Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಳ್ಳಾರಿಯಲ್ಲಿ ಮೆಗಾ ಡೈರಿ ಸ್ಥಾಪನೆಗೆ ಕಿತ್ತಾಟ – ರೈತರಿಂದ ಕೆಎಂಎಫ್ ಅಧ್ಯಕ್ಷರ ತರಾಟೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bellary | ಬಳ್ಳಾರಿಯಲ್ಲಿ ಮೆಗಾ ಡೈರಿ ಸ್ಥಾಪನೆಗೆ ಕಿತ್ತಾಟ – ರೈತರಿಂದ ಕೆಎಂಎಫ್ ಅಧ್ಯಕ್ಷರ ತರಾಟೆ

Bellary

ಬಳ್ಳಾರಿಯಲ್ಲಿ ಮೆಗಾ ಡೈರಿ ಸ್ಥಾಪನೆಗೆ ಕಿತ್ತಾಟ – ರೈತರಿಂದ ಕೆಎಂಎಫ್ ಅಧ್ಯಕ್ಷರ ತರಾಟೆ

Public TV
Last updated: March 31, 2025 10:12 am
Public TV
Share
3 Min Read
Ballari Dairy
SHARE

ಬಳ್ಳಾರಿ: ಇಡೀ ರಾಜ್ಯದಲ್ಲಿ ಅತಿದೊಡ್ಡ ಕೆಎಂಎಫ್ (KMF) ಹಾಲು ಒಕ್ಕೂಟ ಅಂದರೆ, ಅದು ರಾಬಕೊವಿ ಹಾಲು ಒಕ್ಕೂಟ. ಈ ಒಕ್ಕೂಟದ ವ್ಯಾಪ್ತಿಗೆ ಅನುಗುಣವಾಗಿ ಮೆಗಾ ಡೈರಿ (Mega Dairy) ನಿರ್ಮಾಣಕ್ಕೆ ಸರ್ಕಾರ ಸಚಿವ ಸಂಪುಟದಲ್ಲಿ ನೂರಾರು ಕೋಟಿ ರೂ. ಅನುದಾನ ಮೀಸಲಿಟ್ಟು ಘೋಷಣೆಯನ್ನೂ ಮಾಡಿದೆ. ಆದರೆ ಇದೀಗ ಇದೇ ಮೆಗಾ ಡೈರಿ ವಿಚಾರಕ್ಕೆ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಹಾಗೂ ಬಳ್ಳಾರಿ (Ballari) ಜಿಲ್ಲೆಯ ರೈತರ ನಡುವೆ ಶೀತಲ ಸಮರಕ್ಕೆ ಕಾರಣವಾಗಿದೆ.

ಹೌದು, ಇಡೀ ರಾಜ್ಯದಲ್ಲಿ ಅತಿದೊಡ್ಡ ಹಾಗೂ ಹೆಚ್ಚು ವ್ಯಾಪ್ತಿ ಹೊಂದಿರುವ ಕೆಎಂಎಫ್ ಹಾಲು ಒಕ್ಕೂಟದ ಸಾಲಿಗೆ ರಾಯಚೂರು, ಬಳ್ಳಾರಿ, ಕೊಪ್ಪಳ ಹಾಗೂ ವಿಜಯನಗರ ಜಿಲ್ಲೆಯ ರಾಬಕೊವಿ ಹಾಲು ಒಕ್ಕೂಟ ಸೇರುತ್ತದೆ. ಹೀಗಾಗಿ ಸಿದ್ದರಾಮಯ್ಯ (Siddaramaiah) ಸರ್ಕಾರ ಬಳ್ಳಾರಿಯಲ್ಲಿ ಮೆಗಾ ಡೈರಿ ನಿರ್ಮಾಣಕ್ಕೆ ಬಜೆಟ್‌ನಲ್ಲೇ ಮಂಜೂರು ಮಾಡಿತ್ತು. ಇದನ್ನೂ ಓದಿ: ಕರಾವಳಿಯಲ್ಲಿ ಹೆಚ್ಚಿದ ಅಕ್ರಮ ಗೋಮಾಂಸ ಸಾಗಾಟ – ಹಿಂದೂ ಸಂಘಟನೆಗಳಿಂದ ಉಗ್ರ ಹೋರಾಟದ ಎಚ್ಚರಿಕೆ

ಇದು ಬಿಜೆಪಿ ಸರ್ಕಾರದ ಅವಧಿಯಲ್ಲೇ ಬೊಮ್ಮಾಯಿ ಸಿಎಂ ಇದ್ದಾಗಲೂ ಪ್ರಸ್ತಾಪ ಇತ್ತು. ಆದರೆ ಇದಕ್ಕೆ ಒಂದು ರೂಪರೇಷೆ ಕೊಟ್ಟಿದ್ದು ಸಿದ್ದು ಸರ್ಕಾರ. ಅದರ ಭಾಗವಾಗಿ ಬಳ್ಳಾರಿಯ ಕೊಳಗಲ್ ಹಾಗೂ ಶ್ರೀಧರದ ಗಡ್ಡೆ 2 ಕಡೆ ಜಾಗ ಮೀಸಲಿಡಲಾಗಿದೆ. ಕೊಳಗಲ್ ಸಮೀಪ 15 ಎಕ್ರೆ ಜಾಗ ಈಗಾಗಲೇ ಜಿಲ್ಲಾಡಳಿತ ಗುರುತು ಮಾಡಿದೆ. ಆದ್ರೆ ಇದೀಗ ಬಜೆಟ್‌ನಲ್ಲಿ ಮಂಜೂರಾಗಿದ್ದ ಬಳ್ಳಾರಿ ಮೆಗಾ ಡೈರಿ ಬೇರೆ ಕಡೆ ಶಿಫ್ಟ್ ಆಗುತ್ತಾ ಎನ್ನುವ ಸಂಶಯ ಶುರುವಾಗಿದೆ.

ಸ್ವಹಿತಾಸಕ್ತಿಗಾಗಿ ಬಳ್ಳಾರಿಗೆ ಬಂದಿರುವ ಮೆಗಾ ಡೈರಿಯನ್ನ ವಿಜಯನಗರ (Vijayanagara) ಜಿಲ್ಲೆಗೆ ಕೊಂಡೊಯ್ಯಲು ಭೀಮಾ ನಾಯ್ಕ್ ಹುನ್ನಾರ ಮಾಡುತ್ತಿದ್ದಾರೆ ಎಂದು ರೈತರು ಸಿಡಿದೆದ್ದಿದ್ದಾರೆ. ಡೈರಿ ಸ್ಥಾಪನೆ ವಿಚಾರದಲ್ಲಿ ಬಳ್ಳಾರಿಗೆ ಅನ್ಯಾಯ ಮಾಡಲಾಗುತ್ತಿದೆ. ವಿಜಯನಗರ ಜಿಲ್ಲೆಯ ಹಗರಿಬೊಮ್ಮಹಳ್ಳಿ ಕ್ಷೇತ್ರದ ಮಾಜಿ ಶಾಸಕ ಭೀಮಾ ನಾಯ್ಕ್ ಕೆಎಂಎಫ್ ಅಧ್ಯಕ್ಷರಾಗಿರುವುದರಿಂದ ಡೈರಿಯನ್ನು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಿರ್ಮಾಣ ಮಾಡಲು ಪ್ಲಾನ್ ಮಾಡುತ್ತಿದ್ದಾರೆ. ಮೆಗಾ ಡೈರಿಯನ್ನ ಬಳ್ಳಾರಿಯಲ್ಲೇ ಮಾಡಬೇಕು. ಇಲ್ಲದಿದ್ರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ರೈತರು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಬಾಂಬ್‌ ಬೆದರಿಕೆ ಬೆನ್ನಲ್ಲೇ ಅಮೆರಿಕಕ್ಕೆ ಪ್ರತ್ಯುತ್ತರ ನೀಡಲು ಪ್ಲ್ಯಾನ್‌ – ದೈತ್ಯ ಮಿಸೈಲ್‌ ಸಿದ್ಧಪಡಿಸಿದ ಇರಾನ್‌

ರಾಬಕೊವಿ ಹಾಲು ಒಕ್ಕೂಟಕ್ಕೆ ಪ್ರತೀ ದಿನ ವಿಜಯನಗರ ಜಿಲ್ಲೆಯಿಂದ 1.20-1.40 ಲಕ್ಷ ಲೀಟರ್, ಬಳ್ಳಾರಿ 8-10 ಸಾವಿರ ಲೀಟರ್, ರಾಯಚೂರು 28-30 ಲೀಟರ್ ಹಾಗೂ ಕೊಪ್ಪಳ ಜಿಲ್ಲೆಯಿಂದ 60-70 ಸಾವಿರ ಲೀಟರ್ ಹಾಲು ಬರುತ್ತದೆ. ಅತೀ ಕಡಿಮೆ ಹಾಲು ಬರುವುದು ಬಳ್ಳಾರಿ ಜಿಲ್ಲೆಯಿಂದ ಆದರೂ ಹೆಚ್ಚು ಹಾಲು ಮಾರಾಟ ಆಗುವುದು ಇದೇ ಬಳ್ಳಾರಿ ಜಿಲ್ಲೆಯಲ್ಲಿ. ದಿನಕ್ಕೆ 60-70 ಸಾವಿರ ಲೀಟರ್ ಹಾಲು ಬಳ್ಳಾರಿ ಜಿಲ್ಲೆಯಲ್ಲಿ ಮಾರಾಟ ಆಗುತ್ತದೆ. ಇದನ್ನೂ ಓದಿ: ಪತ್ನಿ ಕೊಂದು ಕಾರಿನಲ್ಲಿ ಮಹಾರಾಷ್ಟ್ರಕ್ಕೆ ಹೋಗಿದ್ದ ಹಂತಕ – ಕಾರಣ ಬಾಯ್ಬಿಡದ ಟೆಕ್ಕಿ

ಇದೇ ಕಾರಣಕ್ಕೆ ಬಳ್ಳಾರಿಯಲ್ಲಿ ಮೆಗಾ ಡೈರಿ ಮಾಡುವುದಕ್ಕೆ ಬಜೆಟ್‌ನಲ್ಲಿ ಘೋಷಣೆ ಮಾಡಿ ಅನುದಾನವನ್ನೂ ಮೀಸಲಿಡಲಾಗಿದೆ. ಅಲ್ಲದೇ ಮೆಗಾ ಡೈರಿಗೆ ಕೆಎಂಆರ್‌ಸಿಯಿಂದ 86 ಕೋಟಿ ರೂ. ಬಿಡುಗಡೆ ಆಗಿದೆ. ಆದರೆ ಮೆಗಾ ಡೈರಿ ವಿಚಾರದಲ್ಲಿ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಹೇಳುವುದೇ ಬೇರೆ. ಬಳ್ಳಾರಿಯಲ್ಲಿ ಮೆಗಾ ಡೈರಿ ನಿರ್ಮಾಣಕ್ಕೆ ನನ್ನದೇನೂ ವಿರೋಧ ಇಲ್ಲ. ಆದರೆ ಭೌಗೋಳಿಕವಾಗಿ ಎಲ್ಲಾ ಜಿಲ್ಲೆಗಳಿಗೆ ಅನುಕೂಲ ಆಗುವಂತೆ ಡೈರಿ ಮಾಡಬೇಕು. ಆಗ ಖರ್ಚು ವೆಚ್ಚ ತಗ್ಗಿಸಬಹುದು ಎನ್ನುತ್ತಲೇ ಅಡ್ಡಗೋಡೆ ಮೇಲೆ ದೀಪ ಇಡುತ್ತಿದ್ದಾರೆ.

ಒಟ್ಟಿನಲ್ಲಿ ಈ ಮೆಗಾ ಡೈರಿ ವಿಚಾರಕ್ಕೆ ಸಂಬಂಧಿಸಿದಂತೆ ಭೀಮಾ ನಾಯ್ಕ್ ಅವರ ನಡೆ ಇದೀಗ ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಯ ನಡುವೆ ಕಿಚ್ಚು ಹೊತ್ತಿಸಿದೆ. ಹೀಗಾಗಿ ಬಜೆಟ್‌ನಲ್ಲಿ ಘೋಷಣೆ ಆದಂತೆ ಆದಷ್ಟು ಬೇಗ ಬಳ್ಳಾರಿಯಲ್ಲೇ ಮೆಗಾ ಡೈರಿ ನಿರ್ಮಾಣ ಆಗುತ್ತಾ ಅಥವಾ ಪ್ರತಿಷ್ಠೆಗೆ ಬಿದ್ದು ಮತ್ತಷ್ಟು ವಿಳಂಬ ಆಗುತ್ತಾ ಎಂದು ಕಾದು ನೋಡಬೇಕಿದೆ.

TAGGED:BallarifarmerskmfMega Dairyvijayanagaraಕೆಎಂಎಫ್ಬಳ್ಳಾರಿಮೆಗಾ ಡೈರಿರೈತರುವಿಜಯನಗರ
Share This Article
Facebook Whatsapp Whatsapp Telegram

Cinema news

Keerthy Suresh
ಕೀರ್ತಿ ಇಟ್ಟ ಗುರಿಗೆ ಫೋಟೋಗ್ರಾಫರ್ ಕಣ್ಣೇ ಹೋಯ್ತು..!
Cinema Latest South cinema
Kerala Court 2
ಖ್ಯಾತ ಬಹುಭಾಷಾ ನಟಿ ಮೇಲೆ ಲೈಂಗಿಕ ದೌರ್ಜನ್ಯ – 6 ಆರೋಪಿಗಳಿಗೆ 20 ವರ್ಷ ಜೈಲು
Cinema Court Latest Main Post National South cinema
Salman Khan Sharukh Khan
ಸಲ್ಮಾನ್-ಶಾರುಖ್ ಫ್ಯಾನ್ಸ್‌ಗೆ ಭರ್ಜರಿ ನ್ಯೂಸ್.. ಶೀಘ್ರದಲ್ಲೇ ಪಠಾಣ್-2!
Bollywood Cinema Latest Top Stories
Rishab Shetty
ಕಾಗದದ ಮೇಲೆ ಹುಟ್ಟಿದ ಪಾತ್ರ ಜೀವ ಪಡೆದಾಗ… `ಕಾಂತಾರ’ದ ಆತ್ಮಕಥೆ ಬಿಚ್ಚಿಟ್ಟ ರಿಷಬ್
Cinema Latest Sandalwood Top Stories

You Might Also Like

Chaos at Messis Kolkata event after he leaves in 10 mins angry fans throw bottles
Latest

ಕೋಲ್ಕತ್ತಾದ ಮೆಸ್ಸಿ ಕಾರ್ಯಕ್ರಮದಲ್ಲಿ ದಾಂಧಲೆ – ಚೇರ್‌, ಬಾಟಲ್‌ ಎಸೆದು ಅಕ್ರೋಶ

Public TV
By Public TV
2 minutes ago
Iqbal Hussain
Districts

ಜ.6ಕ್ಕೆ ಡಿಕೆಶಿಗೆ ಪಟ್ಟಾಭಿಷೇಕ: ಇಕ್ಬಾಲ್‌ ಹುಸೇನ್‌

Public TV
By Public TV
46 minutes ago
Priyank Kharge 1
Districts

ನಿಲ್ಲದ ಖರ್ಗೆ Vs RSS ಫೈಟ್‌ – ಭ್ರಷ್ಟಾಚಾರದ ಗಂಭೀರ ಆರೋಪ ಮಾಡಿದ ಸಚಿವ ಪ್ರಿಯಾಂಕ್‌

Public TV
By Public TV
1 hour ago
D.K Shivakumar
Bengaluru City

ಬೇಸಿಕ್ ಕಾಮನ್‌ಸೆನ್ಸ್ ಇಟ್ಕೊಂಡು ನನ್ನ ಹತ್ರ ಡೀಲ್ ಮಾಡ್ಬೇಕು – ವೇದಿಕೆಯಲ್ಲೇ ಡಿಕೆಶಿ ಗರಂ

Public TV
By Public TV
1 hour ago
mumbai security guard Dog Attack
Latest

ಸೆಕ್ಯೂರಿಟಿ ಗಾರ್ಡ್ ಮೇಲೆ ನಾಯಿ ದಾಳಿ – ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Public TV
By Public TV
2 hours ago
doddaballapura Brahmananda Guruji
Chikkaballapur

ಸೈಟ್ ಖರೀದಿಗೆ ಸಹಾಯ ಮಾಡೋದಾಗಿ ಹೇಳಿ ವಂಚನೆ – ಮಹಿಳೆಯನ್ನ ಮಂಚಕ್ಕೆ ಕರೆದ್ರಾ ಸ್ವಾಮೀಜಿ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?