Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಳಗಾವಿ ಜಿಲ್ಲೆಯಲ್ಲಿ ಜಾರಕಿಹೊಳಿ ಬ್ರದರ್ಸ್ ವರ್ಸಸ್ ಅದರ್ಸ್ ಸ್ಥಿತಿ ಮುಂದುವರಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಬೆಳಗಾವಿ ಜಿಲ್ಲೆಯಲ್ಲಿ ಜಾರಕಿಹೊಳಿ ಬ್ರದರ್ಸ್ ವರ್ಸಸ್ ಅದರ್ಸ್ ಸ್ಥಿತಿ ಮುಂದುವರಿಕೆ

Belgaum

ಬೆಳಗಾವಿ ಜಿಲ್ಲೆಯಲ್ಲಿ ಜಾರಕಿಹೊಳಿ ಬ್ರದರ್ಸ್ ವರ್ಸಸ್ ಅದರ್ಸ್ ಸ್ಥಿತಿ ಮುಂದುವರಿಕೆ

Public TV
Last updated: March 7, 2023 12:51 pm
Public TV
Share
3 Min Read
Ramesh Jarkiholi
SHARE

ಬೆಳಗಾವಿ: ಚುನಾವಣೆ ಹೊಸ್ತಿಲಲ್ಲಿ ಬೆಳಗಾವಿ (Belagavi) ಬಿಜೆಪಿ (BJP) ನಾಯಕರ ಭಿನ್ನಮತ ಮುಂದುವರಿದಿದ್ದು, ಗೃಹ ಸಚಿವ ಅಮಿತ್ ಶಾ (Amit Shah) ಬಂದು ಪಾಠ ಮಾಡಿದರೂ ಬಿಜೆಪಿ ನಾಯಕರ ಮುನಿಸು ಮಾತ್ರ ತಣ್ಣಗಾಗಿಲ್ಲ. ಬೆಳಗಾವಿ ಜಿಲ್ಲೆಯಲ್ಲಿ ಜಾರಕಿಹೊಳಿ ಬ್ರದರ್ಸ್ (Jarkiholi Brothers) ವರ್ಸಸ್ ಅದರ್ಸ್ ಸ್ಥಿತಿ ಮುಂದುವರಿದಿದೆ.

ಬೆಳಗಾವಿ ಜಿಲ್ಲೆ ಗೋಕಾಕ್, ಮೂಡಲಗಿ ವಿಜಯ ಸಂಕಲ್ಪ ಯಾತ್ರೆಗೆ ಜಿಲ್ಲೆಯ ಬಿಜೆಪಿ ಲಿಂಗಾಯತ ನಾಯಕರು ಗೈರಾಗಿದ್ದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ, ಸಚಿವೆ ಶಶಿಕಲಾ ಜೊಲ್ಲೆ, ಸಂಸದ ಅಣ್ಣಾಸಾಹೇಬ್ ಜೊಲ್ಲೆ ಗೈರಾಗಿದ್ದಾರೆ. ರಮೇಶ್ ಜಾರಕಿಹೊಳಿ (Ramesh Jarkiholi) – ಲಕ್ಷ್ಮಣ್ ಸವದಿ (Laxman Savadi) ಮಧ್ಯೆ ಮುಸುಕಿನ ಗುದ್ದಾಟ ಇದ್ದರೆ ಮತ್ತೊಂದೆಡೆ ಜಾರಕಿಹೊಳಿ ಸಹೋದರರ ವಿರುದ್ಧ ಟ್ವೀಟ್ ಮೂಲಕ ಈರಣ್ಣ ಕಡಾಡಿ (Eranna Kadadi) ಅಸಮಾಧಾನ ಹೊರಹಾಕಿದ್ದಾರೆ.

