– ಗಾಣಗಾಪುರ ದತ್ತಾತ್ರೇಯ ದೇವಸ್ಥಾನದಲ್ಲಿ ವಿಚಿತ್ರ ಆಚರಣೆ
– ಕಂಬಿಗೆ ತಲೆಕೆಳಗಾಗಿ ನೇತುಬಿದ್ದ ಮಹಿಳೆ
ಕಲಬುರಗಿ: ಜಿಲ್ಲೆಯ ಶ್ರೀ ಕ್ಷೇತ್ರ ಗಾಣಗಾಪುರ ದತ್ತಾತ್ರೇಯ ದೇವಸ್ಥಾನ ಅಂದರೆ ಯಾರಿಗೆ ತಾನೆ ಗೊತ್ತಿಲ್ಲ. ಆದರೆ ಇದೀಗ ಈ ದೇವಸ್ಥಾನದಲ್ಲಿ ದೆವ್ವ-ಪ್ರೇತಾತ್ಮಗಳ ಸಂಖ್ಯೆ ಹೆಚ್ಚಾಗಿದೆಯಂತೆ, ಅಚ್ಚರಿಯಾದರೂ ಇದು ನಿಜವಾಗಿದೆ.
ಅಫಜಲಪುರ ತಾಲೂಕಿನ ಶ್ರೀ ಕ್ಷೇತ್ರ ಗಾಣಗಾಪುರ ದತ್ತಾತ್ರೇಯ ದೇವಸ್ಥಾನದಲ್ಲಿ ಬೆಚ್ಚಿಬೀಳಿಸುವ ದೃಶ್ಯಗಳನ್ನು ನಿತ್ಯ ಇಲ್ಲಿ ಕಾಣಬಹುದು. ಮೈಮೇಲೆ ಪರಿವೇ ಇಲ್ಲದಂತೆ ಚಿತ್ರ ವಿಚಿತ್ರವಾಗಿ ವರ್ತಿಸುವ ಇವರ ಮೇಲೆ ದೆವ್ವ, ಪಿಶಾಚಿ, ಪ್ರಾತಾತ್ಮಗಳು ಆವಾಹಿಸಿಕೊಂಡಿವೆಯಂತೆ. ಇದರಿಂದ ಮುಕ್ತರಾಗಲು ಇವರೆಲ್ಲ ದತ್ತನ ಸನ್ನಿಧಿಗೆ ಬರುತ್ತಾರೆ.
ಪ್ರತಿನಿತ್ಯ ಮಧ್ಯಾಹ್ನ 1.30ಕ್ಕೆ ದತ್ತನಿಗೆ ಮಹಾ ಮಂಗಳಾರತಿ ನೆರವೇರಿಸುವ ವೇಳೆ ಮಾನಸಿಕ ಅಸ್ವಸ್ಥರು, ಮೈಮೇಲೆ ದೆವ್ವ ಬಂದವರ ರೀತಿ ಆಡುತ್ತಾರೆ. ಕೂದಲು ಕೆದರಿಕೊಂಡು ತಮ್ಮ ದೇಹವನ್ನು ದಂಡಿಸಿಕೊಳ್ಳುತ್ತಾರೆ, ಕೇಕೆ ಹಾಕುತ್ತಾರೆ, ಅಳುತ್ತಾರೆ, ದೇವರನ್ನೇ ಬಾಯಿಗೆ ಬಂದಂತೆ ಬೈಯ್ಯುತ್ತಾರೆ. ಕೆಲವರು ಕಂಬಿ ಮೇಲೆ ನಿದ್ದೆ ಹೋಗುತ್ತಾರೆ. ಹೀಗೆ ಬರೋರಲ್ಲಿ ಕರ್ನಾಟಕದವರು ಇದ್ದಾರೆ. ಆಂಧ್ರ, ತೆಲಂಗಾಣದವರು ಇದ್ದಾರೆ. ಆದರೆ ಪ್ರೇತಾತ್ಮಗಳ ಕಾಟಕ್ಕೆ ತುತ್ತಾಗುವವರಲ್ಲಿ ಮಹಾರಾಷ್ಟ್ರ ಮಂದಿಯೇ ಅಧಿಕ. ಇಲ್ಲಿ ಬಂದು ಕೆಲ ದಿನಗಳ ದತ್ತನ ಆರಾಧನೆ ಮಾಡಿದರೆ ದುಷ್ಟ ಶಕ್ತಿಗಳಿಂದ ಜನ ಪಾರಾಗುತ್ತಾರೆ ಎಂದು ಅರ್ಚಕ ಪ್ರಸನ್ನ ಪೂಜಾರಿ ಹೇಳಿದ್ದಾರೆ.
