್ಟಾಚಾರ ಉಲ್ಲಂಘನೆ ಬಗ್ಗೆ ಧ್ವನಿ ಎತ್ತಿದ್ದ ರಮೇಶ್ ಜಾರಕಿಹೊಳಿ ಬಗ್ಗೆ ಪರೋಕ್ಷವಾಗಿ ಟೀಕೆ ಮಾಡಿದ್ದರು.

ಕಳೆದ ಕೆಲ ದಿನಗಳ ಹಿಂದೆ ಗೋಕಾಕ್ ತಾಲೂಕಿನಲ್ಲಿ ಘಟ್ಟಿ ಬಸವಣ್ಣ ಅಣೆಕಟ್ಟು ನಿರ್ಮಾಣಕ್ಕೆ ಭೂಮಿ ಪೂಜೆ, ಮಾರ್ಕಂಡೇಯ ನದಿಗೆ ಅಡ್ಡಲಾಗಿ ಯೋಗಿಕೊಳ್ಳದ ಬಳಿ ನಿರ್ಮಾಣವಾಗುತ್ತಿರುವ ಡ್ಯಾಂ, ಮಾಜಿ ಸಚಿವ ರಮೇಶ್ ಜಾರಕಿಹೊಳಿಯಿಂದ 969 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಆಗುತ್ತಿರುವ ಡ್ಯಾಂ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರವನ್ನು ರಮೇಶ್ ಜಾರಕಿಹೊಳಿ ಪಾಲನೆ ಮಾಡಿರಲಿಲ್ಲ. ಅಳಿಯ, ಪುತ್ರನ ಜೊತೆಗೂಡಿ ಕಾರ್ಯಕ್ರಮ ನಡೆಸಿದ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ನಡೆಯನ್ನು ಟ್ವೀಟ್ ಮೂಲಕ ಈರಣ್ಣ ಕಡಾಡಿ ಖಂಡಿಸಿದ್ದರು. ಇದನ್ನೂ ಓದಿ:ಸಿಎಂ ರಾಜೀನಾಮೆ ಕೊಡಬೇಕು- ಬೊಮ್ಮಾಯಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

Ramesh Jarkiholi

ವಿರೋಧಿ ಪಕ್ಷದ ಸರ್ಕಾರಿ ಕಾರ್ಯಕ್ರಮಗಳಲ್ಲಿ ಶಿಷ್ಟಾಚಾರ ಉಲ್ಲಂಘಿಸುತ್ತಾರೆ ಎಂದು ಹೇಳುವ ನೀವು ತಮ್ಮದೇ ಪಕ್ಷದ ಸಂಸದರನ್ನು ಸರ್ಕಾರಿ ಕಾರ್ಯಕ್ರಮದಲ್ಲಿ ಜೊತೆಗೂಡಿಸಿಕೊಂಡು ಹೋಗದಿರುವ ನಮ್ಮ ಹೃದಯ ವೈಶಾಲ್ಯತೆಗೆ ಜನ ಏನಂದಾರು ಎಂಬ ಕನಿಷ್ಠ ಜ್ಞಾನವಿರಬೇಕು. ಪರಿವಾರ ವಾದವನ್ನು ವಿರೋಧಿಸುವ ಮೌಲ್ಯಾಧಾರಿತ ಪಕ್ಷಕ್ಕೆ ನಾವೇ ಒಂದು ಕಳಂಕವಾಗಬಾರದು. ವ್ಯಕ್ತಿಯೊಬ್ಬರ ತೆವಲಿಗೆ ಪಕ್ಷ ಕೂಡ ಮಣೆ ಹಾಕುವ ಅಗತ್ಯವಿಲ್ಲ. ಇಂತಹವರ ಪ್ರಜಾ ವಿರೋಧಿ ನೀತಿಗಳ ಬಗ್ಗೆ ಜಾಣ ಕುರುಡುತನ ತೋರುವ ನಮ್ಮ ನಾಯಕರು ಭಾರೀ ಬೆಲೆ ತೆರಬೇಕಾದೀತು ಎಂದು ಟ್ವೀಟ್ ಮೂಲಕ ಎಚ್ಚರಿಕೆ ನೀಡಿದ್ದರು.

