ಶೌಚಕ್ಕೆಂದು ತೆರಳಿದ್ದ ವ್ಯಕ್ತಿಯನ್ನು ಕಚ್ಚಿ ಕೊಂದ ಬೀದಿನಾಯಿಗಳು!

Public TV
1 Min Read
KWR DEATH

ಕಾರವಾರ: ರಾತ್ರಿ ವೇಳೆ ಶೌಚಕ್ಕೆ ತೆರಳಿದ ವ್ಯಕ್ತಿಯೊಬ್ಬನನ್ನು ಬೀದಿನಾಯಿಗಳು ಕಚ್ಚಿ ಸಾಯಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ನಂದನಗದ್ದಾದಲ್ಲಿ ನಡೆದಿದೆ.

ಕಾರವಾರದ ದೇವಳಿವಾಡ ನಿವಾಸಿ ದೀಪಕ್(35) ಬೀದಿ ನಾಯಿಗಳ ದಾಳಿಯಿಂದ ಮೃತಪಟ್ಟ ವ್ಯಕ್ತಿ. ದೀಪಕ್ ಅವರು ಭಾನುವಾರ ರಾತ್ರಿ ಶೌಚಕ್ಕೆಂದು ನಂದನಗದ್ದಾದ ಸ್ಮಶಾನದ ಬಳಿ ತೆರಳಿದ್ದಾರೆ. ಈ ವೇಳೆ ನಾಯಿಗಳು ದಾಳಿ ನಡೆಸಿ, ಅವರ ಕುತ್ತಿಗೆ ಹೊಟ್ಟೆ ಭಾಗಕ್ಕೆ ಕಚ್ಚಿದೆ. ಇದರಿಂದಾಗಿ ದೀಪಕ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

vlcsnap 2018 08 20 14h05m48s103

ಮುಂಜಾನೆ ಗ್ರಾಮಸ್ಥರು ನಂದನಗದ್ದಾದ ಸ್ಮಶಾನದ ಬಳಿ ಹೋದಾಗ ದೀಪಕ್ ಮೃತದೇಹ ಕಂಡು ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಕಾರವಾರ ನಗರ ಪೋಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಈ ಘಟನೆ ಕುರಿತು ಕಾರವಾರ ಪೊಲೀಸರು ಅನುಮಾನಾಸ್ಪದ ಸಾವು ಎಂದು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *