Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕರ್ನಾಟಕದಲ್ಲಿ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಲ್ಪಿಸಲು ಕ್ರಮ; ಹೆಚ್‌ಡಿಕೆ ಮಹತ್ವದ ಚರ್ಚೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕರ್ನಾಟಕದಲ್ಲಿ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಲ್ಪಿಸಲು ಕ್ರಮ; ಹೆಚ್‌ಡಿಕೆ ಮಹತ್ವದ ಚರ್ಚೆ

Latest

ಕರ್ನಾಟಕದಲ್ಲಿ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಲ್ಪಿಸಲು ಕ್ರಮ; ಹೆಚ್‌ಡಿಕೆ ಮಹತ್ವದ ಚರ್ಚೆ

Public TV
Last updated: February 4, 2026 1:55 pm
Public TV
Share
2 Min Read
HD Kumaraswamy
SHARE

ನವದೆಹಲಿ: ಕರ್ನಾಟಕದಲ್ಲಿ (Karnataka) ನಿರಂತರವಾಗಿ ನಡೆಯುತ್ತಿರುವ ಮಾನವ-ವನ್ಯಜೀವಿ ಸಂಘರ್ಷಕ್ಕೆ (Human Wildlife Conflict) ಶಾಶ್ವತವಾಗಿ ತಡೆಯೊಡ್ಡಿ, ಜನರ ಜೇವ ರಕ್ಷಣೆ ಮಾಡುವ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಮಹತ್ವದ ಮಾತುಕತೆ ನಡೆಸಿದರು. ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಖಾತೆ ಸಚಿವರಾದ ಭೂಪೇಂದ್ರ ಯಾದವ್‌ ಅವರನ್ನ ಭೇಟಿ ಮಾಡಿ ಮಹತ್ವದ ಚರ್ಚೆ ನಡೆಸಿದರು.

ಸಂಸತ್‌ ಭವನದಲ್ಲಿರುವ ಅರಣ್ಯ ಸಚಿವರ ಕಚೇರಿಯಲ್ಲಿ ನಡೆದ ಈ ಭೇಟಿಯ ವೇಳೆ ಕುಮಾರಸ್ವಾಮಿ ಅವರು, ಮುಖ್ಯವಾಗಿ ಕೊಡಗು, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ, ಶಿವಮೊಗ್ಗ, ರಾಮನಗರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ನಡೆಯುತ್ತಿರುವ ಆನೆಗಳ ದಾಳಿ ಬಗ್ಗೆ ಚರ್ಚೆ ನಡೆಸಿದರು. ಇದನ್ನೂ ಓದಿ: ಸರ್ಕಾರ ಕೃಷಿ, ಡೈರಿಯಂತಹ ಸೂಕ್ಷ್ಮ ವಲಯಗಳ ಹಿತಾಸಕ್ತಿಗಳನ್ನು ಕಾಪಾಡಿದೆ: ಪಿಯೂಷ್‌ ಗೋಯಲ್‌

ನನ್ನ ಸಂಪುಟ ಸಹೋದ್ಯೋಗಿ, ಕೇಂದ್ರದ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಖಾತೆ ಸಚಿವರಾದ ಶ್ರೀ @byadavbjp ಅವರನ್ನು ಭೇಟಿಯಾಗಿ ಅಂತರ ಸಚಿವಾಲಯ ಸಂಬಂಧಿತ ವಿಷಯಗಳು ಹಾಗೂ ಅಭಿವೃದ್ಧಿ ಕುರಿತಂತೆ ರಚನಾತ್ಮಕ ಚರ್ಚೆ ನಡೆಸಲಾಯಿತು.

ಬಹು ಮುಖ್ಯವಾಗಿ ಕರ್ನಾಟಕದಲ್ಲಿ ಮಾನವ- ವನ್ಯಜೀವಿ ಸಂಘರ್ಷ, ನಿರಂತರವಾಗಿ ನಡೆಯುತ್ತಿರುವ ಆನೆ ದಾಳಿಯನ್ನು… pic.twitter.com/jdDZ4QUoOQ

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) February 4, 2026

ವನ್ಯಜೀವಿ ಉಪಟಳ ನಿರಂತರವಾಗಿ ನಡೆಯುತ್ತಿದೆ. ಇದರಿಂದ ಅನೇಕರು, ಅದರಲ್ಲಿಯೂ ಅರಣ್ಯದ ಅಂಚಿನಲ್ಲಿ ಬೇಸಾಯ ಮಾಡುವ, ದನಕರುಗಳನ್ನ ಮೇಯಿಸುವ ರೈತರು ಬಲಿಯಾಗಿದ್ದಾರೆ. ಇನ್ನೂ ಅನೇಕರು ಗಾಯಗೊಂಡು ಶಾಶ್ವತವಾಗಿ ಅಂಗವೈಕಲ್ಯಕ್ಕೆ ತುತ್ತಾಗುತ್ತಿದ್ದಾರೆ. ಕರ್ನಾಟಕದಲ್ಲಿ ಈ ಸಮಸ್ಯೆ ಬಿಗಡಾಯಿಸಿದ್ದು, ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ಕುಮಾರಸ್ವಾಮಿ ಅವರು ಭೂಪೇಂದ್ರ ಯಾದವ್‌ (Bhupender Yadav) ಅವರನ್ನು ವಿನಂತಿಸಿದರು.

ಕುಮಾರಸ್ವಾಮಿ ಅವರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು, ಈ ಬಗ್ಗೆ ತುರ್ತು ಗಮನ ಹರಿಸುವುದಾಗಿ ಭರವಸೆ ನೀಡಿದರು. ಅಲ್ಲದೆ, ಅದಕ್ಕೆ ಪೂರಕವಾದ ಎಲ್ಲಾ ಮಾಹಿತಿಯನ್ನು ಸಚಿವ ಕುಮಾರಸ್ವಾಮಿ ಅವರಿಂದ ಪಡೆದುಕೊಂಡರು. ಈ ನಿಟಿನಲ್ಲಿ ಕೈಗೊಳ್ಳಬೇಕಾದ ಪರಿಹಾರ ಕ್ರಮಗಳ ಬಗ್ಗೆ ಅಧಿಕಾರಿಗಳು ಹೇಗೆ ಕಾರ್ಯ ನಿರ್ವಹಿಸಬೇಕು ಎನ್ನುವ ಕುರಿತು ನಿರ್ದೇಶನ ನೀಡಿದರು. ಇದನ್ನೂ ಓದಿ: ಕರ್ನಾಟಕದ 8,000 ಕೋಟಿಗೂ ಅಧಿಕ ಹಣ ಬಾಕಿ – ಬಿಡುಗಡೆ ಮಾಡುವಂತೆ ಕೇಂದ್ರಕ್ಕೆ ಆಗ್ರಹ

Bandipur Wildlife Safari 1.jpg

ಪ್ರಸ್ತುತ ನಡೆಯುತ್ತಿರುವ ಸಂಸತ್ತಿನ ಬಜೆಟ್‌ ಅಧಿವೇಶನ ಮುಗಿಯುವದರೊಳಗೆ ಈ ಬಗ್ಗೆ ಸಂಪೂರ್ಣ ಮಾಹಿತಿ ನೀಡುವಂತೆ ಸಚಿವ ಭೂಪೇಂದ್ರ ಯಾದವ್‌ ಅಧಿಕಾರಿಗಳಿಗೆ ಸೂಚಿಸಿದರಲ್ಲದೆ, ಅತ್ಯಂತ ತ್ವರಿತವಾಗಿ ಈ ಬಗ್ಗೆ ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು. ಇದನ್ನೂ ಓದಿ: ಭಾರತ ಬಿಟ್ಟು ತೊಲಗಿ – ಫ್ರೀ ಪ್ಯಾಲೆಸ್ಟೈನ್ ಸ್ಟಿಕ್ಕರ್‌ ಅಂಟಿಸಿದ ಬ್ರಿಟಿಷ್ ದಂಪತಿಗೆ ನೋಟಿಸ್‌