AMITSHAH RAMESH JARAKIHOLI

ಇತ್ತೀಚೆಗೆ ಬೆಳಗಾವಿಯ ನ್ಯೂ ಸರ್ಕ್ಯೂಟ್ ಹೌಸ್‌ನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ನೇತೃತ್ವದಲ್ಲಿ ಬಿಜೆಪಿ ನಾಯಕರ ಜಂಟಿ ಸುದ್ದಿಗೋಷ್ಠಿ ಕರೆಯಲಾಗಿತ್ತು. ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ, ಸಚಿವರಾದ ಸಿಸಿ ಪಾಟೀಲ್, ಬೈರತಿ ಬಸವರಾಜ್, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಸಂಸದೆ ಮಂಗಲ ಅಂಗಡಿ ಸೇರಿ ಹಲವರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಈ ವೇಳೆ ಮೊದಲು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಗೋವಿಂದ ಕಾರಜೋಳ ಬಳಿಕ ಬೇರೆಯವರು ಮಾತನಾಡಿ ಎಂದು ಮಾಧ್ಯಮಗಳ ಮೈಕ್‌ಗಳ ಎದುರುಗಡೆಯ ಚೇರ್ ಮೇಲಿಂದ ಎದ್ದಿದ್ದರು. ಆಗ ರಮೇಶ್ ಜಾರಕಿಹೊಳಿಗೆ ಮಾತನಾಡಲು ಮಾಧ್ಯಮದವರು ಹೇಳಿದಾಗ ಮಾತನಾಡಲ್ಲ ಎಂದು ತಿಳಿಸಿದರು. ಬಳಿಕ ಲಕ್ಷ್ಮಣ್ ಸವದಿಗೆ ಮಾತನಾಡಲು ಗೋವಿಂದ ಕಾರಜೋಳ ಕರೆಯುತ್ತಿದ್ದಂತೆ ಸುದ್ದಿಗೋಷ್ಠಿಯಿಂದ ರಮೇಶ್ ಜಾರಕಿಹೊಳಿ ಹೊರನಡೆದರು.

Laxman Savadi

ಮತ್ತೊಂದೆಡೆ ಗೋಕಾಕ್‌ನಲ್ಲಿ ಜಾರಕಿಹೊಳಿ ಬ್ರದರ್ಸ್ ವರ್ಸಸ್ ಈರಣ್ಣ ಕಡಾಡಿ ಎಂಬ ಸ್ಥಿತಿಯಿದೆ. ಗೋಕಾಕ್, ಅರಭಾವಿಯಲ್ಲಿ ನಡೆಯುವ ಸರ್ಕಾರಿ ಕಾರ್ಯಕ್ರಮಗಳಿಗೆ ಆಹ್ವಾನಿಸದ್ದಕ್ಕೆ ರಮೇಶ್ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ ವಿರುದ್ಧ ಟ್ವೀಟ್ ಮಾಡಿ ಈರಣ್ಣ ಕಡಾಡಿ ಅಸಮಾಧಾನ ವ್ಯಕ್ತಪಡಿಸಿದ್ದರು. ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಶಿಷ್ಟಾಚಾರ ಉಲ್ಲಂಘನೆ ಬಗ್ಗೆ ಧ್ವನಿ ಎತ್ತಿದ್ದ ರಮೇಶ್ ಜಾರಕಿಹೊಳಿ ಬಗ್ಗೆ ಪರೋಕ್ಷವಾಗಿ ಟೀಕೆ ಮಾಡಿದ್ದರು.

ಕಳೆದ ಕೆಲ ದಿನಗಳ ಹಿಂದೆ ಗೋಕಾಕ್ ತಾಲೂಕಿನಲ್ಲಿ ಘಟ್ಟಿ ಬಸವಣ್ಣ ಅಣೆಕಟ್ಟು ನಿರ್ಮಾಣಕ್ಕೆ ಭೂಮಿ ಪೂಜೆ, ಮಾರ್ಕಂಡೇಯ ನದಿಗೆ ಅಡ್ಡಲಾಗಿ ಯೋಗಿಕೊಳ್ಳದ ಬಳಿ ನಿರ್ಮಾಣವಾಗುತ್ತಿರುವ ಡ್ಯಾಂ, ಮಾಜಿ ಸಚಿವ ರಮೇಶ್ ಜಾರಕಿಹೊಳಿಯಿಂದ 969 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಆಗುತ್ತಿರುವ ಡ್ಯಾಂ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರವನ್ನು ರಮೇಶ್ ಜಾರಕಿಹೊಳಿ ಪಾಲನೆ ಮಾಡಿರಲಿಲ್ಲ. ಅಳಿಯ, ಪುತ್ರನ ಜೊತೆಗೂಡಿ ಕಾರ್ಯಕ್ರಮ ನಡೆಸಿದ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ನಡೆಯನ್ನು ಟ್ವೀಟ್ ಮೂಲಕ ಈರಣ್ಣ ಕಡಾಡಿ ಖಂಡಿಸಿದ್ದರು. ಇದನ್ನೂ ಓದಿ: ಸಿಎಂ ರಾಜೀನಾಮೆ ಕೊಡಬೇಕು- ಬೊಮ್ಮಾಯಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

Ramesh Jarkiholi

ವಿರೋಧಿ ಪಕ್ಷದ ಸರ್ಕಾರಿ ಕಾರ್ಯಕ್ರಮಗಳಲ್ಲಿ ಶಿಷ್ಟಾಚಾರ ಉಲ್ಲಂಘಿಸುತ್ತಾರೆ ಎಂದು ಹೇಳುವ ನೀವು ತಮ್ಮದೇ ಪಕ್ಷದ ಸಂಸದರನ್ನು ಸರ್ಕಾರಿ ಕಾರ್ಯಕ್ರಮದಲ್ಲಿ ಜೊತೆಗೂಡಿಸಿಕೊಂಡು ಹೋಗದಿರುವ ನಮ್ಮ ಹೃದಯ ವೈಶಾಲ್ಯತೆಗೆ ಜನ ಏನಂದಾರು ಎಂಬ ಕನಿಷ್ಠ ಜ್ಞಾನವಿರಬೇಕು. ಪರಿವಾರ ವಾದವನ್ನು ವಿರೋಧಿಸುವ ಮೌಲ್ಯಾಧಾರಿತ ಪಕ್ಷಕ್ಕೆ ನಾವೇ ಒಂದು ಕಳಂಕವಾಗಬಾರದು. ವ್ಯಕ್ತಿಯೊಬ್ಬರ ತೆವಲಿಗೆ ಪಕ್ಷ ಕೂಡ ಮಣೆ ಹಾಕುವ ಅಗತ್ಯವಿಲ್ಲ. ಇಂತಹವರ ಪ್ರಜಾ ವಿರೋಧಿ ನೀತಿಗಳ ಬಗ್ಗೆ ಜಾಣ ಕುರುಡುತನ ತೋರುವ ನಮ್ಮ ನಾಯಕರು ಭಾರೀ ಬೆಲೆ ತೆರಬೇಕಾದೀತು ಎಂದು ಟ್ವೀಟ್ ಮೂಲಕ ಎಚ್ಚರಿಕೆ ನೀಡಿದ್ದರು.

ಈರಣ್ಣ ಕಡಾಡಿ ಟ್ವೀಟ್ ಬಗ್ಗೆ ಪ್ರತಿಕ್ರಿಯಿಸಿದ್ದ ರಮೇಶ್ ಜಾರಕಿಹೊಳಿ, ಅದು ಸರ್ಕಾರಿ ಕಾರ್ಯಕ್ರಮ ಅಲ್ಲ. ನಾನು ಖಾಸಗಿಯಾಗಿ ಮಾಡಿದ್ದೇನೆ. ಸಿಎಂ ಅನುಮತಿ ಪಡೆದು ನಾನು ಖಾಸಗಿಯಾಗಿ ಕಾರ್ಯಕ್ರಮ ಮಾಡಿದ್ದೇನೆ. ಆಮಂತ್ರಣ ಪತ್ರಿಕೆ ಮುದ್ರಿಸಿರಲಿಲ್ಲ. ರಾಜ್ಯಸಭಾ ಸದಸ್ಯರಿಗೆ ಅಷ್ಟು ಬುದ್ಧಿ ಇಲ್ಲ ಎಂದರೆ ಏನೂ ಮಾಡಲು ಸಾಧ್ಯವಿಲ್ಲ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದರು.

 

Eranna Kadadi 3

ರಮೇಶ್ ಹೇಳಿಕೆಯ ವೀಡಿಯೋ ಟ್ವೀಟ್ ಮಾಡಿ ಮತ್ತೆ ಅಸಮಾಧಾನ ಹೊರಹಾಕಿದ ಈರಣ್ಣ ಕಡಾಡಿ, 969 ಕೋಟಿ ರೂ. ಸರ್ಕಾರಿ ಯೋಜನೆ ಲಕ್ಷಾಂತರ ರೂ. ಪತ್ರಿಕೆಗೆ ಜಾಹೀರಾತು ನೀಡಿ ಶಾಸಕರು ಖಾಸಗಿ ಪೂಜೆ ಮಾಡಬಹುದು ಎಂಬ ಸತ್ಯ ಅತಿ ಬುದ್ಧಿವಂತರಿಂದ ನನಗೆ ತಿಳಿಯಿತು. ಬುದ್ಧಿ ಇಲ್ಲದವರೆಲ್ಲರೂ ಇದನ್ನು ಅರ್ಥ ಮಾಡಿಕೊಳ್ಳಬೇಕು. ಜಟ್ಟಿ ಜಾರಿ ಬಿದ್ದರೂ ಮೀಸೆ ಮಣ್ಣಾಗಲಿಲ್ಲ ಎಂದು ಈರಣ್ಣ ಕಡಾಡಿ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಆದರೆ ಚುನಾವಣೆ ಹೊಸ್ತಿಲಲ್ಲಿ ಬಿಜೆಪಿಗೆ ಬೆಳಗಾವಿ ನಾಯಕರ ಭಿನ್ನಮತ ತಲೆನೋವಾಗುವ ಸಾಧ್ಯತೆಗಳು ಹೆಚ್ಚಿವೆ. ಇದನ್ನೂ ಓದಿ: ಬಿಜೆಪಿಯ ನಾಲ್ಕೈದು ಶಾಸಕರಿಗೆ ಟಿಕೆಟ್ ಇಲ್ಲ- ಆಕಾಂಕ್ಷಿಗಳಿಗೆ ಬಿಎಸ್‍ವೈ ಶಾಕ್

TAGGED:bjpEranna KadadiLaxman Savadiramesh jarkiholiಈರಣ್ಣ ಕಡಾಡಿಬಿಜೆಪಿರಮೇಶ್ ಜಾರಕಿಹೊಳಿಲಕ್ಷ್ಮಣ್ ಸವದಿ
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

LPG Gas Shortage
Bagalkot

ಕೊಲ್ಲಿ ಕಾಳಗ ಎಫೆಕ್ಟ್ – ರಾಜ್ಯದ ವಿವಿಧೆಡೆ LPG ವ್ಯತ್ಯಯ, ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ

Public TV
By Public TV
16 minutes ago
AI War
Latest

ಯುದ್ಧ ಭೂಮಿಯಲ್ಲಿ AI – ಇರಾನ್‌ ಮೇಲಿನ ದಾಳಿಗೆ ʻಕ್ಲಾಡ್ʼ ಸಹಾಯ ಮಾಡಿದ್ದು ಹೇಗೆ?

Public TV
By Public TV
26 minutes ago
daily horoscope dina bhavishya
Astrology

ದಿನ ಭವಿಷ್ಯ 11-03-2026

Public TV
By Public TV
39 minutes ago
supreme Court 1
Court

ಏಕರೂಪ ನಾಗರಿಕ ಸಂಹಿತೆ ಜಾರಿಗೆ ‘ಸುಪ್ರೀಂ’ ಅಸ್ತು

Public TV
By Public TV
8 hours ago
dink couples
Latest

ಮಕ್ಕಳು ಬೇಡ, ಡಬಲ್‌ ಇನ್‌ಕಮ್‌ ಇರ್ಬೇಕು, ಲೈಫ್‌ ಎಂಜಾಯ್‌ ಮಾಡ್ಬೇಕು – ಭಾರತದಲ್ಲಿ ಹೆಚ್ಚಾಗ್ತಿದೆ ‘ಡಿಂಕ್‌ ಕಪಲ್ಸ್‌’ ಟ್ರೆಂಡ್‌

Public TV
By Public TV
9 hours ago
d.k.shivakumar dinner party
Bengaluru City

ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ 6 ವರ್ಷ – ಕಾಂಗ್ರೆಸ್ ಶಾಸಕರಿಗೆ ಡಿನ್ನರ್ ಪಾರ್ಟಿ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?