Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಜನರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಡಿಸಿ, ಸಿಇಓಗಳಿಗೆ ಸಿಎಂ ಎಚ್ಚರಿಕೆ

Public TV
Last updated: May 30, 2025 1:11 pm
Public TV
Share
5 Min Read
Siddaramaiah 13
SHARE

– ನಾವು, ನೀವೆಲ್ಲಾ ಸವಲತ್ತುಗಳನ್ನ ಅನುಭವಿಸ್ತಿರೋದು ಜನರ ತೆರಿಗೆ ಹಣದಿಂದಲೇ ಅನ್ನೋದನ್ನ ಮರೀಬಾರದು
– ಎಲ್ಲಾ ಅಧಿಕಾರಿಗಳು ತಾಲೂಕು ಜಿಲ್ಲಾ ಕೇಂದ್ರಗಳಲ್ಲೇ ವಾಸವಿರಬೇಕು; ಸಿಎಂ ತಾಕೀತು

ಬೆಂಗಳೂರು: ನಾವು, ನೀವೆಲ್ಲ ಜನರ ತೆರಿಗೆ ದುಡ್ಡಿನಲ್ಲಿ ಆಡಳಿತ ನಡೆಸುತ್ತಿದ್ದೇವೆ. ಎಲ್ಲಾ ಸವಲತ್ತುಗಳನ್ನು ಅನುಭವಿಸುತ್ತಿರುವುದೂ ಜನರ ತೆರಿಗೆ ಹಣದಿಂದಲೇ (Tax Money) ಅನ್ನೋದನ್ನ ಮರೆಯಬಾರದು. ಹಾಗಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸದಿದ್ದರೇ ಅಂತಹ ಅಧಿಕಾರಿಗಳ ವಿರುದ್ಧ ನಿಷ್ಠೂರವಾಗಿ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಅವರು ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಜಿಪಂ ಸಿಇಓಗಳಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ.

ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಸಿಇಓಗಳೊಂದಿಗೆ ನಡೆಸ ಸಭೆಯಲ್ಲಿ ಸಿಎಂ ಮಾತನಾಡಿದರು. ಇದನ್ನೂ ಓದಿ: ಆರ್ಟಿಕಲ್‌-370 ರದ್ದತಿ ಬಳಿಕ ಕಾಶ್ಮೀರ ಸಮೃದ್ಧಿ ಕಂಡಿದೆ – ಕಾಂಗ್ರೆಸ್‌ ನಾಯಕ ಸಲ್ಮಾನ್ ಖುರ್ಷಿದ್

CM Meeting

ಕಾನೂನು ಹಾಳುಮಾಡಿದ್ರೆ ಕ್ರಮ ಕೈಗೊಳ್ಳಿ:
ಸಂವಿಧಾನ ವಿರೋಧಿ, ಜನ ವಿರೋಧಿ ದುಷ್ಟ ಶಕ್ತಿಗಳು ಕೆಲವು ಕಡೆ ಬಾಲ ಬಿಚ್ಚುತ್ತಿವೆ. ಅವರು ಎಷ್ಟೇ ಪ್ರಭಾವಿ ಆಗಿರಲಿ, ಕಾನೂನು ಹಾಳು ಮಾಡಿದರೆ ಅಂಥವರ ವಿರುದ್ಧ ಕ್ರಮ ಕೈಗೊಳ್ಳಿ. ಇಲ್ಲದಿದ್ದರೆ ನಿಮ್ಮ ವಿರುದ್ಧ ನಾವು ಕ್ರಮ ಕೈಗೊಳ್ಳುತ್ತೇವೆ. ಕಾನೂನು ಸುವ್ಯವಸ್ಥೆ ಹದಗೆಟ್ಟರೆ ರಾಜ್ಯದ ಅಭಿವೃದ್ಧಿ ಸಾಧ್ಯವಾಗುವುದಿಲ್ಲ. ಇವೆರಡಕ್ಕೂ ನೇರಾ ನೇರಾ ಸಂಬಂಧವಿದೆ. ಹಾಗಾಗಿ ಇದಕ್ಕೆ ಜಿಲ್ಲಾಧಿಕಾರಿಗಳು, ಜಿಲ್ಲಾ ರಕ್ಷಣಾಧಿಕಾರಿಗಳೇ ನೇರಹೊಣೆಯಾಗುತ್ತಾರೆ ಎಂದು ಖಡಕ್‌ ಎಚ್ಚರಿಕೆ ನೀಡಿದರು.  ಇದನ್ನೂ ಓದಿ:  ಮಂಡ್ಯ ಬಾಲಕಿ ಸಾವು ಕೇಸ್ | ಎಚ್ಚೆತ್ತ ಬೆಂಗಳೂರು ಪೊಲೀಸರಿಂದ ಹೊಸ ಎಸ್‌ಒಪಿ ಜಾರಿ

ಡಿಸಿ, ಸಿಇಓಗಳ ಪ್ರವಾಸ ಕಾರ್ಯಕ್ರಮ ಪ್ರಕಟಿಸಿ
ಮುಂದುವರಿದು ಮಾತನಾಡಿದ ಸಿಎಂ, ಜಿಲ್ಲಾಧಿಕಾರಿಗಳು, ಸಿಇಒಗಳು ತಮ್ಮ ಪ್ರವಾಸ ಕಾರ್ಯಕ್ರಮ ಮೊದಲೇ ಸಾರ್ವಜನಿಕರಿಗೆ ಲಭ್ಯವಾಗುವಂತೆ ಪ್ರಕಟಿಸಬೇಕು. ತಪಾಸಣಾ ವರದಿಯ ದಾಖಲೆಗಳನ್ನು ಸರಿಯಾಗಿ ಇಟ್ಟುಕೊಳ್ಳಬೇಕು. ಜಿಲ್ಲೆಯಲ್ಲಿ ಶಾಲೆಗಳು, ಹಾಸ್ಟೆಲ್‌ಗಳು, ವಸತಿ ಶಾಲೆಗಳು, ಸರಿಯಾಗಿ ಕಾರ್ಯನಿರ್ವಹಿಸುವುದನ್ನು ಖಾತ್ರಿಪಡಿಸಲು ನಿರಂತರವಾಗಿ ಭೇಟಿ ನೀಡಬೇಕು. ಮುನ್ಸೂಚನೆ ಇಲ್ಲದೇ ಇಂತಹ ಭೇಟಿಯನ್ನು ಪ್ರತಿ ತಿಂಗಳು ಕಡ್ಡಾಯವಾಗಿ ನಡೆಸಬೇಕು ಎಂದು ಪದೇ ಪದೇ ಸೂಚನೆ ನೀಡಿದ್ದೇನೆ. ಆದರೂ ಕೆಲವರು ಇದನ್ನು ಪಾಲಿಸಿಲ್ಲ ಎನ್ನುವ ವರದಿ ನನಗೆ ಬಂದಿದೆ. ನಿಮ್ಮ ಅಧೀನದಲ್ಲಿರುವ ಇಲಾಖೆಗಳು, ಅಧಿಕಾರಿಗಳು ಸರಿಯಾಗಿ ಕಾರ್ಯನಿರ್ವಹಿಸುವುದನ್ನು ಖಾತ್ರಿಪಡಿಸುವುದು ನಿಮ್ಮ ಜವಾಬ್ದಾರಿ. ನೀವು ದಕ್ಷತೆಯಿಂದ ಕಾರ್ಯನಿರ್ವಹಿಸದಿದ್ದರೆ ಅಧೀನ ಅಧಿಕಾರಿಗಳು ಕಾರ್ಯನಿರ್ವಹಿಸುವುದನ್ನು ಹೇಗೆ ನಿರೀಕ್ಷಿಸಬಹುದು? ಜಿಲ್ಲೆಯಲ್ಲಿ ಜನಸಾಮಾನ್ಯರಿಗೆ ಆರೋಗ್ಯ, ಸಾರಿಗೆ ಸಂಚಾರದಂತಹ ಮೂಲಭೂತ ಸೌಕರ್ಯಗಳು ಲಭಿಸದಿದ್ದರೆ ಅದನ್ನು ಆಡಳಿತದ ವೈಫಲ್ಯವೆಂದೇ ಪರಿಗಣಿಸಬೇಕಾಗಿದೆ ಎಂದು ಅಸಮಾಧಾನ ಹೊರಹಾಕಿದರು.