ಇವರೆಲ್ಲರೂ ಚಿತ್ರ ವಿಚಿತ್ರವಾಗಿ ವರ್ತಿಸಲು ಒಂದು ಕಾರಣ ಇದೆ. ಜೊತೆಗೆ ಪುರಾಣದ ಹಿನ್ನೆಲೆ ಇದೆ. ಇಲ್ಲಿನ ಅಶ್ವಥ್ಥ ವೃಕ್ಷದಲ್ಲಿ ಸಾಕ್ಷತ್ ಬ್ರಹ್ಮ ರಾಕ್ಷಸ ನೆಲೆಸಿದ್ದನಂತೆ. ಇಲ್ಲಿನ ಜನ ಜಾನುವಾರುಗಳ ನೆಮ್ಮದಿ ಕೆಡಿಸಿದ್ದರು. ಆಗ ದತ್ತಾತ್ರೇಯ ಸ್ವಾಮಿ, ಎರಡನೇ ಅವತಾರ ಎತ್ತಿ ಶ್ರೀಮಾನ್ ನರಸಿಂಹ ಸರಸ್ವತಿ ಮಹಾರಾಜರು ರೂಪದಲ್ಲಿ ರಾಕ್ಷಸನಿಗೆ ಮುಕ್ತಿ ನೀಡಿದ್ದರು ಎನ್ನಲಾಗುತ್ತದೆ. ಅಂದಿನಿಂದ ಇದು ಪ್ರೇತಾತ್ಮಗಳನ್ನು ದೂರ ಮಾಡುವ ಭಕ್ತಿ ಕೇಂದ್ರವಾಗಿ ಮಾರ್ಪಟ್ಟಿದೆ ಎಂದು ಭಕ್ತೆ ಮಾಲತಿ ರೇಷ್ಮಿ ಹೇಳಿದರು.
ಅಂದಹಾಗೆ ಬ್ರಹ್ಮ ವಿಷ್ಣು ಮಹೇಶ್ವರ ಈ ಮೂರು ಅವತಾರವನ್ನೆತ್ತಿರುವ ಗುರುದತ್ತನ ಸನ್ನಿಧಿಯಲ್ಲಿ ಈ ಪವಾಡಗಳು ನಿತ್ಯ ನಡೆಯುತ್ತವೆ. ಯಾಕೆಂದರೆ ಈ ದೇವಾಲಯದ ಆವರಣದಲ್ಲಿರುವ ಅಶ್ವಥ ವೃಕ್ಷದಲ್ಲಿ ಸಾಕ್ಷತ್ ಬ್ರಹ್ಮ ರಾಕ್ಷಸ ವಾಸಿಸುತ್ತಿದ್ದು, ಇಲ್ಲಿರುವ ಜನ-ಜಾನುವಾರುಗಳಿಗೆ ತೊಂದರೆ ನೀಡುತ್ತಿದ್ದರು. ಆದರೆ ದತ್ತಾತ್ರೇಯ ಸ್ವಾಮಿಗಳ ಎರಡನೇ ಅವತಾರದಲ್ಲಿ ಸಾಕ್ಷತ್ ಶ್ರೀಮನ ನರಸಿಂಹ ಸರಸ್ವತಿ ಮಹಾರಾಜರು ಆ ರಾಕ್ಷಸನಿಗೇ ಮುಕ್ತಿ ನೀಡಿದ್ದಾರೆ. ಹೀಗಾಗಿ ಪ್ರತಿ ದಿನ ನಡೆಯುವ ಮಹಾಮಂಗಳಾರತಿ ವೇಳೆ ಭೂತ-ಪ್ರೇತಗಳು ಇದೆ ಎಂದು ನಂಬಿದ ಜನ, ಇಲ್ಲಿ ಬಂದು ಶ್ರೀ ಗುರು ದತ್ತನ ಪೂಜೆ ಸಲ್ಲಿಸಿದರೆ, ಅವರಲ್ಲಿರುವ ಎಲ್ಲಾ ದುಷ್ಟ ಶಕ್ತಿಗಳು ಹೋಗುತ್ತದೆ ಎಂಬ ನಂಬಿಕೆ ಭಕ್ತರಲ್ಲಿದೆ.
ಭೀಮಾ ಅಮರ್ಜಾ ನದಿ ಸಂಗಮವಿರುವ ಈ ಪುಣ್ಯಕ್ಷೇತ್ರಕ್ಕೆ ನಿತ್ಯವು ಸಾವಿರಾರು ಜನ ಬಂದು ಹೋಗುತ್ತಾರೆ. ಕೆಲವರು ಬರಿ ದರ್ಶನ ಭಾಗ್ಯಕ್ಕೆಂದು ಬಂದು ಶ್ರೀಗುರುದತ್ತನ ನಿರ್ಗುಣ ಪಾದುಕೆಗೆ ಪೂಜೆ ಸಲ್ಲಿಸಿದರೆ, ಇನ್ನೂ ಕೆಲವರು ಇನ್ನೂ ಕೆಲವರು ಅವರಿಗೆ ಕಾಡುತ್ತಿರುವ ದುಷ್ಟ ಶಕ್ತಿಗಳು ಸಂಕಟ ದೂರು ಮಾಡಿಕೊಳ್ಳಲು ಬರುತ್ತಾರೆ.