ಚಿಕ್ಕಮಗಳೂರು: ಫಿಲಿಪಿನ್ಸ್ನಲ್ಲಿ (Philippines) ಪ್ರಬಲ ಭೂಕಂಪ (Earthquake) ಸಂಭವಿಸಿದೆ. ಇದರ ನಡುವೆ ಸುನಾಮಿ ಆತಂಕ ಎದುರಾಗಿದೆ. ಇದರಿಂದಾಗಿ ಅಲ್ಲಿಗೆ ಮೆಡಿಕಲ್ ಕೋರ್ಸ್ ಓದಲು ತೆರಳಿದ್ದ ಚಿಕ್ಕಮಗಳೂರಿನ ವೈದ್ಯ ವಿದ್ಯಾರ್ಥಿನಿಯೊಬ್ಬರು (Student) ಸಂಕಷ್ಟಕ್ಕೆ ಸಿಲುಕಿದ್ದಾರೆ.
ಚಿಕ್ಕಮಗಳೂರು (Chikkamagaluru) ನಗರದ ಸತ್ಯಪಾಲ್ ಅವರ ಮಗಳು ಐಶ್ವರ್ಯ ಮೆಡಿಕಲ್ ಕೋರ್ಸ್ ಓದಲು ಫಿಲಿಪಿನ್ಸ್ಗೆ ತೆರಳಿದ್ದರು. ಇದೀಗ ಸಿಬುನಗರದಲ್ಲಿ ಅವರು ಸಿಲುಕಿದ್ದಾರೆ. ಭಾರತಕ್ಕೆ ವಾಪಸ್ ಆಗಲು ಸಾಧ್ಯವಾಗದೇ ಪರದಾಡುತ್ತಿದ್ದಾರೆ. ಅವರು ಐದು ವರ್ಷದ ಕೋರ್ಸ್ ಮುಗಿಸಿದ್ದರು. ಇನ್ನೇನೂ ಕೆಲವೇ ದಿನಗಳಲ್ಲಿ ಊರಿಗೆ ವಾಪಸ್ ಆಗುವವರಿದ್ದರು ಎಂದು ತಿಳಿದುಬಂದಿದೆ. ಇದನ್ನೂ ಓದಿ: ನ್ಯೂಯಾರ್ಕ್ ಏರ್ಪೋರ್ಟ್ನಲ್ಲಿ ಎರಡು ವಿಮಾನಗಳ ಡಿಕ್ಕಿ – ವೀಡಿಯೋ ವೈರಲ್
ಮಗಳನ್ನ ವಾಪಸ್ ಕರೆಸಿಕೊಳ್ಳಲು ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಪೋಷಕರು ಮನವಿ ಮಾಡಿದ್ದಾರೆ. ಇನ್ನೂ ಹಲವು ಭಾರತೀಯ ವಿದ್ಯಾರ್ಥಿಗಳು ಭೂಕಂಪದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಊಟ, ತಿಂಡಿ, ನೀರು ಯಾವುದೂ ಸಿಗದೇ ಪರದಾಡುತ್ತಿದ್ದಾರೆ ಎಂಬ ವಿಚಾರ ತಿಳಿದು ಬಂದಿದೆ. ಇದನ್ನೂ ಓದಿ: ಫಿಲಿಪಿನ್ಸ್ನಲ್ಲಿ ಪ್ರಬಲ ಭೂಕಂಪ – 31 ಮಂದಿ ಸಾವು
ಐಶ್ಚರ್ಯ ಮೆಡಿಕಲ್ ಓದುತ್ತಿರುವ ಕಾಲೇಜಿನಲ್ಲಿ ಕರ್ನಾಟಕ, ಕೇರಳ, ಆಂಧ್ರಪ್ರದೇಶ, ತಮಿಳುನಾಡು ಸೇರಿದಂತೆ ಬೇರೆ ರಾಜ್ಯದ ಸುಮಾರು 50-60 ವಿದ್ಯಾರ್ಥಿಗಳು ಓದುತ್ತಿದ್ದಾರೆ ಎಂದು ತಿಳಿದುಬಂದಿದೆ.