– ಸರ್ಕಾರ ಫ್ರೀ ಪಾಸ್ ಕೊಟ್ರೂ ಉಪಯೋಗವಿಲ್ಲ
ಬೀದರ್: ಸರ್ಕಾರಿ ಶಾಲೆಯ ಮಕ್ಕಳಿಗೆ ಸರ್ಕಾರ ಬಸ್ ಪಾಸ್ ನೀಡಿದೆ. ಆದರೆ ಬಸ್ ಚಾಲಕರು ಹಾಗೂ ನಿರ್ವಾಹಕರು ಶಾಲಾ ಮಕ್ಕಳನ್ನು ಹತ್ತಿಸಿಕೊಳ್ಳಬೇಕಾಗುತ್ತದೆ ಎಂದು ಹೇಳಿ ಬಸ್ ನಿಲ್ದಾಣಗಳಲ್ಲಿ ನಿಲ್ಲಿಸದೆ ಹೋಗುತ್ತಿದ್ದಾರೆ. ಇದರಿಂದ ಪ್ರತಿದಿನ ಸಮಸ್ಯೆ ಎದುರಿಸುತ್ತಿರುವ ವಿದ್ಯಾರ್ಥಿಗಳು ರಾತ್ರಿಯಾಗುತ್ತಿದಂತೆ ಬಸ್ ನಿಲ್ದಾಣದಲ್ಲಿ ಅಳುತ್ತಾ ನಿಲ್ಲುವ ಘಟನೆ ಜಿಲ್ಲೆ ಔರಾದ್ ತಾಲೂಕಿನ ಡಿಗ್ಗಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ವಿದ್ಯಾಭ್ಯಾಸಕ್ಕಾಗಿ ಅಕ್ಕಪಕ್ಕ ಊರಿನಿಂದ ಸುಮಾರು 120 ವಿದ್ಯಾರ್ಥಿಗಳು ಬರುತ್ತಿದ್ದಾರೆ. ಸರ್ಕಾರ ವಿದ್ಯಾರ್ಥಿಗಳಿಗೆ ಎಂದೇ ಉಚಿತ ಬಸ್ ಪಾಸ್ ನೀಡಿದೆ. ಆದರೆ ಇದರ ಉಪಯೋಗ ಮಾತ್ರ ಇಲ್ಲಿನ ವಿದ್ಯಾರ್ಥಿಗಳಿಗೆ ಇದ್ದೂ ಇಲ್ಲದಂತಾಗಿದೆ. ಪ್ರತಿದಿನ ಶಾಲೆ 4.30ಕ್ಕೆ ಬಿಟ್ಟರು ಸಂಜೆ 7 ಗಂಟೆವರೆಗೂ ವಿದ್ಯಾರ್ಥಿಗಳು ಬಸ್ ನಿಲ್ದಾಣದಲ್ಲೇ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ವಿದ್ಯಾರ್ಥಿಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹೆಣ್ಣು ಮಕ್ಕಳು ಇದ್ದು, ಸಂಜೆಯ ವೇಳೆ ಕತ್ತಲು ಆಗುತ್ತಿದ್ದಂತೆಯೇ ಭಯದಿಂದ ಕಣ್ಣೀರು ಹಾಕುತ್ತಿದ್ದಾರೆ. ಇತ್ತ ಮನೆಯಲ್ಲಿ ಪೋಷಕರು ಮಕ್ಕಳು ರಾತ್ರಿಯಾದ್ರೂ ಮನೆಗೆ ಬರಲಿಲ್ಲ ಎಂದು ಭಯ ಭೀತರಾಗುತ್ತಿದ್ದಾರೆ.
- Advertisement 2
- Advertisement 3
ಸದ್ಯ ಬಸ್ ಚಾಲಕರ, ನಿರ್ವಾಹಕರ ಈ ನಿರ್ಲಕ್ಷ್ಯ ವರ್ತನೆಯಿಂದ ಬಸ್ ಇಲ್ಲದೆ ವಿದ್ಯಾರ್ಥಿಗಳು ಕಣ್ಣೀರು ಹಾಕುತ್ತಿರುವ ವಿಡಿಯೋ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಈ ಕುರಿತು ಪಬ್ಲಿಕ್ ಟಿವಿ ವಿಸ್ತøತ ವರದಿ ಪ್ರಸಾರ ಮಾಡಿದ್ದು, ಈ ಬಗ್ಗೆ ಕೆಎಸ್ಆರ್ ಟಿಸಿ ವಿಭಾಗಿಯ ಅಧಿಕಾರಿಯನ್ನು ಪಬ್ಲಿಕ್ ಟಿವಿ ಸಂಪರ್ಕ ಮಾಡಿದ್ದು, ಆದರೆ ಇಂತಹ ಘಟನೆ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಉತ್ತರ ನೀಡಿದ್ದಾರೆ.
- Advertisement 4
ಪಬ್ಲಿಕ್ ಟಿವಿ ವರದಿಯಿಂದ ವಿದ್ಯಾರ್ಥಿಗಳ ಸಮಸ್ಯೆ ನಮ್ಮ ಗಮನಕ್ಕೆ ಬಂದಿದ್ದು, ಈ ಕುರಿತು ನಮಗೆ ದೂರು ಲಭಿಸಿದರೆ ಸಿಬ್ಬಂದಿ ಮೇಲೆ ಸೂಕ್ತ ಕ್ರಮ ಜರುಗಿಸುತ್ತೇನೆ. ವಿದ್ಯಾರ್ಥಿಗಳಿಗೆ ಇಂತಹ ಸಮಸ್ಯೆ ಆಗದಂತೆ ತಾಲೂಕು ಡಿಪೋ ಮ್ಯಾನೇಜರ್ ಗೆ ಸೂಚನೆ ನೀಡುತ್ತೇನೆ. ಪ್ರತಿ ದಿನ ಬಸ್ ನಿಲ್ಲಿಸಿ ವಿದ್ಯಾರ್ಥಿಗಳನ್ನು ಕರೆದುಕೊಂಡಿ ಹೋಗಬೇಕು ಅಂತ ಸೂಚನೆ ನೀಡಲಾಗುವುದು. ಬೇರೆ ಯಾವುದೇ ಗ್ರಾಮಕ್ಕೆ ಬಸ್ ಸಮಸ್ಯೆ ಇದ್ದರು ಅದಕ್ಕೆ ಪರಿಹಾರ ನೀಡುವುದಾಗಿ ಕೆಎಸ್ಆರ್ ಟಿಸಿ ವಿಭಾಗಿಯ ನಿಯಂತ್ರಣಾಧಿಕಾರಿ ಕೋಟ್ರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv