ಹಾವೇರಿ: ಬಸ್ಸಿನಿಂದ ಬಿದ್ದು ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ ಘಟನೆ ನಗರದ ಶಿಗ್ಗಾಂವಿ ಪಟ್ಟಣದ ಹೊರವಲಯದಲ್ಲಿರುವ ಗಂಗಿಭಾವಿ ಕ್ರಾಸ್ನಲ್ಲಿ ನಡೆದಿದೆ.
ವಿನಾಯಕ ಪಾಟೀಲ್ (17) ವರ್ಷ ಮೃತ ದುರ್ದೈವಿ. ವಿದ್ಯಾರ್ಥಿಯು ಶಿಗ್ಗಾಂವಿ ಪಟ್ಟಣದ ಎಸ್ಆರ್ಜೆವಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ವರ್ಷದ ಪಿಯುಸಿ ಓದುತ್ತಿದ್ದ. ಕಾಲೇಜು ಮುಗಿಸಿ ತಮ್ಮೂರು ದುಂಡಸಿ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಬಸ್ಸಿನಿಂದ ಕೆಳಗೆ ಬಿದ್ದು ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಪ್ರಾಂಶುಪಾಲೆಯ ಕಿರುಕುಳಕ್ಕೆ 5ನೇ ಮಹಡಿಯಿಂದ ಬಿದ್ದು ಪ್ರಾಣ ಬಿಟ್ಟ 13 ವರ್ಷದ ಬಾಲಕಿ
ಬಸ್ ಫುಲ್ ಆಗಿದ್ದರಿಂದ ಬಾಗಿಲಲ್ಲಿ ನಿಂತುಕೊಂಡಿದ್ದ ಅವನು ಬಸ್ಸಿನಿಂದ ಕೆಳಗೆ ಬೀಳುತ್ತಿದ್ದಂತೆ, ಬಸ್ಸಿನ ಗಾಲಿ ವಿದ್ಯಾರ್ಥಿ ಮುಖದ ಮೇಲೆ ಹಾಯ್ದು ಈ ದುರ್ಘಟನೆ ಸಂಭವಿಸಿದೆ. ಇದನ್ನೂ ಓದಿ: ಧಾರವಾಡದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ – 6 ಅಪ್ರಾಪ್ತರು ಪೊಲೀಸರ ವಶಕ್ಕೆ
ಶಿಗ್ಗಾಂವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.