ಈರಣ್ಣ ಕಡಾಡಿ ಟ್ವೀಟ್ ಬಗ್ಗೆ ಪ್ರತಿಕ್ರಿಯಿಸಿದ್ದ ರಮೇಶ್ ಜಾರಕಿಹೊಳಿ, ಅದು ಸರ್ಕಾರಿ ಕಾರ್ಯಕ್ರಮ ಅಲ್ಲ. ನಾನು ಖಾಸಗಿಯಾಗಿ ಮಾಡಿದ್ದೇನೆ. ಸಿಎಂ ಅನುಮತಿ ಪಡೆದು ನಾನು ಖಾಸಗಿಯಾಗಿ ಕಾರ್ಯಕ್ರಮ ಮಾಡಿದ್ದೇನೆ. ಆಮಂತ್ರಣ ಪತ್ರಿಕೆ ಮುದ್ರಿಸಿರಲಿಲ್ಲ. ರಾಜ್ಯಸಭಾ ಸದಸ್ಯರಿಗೆ ಅಷ್ಟು ಬುದ್ಧಿ ಇಲ್ಲ ಎಂದರೆ ಏನೂ ಮಾಡಲು ಸಾಧ್ಯವಿಲ್ಲ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದರು.

 

Eranna Kadadi 3

ರಮೇಶ್ ಹೇಳಿಕೆಯ ವೀಡಿಯೋ ಟ್ವೀಟ್ ಮಾಡಿ ಮತ್ತೆ ಅಸಮಾಧಾನ ಹೊರಹಾಕಿದ ಈರಣ್ಣ ಕಡಾಡಿ, 969 ಕೋಟಿ ರೂ. ಸರ್ಕಾರಿ ಯೋಜನೆ ಲಕ್ಷಾಂತರ ರೂ. ಪತ್ರಿಕೆಗೆ ಜಾಹೀರಾತು ನೀಡಿ ಶಾಸಕರು ಖಾಸಗಿ ಪೂಜೆ ಮಾಡಬಹುದು ಎಂಬ ಸತ್ಯ ಅತಿ ಬುದ್ಧಿವಂತರಿಂದ ನನಗೆ ತಿಳಿಯಿತು. ಬುದ್ಧಿ ಇಲ್ಲದವರೆಲ್ಲರೂ ಇದನ್ನು ಅರ್ಥ ಮಾಡಿಕೊಳ್ಳಬೇಕು. ಜಟ್ಟಿ ಜಾರಿ ಬಿದ್ದರೂ ಮೀಸೆ ಮಣ್ಣಾಗಲಿಲ್ಲ ಎಂದು ಈರಣ್ಣ ಕಡಾಡಿ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಆದರೆ ಚುನಾವಣೆ ಹೊಸ್ತಿಲಲ್ಲಿ ಬಿಜೆಪಿಗೆ ಬೆಳಗಾವಿ ನಾಯಕರ ಭಿನ್ನಮತ ತಲೆನೋವಾಗುವ ಸಾಧ್ಯತೆಗಳು ಹೆಚ್ಚಿವೆ. ಇದನ್ನೂ ಓದಿ: ಬಿಜೆಪಿಯ ನಾಲ್ಕೈದು ಶಾಸಕರಿಗೆ ಟಿಕೆಟ್ ಇಲ್ಲ- ಆಕಾಂಕ್ಷಿಗಳಿಗೆ ಬಿಎಸ್‍ವೈ ಶಾಕ್

