ಕಲಬುರಗಿ: ಶಾಲಾ-ಕಾಲೇಜುಗಳ ಮುಂದೆ ಡ್ರಗ್ಸ್ (Drugs) ದಂಧೆ ಎಗ್ಗಿಲ್ಲದೆ ನಡೆಯುತ್ತಿದ್ದು, ಸಣ್ಣ ಸಣ್ಣ ಮಕ್ಕಳು ಡ್ರಗ್ಸ್ ದಂಧೆಗೆ ಬಲಿಯಾಗುತ್ತಿದ್ದಾರೆ. ಹೀಗಾಗಿ ಶಾಲಾ ಮಕ್ಕಳಿಗೆ ಹೊಸ ಶಿಕ್ಷಣ ನೀತಿ (NEP) ತರುವ ಬದಲು ಡ್ರಗ್ಸ್ ದಂಧೆಗೆ ಕಡಿವಾಣ ಹಾಕುವ ಕೆಲಸ ಸರ್ಕಾರದಿಂದಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ (HD Kumaraswamy) ಆಗ್ರಹಿಸಿದರು.
ಜಿಲ್ಲೆಯ ಚಿಂಚೋಳಿ ತಾಲೂಕಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಎಗ್ಗಿಲ್ಲದೆ ನಡೆದಿರುವ ಡ್ರಗ್ಸ್ ದಂಧೆಯ ಕುರಿತು ಮಾತನಾಡಿದರು. ಒಂದೂವರೆ ವರ್ಷದ ಹಿಂದೆ ದೊಡ್ಡ ಮಟ್ಟದಲ್ಲಿ ಡ್ರಗ್ಸ್ ಸುದ್ದಿಯಾಗಿತ್ತು. ಚಿತ್ರ ರಂಗದ ಇಬ್ಬರು ನಟಿಯರು ಕೂಡಾ ಬಂಧನವಾಗಿ ಜೈಲಿಗೆ ಹೋಗಿದ್ದ ಪ್ರಸಂಗ ನಡೆದಿದೆ. ಡ್ರಗ್ಸ್ ದಂಧೆ ಮಾಡುವ ಬೇರೆ ಬೇರೆಯವರು ಬಂಧನವಾಗಿದ್ದಾರೆ. ಆದರೆ ಬಳಿಕ ಅವರೆಲ್ಲ ಏನಾದರು ಎಂಬುದೇ ಗೊತ್ತಿಲ್ಲ. ಅವರ ಬಗ್ಗೆ ಬಿ-ರಿಪೋರ್ಟ್ ಹಾಕಿದ್ದಾರೋ, ಅಥವಾ ಸಿ-ರಿಪೋರ್ಟ್ ಹಾಕಿದ್ದಾರೋ ಗೊತ್ತಿಲ್ಲ ಎಂದು ಹೇಳಿದರು.
ನಾನು ಅಂದೇ ಡ್ರಗ್ಸ್ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದೆ, ಈ ಪ್ರಕರಣವನ್ನು ಹಳ್ಳ ಹಿಡಿಸುತ್ತಾರೆಂದು. ಇವತ್ತು ಮತ್ತೆ ಸ್ವೇಚ್ಛಾಚಾರವಾಗಿ ಡ್ರಗ್ಸ್ ದಂಧೆ ನಡೆಯುತ್ತಿದೆ ಎಂದರು. ಇದನ್ನೂ ಓದಿ: ಸ್ಯಾಂಟ್ರೋ ರವಿಗೆ ಕುಮಾರಕೃಪಾ ಹೊಸದಲ್ಲ – ಬಿ.ಸಿ ನಾಗೇಶ್
ಎನ್ಇಪಿ ವಿಚಾರವಾಗಿ ಮಾತನಾಡಿದ ಅವರು, ಇತ್ತೀಚೆಗೆ ಪರಮ ಪೂಜ್ಯರ ಜೊತೆಗೆ ಪಠ್ಯ ಪುಸ್ತಕಗಳಲ್ಲಿ ಏನೆಲ್ಲಾ ಇರಬೇಕು ಏನೆಲ್ಲಾ ಇರಬಾರದು ಎಂಬುದರ ಬಗ್ಗೆ ಸರ್ಕಾರ ಸಭೆ ನಡೆಸಿದೆ. ನಮ್ಮ ಸಂಸ್ಕೃತಿ ಉಳಿಯುವುದಕ್ಕೆ ಯಾವ ವಿಷಯಗಳು ಇಡಬೇಕು ಎನ್ನುವುದರ ಬಗ್ಗೆ ಸುದೀರ್ಘ ಚರ್ಚೆ ನಡೆದಿದೆ. ಆದರೆ ಇದನ್ನೆಲ್ಲಾ ಆಮೇಲೆ ಮಾಡಲಿ. ಮೊದಲು ಡ್ರಗ್ಸ್ ದಂಧೆಗೆ ಕಡಿವಾಣ ಹಾಕಬೇಕು ಎಂದರು.
ಡ್ರಗ್ಸ್ ದಂಧೆ ನಡೆಸುವವರು ಪೋಲಿಸ್ ಇಲಾಖೆಯ ಜೊತೆಗೆ ಇರುತ್ತಾರೆ. ಪೋಲಿಸರಿಗೆ ಎಲ್ಲವೂ ಮಾಹಿತಿ ಇದೆ. ಪೋಲಿಸರು ದುಡ್ಡು ಕೊಟ್ಟು ಬಂದವರನ್ನು ಏನು ಮಾಡುತ್ತಾರೆ? ಮುಂಬರುವ ದಿನಗಳಲ್ಲಿ ಚುನಾವಣೆ ಇಟ್ಟುಕೊಂಡು ಈಗ ಏನೇನೋ ಮಾಡಲು ಹೊರಟಿದ್ದಾರೆ. ಎಲ್ಲದಕ್ಕೂ ಮೊದಲು ಶಾಲಾ ಮಕ್ಕಳು ಹಾಳಾಗುವುದನ್ನು ನಿಲ್ಲಿಸಲಿ ಎಂದು ಸರ್ಕಾರಕ್ಕೆ ತಾಕೀತು ಮಾಡಿದರು. ಇದನ್ನೂ ಓದಿ: ಒತ್ತುವರಿ ತೆರವಿಗೆ ಆಗ್ರಹಿಸಿ 36 ಕಿಮೀ ಪಾದಯಾತ್ರೆ ಮಾಡಿದ ಗ್ರಾಪಂ ಸದಸ್ಯ
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k