Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಮಕ್ಕಳು ತಪ್ಪು ಮಾಡುವುದು ಸಹಜ, ಬಂಧಿತರನ್ನು ಬಿಡುಗಡೆ ಮಾಡಿ – ಕ್ಷಮೆ ಕೇಳಿದ ವಿದ್ಯಾರ್ಥಿಗಳು

Public TV
Last updated: December 25, 2019 4:59 pm
Public TV
Share
2 Min Read
students 2
SHARE

– ಜಿಲ್ಲಾಧಿಕಾರಿ ಹೆಸರಲ್ಲಿ 2 ದಿನ ರಜೆ ಘೋಷಿಸಿದ ವಿದ್ಯಾರ್ಥಿಗಳು

ಲಕ್ನೋ: ಡಿಸೆಂಬರ್ 23 ಹಾಗೂ 24ರಂದು ರಜೆ ಘೋಷಿಸಲಾಗಿದೆ ಎಂದು ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ಪತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿ ನಂತರ ಕ್ಷಮೆ ಕೇಳಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿರುವುದು ಅವರ ಸಹಪಾಠಿಗಳಿಗೆ ತಿಳಿದಿದ್ದು, ತಕ್ಷಣ ಇತರ ವಿದ್ಯಾರ್ಥಿಗಳು ಇಬ್ಬರು ಸಹಪಾಠಿಗಳ ರಕ್ಷಣೆಗೆ ಧಾವಿಸಿದ್ದಾರೆ. ನೋಯ್ಡಾ ಸೆಕ್ಟರ್ 27ರಲ್ಲಿರುವ ಜಿಲ್ಲಾಧಿಕಾರಿ ಬಿ.ಎನ್.ಸಿಂಗ್ ಅವರ ಕಚೇರಿಗೆ ಧಾವಿಸಿ ಕ್ಷಮೆಯಾಚಿಸಿ ಇಬ್ಬರು ವಿದ್ಯಾರ್ಥಿಗಳನ್ನು ಬಿಡುಗಡೆ ಮಾಡುವಂತೆ ಕೇಳಿಕೊಂಡಿದ್ದಾರೆ. ಅಲ್ಲದೆ ವಿದ್ಯಾರ್ಥಿಗಳು ನಮ್ರತೆಯಿಂದ ಕ್ಷಮೆಯಾಚಿಸಿದ್ದು, ಮಂಡಿಯೂರಿ ಕುಳಿತು, ಎರಡೂ ಕೈಗಳಿಂದ ಕಿವಿ ಹಿಡಿದು ಕುಳಿತುಕೊಳ್ಳುವ ಮೂಲಕ ಕ್ಷಮೆಯಾಚಿಸಿದ್ದಾರೆ.

uttar pradesh police jpg 1575793938

ನಾವು ಮಕ್ಕಳು ತಪ್ಪು ಮಾಡುವುದು ಸಹಜ. ಹಿರಿಯರು ಇದನ್ನು ತಿಳಿದು ನಮ್ಮನ್ನು ಕ್ಷಮಿಸಬೇಕು ಎಂದು ನೋಯ್ಡಾ ಸೆಕ್ಟರ್ 12ರ ಶಾಲೆಯ ಸರ್ಕಾರಿ ಶಾಲೆ ವಿದ್ಯಾರ್ಥಿಗಳು ಕೇಳಿಕೊಂಡಿದ್ದಾರೆ.