TAGGED:bjpEranna KadadiLaxman Savadiramesh jarkiholiಈರಣ್ಣ ಕಡಾಡಿಬಿಜೆಪಿರಮೇಶ್ ಜಾರಕಿಹೊಳಿಲಕ್ಷ್ಮಣ್ ಸವದಿ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Nandagokula Serial
ನಂದ-ಗೋಕುಲದಲ್ಲಿ ಧಾರಾವಾಹಿಯಲ್ಲಿ ಹೊಸ ಪ್ರಯತ್ನ
Cinema Latest Top Stories TV Shows
Dhurandhar Movie
ರಣ್ವೀರ್ ಸಿಂಗ್ ಸಿನಿಮಾ ಸೆಟ್ಟಲ್ಲಿ ನೂರಕ್ಕೂ ಹೆಚ್ಚು ತಂತ್ರಜ್ಞರಿಗೆ ಫುಡ್ ಪಾಯ್ಸನ್!
Bollywood Cinema Latest Top Stories
Kantara 1 1
ಕಾಂತಾರ-1 ಕಹಳೆ.. 100 ಕೋಟಿಗೆ ಆಂಧ್ರದ ವಿತರಣೆ ಹಕ್ಕು ಸೇಲ್
Cinema Latest Sandalwood South cinema Top Stories
Deepika Das
`ನಮ್ಮ ಹತ್ರ ಬರೋ ಅವಶ್ಯಕತೆ ಇಲ್ಲ’ – ಪುಷ್ಪಮ್ಮನಿಗೆ ಮತ್ತೆ ಟಾಂಗ್ ಕೊಟ್ಟ ದೀಪಿಕಾ ದಾಸ್
Cinema Latest Sandalwood Top Stories
Vishnuvardhans memorial
ವಿಷ್ಣು ಸಮಾಧಿ ನೆಲಸಮ, ಅಭಿಮಾನ್‌ ಸ್ಟುಡಿಯೋದ ಅವ್ಯವಹಾರ: ವಿಷ್ಣು ಫ್ಯಾನ್ಸ್ ಗರಂ
Cinema Latest Sandalwood Top Stories

You Might Also Like

Ind vs Pak 2
Cricket

ಪಾಕಿಸ್ತಾನದೊಂದಿಗೆ ದ್ವಿಪಕ್ಷೀಯ ಸರಣಿ ಆಡಲ್ಲ: ಸಚಿವ ಮನ್ಸುಖ್ ಮಾಂಡವಿಯಾ

Public TV
By Public TV
35 minutes ago
Rain Effect
Bellary

ರಾಜ್ಯದ ಹಲವೆಡೆ ಮಳೆ ಅವಾಂತರ – ಬೆಳೆ ನಾಶ, ಹೈರಾಣಾದ ಅನ್ನದಾತ

Public TV
By Public TV
38 minutes ago
Gutka Ban
Crime

Kalaburagi | ಗುಟ್ಕಾ ತಿನ್ನಬೇಡ ಎಂದಿದ್ದಕ್ಕೆ ಬಾಲಕ ಆತ್ಮಹತ್ಯೆ

Public TV
By Public TV
50 minutes ago
Freedom Park copy
Bengaluru City

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿಂದು ʻಧರ್ಮ ಸಂರಕ್ಷಣಾʼ ಸಮಾವೇಶ

Public TV
By Public TV
1 hour ago
Chakravarti Sulibele
Bengaluru City

ಸಮೀರ್ ಮುಲ್ಲಾನ ಕುತಂತ್ರಕ್ಕೆ ಕೊನೇ ಮೊಳೆ ಹೊಡೆಯೋಣ – ಚಕ್ರವರ್ತಿ ಸೂಲಿಬೆಲೆ

Public TV
By Public TV
2 hours ago
Accident
Bengaluru City

Bengaluru | ಒನ್ ವೇಯಲ್ಲಿ ಬಂದು ಬೈಕ್‌ಗೆ ಡಿಕ್ಕಿ ಹೊಡೆದ ಕಾರು – ಫ್ಲೈಓವರ್ ಮೇಲಿಂದ ಬಿದ್ದು ಮಹಿಳೆ ಸಾವು

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?