Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕನ್ನಡ, ಕನ್ನಡಿಗರನ್ನು ನಿಂದಿಸುವವರ ವಿರುದ್ಧ ಕಠಿಣ ಕ್ರಮ – ಸಿಎಂ ಎಚ್ಚರಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕನ್ನಡ, ಕನ್ನಡಿಗರನ್ನು ನಿಂದಿಸುವವರ ವಿರುದ್ಧ ಕಠಿಣ ಕ್ರಮ – ಸಿಎಂ ಎಚ್ಚರಿಕೆ

Bengaluru City

ಕನ್ನಡ, ಕನ್ನಡಿಗರನ್ನು ನಿಂದಿಸುವವರ ವಿರುದ್ಧ ಕಠಿಣ ಕ್ರಮ – ಸಿಎಂ ಎಚ್ಚರಿಕೆ

Public TV
Last updated: November 1, 2024 12:13 pm
Public TV
Share
3 Min Read
Kannada Rajyostava in Kanteerava Stadium 2
SHARE

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡ ಮತ್ತು ಕನ್ನಡಿಗರನ್ನು ಹೀಯಾಳಿಸುವ ಕೆಲಸ ಆಗುತ್ತಿದೆ. ಇನ್ನೂ ಮುಂದೆ ಯಾರಾದರೂ ನಿಂದಿಸಿದ್ದಲ್ಲಿ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಎಚ್ಚರಿಕೆ ನೀಡಿದರು.

ಬೆಂಗಳೂರಿನ (Bengaluru) ಕಂಠೀರವ ಸ್ಟೇಡಿಯಂನಲ್ಲಿ (Kanteerava Stadium) ನಡೆದ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರೆಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಸರ್ಕಾರದ ಕಾರ್ಯದರ್ಶಿ ಶಾಲಿನಿ ರಜನೀಶ್, ಶಿಕ್ಷಣ ಸಚಿವ ಮಧುಬಂಗಾರಪ್ಪ ಭಾಗಿಯಾಗಿದ್ದರು.ಇದನ್ನೂ ಓದಿ: ವಕ್ಫ್ ಆಸ್ತಿಯನ್ನು ರಾಷ್ಟ್ರೀಯ ಸಂಪತ್ತನ್ನಾಗಿ ಘೋಷಿಸಿ – ಪ್ರಧಾನಿ ಮೋದಿಗೆ ಯತ್ನಾಳ್ ಪತ್ರ

Kannada Rajyostava in Kanteerava Stadium 1

ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಎಲ್ಲರಲ್ಲಿಯೂ ಕನ್ನಡ ಅಭಿಮಾನ ಇರಲಿ, ದುರಭಿಮಾನ ಬೇಡ. ಅಭಿಮಾನವಿದ್ದರೆ ಮಾತ್ರ ಕನ್ನಡ ಬೆಳೆಯುತ್ತದೆ. ಕನ್ನಡ ಬಾರದವರ ಜೊತೆಯಲ್ಲಿಯೂ ಕನ್ನಡದಲ್ಲಿಯೇ ಮಾತನಾಡಿ. ಕನ್ನಡ ಬಾರದವರಿಗೆ ಕನ್ನಡ ಕಲಿಸಬೇಕು, ಆಗ ಕನ್ನಡದ ವಾತಾವರಣ ನಿರ್ಮಾಣವಾಗುತ್ತದೆ. ಎಲ್ಲರೂ ಈ ಪ್ರತಿಜ್ಞೆಯನ್ನು ತೆಗೆದುಕೊಳ್ಳಬೇಕು. ಇನ್ನೂ ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡ, ಕನ್ನಡಿಗರನ್ನು ಹೀಯಾಳಿಸುವ ಪ್ರವೃತ್ತಿ ಬೆಳೆಯುತ್ತಿದೆ. ಇದು ನಾಡದ್ರೋಹ, ಅಂತಹವರ ವಿರುದ್ಧ ಸರ್ಕಾರ ಮುಲಾಜಿಲ್ಲದೇ ಕಠಿಣ ಕ್ರಮ ತಗೊಳ್ಳುತ್ತದೆ. ನಾವು ಕನ್ನಡಿಗರಾಗಿರುತ್ತೇವೆ. ಬೇರೆಯವರನ್ನೂ ಕನ್ನಡಿಗರಾಗಿ ಮಾಡುತ್ತೇವೆ. ವ್ಯವಹಾರದಲ್ಲೂ ಕನ್ನಡ ಬಳಸುತ್ತೇವೆ ಎಂದು ಶಪಥ ಮಾಡೋಣ ಎಂದು ತಿಳಿಸಿದರು.