ಅಲ್ಲದೆ ಈ ಕುರಿತು ವಿದ್ಯಾರ್ಥಿಗಳು ಸೆಕ್ಟರ್ 20ರಲ್ಲಿ ಪೊಲೀಸ್ ಠಾಣೆಯಿಂದ ಜಿಲ್ಲಾಧಿಕಾರಿಗಳ ಕಚೇರಿ ವರೆಗೆ ಪಥಸಂಚಲನ ನಡೆಸಿದ್ದಾರೆ. ನಮ್ಮ ಸ್ನೇಹಿತರ ಪರವಾಗಿ ನಾವು ಕ್ಷಮೆಯಾಚಿಸುತ್ತೇವೆ. ಅವರು ತಪ್ಪು ಮಾಡಿದ್ದಾರೆ, ಆದರೆ ಈ ಕುರಿತು ಅವರಿಗೆ ಅರಿವಾಗಿದೆ. ಅವರ ಕುಟುಂಬದವರು ಸಹ ಈ ಕುರಿತು ಎಚ್ಚರಿಕೆ ವಹಿಸಿದ್ದಾರೆ. ವಿವಾದ ಸೃಷ್ಟಿಸುವುದು ಅವರ ಉದ್ದೇಶವಾಗಿರಲಿಲ್ಲ ಎಂದು 12ನೇ ತರಗತಿ ವಿದ್ಯಾರ್ಥಿ ತಿಳಿಸಿದ್ದಾನೆ.

ಈ ವೇಳೆ ಪೊಲೀಸರು ಜಿಲ್ಲಾಧಿಕಾರಿ ಕಚೇರಿ ಬಳಿ ಕುಳಿತುಕೊಳ್ಳದಂತೆ ತಿಳಿಸಿದ್ದಾರೆ. ಆಗ ವಿದ್ಯಾರ್ಥಿನಿ ಉತ್ತರಿಸಿ, ನಾವು ನಿಮ್ಮೊಂದಿಗೆ ವಾದ ಮಾಡುತ್ತಿಲ್ಲ. ಕೇವಲ ಕ್ಷಮೆಯಾಚಿಸಲು ಬಂದಿದ್ದೇವೆ ಅಷ್ಟೇ ಎಂದು ವಿದ್ಯಾರ್ಥಿನಿ ಅಳುತ್ತಲೇ ತಿಳಿಸಿದ್ದಾಳೆ. ಅಲ್ಲದೆ ಅವರನ್ನು ಬಿಡುಗಡೆ ಮಾಡದಿದ್ದರೆ ಅಂತಿಮ ಪರೀಕ್ಷೆ ಬರೆಯಲು ಸಾಧ್ಯವಿಲ್ಲ. ಹೀಗಾಗಿ ಅವರನ್ನು ಬಿಡುಗಡೆ ಮಾಡಬೇಕು ಎಂದು ವಿದ್ಯಾರ್ಥಿಗಳು ಕೇಳಿಕೊಂಡಿದ್ದಾರೆ.

नोएडा ज़िलाधिकारी के घर के बाहर बैठे ये बच्चे कान पकड़कर अपनी साथी बच्चों की गलती को माफ़ करने की माँग कर रहे है।दो बच्चों ने @dmgbnagar के फ़र्ज़ी हस्ताक्षर कर छुट्टी का फ़र्ज़ी आदेश जारी कर दिया था जिस पर @noidapolice ने दोनों बच्चों को पकड़ कर जुवेनाईल रिमांड होम भेज दिया था। pic.twitter.com/8h7eJOSCoZ

— Jitender Sharma (@capt_ivane) December 25, 2019

ಈ ಕುರಿತು ಜಿಲ್ಲಾಧಿಕಾರಿ ಸಿಂಗ್ ಪ್ರತಿಕ್ರಿಯಿಸಿ, ತಪ್ಪು ಮಾಡಿದವರು ವಿದ್ಯಾರ್ಥಿಗಳೆಂದು ಯಾರಿಗೂ ತಿಳಿದಿರಲಿಲ್ಲ. ಹೀಗಾಗಿ ದೂರು ದಾಖಲಿಸಲಾಗಿದೆ. ಕಾನೂನು ವಿಚಾರವಾಗಿದ್ದರಿಂದ ಎಫ್‍ಐಆರ್ ಕೂಡ ದಾಖಲಾಗಿದೆ, ತನಿಖೆ ನಡೆಯುತ್ತಿದೆ. ಎಫ್‍ಐಆರ್ ದಾಖಲಾಗಿದ್ದರಿಂದ ಹಿಂಪಡೆಯುವ ಪ್ರಶ್ನೆಯೇ ಬರುವುದಿಲ್ಲ ಎಂದು ತಿಳಿಸಿದ್ದಾರೆ.

ಏನಿದು ಪ್ರಕರಣ?
ನೋಯ್ಡಾ ಹಾಗೂ ಗ್ರೇಟರ್ ನೋಯ್ಡಾ ವ್ಯಾಪ್ತಿಯ ಎಲ್ಲ ಶಾಲಾ ಕಾಲೇಜುಗಳಿಗೆ ಡಿಸೆಂಬರ್ 23 ಹಾಗೂ 24ರಂದು ರಜೆ ಘೋಷಿಸಲಾಗಿದೆ ಎಂಬ ಜಿಲ್ಲಾಧಿಕಾರಿ ಬಿ.ಎನ್.ಸಿಂಗ್ ನಕಲಿ ಸಹಿ ಇರುವ ಪತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ವಿದ್ಯಾರ್ಥಿಗಳು ವೈರಲ್ ಮಾಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Police Jeep

ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಪತ್ರ ವೈರಲ್ ಆಗುತ್ತಿದ್ದಂತೆ, ಸಿಂಗ್ ಈ ವದಂತಿ ಕುರಿತು ಸ್ಪಷ್ಟನೆ ನೀಡಿದ್ದು, ಯಾವುದೇ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿಲ್ಲ, ಇಂತಹ ಯಾವುದೇ ಆದೇಶ ಹೊರಡಿಸಿಲ್ಲ. ನನ್ನ ಸಹಿ ಇರುವ ನಕಲಿ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದನ್ನು ಗಮನಿಸಿದ್ದೇನೆ. ಇದು ನನ್ನ ಪತ್ರವಲ್ಲ ಎಂದು ಟ್ವೀಟ್ ಮಾಡುವ ಮೂಲಕ ಸ್ಪಷ್ಟಪಡಿಸಿದರು.

TAGGED:DCholidayletterpolicePublic TVstudentsuttar pradeshಉತ್ತರ ಪ್ರದೇಶಜಿಲ್ಲಾಧಿಕಾರಿಪತ್ರಪಬ್ಲಿಕ್ ಟಿವಿಪೊಲೀಸರುರಜೆವಿದ್ಯಾರ್ಥಿಗಳು
Share This Article
Facebook Whatsapp Whatsapp Telegram

Cinema Updates

Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
2 hours ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
2 hours ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
3 hours ago
India House Movie
`ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ
4 hours ago

You Might Also Like

Ahmedabad Plane Crash
Latest

ಅಹಮದಾಬಾದ್‌ನ ವಸತಿ ಪ್ರದೇಶದಲ್ಲಿ 242 ಪ್ರಯಾಣಿಕರಿದ್ದ ವಿಮಾನ ಪತನ

Public TV
By Public TV
16 minutes ago
Vijay Rupani 3
Latest

ಪತನಗೊಂಡ ಏರ್‌ ಇಂಡಿಯಾ ವಿಮಾನದಲ್ಲಿದ್ದರು ಗುಜರಾತ್‌ ಮಾಜಿ ಸಿಎಂ ವಿಜಯ್‌ ರೂಪಾನಿ

Public TV
By Public TV
21 minutes ago
Rain Landslide Udupi
Districts

ಉಡುಪಿ | ಭಾರೀ ಮಳೆಗೆ ರೈಲ್ವೇ ಸೇತುವೆ ಬಳಿಯೇ ಭೂಕುಸಿತ

Public TV
By Public TV
26 minutes ago
Yadhuveer Wodeyar
Districts

ಕೆಆರ್‌ಎಸ್ ಅಮ್ಯೂಸ್ಮೆಂಟ್ ಪಾರ್ಕ್‌ಗೆ ನನ್ನ ವಿರೋಧವಿದೆ: ಯದುವೀರ್ ಒಡೆಯರ್

Public TV
By Public TV
53 minutes ago
r ashok
Districts

ಸಿಎಂಗೆ ಮಾನಸಿಕ ಸ್ಥಿತಿ ಸರಿ ಇಲ್ಲ: ಅಶೋಕ್

Public TV
By Public TV
2 hours ago
01 7
Big Bulletin

ಬಿಗ್‌ ಬುಲೆಟಿನ್‌ 11 June 2025 ಭಾಗ-1

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?