– ಶಿಕ್ಷಕನ ವಿರುದ್ಧ ಗ್ರಾಮಸ್ಥರು ಆಕ್ರೋಶ
ಹಾವೇರಿ: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆ ಶಿಕ್ಷಕನ ವಿರುದ್ಧ ವಿದ್ಯಾರ್ಥಿನಿಯ ಪೋಷಕರು ಮತ್ತು ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ದೇವರಗುಡ್ಡ ಗ್ರಾಮದಲ್ಲಿ ನಡೆದಿದೆ.
ದೇವರಗುಡ್ಡ ಗ್ರಾಮದ ಮಾಲತೇಶ್ ಪ್ರೌಢಶಾಲೆ ಶಿಕ್ಷಕ ಮಲ್ಲಪ್ಪ ತಳವಾರ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಲ್ಲಪ್ಪ ಆನ್ಲೈನ್ ಕ್ಲಾಸ್ ನಡೆಯುತ್ತಿರಬೇಕಾದರೆ 10ನೇ ತರಗತಿ ವಿದ್ಯಾರ್ಥಿನಿಯ ಫೋನ್ ನಂಬರ್ ಅನ್ನು ತೆಗೆದುಕೊಂಡಿದ್ದಾನೆ. ನಂತರ ಆಕೆಗೆ ಅಶ್ಲೀಲ ಮೆಸೇಜ್ ಗಳನ್ನ ಕಳಿಸಿ, ಲೈಂಗಿಕ ಕಿರುಕುಳ ನೀಡಲು ಪ್ರಾರಂಭಿಸಿದ್ದಾನೆ. ಈ ಹಿನ್ನೆಲೆ ವಿದ್ಯಾರ್ಥಿನಿಯ ಕುಟುಂಬ ಮಲ್ಲಪ್ಪನ ವಿರುದ್ಧ ದೂರು ನೀಡಿದ್ದು, ಆತನನ್ನು ಶಾಲೆಯಿಂದ ಅಮಾನತು ಮಾಡಲಾಗಿದೆ. ಇದನ್ನೂ ಓದಿ: ಇಸ್ರೋ ಖಾಸಗೀಕರಣ – ಬೆಂಗಳೂರಿನ ಕಛೇರಿ ಗುಜರಾತ್ಗೆ ವರ್ಗಾವಣೆ ಖಂಡಿಸಿ ಪ್ರತಿಭಟನೆ
ಶಿಕ್ಷಕನ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಗ್ರಾಮಸ್ಥರು ಹಾಗೂ ವಿದ್ಯಾರ್ಥಿನಿಯ ಪೋಷಕರು ಆಗ್ರಹಿಸಿದ್ದಾರೆ. ಸ್ಥಳಕ್ಕೆ ರಾಣೆಬೆನ್ನೂರು ಗ್ರಾಮೀಣ ಠಾಣೆ ಪಿಎಸ್ಐ ವಸಂತ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.