ಕೊಪ್ಪಳ: ಶಾಲೆಗೆ ಓದಲು ಬರುವ ವಿದ್ಯಾರ್ಥಿಗಳ ಕೈಯಲ್ಲಿ ಶಿಕ್ಷಕರು ನೀರು ತರುವ ಕೆಲಸ ಮಾಡಿಸುತ್ತಿರೋ ಘಟನೆ ಜಿಲ್ಲೆಯ ಮಾದಿನೂರ ತಾಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.
ಮಕ್ಕಳಿಗೆ ಪಾಠ ಮಾಡುವ ಬದಲಾಗಿ ಅವರ ಕೈಯಲ್ಲಿ ಶಿಕ್ಷಕರು ಕೆಲಸ ಮಾಡಿಸುತ್ತಿದ್ದಾರೆ. ಇದನ್ನು ನೋಡಿ ಸ್ಥಳೀಯರು ಶಾಲೆಯ ಸಿಬ್ಬಂದಿಗಳ ಮೇಲೆ ಸಿಡಿದೆದ್ದಿದ್ದಾರೆ. ಹೌದು, ಪೋಷಕರು ತಮ್ಮ ಮಕ್ಕಳು ಚೆನ್ನಾಗಿ ಓದಲಿ ಅಂತ ಶಾಲೆಗೆ ಕಳುಹಿಸುತ್ತಾರೆ. ಆದ್ರೆ ಪಾಠ ಕಲಿಯಬೇಕಾದ ಮಕ್ಕಳ ಕೈಯಲ್ಲಿ ನೀರು ತರುವ ಕೆಲಸವನ್ನು ಶಿಕ್ಷಕರು ಮಾಡಿಸುತ್ತಿದ್ದಾರೆ. ಶಾಲೆಯಲ್ಲಿ ನೀರಿನ ಅಭಾವವಿದ್ದು, ಪರ್ಯಾಯ ವ್ಯವಸ್ಥೆ ಮಾಡದೆ ಮಕ್ಕಳ ಕೈಯಲ್ಲೇ ಕುಡಿಯುವ ನೀರನ್ನು ತರಲು ಬಳಸಿಕೊಂಡಿದ್ದಾರೆ.
ಒತ್ತು ಗಾಡಿಯ ಮೂಲಕ ವಿದ್ಯಾರ್ಥಿಗಳು ನೀರು ತರುತ್ತಿದ್ದಾರೆ. ಶಾಲೆಗೆ ಬಂದ ಮಕ್ಕಳಿಂದ ನಿತ್ಯ ಹೀಗೆ ಶಿಕ್ಷಕರು ನೀರು ತರೋ ಕೆಲಸ ಮಾಡಿಸುತ್ತಿದ್ದು, ಸರತಿ ಪ್ರಕಾರವಾಗಿ ಕುಡಿಯುವ ನೀರು ತರಬೇಕು ಎಂದು ವಿದ್ಯಾರ್ಥಿಗಳು ತಿಳಿಸಿದ್ದಾರೆ. ಶಿಕ್ಷಕರ ಈ ವರ್ತನೆಯನ್ನು ಪೋಷಕರು ಹಾಗೂ ಸ್ಥಳೀಯರು ವಿರೋಧಿಸುತ್ತಿದ್ದು, ಈ ಕುರಿತು ಸಂಬಂಧ ಪಟ್ಟ ಅಧಿಕಾರಿಗಳು ಗಮನ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv