ಬೆಂಗಳೂರು: ಮದ್ಯದ ಅಮಲಿನಲ್ಲಿ ಪುಂಡರು ತಡರಾತ್ರಿ ಮನೆ ಮುಂದೆ ನಿಲ್ಲಿಸಿದ್ದ ಕಾರುಗಳಿಗೆ (Cars) ಕಲ್ಲು ತೂರಿ (Stone Pelting) ಹಾನಿ ಮಾಡಿರುವ ಘಟನೆ ಬೆಂಗಳೂರಿನ (Bengaluru) ಶ್ರೀನಿವಾಸನಗರದಲ್ಲಿ (Srinivasnagar) ನಡೆದಿದೆ.
ತಡರಾತ್ರಿ 2:50ರ ವೇಳೆಗೆ ಬೈಕ್ನಲ್ಲಿ ಬಂದಿದ್ದ ಇಬ್ಬರು ಪುಂಡರು 6ಕ್ಕೂ ಹೆಚ್ಚು ಕಾರುಗಳಿಗೆ ಕಲ್ಲು ತೂರಿ ಹಾನಿ ಮಾಡಿದ್ದಾರೆ. ಕಾರುಗಳ ಕಿಟಕಿ ಗಾಜುಗಳು ಪುಡಿಪುಡಿಯಾಗಿದ್ದು, ಆರೋಪಿಗಳ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ಕೈ ಟಿಕೆಟ್ ಆಕಾಂಕ್ಷಿಯ ಮೇಲೆ ಹಣದ ಮಳೆ ಸುರಿದ ಅಭಿಮಾನಿಗಳು
ಘಟನೆಯಲ್ಲಿ ಐ20, ಹ್ಯೂಂಡೈ, ಓಮ್ನಿ ಕಾರುಗಳು ಸೇರಿದಂತೆ 6ಕ್ಕೂ ಹೆಚ್ಚು ಕಾರುಗಳಿಗೆ ಹಾನಿಯಾಗಿದೆ. ಘಟನೆ ಬಗ್ಗೆ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ರಾಜ್ಯ ಬಿಜೆಪಿ ನಾಯಕರಿಗೆ ಶಾ ಶಾಕ್ – ಬೆಂಗಳೂರು ಗೆಲ್ಲಲು ಬಿಗ್ ಟಾಸ್ಕ್
LIVE TV
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k