ಕೆರೆಯಲ್ಲಿ ಈಜಲು ಹೋದ ವಿದ್ಯಾರ್ಥಿ ನೀರು ಪಾಲು

Public TV
0 Min Read
ANE DEATH 2

ಬೆಂಗಳೂರು: ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯ ಅವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಭಟ್ಟರಹಳ್ಳಿ ನಿವಾಸಿ ಪುನೀತ್ (14) ಮೃತ ವಿದ್ಯಾರ್ಥಿ. ಬುಧವಾರ ಭಟ್ಟರಹಳ್ಳಿ ಸಮೀಪದ ಕಿತ್ತಗನೂರು ಗ್ರಾಮದ ಕೆರೆಯಲ್ಲಿ ಮೂವರು ಸ್ನೇಹಿತರೊಂದಿಗೆ ಈಜಲು ತೆರಳಿದ್ದಾನೆ. ಬಳಿಕ ಈಜಲು ಕೆರೆಗಿಳಿದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ.

ಸ್ನೇಹಿತರು ಕೂಡಲೇ ಸ್ಥಳೀಯರಿಗೆ ಈ ವಿಚಾರವನ್ನು ತಿಳಿಸಿದ್ದಾರೆ. ಬಳಿಕ ಅವರ ನೆರವಿನಿಂದ ಪುನೀತ್ ಮೃತದೇಹ ಹೊರಕ್ಕೆ ತೆಗೆಯಲಾಗಿದೆ.

ಈ ಘಟನೆ ಸಂಬಂಧ ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *