ಸ್ನಾನಕ್ಕೆ ತೆರಳಿದ್ದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು

Public TV
1 Min Read
WhatsApp Image 2022 05 08 at 11.26.14 AM

ಮಡಿಕೇರಿ: ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಸಂಬಂಧಿಕರ ಮನೆಗೆ ಬಂದಿದ್ದ ವಿದ್ಯಾರ್ಥಿಯೋರ್ವ ಸ್ನಾನಕ್ಕೆ ಎಂದು ಹೊಳೆಗೆ ಇಳಿದ ವೇಳೆ ಸುಳಿಗೆ ಸಿಲುಕಿ ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಶನಿವಾರಸಂತೆ ಗ್ರಾಮದಲ್ಲಿ ನಡೆದಿದೆ.

ಪರ್ಹಾನ್ (12) ಮೃತಪಟ್ಟ ವಿದ್ಯಾರ್ಥಿ. ರಂಜಾನ್ ಹಬ್ಬಕ್ಕೆಂದು ಪರ್ಹಾನ್ ಕುಶಾಲನಗರ ಸಮೀಪದ ಬೈಲ್ ಕೊಪ್ಪದಿಂದ ಶನಿವಾರಸಂತೆಯಲ್ಲಿರುವ ಅಜ್ಜಿಯ ಮನೆಗೆ ಬಂದಿದ್ದ. ಮಾವನ ಮಗನೊಂದಿಗೆ ಶನಿವಾರಸಂತೆಯ ಹೆಮ್ಮನೆಯಲ್ಲಿರುವ ಹೊಳೆಯಲ್ಲಿ ಈಜಲು ತೆರಳಿದ್ದರು. ಇದನ್ನೂ ಓದಿ: ಮಲಯಾಳಿ ಯೂಟ್ಯೂಬರ್ ರಿಫಾ ಮೆಹ್ನು ದುಬೈನಲ್ಲಿ ಅನುಮಾನಸ್ಪದ ಸಾವು

crime

ಈ ಸಂದರ್ಭದಲ್ಲಿ ಹೊಳೆಯ ಬದಿಯ ಕಲ್ಲಿನಲ್ಲಿ ಪಾಚಿ ಕಟ್ಟಿದ್ದರಿಂದ ಕಾಲು ಜಾರಿ ನೀರು ಪಾಲಾಗಿದ್ದಾನೆ. ಈ ಹಿನ್ನೆಲೆಯಲ್ಲಿ ಶನಿವಾರಸಂತೆ ಪೊಲೀಸರು, ಗ್ರಾಮಸ್ಥರು ಪರ್ಹಾನ್‍ಗಾಗಿ ಹುಡುಕಾಟ ನಡೆಸಿದ್ದಾರೆ. ಅಲ್ಲದೇ ರಾತ್ರಿ ಇಡೀ ಶೋಧ ಕಾರ್ಯ ನಡೆಸುತ್ತಿರುವ ಹಿನ್ನೆಲೆಯಲ್ಲಿ ಇಂದು ಮುಂಜಾನೆ ಮೃತದೇಹವನ್ನು ಹೊಳೆಯಿಂದ ಹೊರತೆಗೆಯಲಾಗಿತ್ತು. ಘಟನೆ ಸಂಬಂಧಿಸಿದಂತೆ ಶನಿವಾರಸಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಕೆಜಿಎಫ್‌ನಲ್ಲಿ ಅಣ್ಣಾಮಲೈ ರೌಂಡ್ಸ್

Share This Article
Leave a Comment

Leave a Reply

Your email address will not be published. Required fields are marked *