ಅಬುಧಾಬಿ: ರಸ್ತೆ ಅಪಘಾತದಲ್ಲಿ ಇಬ್ಬರು ಭಾರತೀಯ ವಿದ್ಯಾರ್ಥಿಗಳು ಮೃತಪಟ್ಟ ಘಟನೆ ಬುಧವಾರ ಬೆಳಗ್ಗೆ ನಡೆದಿದೆ.
ರೋಹಿತ್ ಕೃಷ್ಣಕುಮಾರ್(19) ಹಾಗೂ ಶರತ್ ಕುಮಾರ್ (21) ಮೃತಪಟ್ಟ ವಿದ್ಯಾರ್ಥಿಗಳು. ರೋಹಿತ್ ಹಾಗೂ ಶರತ್ ಮೂಲತಃ ಕೇರಳದವರಾಗಿದ್ದು, ಕ್ರಿಸ್ಮಸ್ ಪಾರ್ಟಿಯಲ್ಲಿ ಭಾಗಿಯಾಗಲು ಹೋಗಿದ್ದರು.
ಕ್ರಿಸ್ಮಸ್ ಪಾರ್ಟಿಯಲ್ಲಿ ಭಾಗಿಯಾದ ನಂತರ ಶರತ್ ಬುಧವಾರ ನಸುಕಿನ ಜಾವದಲ್ಲಿ ರೋಹಿತ್ನನ್ನು ಮನೆಗೆ ಡ್ರಾಪ್ ಮಾಡಲು ಹೋಗುತ್ತಿದ್ದರು. ಈ ವೇಳೆ ಕಾರು ಅಪಘಾತ ಸಂಭವಿಸಿದ್ದು, ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಶರತ್ ಕುಮಾರ್ ತನ್ನ ಉನ್ನತ ಶಿಕ್ಷಣಕ್ಕಾಗಿ ಅಮೆರಿಕಗೆ ತೆರಳಿದ್ದನು. ಇತ್ತ ರೋಹಿತ್ ಕೃಷ್ಣಕುಮಾರ್ ತನ್ನ ಉನ್ನತ ಶಿಕ್ಷಣಕ್ಕಾಗಿ ಲಂಡನ್ಗೆ ತೆರಳಿದ್ದನು. ಕ್ರಿಸ್ಮಸ್ ಹಬ್ಬವನ್ನು ಆಚರಿಸಲು ಇಬ್ಬರು ಮಂಗಳವಾರ ರಾತ್ರಿ ದುಬೈಯಲ್ಲಿ ಭೇಟಿ ಆಗಿದ್ದರು.