ರಾಜ್ಯದ ಎಲ್ಲ 57 ಲಕ್ಷ ಶಾಲಾ ಮಕ್ಕಳಿಗೆ ವಾರದ ಆರು ದಿನ ಮೊಟ್ಟೆ ಕೊಡುತ್ತಿದ್ದೇವೆ. ಈಗ ಮಕ್ಕಳಿಗೆ ಹಾಲಿನ ಜೊತೆಗೆ ರಾಗಿ ಮಾಲ್ಟ್ ಕೊಡುತ್ತಿದ್ದೇವೆ. ಅಸಮಾನತೆ, ಅಪೌಷ್ಟಿಕತೆಯನ್ನು ಹೊಡೆದೊಡಿಸಲು ಹಾಗೂ ಗುಣಮಟ್ಟದ ಶಿಕ್ಷಣ ಕೊಡುವ ಸಲುವಾಗಿ ಈ ಯೋಜನೆಗಳನ್ನು ಮಾಡುತ್ತಿದ್ದೇವೆ. ಕನ್ನಡದ ಅಭಿಮಾನವಿರಲಿ. ಬೇರೆ ಭಾಷಿಕರಿಗೂ ಕನ್ನಡ ಕಲಿಸುವ ಕೆಲಸ ಮಾಡಬೇಕು. ಯಾವುದೇ ಧರ್ಮ, ಭಾಷೆ, ಪ್ರಾಂತ್ಯದವರು ಇರಲಿ ಕರ್ನಾಟಕದಲ್ಲಿ ಇರುವವರೆಲ್ಲ ಕನ್ನಡಿಗರೇ. ಈ ಭಾಷೆಗೆ ಸಾವಿರಾರು ವರ್ಷಗಳ ಇತಿಹಾಸ ಇದೆ. ಕನ್ನಡ ಶಾಸ್ತ್ರೀಯ ಭಾಷೆ. ನಾವು ನಮ್ಮ ಭಾಷೆಯನ್ನು ಯಾವುದೇ ಕಾರಣಕ್ಕೂ ಬಲಿ ಕೊಟ್ಟು ಉದಾರಿಗಳಾಗಬಾರದು. ಭಾಷೆ ವ್ಯಾಮೋಹವೂ ಅತಿಯಾಗಿರಬಾರದು, ಆದರೆ ಕನ್ನಡ ಅಭಿಮಾನ ಬಿಟ್ಟುಕೊಡಬಾರದು. ಬೇರೆ ಭಾಷೆ ಕಲಿಯಿರಿ, ಆದರೆ ಕನ್ನಡ ಮರೆಯಬೇಡಿ ಎಂದು ಹೇಳಿದರು.

CM Siddaramaiah

ರಾಜ್ಯಗಳ ಏಕೀಕರಣ ಆಗಿ 68 ವರ್ಷಗಳು ತುಂಬಿದ್ದು 69ಕ್ಕೆ ಕಾಲಿಟ್ಟಿದ್ದೀವಿ. 1953ರಲ್ಲಿ ಫಜಲ್ ಅಲಿ ನೇತೃತ್ವದಲ್ಲಿ ರಾಜ್ಯಗಳ ಪುನರ್ವಿಂಗಡಣೆ ಸಮಿತಿ ರಚಿಸಲಾಯಿತು. ಇವರು ಕೊಟ್ಟ ವರದಿ ಆಧಾರದಲ್ಲಿ ಭಾಷಾವಾರು ರಾಜ್ಯಗಳ ವಿಂಗಡಣೆ ಆಯಿತು. ಆ ದಿನವನ್ನು ನಾವೆಲ್ಲರೂ ಇಡೀ ದೇಶದಲ್ಲಿ ರಾಜ್ಯಗಳ ಏಕೀಕರಣ ದಿನವಾಗಿ ಆಚರಿಸುತ್ತಿದ್ದೇವೆ. 1973ರವರೆಗೆ ಕರ್ನಾಟಕ ರಾಜ್ಯ ಆಗಿರಲಿಲ್ಲ, ಮೈಸೂರು ರಾಜ್ಯ ಆಗಿತ್ತು. ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು 1973 ನವೆಂಬರ್ 1 ರಂದು ಹೆಸರು ಇಡಲಾಯಿತು. ನಾಮಕರಣ ಆಗಿ 51 ವರ್ಷ ತುಂಬುತ್ತಿದೆ. 50 ವರ್ಷವಾದಾಗ ರಾಜ್ಯದಲ್ಲಿ ಬಿಜೆಪಿ ಸರ್ಕಾರವಿತ್ತು. ಆದರೆ ಅವರು 50ನೇ ವರ್ಷದ ಆಚರಣೆ ಮಾಡಲಿಲ್ಲ. ನಾವು ಬಂದ ಮೇಲೆ ಇಡೀ ವರ್ಷ ಸಂಭ್ರಮದಿಂದ ಆಚರಣೆ ಮಾಡಿದೆವು ಎಂದರು.

Kannada Rajyostava in Kanteerava Stadium

ರಾಜ್ಯಕ್ಕೆ ತೆರಿಗೆ ಅನ್ಯಾಯದ ವಿಚಾರ:
ಕರ್ನಾಟಕಕ್ಕೆ ಇವತ್ತು ದೊಡ್ಡ ಅನ್ಯಾಯ ಆಗುತ್ತಿದೆ. ಮಹಾರಾಷ್ಟ್ರ ಬಿಟ್ಟರೆ ಅತೀ ಹೆಚ್ಚು ತೆರಿಗೆ ಕಟ್ಟುವ ರಾಜ್ಯ ನಮ್ಮದು. ನಾವು 4 ಲಕ್ಷ ಕೋಟಿ ರೂ.ಗೂ ಹೆಚ್ಚು ತೆರಿಗೆ ಕಟ್ಟಿದ್ದರೂ ವಾಪಸ್ ಪಡೆಯುತ್ತಿರುವುದು 50-60 ಸಾವಿರ ರೂ. ಕೋಟಿ ಮಾತ್ರ. 1 ರೂ.ಯಲ್ಲಿ 14-15 ಪೈಸೆ ಮಾತ್ರ ನಮಗೆ ವಾಪಸ್ ಕೊಡುತ್ತಿದ್ದಾರೆ. ನಾವು ಮುಂದುವರೆದ ರಾಜ್ಯ ಎಂದು ತೆರಿಗೆ ಪಾಲಿನಲ್ಲಿ ಅನ್ಯಾಯ ಆಗುತ್ತಿದೆ. ಹಸು ಹಾಲು ಕೊಡುತ್ತದೆ ಎಂದು ಕರುವಿಗೆ ಹಾಲು ಕೊಡದಿದ್ದರೆ ಆ ಕರು ದುರ್ಬಲ ಆಗುತ್ತದೆ. ನಾವು ಕೊಡುವ ತೆರಿಗೆ, ನಮ್ಮ ತೆರಿಗೆ ಪಾಲು ಸರಿಯಾಗಿ ಕೊಡಿ ಎಂದರೆ ಅದಕ್ಕೆ ರಾಜಕೀಯ ಬಣ್ಣ ಹಚ್ಚುತ್ತಾರೆ. ಇದನ್ನು ನಾವೆಲ್ಲ ಕನ್ನಡಿಗರೂ ಅರ್ಥ ಮಾಡಿಕೊಳ್ಳಬೇಕು. ನಮ್ಮ ಹಕ್ಕು ನಾವು ಕೇಳಬೇಕು. ಎಲ್ಲ ಸಂಸದರೂ ಲೋಕಸಭೆಯಲ್ಲಿ ಪ್ರತಿಭಟಿಸಿ, ತಮ್ಮ ದನಿಯನ್ನು ಲೋಕಸಭೆಯಲ್ಲಿ ಎತ್ತಬೇಕು ಆಗ ಮಾತ್ರ ನಮಗೆ ನ್ಯಾಯ ಸಿಗುತ್ತದೆ. ಸಂಸದರಿಗೆ ನಮ್ಮ ಅನ್ಯಾಯ ಪ್ರಸ್ತಾಪಿಸಿ, ಸರಿಪಡಿಸುವ ಶಕ್ತಿ ಬರಲಿ. ಹಿಂದೆಯಿದ್ದ ಬಿಜೆಪಿ ನಮಗೆ ಬರಬೇಕಾದ ತೆರಿಗೆ ಪಾಲು ಕೇಳುವ ಕೆಲಸ ಮಾಡಲಿಲ್ಲ ಎಂದು ಕಿಡಿಕಾರಿದರು.ಇದನ್ನೂ ಓದಿ: ಸಕ್ಕರೆ ನಾಡಿಗೂ ಕಾಲಿಟ್ಟ ವಕ್ಫ್‌ ವಿವಾದ – ಮಂಡ್ಯದಲ್ಲಿ ದೇವಸ್ಥಾನವೇ ವಕ್ಫ್ ಆಸ್ತಿ

 

TAGGED:cm siddaramaiahcongresskannadaKannada RajyostavaKanteerava Stadiumಕಂಠೀರವ ಸ್ಟೇಡಿಯಂಕನ್ನಡ ಭಾಟೆಕನ್ನಡ ರಾಜ್ಯೋತ್ಸವಕಾಂಗ್ರೆಸ್ಸಿಎಂ ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories

You Might Also Like

Private Plane Flying 30 Feet Above Ground Crashes Into Tree In Chhattisgarh
Latest

ಮರಕ್ಕೆ ಡಿಕ್ಕಿಯಾಗಿ ಖಾಸಗಿ ವಿಮಾನ ಪತನ

Public TV
By Public TV
7 minutes ago
bjp flag
Bengaluru City

ಭ್ರಷ್ಟಾಚಾರವೇ ಕಾಂಗ್ರೆಸ್‌ನ ಅಸಲಿ ಗ್ಯಾರಂಟಿ – ಇಡಿ ದಾಳಿಗೆ ಬಿಜೆಪಿ ಟೀಕೆ

Public TV
By Public TV
13 minutes ago
Sadhvi Satish Sail
Latest

ಮಗಳು ಬಿಸಿನೆಸ್ ಮಾಡಲಿ ಅಂತ ಸಿಎಂ, ಡಿಸಿಎಂ ಬಳಿ ಬುದ್ದಿ ಹೇಳಿಸಿದ್ದೆ: ‘ಫೆಮಿನಾ ಮಿಸ್‌ ಇಂಡಿಯಾ’ ಕಿರೀಟ ಗೆದ್ದ ಮಗಳ ಬಗ್ಗೆ ಸತೀಶ್‌ ಸೈಲ್‌ ಮಾತು

Public TV
By Public TV
37 minutes ago
Doctor Ramesh who was supposed to marry his wifes sister tomorrow murdered Sirsi KHB Colony
Crime

ಇಂದು ಮದುವೆ ಆಗ್ಬೇಕಿದ್ದ ವೈದ್ಯನ ಹತ್ಯೆ ಕೇಸ್‌ – ಚಿನ್ನದ ಆಸೆಗೆ ಸ್ನೇಹಿತನಿಂದಲೇ ಮರ್ಡರ್‌

Public TV
By Public TV
43 minutes ago
Mohammed Nalapad
Bengaluru City

ನಲಪಾಡ್ ಮನೆ ಮೇಲೆ ಇಡಿ ದಾಳಿಗೆ ಆ 10 ಲಕ್ಷ ಕಾರಣಾನಾ?

Public TV
By Public TV
1 hour ago
kea
Bengaluru City

ಕೃಷಿ ಇಲಾಖೆಯ 890 ಹುದ್ದೆಗಳಿಗೆ ಅರ್ಜಿ ಆಹ್ವಾನ – ಅರ್ಜಿ ಸಲ್ಲಿಕೆಗೆ ಮೇ 10 ಕೊನೆಯ ದಿನ: KEA

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?