ಪ್ರಿನ್ಸಿಪಾಲ್ ಕಿರುಕುಳದಿಂದ 7ನೇ ಮಹಡಿಯಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆ

Public TV
1 Min Read
ane suicide copy

ಬೆಂಗಳೂರು: ಪ್ರಾಂಶುಪಾಲರ ಕಿರುಕುಳ ಸಹಿಸಿಕೊಳ್ಳಲು ಆಗದೇ ವಿದ್ಯಾರ್ಥಿಯೊಬ್ಬ ಏಳನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಸವನಹಳ್ಳಿ ಬಳಿಯಿರುವ ಖಾಸಗಿ ಕಾಲೇಜಿನಲ್ಲಿ ನಡೆದಿದೆ.

ಶ್ರೀಹರ್ಷ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಈತ ಮೂಲತಃ ಆಂಧ್ರ ಪ್ರದೇಶದವನಾಗಿದ್ದು, ಎಂಜಿನಿಯರಿಂಗ್ ಓದುತ್ತಿದ್ದನು. ಕಾಲೇಜಿನಲ್ಲಿ ಪ್ರಿನ್ಸಿಪಾಲ್ ಟಾರ್ಚರ್ ಸಹಿಸಿಕೊಳ್ಳಲು ಆಗದೇ ಹರ್ಷ ಇಂದು ಬೆಳಗ್ಗೆ ಕಾಲೇಜಿನ ಏಳನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

police

ಈ ಹಿಂದೆ ಹರ್ಷ ಹಾಸ್ಟೆಲಿನಲ್ಲಿ ಊಟ, ತಿಂಡಿ ಸರಿ ಇಲ್ಲ ಎಂದು ಪ್ರತಿಭಟಿಸಿದ್ದನು. ಹೀಗಾಗಿ ಪ್ರಾಂಶುಪಾಲರು ಹರ್ಷ ಸೇರಿ 20 ವಿದ್ಯಾರ್ಥಿಗಳನ್ನು ಸಸ್ಪೆಂಡ್ ಮಾಡಿದ್ದರು. ಅಲ್ಲದೆ ಕಳೆದ ಒಂದು ತಿಂಗಳಿಂದ ಹರ್ಷ ಕಾಲೇಜಿನಿಂದ ಸಸ್ಪೆಂಡ್ ಆಗಿದ್ದನು.

ಹರ್ಷ ಒಂದು ತಿಂಗಳಿಂದ ಕಾಲೇಜಿನಲ್ಲಿ ಕಿರುಕುಳ ಅನುಭವಿಸುತ್ತಿದ್ದನು. ಈ ನಡುವೆ ಹರ್ಷ ಕ್ಯಾಂಪಸ್ ಸೆಲೆಕ್ಷನ್ ನಲ್ಲಿ ಆಯ್ಕೆಯಾಗಿದ್ದನು. ಹರ್ಷ ಸಸ್ಪೆಂಡ್ ಆಗಿದ್ದ ಎಂದು ಕಾಲೇಜು ಆಡಳಿತ ಮಂಡಳಿ ಆಫರ್ ಲೆಟರ್ ಅನ್ನು ಹರಿದು ಹಾಕಿತ್ತು. ಇದರಿಂದ ಬೇಸರಗೊಂಡ ಹರ್ಷ ಇಂದು ಬೆಳಗ್ಗೆ 7ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಈ ಬಗ್ಗೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Share This Article
Leave a Comment

Leave a Reply

Your email address will not be published. Required fields are marked *