ಚಿಕ್ಕಬಳ್ಳಾಪುರ: ಇಂದು ಮಧ್ಯಾಹ್ನ ಬಿಸಿಯೂಟ ಸೇವಿಸಿ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿ ಆಸ್ಪತ್ರೆ ಸೇರಿರುವ ಘಟನೆ ಜಿಲ್ಲೆಯ ಚಿಂತಾಮಣಿ ತಾಲ್ಲೂಕು ಲಕ್ಷ್ಮೀದೇವಿಕೋಟೆ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ.
ಪ್ರತಿನಿತ್ಯ ವಿದ್ಯಾರ್ಥಿಗಳು ಶಾಲೆಯಲ್ಲಿಯೇ ಬಿಸಿಯೂಟ ಸೇವಿಸುತ್ತಿದ್ದರು. ಹಾಗೆಯೇ ಇಂದು ಕೂಡ ಮಧ್ಯಾಹ್ನದ ಬಿಸಿಯೂಟವನ್ನು ವಿದ್ಯಾರ್ಥಿಗಳು ಸೇವಿಸಿದ್ದಾರೆ. ಆದ್ರೆ ಊಟ ಸೇವನೆ ಬಳಿಕ ವಿದ್ಯಾರ್ಥಿಗಳಿಗೆ ಹೊಟ್ಟೆ ನೋವು, ವಾಂತಿ ಭೇದಿ ಶುರುವಾಗಿ ಶಾಲೆಯಲ್ಲಿಯೇ ಅಸ್ವಸ್ಥರಾಗಿದ್ದಾರೆ. ಕೂಡಲೇ ಎಚ್ಚೆತ್ತ ಶಿಕ್ಷಕರು ಅಸ್ವಸ್ಥ ವಿದ್ಯಾರ್ಥಿಗಳನ್ನು ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.
ಸದ್ಯ ಈ ಘಟನೆಯಿಂದ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿಗಳು ಅಪಾಯದಿಂದ ಪಾರಾಗಿದ್ದು, ಬಿಸಿಯೂಟ ಸರಬರಾಜು ಮಾಡುವ ಗುತ್ತಿಗೆದಾರ ಶ್ರೀರಾಮರೆಡ್ಡಿ ಅವರ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ಶಿಕ್ಷಕರು ಹಾಗೂ ಪೋಷಕರು ಆರೋಪಿಸುತ್ತಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv