Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಫಿನಾಡಿನ ಸ್ವರ್ಗ ಮುಳ್ಳಯ್ಯನಗಿರಿ ನೀವೂ ಭೇಟಿ ಕೊಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ಕಾಫಿನಾಡಿನ ಸ್ವರ್ಗ ಮುಳ್ಳಯ್ಯನಗಿರಿ ನೀವೂ ಭೇಟಿ ಕೊಡಿ

Chikkamagaluru

ಕಾಫಿನಾಡಿನ ಸ್ವರ್ಗ ಮುಳ್ಳಯ್ಯನಗಿರಿ ನೀವೂ ಭೇಟಿ ಕೊಡಿ

Public TV
Last updated: December 1, 2023 5:43 pm
Public TV
Share
3 Min Read
MULLAYANAGIRI 1
SHARE

ಬ್ಯುಸಿ ಲೈಫ್‍ನ ಜಂಜಾಟದಿಂದ ಹೊರಬರಲು ಪ್ರಕೃತಿ ಸೌಂದರ್ಯ ಸವಿಯಬೇಕೇ ಹಾಗಿದ್ರೆ ಚಿಕ್ಕಮಗಳೂರು (Chikkamagaluru) ಜಿಲ್ಲೆಗೆ ಒಂದು ಬಾರಿ ಭೇಟಿ ಕೊಡಿ. ಅಲ್ಲಿ ವಿವಿಧ ಪ್ರವಾಸಿ ಸ್ಥಳಗಳಿವೆ. ಹಚ್ಚ ಹಸಿರಿನ ತಂಪಿಗೆ ಮೈ ಒಡ್ಡಿ ನಿಂತರೆ ನಿಮ್ಮೆಲ್ಲಾ ಒತ್ತಡಗಳು ನಿವಾರಣೆಯಾಗುವುದರಲ್ಲಿ ಯಾವುದೇ ಸಂಶಯವಿಲ್ಲ. ಈ ಪ್ರವಾಸಿ ಸ್ಥಳಗಳಲ್ಲಿ (Tourist Place) ಮುಳ್ಳಯ್ಯನಗಿರಿ ಬೆಟ್ಟವೂ ಒಂದು.

ಪ್ರಕೃತಿ ಸೌಂದರ್ಯಕ್ಕೆ ಹೆಸರುವಾಸಿಯಾಗಿರುವ ಇಲ್ಲಿ ಕಾಫಿ ಹಾಗೂ ಟೀ ತೋಟಗಳು, ದಟ್ಟ ಅರಣ್ಯ ಮತ್ತು ಗಿರಿ ಶಿಖರಗಳು ಇಲ್ಲಿನ ಪ್ರಮುಖ ಆಕರ್ಷಣೆ. ಇಲ್ಲಿನ ಪರ್ವತಗಳು ಒಂದಕ್ಕಿಂತ ಒಂದು ವಿಭಿನ್ನ ಮತ್ತು ಆಕರ್ಷಿತವಾಗಿರುತ್ತವೆ. ಇವುಗಳಲ್ಲಿ ಮುಳ್ಳಯ್ಯನಗಿರಿ ಪ್ರಮುಖವಾದುದು. ಇದು ಅತ್ಯಂತ ಸುಲಭದ ಚಾರಣ ತಾಣ, ಪ್ರವಾಸಿಗರ ನೆಚ್ಚಿನ ಹಾಗೂ ಅತ್ಯಂತ ಎತ್ತರದ ಶಿಖರವಾಗಿದೆ.

ಚಿಕ್ಕಮಗಳೂರಿಗೆ ಲ್ಯಾಂಡ್ ಮಾರ್ಕ್‍ನಂತಿರೋ ಈ ಶಿಖರ ವು ಮಳೆಗಾಲದಿಂದ ಚಳಿಗಾಲದವರೆಗೆ ಭಾರೀ ಸಂಖ್ಯೆಯ ಪ್ರವಾಸಿಗರನ್ನ ಕೈ ಬೀಸಿ ಕರೆಯುತ್ತದೆ. ಇದು ಸಮುದ್ರ ಮಟ್ಟದಿಂದ ಸುಮಾರು 6,330 ಅಡಿ ಎತ್ತರವಿದ್ದು, ಹಿಮಾಲಯ ಮತ್ತು ನೀಲಗಿರಿ ಪರ್ವತ ಶ್ರೇಣಿಗಳ ನಡುವಿನ ಅತಿ ಎತ್ತರದ ಪ್ರದೇಶವಾಗಿದೆ. ಮುಳ್ಳಯ್ಯನಗಿರಿ (Mullayanagiri) ಚಿಕ್ಕಮಗಳೂರಿನಿಂದ ಸುಮಾರು 20 ಕಿ.ಮಿ. ದೂರದಲ್ಲಿದ್ದು, ಬೆಟ್ಟದ ತುದಿಯವರೆಗೆ ಉತ್ತಮವಾದ ರಸ್ತೆಯಿದೆ. ರಸ್ತೆ ಕಿರಿದಾದ್ದರಿಂದ ಈ ರಸ್ತೆ ಅಪಾಯಕಾರಿ ರಸ್ತೆಯೂ ಹೌದು. ಇದನ್ನೂ ಓದಿ: ಅನಾಮಿಕ ಸುಂದರಿ ದಿಡುಪೆ ಫಾಲ್ಸ್

ನಡೆದುಕೊಂಡು ಅಥವಾ ಸೈಕಲ್ ನಲ್ಲಿ ಪ್ರಯಾಣ ಮಾಡುವವರಿಗೆ ಉತ್ತಮ ಪ್ರಯಾಣದ ಅನುಭವ ನೀಡುತ್ತದೆ. ಆದರೆ ಕಾರು ಅಥವಾ ಅದಕ್ಕಿಂತ ದೊಡ್ಡ ವಾಹನಗಳು ಇಲ್ಲಿ ಚಲಿಸಬೇಕು ಎಂದರೆ ಕೊಂಚ ಅಪಾಯವೇ ಸರಿ. ಯಾಕೆಂದರೆ ಇಲ್ಲಿನ ರಸ್ತೆಗಳು ಉತ್ತಮವಾಗಿವೆಯಾದರೂ ಕಿರಿದಾದದ್ದು. ಅಲ್ಲದೆ ಬೆಟ್ಟ ಏರುತ್ತಿದ್ದಂತೆಯೇ ಮಂಜುಕವಿದ ವಾತಾವರಣ ನಿರ್ಮಾಣವಾಗುವುದರಿಂದ ಅಪಘಾತದ ಸಂಭವ ಹೆಚ್ಚು. ಹೀಗಾಗಿ ಕಾರಿನಲ್ಲಿ ಚಲಿಸುವವರು ನಿಧಾನದ ಮೊರೆಹೋಗಬೇಕು. ಇಲ್ಲಿನ ರಸ್ತೆಯ ಕಡಿದಾದ ತಿರುವಿನಲ್ಲಿ ಕಾರುಗಳು ಚಲಿಸಲು ಕೇವಲ ಉತ್ತಮ ಚಾಲಕನಿದ್ದರೆ ಸಾಲದು ಅನುಭವ ಹಾಗೂ ಸಹನೆ ಕೂಡ ಇರಬೇಕು.

MULLAYANAGIRI

ಗಿರಿಯ ತುದಿಯಲ್ಲಿ ಶ್ರೀ ಗುರು ಮುಳ್ಳಪ್ಪಸ್ವಾಮಿ ತಪಸ್ಸು ಮಾಡಿದ ಗದ್ದುಗೆ ಹಾಗೂ ದೇವಾಲಯವಿದೆ. ಪುಟ್ಟದಾದ ಬಸವನ ಪ್ರತಿಮೆ ಹಾಗೂ ಪಕ್ಕದಲ್ಲಿ ಗುಹೆಯಂತಹ ರಚನೆಯಿದೆ. ಗದ್ದುಗೆ ಇರುವ ಜಾಗವನ್ನು ಮುನ್ನೂರಕ್ಕೂ ಹೆಚ್ಚು ಮೆಟ್ಟಿಲುಗಳ ಮೂಲಕ ಕಾಲ್ನಡಿಗೆಯಲ್ಲಿ ಸಾಗಬೇಕು. ಬೆಟ್ಟದ ತುದಿ ತಲುಪುತ್ತಿದ್ದಂತೆಯೇ ಮೋಡವನ್ನು ಚುಂಬಿಸುವಷ್ಟರ ಮಟ್ಟಿಗೆ ಮಂಜು ಆವರಿಸುತ್ತದೆ. ಮೋಡಗಳ ನಡುವೆ ಚಲಿಸುತ್ತಿದ್ದರೆ ಸ್ವರ್ಗದ ದಾರಿಯಲ್ಲಿ ಚಲಿಸುತ್ತಿದ್ದೇವೆಯೇನೋ ಎಂಬ ಅನುಭವ ಎದುರಾಗುತ್ತದೆ. ನಮ್ಮ ಪಕ್ಕದಲ್ಲಿರುವ ವ್ಯಕ್ತಿ/ವಸ್ತುಗಳೇ ಕಾಣದಷ್ಟು ಮಂಜು ಆವರಿಸುವ ಮೂಲಕ ನಮ್ಮನ್ನು ಮತ್ತೊಂದು ಲೋಕಕ್ಕೆ ಕರೆದೊಯ್ಯುತ್ತದೆ. ಇದನ್ನೂ ಓದಿ: ಇದು ಅಂತಿಂಥ ಕಲ್ಲಲ್ಲ ಗಡದ್ದಾದ ಗಡಾಯಿ ಕಲ್ಲು!

ಬೆಟ್ಟದ ತುತ್ತತುದಿಯಲ್ಲಿರುವ ಒಂದೊಂದೇ ಮೆಟ್ಟಿಲುಗಳನ್ನು ಹತ್ತುತ್ತಿದ್ದರೆ ಸುಯ್ಯನೆ ಬೀಸುವ ಗಾಳಿ ಎಲ್ಲಿ ನಮ್ಮನ್ನೇ ಹೊತ್ತೊಯ್ಯುತ್ತದೆಯೋ ಎನ್ನುವ ಭೀತಿ ಕೂಡ ಕಾಡಲಾರಂಭಿಸುತ್ತದೆ. ಆ ಪ್ರಮಾಣದಲ್ಲಿ ಇಲ್ಲಿ ಗಾಳಿ ಬಿರುಸಾಗಿರುತ್ತದೆ. ಈ ವೇಳೆ ನಮಗೆ ಕಾಣಸಿಗುವ ಗಿರಿ-ಕಂದರಗಳು, ಪ್ರಪಾತಗಳು ಭಯದೊಂದಿಗೆ ಅಪೂರ್ವ ಸಂತೋಷವನ್ನು ಕೂಡ ಉಂಟು ಮಾಡುತ್ತದೆ. ಚಾರಣ ಪ್ರಿಯರ ಸ್ವರ್ಗವೆನಿಸಿಕೊಂಡಿರುವ ಮುಳ್ಳಯ್ಯನಗಿರಿ ದಕ್ಷಿಣ ಭಾರತದಲ್ಲೇ ಪ್ರಮುಖ ಚಾರಣ ಸ್ಥಳಗಳಲ್ಲೊಂದು.

ಹೋಗುವುದು ಹೇಗೆ..?: ಮಂಗಳೂರಿನಿಂದ ಸುಮಾರು 172 ಕಿ.ಮೀ ದೂರದಲ್ಲಿದ್ದು, ಉಡುಪಿಯಿಂದ 187 ಕಿ.ಮೀ, ಬೆಂಗಳೂರಿನಿಂದ 264 ಕಿ.ಮೀ, ಉಜಿರೆಯಿಂದ 106 ಕಿ.ಮೀ. ದೂರದಲ್ಲಿದೆ. ಮುಳ್ಳಯ್ಯನಗಿರಿಗೆ ಮಂಗಳೂರು-ಉಜಿರೆ-ಚಾರ್ಮಾಡಿ ಮಾರ್ಗವಾಗಿ ಹೋಗಬಹುದು. ಇದಲ್ಲದೆ ಮಂಗಳೂರು-ಕಾರ್ಕಳ-ಕಳಸ-ಬಾಳೆಹೊನ್ನೂರು ಮಾರ್ಗವಾಗಿಯೂ ಇಲ್ಲಿಗೆ ತಲುಪಬಹುದು. ಇಲ್ಲಿಗೆ ಸಾಕಷ್ಟು ಸಂಖ್ಯೆಯ ಖಾಸಗಿ ಹಾಗೂ ಸರ್ಕಾರಿ ಸಾರಿಗೆ ಬಸ್‍ಗಳ ಸೇವೆ ಲಭ್ಯವಿದೆ. ಚಿಕ್ಕಮಗಳೂರು ಜಿಲ್ಲೆಯಿಂದ ಇಲ್ಲಿಗೆ ಬಾಡಿಗೆ ಟ್ಯಾಕ್ಸಿ ವ್ಯವಸ್ಥೆಯೂ ಇದೆ. ಸ್ವಂತ ವಾಹನಗಳು ಇಲ್ಲದ ಮಂದಿ ಬಾಡಿಗೆ ವಾಹನಗಳನ್ನು ಮಾಡಿಕೊಂಡು ಈ ಸ್ಥಳವನ್ನು ತಲುಪಬಹುದು.

MULLAYANAGIRI FINAL

ಊಟ-ತಿಂಡಿ ವ್ಯವಸ್ಥೆ ಇಲ್ಲ: ವಾರಾಂತ್ಯದಲ್ಲಿ ಮಾತ್ರ ಬೆಟ್ಟದ ಬುಡದಲ್ಲಿ ಮಾತ್ರ ಸ್ಥಳೀಯರು ಕೆಲ ತಿಂಡಿ ತಿನಿಸುಗಳನ್ನು ಮಾರುತ್ತಾರೆ. ಹೊರತು ಇಲ್ಲಿ ಊಟ ತಿಂಡಿಯ ವ್ಯವಸ್ಥೆ ಇಲ್ಲ. ಹೀಗಾಗಿ ಟ್ರೆಕ್ಕಿಂಗ್ ಹೋಗುವವರು ಊಟ-ತಿಂಡಿಯನ್ನು ಕಟ್ಟಿಕೊಂಡು ಹೋಗುವುದು ಒಳ್ಳೆಯದು.

ಯಾವ ಸಮಯ ಸೂಕ್ತ: ಮುಳ್ಳಯನಗಿರಿ ಟ್ರಿಪ್ ಹೋಗ ಬಯಸುವವರು ಅಕ್ಟೋಬರ್ ತಿಂಗಳಿನಿಂದ ಫೆಬ್ರವರಿ ತಿಂಗಳ ಅವಧಿಯಲ್ಲಿ ಹೋಗುವುದು ಒಳ್ಳೆಯದು. ಈ ಸಮಯದಲ್ಲಿ ಬೆಟ್ಟದ ತುದಿಯಲ್ಲಿ ನಿಂತರೆ ಬಿರುಸಾದ ಗಾಳಿ, ಬಿಸಿಲಿನಲ್ಲೂ ಚಳಿಯ ಅನುಭವ ನೀಡುತ್ತದೆ.

TAGGED:ChikkamagaluruMullayanagiriTourist placeTrekkingಚಿಕ್ಕಮಗಳೂರುಟ್ರೆಕ್ಕಿಂಗ್ಪ್ರವಾಸಿ ತಾಣಮುಳ್ಳಯನಗಿರಿ
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

Narendra Modi
Latest

ಅಸ್ಸಾಂನಲ್ಲಿ ಬಿಜೆಪಿಗೆ ಹ್ಯಾಟ್ರಿಕ್ ಸಾಧನೆ ನಿಶ್ಚಿತ: ಪ್ರಧಾನಿ ಮೋದಿ ವಿಶ್ವಾಸ

Public TV
By Public TV
45 minutes ago
PM Modi Shivakumar Shri
Districts

ಕರುಣೆ, ವಿನಯದ ಪ್ರತಿರೂಪವಾಗಿ ನಮ್ಮೆಲ್ಲರ ಸ್ಮರಣೆಯಲ್ಲಿ ಸದಾ ಜೀವಂತ – ಶಿವಕುಮಾರ ಶ್ರೀಗಳಿಗೆ ಮೋದಿ ಭಾವಪೂರ್ಣ ನಮನ

Public TV
By Public TV
1 hour ago
Kalaburagi Khamenei Condolence 1
Districts

ಕಲಬುರಗಿ ಮಹಾನಗರ ಪಾಲಿಕೆ ಬಜೆಟ್‌ಗೂ ಮುನ್ನ ಖಮೇನಿ ಹತ್ಯೆಗೆ ಸಂತಾಪ

Public TV
By Public TV
1 hour ago
Emergency Exit Case
Bengaluru City

ವಿಮಾನದ ಎಮರ್ಜೆನ್ಸಿ ಎಕ್ಸಿಟ್ ಡೋರ್‌ ತೆಗೆಯಲು ಯತ್ನಿಸಿದ್ದವನಿಗೆ ಬುದ್ಧಿವಾದ – ಬೆಂಗ್ಳೂರು ಪೊಲೀಸರ ವಿರುದ್ಧ ʻಮಹಾʼ ಪೊಲೀಸರಿಗೆ ದೂರು

Public TV
By Public TV
2 hours ago
Russia Military Plane
Latest

Russian Military Plane Crash – ವಿಮಾನದಲ್ಲಿದ್ದ 29 ಪ್ರಯಾಣಿಕರು ಸಾವು, ತಾಂತ್ರಿಕ ದೋಷ ಶಂಕೆ

Public TV
By Public TV
2 hours ago
Hassan Murder
Crime

ಹಾಸನ | 40 ವರ್ಷವಾದ್ರೂ ಮದ್ವೆ ಮಾಡಿಸಿಲ್ಲ ಅಂತ ಹೆತ್ತ ತಾಯಿಯನ್ನೇ ಕೊಂದ ಪಾಪಿ ಮಗ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?