ಚಿಕ್ಕಮಗಳೂರು: ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ತುಂಗಾ ನದಿಯಲ್ಲಿ ನಡೆದಿದೆ.
ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಹಲಸೂರು ಪ್ರಿಯದರ್ಶಿನಿ ಪ್ರೌಢಶಾಲೆಯ 9ನೇ ತರಗತಿ ಓದುತ್ತಿದ್ದ ತರುಣ್ ಗೌಡ ಮೃತ ವಿದ್ಯಾರ್ಥಿ. ಶಾಲೆಯಿಂದ ಸುಮಾರು 60 ವಿದ್ಯಾರ್ಥಿಗಳು ಬಸ್ ಮಾಡಿಕೊಂಡು ಶೃಂಗೇರಿಗೆ ಪ್ರವಾಸಕ್ಕೆಂದು ಬಂದಿದ್ದರು. ಈ ವೇಳೆ ಮಕ್ಕಳು ಸ್ನಾನಕ್ಕೆ ಬಂದಾಗ ಶೌಚಗೃಹದವರು ಒಬ್ಬರಿಗೆ 20 ರೂಪಾಯಿ ಎಂದಿದ್ದಾರೆ.
20 ರೂ. ಜಾಸ್ತಿಯಾಗುತ್ತದೆ ಎಂದು ತಿಳಿದು ಮಕ್ಕಳು ಸ್ನಾನ ಮಾಡಲು ತುಂಗಾ ನದಿಗೆ ಇಳಿದಿದ್ದಾರೆ. ಈ ವೇಳೆ ಈ ದುರ್ಘಟನೆ ಸಂಭವಿಸಿದೆ.
ಸ್ಥಳೀಯರು ಹಾಗೂ ಪೊಲೀಸರ ಸಹಕಾರದಿಂದ ಸುಮಾರು ಒಂದು ಗಂಟೆಯ ಬಳಿಕ ವಿದ್ಯಾರ್ಥಿಯ ಮೃತದೇಹವನ್ನ ನೀರಿನಿಂದ ಮೇಲೆತ್ತಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಶೃಂಗೇರಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಮಕ್ಕಳು ಪ್ರವಾಸಕ್ಕೆ ಖರ್ಚಿಗೆಂದು ಹೆಚ್ಚಿನ ಹಣ ತಂದಿರಲಿಲ್ಲ. ಒಬ್ಬರಿಗೆ 20 ರೂ. ಆಗುತ್ತದೆ ಎಂದು ಹೇಳಿದ ಹಿನ್ನೆಲೆಯಲ್ಲಿ ಎಲ್ಲ ವಿದ್ಯಾರ್ಥಿಗಳು ನದಿಯಲ್ಲೇ ಸ್ನಾನ ಮಾಡಲು ಇಳಿದಿದ್ದರು ಎನ್ನುವ ವಿಚಾರ ತಿಳಿದು ಬಂದಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv