ರಾಮನಗರ: ಟ್ರ್ಯಾಕ್ಟರ್ ಕಲಿಯಲು ಹೋಗಿ 8 ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಮಾದೇಗೌಡನದೊಡ್ಡಿ ಗ್ರಾಮದಲ್ಲಿ ನಡೆದಿದೆ.
8ನೇ ತರಗತಿ ಓದುತ್ತಿದ್ದ ಕುಶಾಲ್ (14) ಮೃತ ವಿದ್ಯಾರ್ಥಿ. ಟ್ರ್ಯಾಕ್ಟರ್ ಕಲಿಯುವ ಆಸೆಯಿಂದ ಮನೆಯ ಬಳಿ ನಿಲ್ಲಿಸಿದ್ದ ಟ್ರ್ಯಾಕ್ಟರನ್ನು ಕುಶಾಲ್ ತೆಗೆದುಕೊಂಡು ಹೋಗಿದ್ದನು. ಆದರೆ ಟ್ರ್ಯಾಕ್ಟರ್ ಚಲಾಯಿಸುವಾಗ ಏಕಾಏಕಿ ಪಲ್ಟಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ ಬಿದ್ದು ಕುಶಾಲ್ ಮೃತಪಟ್ಟಿದ್ದಾನೆ.
ಸಾಂದರ್ಭಿಕ ಚಿತ್ರ
ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿದ್ಯಾರ್ಥಿಯ ಮೃತದೇಹವನ್ನು ಚನ್ನಪಟ್ಟಣ ತಾಲೂಕು ಆಸ್ಪತ್ರೆಗೆ ರವಾನಿಸಿದ್ದಾರೆ.
ಘಟನೆ ಸಂಬಂಧ ಅಕ್ಕೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv