ಬೆಂಗಳೂರು: ಕೋಲಾರದ (Kolar) ಡಿಸಿಸಿ ಬ್ಯಾಂಕ್ನಲ್ಲಿ (DCC Bank) ದೊಡ್ಡ ಅಕ್ರಮ ನಡೆದಿದೆ. ಇದನ್ನು ಮುಚ್ಚಿ ಹಾಕಲು ಕಾಂಗ್ರೆಸ್ನವರೇ (Congress) ಮಹಿಳಾ ಸ್ತ್ರೀ ಶಕ್ತಿ ಸಂಘಗಳಿಂದ (Stree Shakti Association) ಪ್ರತಿಭಟನೆ ಮಾಡಿಸುತ್ತಿದ್ದಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ (H.D.Kumaraswamy) ಹೊಸ ಬಾಂಬ್ ಸಿಡಿಸಿದ್ದಾರೆ.
ಕೋಲಾರದಲ್ಲಿ ಮಹಿಳಾ ಸ್ವಸಹಾಯ ಸಂಘಗಳಿಂದ ಸಾಲ ಕಟ್ಟಲ್ಲ ಎಂಬ ಪ್ರತಿಭಟನೆಗೆ ಪ್ರತಿಕ್ರಿಯೆ ನೀಡಿದ ಅವರು, ಕೋಲಾರದಲ್ಲಿ ಸ್ತ್ರೀ ಶಕ್ತಿ ಸಂಘಗಳು ಸಾಲಮನ್ನಾ ಮಾಡಿ ಎಂದು ಗಲಾಟೆ ಮಾಡುತ್ತಿದ್ದಾರೆ. ಅದನ್ನು ಮಾಡಿಸುತ್ತಾ ಇರುವವರೇ ಕಾಂಗ್ರೆಸ್ನವರು ಎಂದು ಆರೋಪ ಮಾಡಿದರು. ಇದನ್ನೂ ಓದಿ: ಗೃಹಲಕ್ಷ್ಮೀ ಆ್ಯಪ್ ಹ್ಯಾಕ್ ಬಗ್ಗೆ ಜಾರಕಿಹೊಳಿಯನ್ನೇ ಕೇಳಿ ಎಂದ ಜಾರ್ಜ್
ಕೋಲಾರದ ಡಿಸಿಸಿ ಬ್ಯಾಂಕ್ನಲ್ಲಿ ಅಕ್ರಮ ಆಗಿದೆ. ಅದೊಂದು ದೊಡ್ಡ ಕರ್ಮಕಾಂಡ. ಡಿಸಿಸಿ ಬ್ಯಾಂಕ್ನಲ್ಲಿ ಲೂಟಿ ಹೊಡೆದಿದ್ದಾರೆ. ಅದು ತನಿಖೆ ನಡೆದರೆ ಯಾರು ಯಾರು ಜೈಲಿಗೆ ಹೋಗುತ್ತಾರೋ ಗೊತ್ತಿಲ್ಲ. ಹೀಗಾಗಿ ಸ್ತ್ರೀ ಶಕ್ತಿ ಗುಂಪುಗಳನ್ನು ಮುಂದೆ ಬಿಟ್ಟು ಕಾಂಗ್ರೆಸ್ನವರು, ನಿರ್ದೇಶಕರು ಪ್ರತಿಭಟನೆ ಮಾಡಿಸುತ್ತಿದ್ದಾರೆ. ಈ ಬಗ್ಗೆ ತನಿಖೆ ನಡೆಸಿ ಎಂದು ಒತ್ತಾಯ ಮಾಡಿದರು. ಇದನ್ನೂ ಓದಿ: ಕಾಂಗ್ರೆಸ್ನಿಂದಲೇ ಸರ್ವರ್ ಹ್ಯಾಕ್ – ಇವಿಎಂ ಹ್ಯಾಕ್ ಮಾಡಿ ಕಾಂಗ್ರೆಸ್ ಗೆದ್ದಿರಬಹುದು ಎಂದ ಮುನಿಸ್ವಾಮಿ