ಅಂತರ ಸಚಿವಾಲಯ ವಿಷಯಗಳ ಕುರಿತು ಸಮಾಲೋಚನೆ:
ಈ ಭೇಟಿಯ ಸಂದರ್ಭದಲ್ಲಿ ಸಚಿವದ್ವಯರು ತಮ್ಮ ನಿರ್ವಹಣೆಯ ಇಲಾಖೆಗಳಿಗೆ ಸಂಬಂಧಿಸಿದ ಸುದೀರ್ಘ ಚರ್ಚೆ ನಡೆಸಿದರು. ಎರಡೂ ಇಲಾಖೆಗಳ ಸಮನ್ವಯತೆ, ಅಭಿವೃದ್ಧಿ ವಿಷಯಗಳ ಕುರಿತಾಗಿ ಅವರಿಬ್ಬರ ಮಾತುಕತೆ ಕೇಂದ್ರೀಕೃತವಾಗಿತ್ತು. ಜತೆಗೆ, ಉಕ್ಕು ಉದ್ಯಮದ ಬೆಳವಣಿಗೆ ಹಾಗೂ ಅದಕ್ಕೆ ಪೂರಕವಾಗಿ ಪರಿಸರ ಇಲಾಖೆಯಿಂದ ದೊರೆಯುತ್ತಿರುವ ಉತ್ತಮ ಸಹಕಾರದ ಬಗ್ಗೆಯೂ ಮಾತುಕತೆ ನಡೆಸಿದರು.

TAGGED:Bhupender Yadavhd kumaraswamyHuman Wildlife Conflictkarnatakaಅರಣ್ಯ ಇಲಾಖೆಭೂಪೇಂದ್ರ ಯಾದವ್ಮಾನವ ವನ್ಯಜೀವಿ ಸಂಘರ್ಷಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Darshan 6
ಜೈಲಿನಲ್ಲಿ ಟಿವಿ ಕೊಟ್ಟಿದ್ದಕ್ಕಾಗಿ ಜಡ್ಜ್‌ಗೆ ಥ್ಯಾಂಕ್ಸ್‌ ಹೇಳಿ ನೇರ ಕೋರ್ಟ್ ವಿಚಾರಣೆಗೆ ದರ್ಶನ್‌ ಮನವಿ
Cinema Crime Karnataka Latest Main Post
Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories

You Might Also Like

Jharkhand Ranchi Air Ambulence Crash
Latest

ಜಾರ್ಖಂಡ್‌ನ ರಾಂಚಿಯಲ್ಲಿ ಏರ್ ಅಂಬುಲೆನ್ಸ್ ಪತನ

Public TV
By Public TV
7 hours ago
ICC Mens T20 World Cup West Indies vs Zimbabwe West Indies won by 107 runs
Cricket

ಸಿಕ್ಸರ್‌, ಬೌಂಡರಿಯಿಂದಲೇ ವಿಂಡೀಸ್‌ಗೆ 178 ರನ್‌ – ಜಿಂಬಾಬ್ವೆ ವಿರುದ್ಧ 107 ರನ್‌ಗಳ ಭರ್ಜರಿ ಜಯ

Public TV
By Public TV
7 hours ago
Double Decker Bus Overturns In Lucknow
Crime

ಲಕ್ನೋದಲ್ಲಿ ಡಬಲ್ ಡೆಕ್ಕರ್ ಬಸ್ ಪಲ್ಟಿ – ಐವರು ದುರ್ಮರಣ, 16 ಮಂದಿಗೆ ಗಾಯ

Public TV
By Public TV
8 hours ago
ಸಾಂದರ್ಭಿಕ ಚಿತ್ರ
Bengaluru City

ಜಕ್ಕೂರಿನಲ್ಲಿ ಸಿಎಂ, ಡಿಸಿಎಂ ಜೊತೆ ಸುರ್ಜೇವಾಲಾ ಕ್ಲೋಸ್‌ ಡೋರ್‌ ಮೀಟಿಂಗ್‌

Public TV
By Public TV
8 hours ago
Baldota Factory
Districts

ಬಲ್ಡೋಟಾ ಕಾರ್ಖಾನೆ ವಿಸ್ತರಣೆ ವಿರೋಧಿಸಿ ಕೊಪ್ಪಳ ಬಂದ್ – ಮಂಗಳವಾರ ಖಾಸಗಿ ಶಾಲೆಗಳಿಗೆ ರಜೆ

Public TV
By Public TV
9 hours ago
Rahul Gandhi Gym Trainer Mohammad Deepak
Latest

ನಿಮ್ಮ ಜಿಮ್‌ಗೆ ಸೇರುತ್ತೇನೆ: ಜಿಮ್ ಟ್ರೈನರ್ ಮೊಹಮ್ಮದ್ ದೀಪಕ್ ಭೇಟಿಯಾದ ರಾಹುಲ್ ಗಾಂಧಿ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?