ಹಾಡಿಗಳಲ್ಲಿ ಶಾಲೆ, ರಸ್ತೆ, ಆಸ್ಪತ್ರೆಯಂತಹ ಮೂಲಸೌಲಭ್ಯ ಒದಗಿಸಲು ಇಂದಿಗೂ ಸರಿಯಾಗಿ ಯಾಕೆ ಸಾಧ್ಯವಾಗಿಲ್ಲ. ಅವರಿಗೆ ಅರಣ್ಯ ಹಕ್ಕು ಕಾಯ್ದೆಯಡಿ ಸರಿಯಾಗಿ ಹಕ್ಕು ಒದಗಿಸಲು ಯಾಕೆ ಸಾಧ್ಯವಾಗಿಲ್ಲ? ಜಿಲ್ಲಾಧಿಕಾರಿಗಳು, ಸಿಇಒಗಳು ಇಂತಹ ಹಾಡಿಗಳಿಗೆ ನಿರಂತರ ಭೇಟಿ ನೀಡಬೇಕು ಎಂದು ಸೂಚನೆ ನೀಡಿದರು.

ಎಲ್ಲಾ ಅಧಿಕಾರಿಗಳು ತಾಲೂಕು ಜಿಲ್ಲಾ ಕೇಂದ್ರಗಳಲ್ಲೇ ವಾಸವಿರಬೇಕು:
ಕೆಲವು ಜಿಲ್ಲಾಧಿಕಾರಿಗಳು, ಸಿಇಒಗಳು ಸರಿಯಾಗಿ ಕಚೇರಿಯಲ್ಲಿ ಸಾರ್ವಜನಿಕರಿಗೆ ಲಭ್ಯವಾಗದಿರುವ ಬಗ್ಗೆ ದೂರುಗಳು ಬಂದಿವೆ. ಸಾರ್ವಜನಿಕ ಭೇಟಿಯ ಅವಧಿಯನ್ನು ಮೊದಲೇ ಪ್ರಕಟಿಸಬೇಕು. ಶೋಷಿತರು, ಬಡವರು, ಜನಸಾಮಾನ್ಯರು ಸಾಮಾನ್ಯವಾಗಿ ಜಿಲ್ಲಾಧಿಕಾರಿಗಳ ಕಚೇರಿಗೆ ಬರುತ್ತಾರೆ. ಅಂತವರ ಸಂಕಷ್ಟಗಳನ್ನು ನೀವೇ ಆಲಿಸದಿದ್ದರೆ ಅದನ್ನು ಬಗೆಹರಿಸುವವರು ಯಾರು? ಯಾರ ಬಳಿ ಅವರು ತಮ್ಮ ಕಷ್ಟಗಳನ್ನು ಹೇಳಿಕೊಳ್ಳಬೇಕು? ತಾಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ವಾಸವಿರಬೇಕು. ಎಲ್ಲಾ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿ ಲಭ್ಯವಿದ್ದು, ಜನರಿಗೆ ಲಭ್ಯವಿರಬೇಕು. ಇದನ್ನು ಜಿಲ್ಲಾಧಿಕಾರಿಗಳು ಖಾತ್ರಿಪಡಿಸಬೇಕು. ಕೇಂದ್ರ ಸ್ಥಾನದಲ್ಲಿರದ ಅಧಿಕಾರಿಗಳ ವಿರುದ್ಧ ಕೈಗೊಂಡಿರುವ ಕ್ರಮದ ಬಗ್ಗೆ ನನಗೆ ವರದಿ ನೀಡಬೇಕು ಎಂದು ತಾಕೀತು ಮಾಡಿದರು.

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ತಿಂಗಳಲ್ಲಿ ಕನಿಷ್ಟ ಎರಡು ಬಾರಿ ಆಯಾ ಜಿಲ್ಲೆಗಳಿಗೆ ಭೇಟಿ ನೀಡಿ ಅಭಿವೃದ್ಧಿ ಕಾರ್ಯಗಳ ಪರಿಶೀಲನೆ ನಡೆಸಬೇಕು. ಅದರೊಂದಿಗೆ ಶಾಲೆ, ಹಾಸ್ಟೆಲ್, ಆಸ್ಪತ್ರೆಗಳಿಗೆ ಅನಿರೀಕ್ಷಿತ ಭೇಟಿ ನೀಡಿ ವರದಿಯನ್ನು ಮುಖ್ಯ ಕಾರ್ಯದರ್ಶಿಯವರಿಗೆ ಸಲ್ಲಿಸಬೇಕು ಎಂದು ಎಚ್ಚರಿಸಿದರು.

ಸಭೆಯಲ್ಲಿ ಡಿಸಿ, ಸಿಇಓಗಳಿಗೆ ಸಿಎಂ ಸೂಚನೆ
ಇನ್ನೂ ಸಂವಿಧಾನದ ಆಶಯ ಮತ್ತು ಧ್ಯೇಯೋದ್ದೇಶಗಳಿಗೆ ಯಾರೂ ವಿರುದ್ಧವಾಗಿ ಕಾರ್ಯನಿರ್ವಹಿಸಬಾರದು. ಅಂತಹ ಶಕ್ತಿಗಳು ಬೆಳೆಯಲು ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು. ಇತ್ತೀಚಿನ ದಿನಗಳಲ್ಲಿ ಇಂತಹ ಶಕ್ತಿಗಳು ತಲೆಎತ್ತುತ್ತಿದ್ದು, ಅಂತಹ ಶಕ್ತಿಗಳನ್ನು ಮೊಳಕೆಯಲ್ಲೇ ಚಿವುಟಿ ಹಾಕಬೇಕು. ಅಂತಹ ವ್ಯಕ್ತಿಗಳೂ ಯಾರೇ ಆಗಿದ್ದರೂ ಅವರನ್ನು ಮಟ್ಟ ಹಾಕುವುದು ಅಂತಹ ಶಕ್ತಿಗಳು ಬೆಳೆಯದಂತೆ ನೋಡಿಕೊಳ್ಳಬೇಕಾದುದು ಡಿಸಿ, ಸಿಇಒ, ಎಸ್ಪಿಗಳ ಜವಾಬ್ದಾರಿ ತಾನೇ. ಹಿಂದಿನ ಸಭೆಯಲ್ಲಿ ನೀಡಿದ ಸೂಚನೆಗಳು, ತೆಗೆದುಕೊಂಡ ನಿರ್ಣಯಗಳಲ್ಲಿ ಕೆಲವು ಇಲಾಖೆಗಳು ಶೇ.100 ರಷ್ಟು ಪ್ರಗತಿ ತೋರಿಸಿಲ್ಲ. ಇದನ್ನು ಸಹಿಸಲು ಸಾಧ್ಯವಿಲ್ಲ. ಈ ವಿಚಾರದಲ್ಲಿ ರಾಜಿ ಇಲ್ಲ. ಜನರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ಮೇಲೆ ನಿಷ್ಠುರವಾಗಿ ಕ್ರಮ ಕೈಗೊಳ್ಳುವುದು ನಮಗೆ ಅನಿವಾರ್ಯ ಆಗುತ್ತದೆ ಅಂತ ವಾರ್ನಿಂಗ್‌ ಕೊಟ್ಟರು.

ಅಧಿಕಾರಿಗಳೇ ತಪ್ಪು ಮಾಡಿದ್ರೂ ನಿರ್ದಾಕ್ಷಿಣ್ಯ ಕ್ರಮ
ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿಗಳು ಮತ್ತು ಸಿಇಒ ಗಳು ತಮ್ಮ ಅಹಂ ಬದಿಗೊಟ್ಟಿ ಸಮನ್ವಯದಿಂದ ಕೆಲಸ ಮಾಡಿದರೆ ಮಾತ್ರ ರಾಜ್ಯದ ಸಮಗ್ರ ಅಭಿವೃದ್ಧಿ ಸಾಧ್ಯ. ಈ ಉದ್ದೇಶಕ್ಕೇ ನೀವುಗಳು ಐಎಎಸ್ ಮಾಡಿರುವುದು. ಇದನ್ನು ಅರ್ಥ ಮಾಡಿಕೊಳ್ಳಬೇಕು. ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಕೆಲಸ ಮಾಡುವವರ ವಿರುದ್ಧ ಮತ್ತು ಜನಪರ ಆಶಯಗಳಿಗೆ ಸ್ಪಂದಿಸದಿದ್ದರೆ ಅವರ ವಿರುದ್ಧ ನಾವು ಕ್ರಮ ಕೈಗೊಳ್ಳಬೇಕಾಗುತ್ತದೆ. ನೀವೆಲ್ಲಾ ಸಂವಿಧಾನ ಓದಿದ್ದೀರಿ, ಅದರ ಆಶಯಗಳಿಗೆ, ಧ್ಯೇಯೋದ್ದೇಶಗಳಿಗೆ ಬದ್ದರಾಗಿದ್ದೀರಿ ಎಂದು ನಂಬಿದ್ದೇನೆ. ಇದನ್ನು ಕಾರ್ಯ ರೂಪಕ್ಕೆ ತರುವುದರಲ್ಲಿ ವಿಫಲರಾದವರ ವಿರುದ್ಧ ನಾನು ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲು ನಿರ್ಧರಿಸಿದ್ದೇನೆ ಎಂದು ತಿಳಿಸಿದರು.

ಆಡಳಿತ ನಡೆಸುತ್ತಿರೋದು ಜನರ ತೆರಿಗೆ ದುಡ್ಡಿನಲ್ಲಿ
ನಾವು ಜನರ ತೆರಿಗೆ ದುಡ್ಡಿನಲ್ಲಿ ಆಡಳಿತ ನಡೆಸುತ್ತಿದ್ದೇವೆ. ನಾವು ಮತ್ತು ನೀವು ಎಲ್ಲಾ ಸವಲತ್ತುಗಳನ್ನು ಅನುಭವಿಸುತ್ತಿರುವುದು ಜನರ ತೆರಿಗೆ ಹಣದಿಂದ ಎನ್ನುವುದನ್ನು ಮರೆಯಬಾರದು. ಕಾರು, ಮನೆ ಸೇರಿ ಎಲ್ಲಾ ಸವಲತ್ತುಗಳನ್ನು ನಾವು ಕೊಟ್ಟಿರುವುದು ತೆರಿಗೆ ಹಣದಲ್ಲಿ. ಆದ್ದರಿಂದ ಜನಪರ ಧೋರಣೆಯಲ್ಲಿ ಕೆಲಸ ಮಾಡಬೇಕು. ಇದೇ ಪ್ರಜಾಪ್ರಭುತ್ವದ ಮೂಲ ಆಶಯ ಎಂದು ತಿಳಿವಳಿಕೆ ನೀಡಿದರು.

ಈ ವರ್ಷ 700 ಬಾಲ್ಯವಿವಾಹ
ಇದೇ ವೇಳೆ ಬಾಲ್ಯವಿವಾಹದ ಕುರಿತು ಮಾತನಾಡಿ ಬಾಲ್ಯ ವಿವಾಹ ಆಗುವುದು ಜಿಲ್ಲಾಧಿಕಾರಿಗಳ ಗಮನಕ್ಕೆ ಏಕೆ ಬರುವುದಿಲ್ಲ? ನಿಮ್ಮ ಕೆಳಗಿನವರು ನಿಮಗೆ ವರದಿ ಮಾಡುವುದಿಲ್ಲವೇ? ಕೆಳಗಿನವರು ನಿಮಗೆ ಹೇಳದಿದ್ದರೆ ನಿಮಗೆ ದಕ್ಷತೆ ಇಲ್ಲ ಎಂದು ಅರ್ಥ. ನಿಮಗೆ ಅಧಿಕಾರಿಗಳ ಮೇಲೆ ನಿಯಂತ್ರಣ ಇಲ್ಲ,ನಿಮ್ಮ ಬಗ್ಗೆ ಅವರಿಗೆ ಭಯ ಇಲ್ಲ ಎಂದೇ ಅರ್ಥ ಎಂದು ತರಾಟೆಗೆ ತೆಗೆದುಕೊಂಡ ಸಿಎಂ. ಈ ವರ್ಷ 700 ಬಾಲ್ಯ ವಿವಾಹ ನಡೆದಿದೆ, ಬಾಲ್ಯದಲ್ಲೇ ತಾಯಂದಿರಾದ ಘಟನೆಗಳೂ ವರದಿಗಳಾಗಿವೆ. ಈ ಬಗ್ಗೆ ಹಲವು ಕಡೆ ಎಫ್ ಐಆರ್ ಕೂಡ ದಾಖಲಾಗಿಲ್ಲ ಎನ್ನುವುದು ನನ್ನ ಗಮನಕ್ಕೆ ಬಂದಿದೆ. ಸ್ವಾತಂತ್ರ‍್ಯ ಬಂದು ಇಷ್ಟ ವರ್ಷಗಳಾದರೂ 700 ಬಾಲ್ಯ ವಿವಾಹ ನಡೆಯುತ್ತಿದೆ ಎಂದರೆ ಹೇಗೆ? ಬಾಲ್ಯವಿವಾಹ ತಡೆಗೆ ಕಾಯ್ದೆ, ಕಾನೂನುಗಳಿವೆ. ಆದರೂ ಇದನ್ನು ಪರಿಣಾಮಕಾರಿಯಾಗಿ ಕೆಲವು ಕಡೆ ಬಳಸಿಲ್ಲ. ಇದು ತಪ್ಪಲ್ಲವೇ ಎಂದು ಖಾರವಾಗಿ ಪ್ರಶ್ನಿಸಿದರು.

TAGGED:bengaluruDCDK Shivakumarsiddaramaiahzilla panchayatZP CEOಜಿಲ್ಲಾ ಪಂಚಾಯಿತಿ ಸಿಇಓಜಿಲ್ಲಾಧಿಕಾರಿಗಳುಬೆಂಗಳೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema Updates

Ramya 2
ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುತ್ತೆ ಎಂದು ನಂಬಿದ್ದೇನೆ: ರಮ್ಯಾ
Cinema Karnataka Latest Main Post
Darshan Vijayalakshmi
ಥಾಯ್ಲೆಂಡ್‌ನಲ್ಲಿ ಮ್ಯಾಂಗೋ ಸ್ಟಿಕ್ಕಿ ರೈಸ್ ಸವಿದ ದರ್ಶನ್ ವಿಜಯಲಕ್ಷ್ಮಿ
Cinema Latest Sandalwood Top Stories
Darshan Pavithra
ದರ್ಶನ್‌-ಪವಿತ್ರಾ ಲಿವ್‌ ಇನ್‌ ರಿಲೇಷನ್‌ ಶಿಪ್‌ನಲ್ಲಿದ್ದರು: ಸರ್ಕಾರ ಪರ ವಕೀಲ
Bengaluru City Cinema Court Latest Main Post National Sandalwood
Darshan Court
ದರ್ಶನ್‌ ಜಾಮೀನು ಭವಿಷ್ಯ | ನಾವು ಹೈಕೋರ್ಟ್ ಮಾಡಿದ ತಪ್ಪು ಮಾಡಲ್ಲ, ತರಾತುರಿಯಲ್ಲಿ ಆದೇಶ ಕೊಡಲ್ಲ – ಸುಪ್ರೀಂ
Bengaluru City Cinema Court Latest Main Post National Sandalwood
Appu Cup League
ಅಪ್ಪು ಕಪ್ ಸೀಸನ್ 3; ಜರ್ಸಿ ಅನಾವರಣ
Bengaluru City Cinema Karnataka Latest Top Stories

You Might Also Like

Rishabh Pant 1
Cricket

ನೋವಿನಲ್ಲೂ ಫಿಫ್ಟಿ ಹೊಡೆದ ಪಂತ್‌ – ಏಕದಿನದಂತೆ ಬ್ಯಾಟ್‌ ಬೀಸಿದ ಇಂಗ್ಲೆಂಡ್‌

Public TV
By Public TV
5 hours ago
Hubballi Exam
Dharwad

ಹುಬ್ಬಳ್ಳಿ ಪರೀಕ್ಷಾ ಕೇಂದ್ರದಲ್ಲಿ ಯಡವಟ್ಟು – ಮಧ್ಯಾಹ್ನ 2 ಗಂಟೆಗೆ ನಿಗದಿ, ರಾತ್ರಿ 10 ಕಳೆದರೂ ಆರಂಭವಾಗದ ಪರೀಕ್ಷೆ

Public TV
By Public TV
5 hours ago
Bengaluru Govindraj nagar arrest
Bengaluru City

ನಡುರಸ್ತೆಯಲ್ಲೇ ಯುವತಿಯ ತುಟ್ಟಿ ಕಚ್ಚಿ ಎಸ್ಕೇಪ್ ಆಗಿದ್ದ ಬೀದಿ ಕಾಮುಕ ಅರೆಸ್ಟ್

Public TV
By Public TV
6 hours ago
SSLC Exams
Bengaluru City

ಇನ್ಮುಂದೆ 33% ಅಂಕ ಪಡೆದರೆ SSLC ಪಾಸ್

Public TV
By Public TV
6 hours ago
MB Patil and k.rammohan Naidu
Bengaluru City

ಹುಬ್ಬಳ್ಳಿ, ಬೆಳಗಾವಿ ಏರ್‌ಪೋರ್ಟ್ ಅಂತಾರಾಷ್ಟ್ರೀಯ ನಿಲ್ದಾಣಕ್ಕೆ ಮನವಿ – ಕೇಂದ್ರ ವಿಮಾನಯಾನ ಸಚಿವರೊಂದಿಗೆ ಎಂಬಿಪಿ ಮಾತುಕತೆ

Public TV
By Public TV
6 hours ago
Hulk Hogan 3
Latest

WWE ಲೆಜೆಂಡ್‌, ಕುಸ್ತಿಪಟು ಹಲ್ಕ್ ಹೊಗನ್ ನಿಧನ

Public TV
By Public TV
6 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?