Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉಗ್ರರಿಗೆ ಸಹಕಾರ ನೀಡಿದ್ರೆ ನದಿ ನೀರು ಕೊಡಲ್ಲ: ಪಾಕಿಗೆ ಗಡ್ಕರಿ ಎಚ್ಚರಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಉಗ್ರರಿಗೆ ಸಹಕಾರ ನೀಡಿದ್ರೆ ನದಿ ನೀರು ಕೊಡಲ್ಲ: ಪಾಕಿಗೆ ಗಡ್ಕರಿ ಎಚ್ಚರಿಕೆ

Latest

ಉಗ್ರರಿಗೆ ಸಹಕಾರ ನೀಡಿದ್ರೆ ನದಿ ನೀರು ಕೊಡಲ್ಲ: ಪಾಕಿಗೆ ಗಡ್ಕರಿ ಎಚ್ಚರಿಕೆ

Public TV
Last updated: May 9, 2019 3:28 pm
Public TV
Share
2 Min Read
NITHIN GADKARI
SHARE

ಅಮೃತಸರ: ಉಗ್ರರಿಗೆ ಸಹಕಾರ ನೀಡುವುದನ್ನು ಮುಂದುವರಿಸಿದರೆ ಮುಂದೆ ಸಂಪೂರ್ಣವಾಗಿ ಭಾರತದಿಂದ ಪಾಕಿಸ್ತಾನಕ್ಕೆ ನೀರು ಹರಿಸುವುದನ್ನು ನಿಲ್ಲಿಸಲಾಗುವುದು ಎಂದು ಕೇಂದ್ರ ಜಲಸಂಪನ್ಮೂಲ ಸಚಿವ ನಿತಿನ್ ಗಡ್ಕರಿ ಎಚ್ಚರಿಕೆ ನೀಡಿದ್ದಾರೆ.

ಪಾಕಿಸ್ತಾನ ನಿರಂತರವಾಗಿ ಉಗ್ರರಿಗೆ ಸಹಕಾರ ನೀಡುತ್ತಾ ಬಂದಿದೆ. ಇನ್ನು ಮುಂದೆಯೂ ಸಹಕಾರ ನೀಡಿದರೆ ಭಾರತದಿಂದ ಹರಿಯುವ ನೀರನ್ನು ನಿಲ್ಲಿಸುತ್ತೇವೆ. ಪಾಕಿಸ್ತಾನಕ್ಕೆ ಹರಿಯುವ ನೀರನ್ನು ಹರ್ಯಾಣ, ಪಂಜಾಬ್, ರಾಜಸ್ಥಾನಕ್ಕೆ ಹರಿಸಲಾಗುವುದು. ಈ ಸಂಬಂಧ ಈಗಾಗಲೇ ಅಧ್ಯಯನ ಆರಂಭಗೊಂಡಿದೆ ಎಂದು ತಿಳಿಸಿದರು.

Shahpur Kandi 1 1024x576

ಮೂರು ನದಿಗಳ ನೀರು ಪಾಕಿಸ್ತಾನಕ್ಕೆ ಹರಿಯುತ್ತಿದೆ. ಈ ನೀರನ್ನು ನಿಲ್ಲಸಬೇಕು ಎನ್ನುವ ಇಚ್ಛೆ ನಮಗಿಲ್ಲ. ನದಿ ನೀರಿನ ವಿಚಾರದಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ಸ್ನೇಹಯುತ ಸಂಬಂಧ ಇದ್ದ ಕಾರಣ ಈ ನದಿ ಒಪ್ಪಂದ ನಡೆದಿದೆ. ಆದರೆ ಈಗ ಎರಡು ದೇಶಗಳ ನಡುವಿನ ಸಂಬಂಧ ಮುರಿದು ಬಿದ್ದಿದೆ. ಹೀಗಾಗಿ ಈ ಒಪ್ಪಂದವನ್ನು ಪಾಲನೆ ಮಾಡಬೇಕಾದ ಅಗತ್ಯ ನಮಗಿಲ್ಲ ಎಂದು ಗಡ್ಕರಿ ಖಡಕ್ ಮಾತುಗಳನ್ನು ಆಡಿದ್ದಾರೆ.

ಮಾಜಿ ಪ್ರಧಾನಿ ಜವಾಹರ‌ಲಾಲ್ ಮತ್ತು ಪಾಕಿಸ್ತಾನದ ಅಧ್ಯಕ್ಷ ಅಯುಬ್ ಖಾನ್ ನಡುವೆ 1960 ರಲ್ಲಿ ಇಂಡಸ್ ನದಿ ಯೋಜನೆ ಒಪ್ಪಂದ ನಡೆದಿತ್ತು. ಈ ಒಪ್ಪಂದದ ಪ್ರಕಾರ ಮೂರು ನದಿಗಳು ಭಾರತಕ್ಕೆ ಹಂಚಿಕೆಯಾದರೆ ಮೂರು ನದಿಗಳು ಪಾಕಿಸ್ತಾನಕ್ಕೆ ಹಂಚಿಕೆಯಾಗಿದೆ.

ಇಂಡಸ್ ನದಿ ನೀರಿನ ಒಪ್ಪಂದದ ಪ್ರಕಾರ ರಾವಿ, ಸಟ್ಲೇಜ್, ಬೀಯಾಸ್ ನದಿ ನೀರಿನ ಬಳಕೆ ಭಾರತಕ್ಕೆ ಮೀಸಲಾಗಿದ್ದರೆ, ಜೇಲಂ, ಚೀನಾಬ್ ಮತ್ತು ಇಂಡಸ್ ನದಿ ನೀರು ಪಾಕಿಸ್ತಾನಕ್ಕೆ ಹಂಚಿಕೆಯಾಗಿದೆ. ಈ ಒಪ್ಪಂದದ ಪ್ರಕಾರ ಭಾರತಕ್ಕೆ ಮೀಸಲಾಗಿರುವ ಮೂರು ನದಿಗಳ ನೀರನ್ನು ನೀರಾವರಿ ಮತ್ತು ವಿದ್ಯುತ್ ಉತ್ಪಾದನೆಗೆ ಬಳಸಬಹುದಾಗಿದೆ.

Pulwama terror attack kashmir AP

ಈ ಹಿಂದೆ ಪುಲ್ವಾಮಾ ದಾಳಿ ನಡೆದ ಬಳಿಕ ಗಡ್ಕರಿ ಈ ವಿಚಾರವನ್ನು ಪ್ರಸ್ತಾಪಿಸಿದ್ದರು. ಈಗಾಗಲೇ ಯಮುನಾ ನದಿಯ ಪುನಶ್ಚೇತನಕ್ಕೆ ಹಲವು ಯೋಜನೆಗಳನ್ನು ಆರಂಭಿಸಲಾಗಿದೆ. ಭಾರತ ಮತ್ತು ಪಾಕಿಸ್ತಾನ ವಿಭಜನೆಯಾದಾಗ ಮೂರು ನದಿಗಳು ಭಾರತಕ್ಕೆ, ಮೂರು ನದಿಗಳನ್ನು ಪಾಕಿಸ್ತಾನಕ್ಕೆ ನೀಡಲಾಯಿತು. ಆದರೆ ಭಾರತ ಉದಾರ ಮನಸ್ಸಿನಿಂದ ನಿರಂತರವಾಗಿ ಪಾಕಿಸ್ತಾನಕ್ಕೆ ನೀರನ್ನು ನೀಡುತ್ತಲೇ ಇದೆ. ಆದರೆ ಈಗ ಪಾಕಿಸ್ತಾನಕ್ಕೆ ಹರಿಯುತ್ತಿರುವ ನೀರನ್ನು ಸಂಗ್ರಹಿಸಿ ನೀರಾವರಿ ಯೋಜನೆಯ ಮೂಲಕ ಜಮ್ಮು ಕಾಶ್ಮೀರ ಮತ್ತು ಪಂಜಾಬ್‍ಗೆ ನೀಡಲು ಮುಂದಾಗಿದ್ದೇವೆ ಎಂದು ತಿಳಿಸಿದ್ದರು.

ಈಗಾಗಲೇ ಪಂಜಾಬಿನ ಪಠಾಣ್‍ಕೋಟ್ ಜಿಲ್ಲೆಯ ಶಾಪಕುರ್ಕಿಂಡಿಯಲ್ಲಿ ರವಿ ನದಿಗೆ ಅಡ್ಡಲಾಗಿ ಜಲಾಶಯ ನಿರ್ಮಾಣವಾಗುತ್ತಿದೆ. ಪಾಕಿಸ್ತಾನಕ್ಕೆ ಹರಿಯುವ ನೀರನ್ನು ಈ ಜಲಾಶಯದಲ್ಲಿ ಸಂಗ್ರಹಿಸಿಟ್ಟುಕೊಳ್ಳಬಹುದು. ರವಿ ನದಿ ವ್ಯಾಪ್ತಿಯ ರಾಜ್ಯಗಳಿಗೆ ಈ ನೀರನ್ನು ಹರಿಸಲಾಗುತ್ತದೆ. ಈ ಯೋಜನೆಗಳು ರಾಷ್ಟ್ರೀಯ ಯೋಜನೆಗಳಾಗಿ ಘೋಷಿಸಲ್ಪಟ್ಟಿವೆ ಎಂದು ಗಡ್ಕರಿ ಟ್ವೀಟ್ ಮಾಡಿ ತಿಳಿಸಿದ್ದರು.

Martyr Pulwama

2016ರಲ್ಲಿ ಉರಿ ಸೇನಾ ನೆಲೆಯ ಮೇಲೆ ದಾಳಿ ನಡೆದ ಬಳಿಕ ಸರ್ಕಾರ ಪಾಕಿಸ್ತಾನಕ್ಕೆ ಹರಿಯುತ್ತಿರುವ ನೀರನ್ನು ಭಾರತದತ್ತ ತಿರುಗಿಸಲು ಯೋಜನೆ ರೂಪಿಸಿತ್ತು. ಪುಲ್ವಾಮಾ ದಾಳಿಯ ಬಳಿಕ ಪಾಕಿಸ್ತಾನಕ್ಕೆ ನೀಡಿದ್ದ ಪರಮಾಪ್ತ ರಾಷ್ಟ್ರ ಸ್ಥಾನಮಾನವನ್ನು ಕಿತ್ತೆಸೆದು ಅಲ್ಲಿಂದ ದೇಶಕ್ಕೆ ರಫ್ತಾಗುತ್ತಿದ್ದ ಉತ್ಪನ್ನಗಳ ಮೇಲೆ ಶೇ.200 ರಷ್ಟು ಆಮದು ಸುಂಕವನ್ನು ಭಾರತ ವಿಧಿಸಿದೆ.

TAGGED:indianitin gadkaripakistanriverwaterಗಡ್ಕರಿನದಿ ನೀರುನಿತಿನ್ ಗಡ್ಕರಿಪಾಕಿಸ್ತಾನಪುಲ್ವಾಮಾಭಾರತ
Share This Article
Facebook Whatsapp Whatsapp Telegram

Cinema news

Karunya Ram 1
ಸಿಸಿಬಿಯಿಂದ ನನಗೆ ನ್ಯಾಯ ಸಿಕ್ಕಿದೆ: ಕಾರುಣ್ಯ ರಾಮ್‌
Cinema Latest Sandalwood Top Stories
indira film 1
ಇಂದಿರಾ ಇದು ಗಾಂಧಿ ಕಥೆಯಲ್ಲ: ಕುತೂಹಲ ಮೂಡಿಸಿದ ಸಿನಿಮಾ
Cinema Latest Sandalwood
Muddu Gumma Karavali Movie
ಕರಾವಳಿ ಮುದ್ದು ಗುಮ್ಮನಿಗಾಗಿ ಹಾಡಿದ ಸಿದ್ ಶ್ರೀರಾಮ್
Cinema Latest Sandalwood Top Stories
Rakshita Shetty 2
ಮನೆಮಗಳು ತರ ನೋಡಿದ್ದೀರಿ, ಇದಕ್ಕಿಂತ ಹೆಚ್ಚೇನು ಬೇಕಿಲ್ಲ: ರಕ್ಷಿತಾ ಶೆಟ್ಟಿ
Cinema Latest Main Post Sandalwood TV Shows

You Might Also Like

Suryakumar Yadav
Cricket

ಒಂದೇ ಓವರ್‌ನಲ್ಲಿ 24 ರನ್‌ ಚಚ್ಚಿ 24 ಇನ್ನಿಂಗ್ಸ್‌ ಬಳಿಕ ಫಿಫ್ಟಿ ಹೊಡೆದ ಸ್ಕೈ

Public TV
By Public TV
3 hours ago
ed enters into nagamangala land scam
Crime

ನಾಗಮಂಗಲ ಭೂ ಹಗರಣಕ್ಕೆ ಇಡಿ ಎಂಟ್ರಿ

Public TV
By Public TV
3 hours ago
PREGNENT
Bengaluru City

ಭ್ರೂಣ ಹತ್ಯೆ ತಡೆಗೆ ಸರ್ಕಾರದ  ದಿಟ್ಟ ಕ್ರಮ – ಮಾಹಿತಿ ಕೊಟ್ಟವರಿಗೆ 1 ಲಕ್ಷ ರೂ. ಬಹುಮಾನ

Public TV
By Public TV
4 hours ago
Ishan Kishan Suryakumar Yadav
Cricket

ಸೂರ್ಯ, ಕಿಶನ್‌ ಸ್ಫೋಟಕ ಆಟಕ್ಕೆ ಪಾಕ್‌ ದಾಖಲೆ ಉಡೀಸ್‌ – ರನ್‌ ಮಳೆಯಲ್ಲಿ ಗೆದ್ದ ಭಾರತ

Public TV
By Public TV
4 hours ago
Chickpea
Dharwad

ರಾಜ್ಯ ಕಡಲೆ ಬೆಳೆಗಾರರ ಬೆನ್ನಿಗೆ ನಿಂತ ಕೇಂದ್ರ – 1 ಲಕ್ಷ ಮೆಟ್ರಿಕ್ ಟನ್ ಖರೀದಿಗೆ ಅಸ್ತು

Public TV
By Public TV
5 hours ago
Lakkundi Excavation Gadag 2
Districts

ಲಕ್ಕುಂಡಿಯಲ್ಲಿ ಕಬ್ಬಿಣದ ಉಂಡೆ, ಪಚ್ಚೆ ಕಲ್ಲು ಪತ್ತೆ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?