[Ruby_E_Template id="1354606"]
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

60 ಸಾವಿರ ಚದರಡಿಯಲ್ಲಿ ಮೂಡಿತು ಮಾನವ ಸರಪಳಿ ಭಾರತ ನಕಾಶೆ

Public TV
Last updated: January 28, 2018 9:17 am
Public TV
2 Min Read

ಕೊಪ್ಪಳ: ವಿಧಾನಸಭೆ ಚುನಾವಣೆಗೆ ಮೂರು ತಿಂಗಳು ಬಾಕಿ ಇರುವಾಗಲೇ, ರಾಜ್ಯದ ಪ್ರಮುಖ ಮೂರು ಪಕ್ಷಗಳು ಈಗಾಗಲೇ ಚುನಾವಣಾ ರಣಕಹಳೆ ಮೊಳಗಿಸಿವೆ. ಮೂರು ಪಕ್ಷದ ನಾಯಕರು ಚುನಾವಣಾ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ.

ಇದನ್ನೆಲ್ಲ ನೋಡಿದ ಕೊಪ್ಪಳದ ಜಿಲ್ಲಾ ಪಂಚಾಯತ್ ಸಿಇಒ ಮತ್ತು ಡಿಸಿ ನಾವೇನು ಕಮ್ಮಿ ಎಂದು ಚುನಾವಣೆ ಪ್ರಚಾರಕ್ಕೆ ಚಾಲನೆ ನೀಡಿದ್ದಾರೆ. ಹೌದು. ಜಿಲ್ಲಾಧಿಕಾರಿಗಳೂ ಚುನಾವಣೆ ಪ್ರಚಾರ ಮಾಡುತ್ತಿದ್ದು, ಸಾರ್ವಜನಿಕರಲ್ಲಿ ಮತದಾನದ ಕುರಿತ ಜಾಗೃತಿ ಮೂಡಿಸಲು ವಿಶೇಷವಾದ ಕಾರ್ಯಕ್ಕೆ ಮುಂದಾಗಿದ್ದಾರೆ.

ಜಾಗೃತಿ ಹೇಗೆ?: ವಿದ್ಯಾರ್ಥಿಗಳಿಂದ ಭಾರತರ ನಕಾಶೆ ಮಾದರಿಯಲ್ಲಿ ಮಾನವ ಸರಪಳಿ ನಿರ್ಮಿಸಿ ಅದರಲ್ಲಿ ಮನಸ್ಸಿಗೆ ಮುದ ನೀಡುವ ಕರ್ನಾಟಕ ನಕಾಶೆಯ ದೃಶ್ಯವನ್ನು ನಿರ್ಮಿಸಿದ್ದರು. ಕೊಪ್ಪಳದ ಗವಿಮಠದ ಆವರಣದಲ್ಲಿ ನಡೆದ ಮತದಾನದ ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ವಿವಿಧ ಕಾಲೇಜಿನ ಸುಮಾರು 7 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿಯಾಗಿದ್ದರು. ಭಾರತ ನಕಾಶೆ ಜೊತೆಗೆ ಕನ್ನಡದಲ್ಲಿ ನಮ್ಮ ಮತ, ನಮ್ಮ ಹಕ್ಕು ಎಂದು ಹಾಗೂ ಇಂಗ್ಲೀಷ್ ನಲ್ಲಿ ಮೈ ವೋಟ್, ಮೈ ರೈಟ್ಸ್ ಎಂಬ ಘೋಷ ವಾಕ್ಯ ಬರೆದು ಅದರಲ್ಲೂ ಮಾನವ ಸರಪಳಿ ಮಾಡಲಾಗಿತ್ತು.

ಮುಂಬಾರುವ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಳ ಮಾಡುವ ಉದ್ದೇಶದಿಂದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಚುನಾವಣಾ ಆಯೋಗ ಮತದಾನ ಜಾಗೃತಿ ಕಾರ್ಯಕ್ರಮ ಆಯೋಜಿಸಿದೆ. ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಮತದಾರರು ಚುನಾವಣಾ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಮಾಡುವ ಉದ್ದೇಶವನ್ನು ಈ ಕಾರ್ಯ ಹೊಂದಿದೆ. ಈ ಮೂಲಕ ಮತದಾನದ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಸಾರ್ವಜನಿಕರಲ್ಲಿ ಮತದಾನದ ಜಾಗೃತಿ ಮೂಡಿಸುವ ಕಾರ್ಯವನ್ನು ಪ್ರತಿ ಜಿಲ್ಲೆಯ ಜಿಪಂ ಸಿಇಒಗೆ ಚುನಾವಣಾ ಆಯೋಗ ಜವಾಬ್ದಾರಿ ವಹಿಸಿದೆ. ಈ ಹಿನ್ನೆಲೆಯಲ್ಲಿ ಮತದಾರರನ್ನು ಮತಗಟ್ಟೆಗೆ ಕರೆತರುವ ನಿಟ್ಟಿನಲ್ಲಿ ಜಾಗೃತಿ ಮೂಡಿಸಲು ರಾಜ್ಯಾದ್ಯಂತ ವಿಭಿನ್ನ ಮಾದರಿಯಲ್ಲಿ ಮತದಾನ ಜಾಗೃತಿ ಆರಂಭವಾಗಲಿದ್ದು, ಕೊಪ್ಪಳ ಜಿಲ್ಲಾಡಳಿತ ತುಸು ಮುಂಚಿತವಾಗಿಯೇ ಈ ಕಾರ್ಯಕ್ಕೆ ಚಾಲನೆ ನೀಡಿದೆ.

ಕಾರ್ಯಕ್ರಮದ ವೇಳೆ ಮಾತನಾಡಿದ ಕೊಪ್ಪಳ ಡಿಸಿ, ಮತದಾನದ ಹಕ್ಕನ್ನು ನಾವು ಚಲಾಯಿಸದಿದ್ದಲ್ಲಿ, ನಮಗೆ ನಾವು ವಂಚನೆ ಮಾಡಿಕೊಂಡಂತಾಗುತ್ತದೆ ಅಂದ್ರು. ಬಳಿಕ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿಶ್ವಾಸವುಳ್ಳ ನಾವು, ಯಾವುದೇ ಪ್ರೇರಣೆ ಮತ್ತು ದಾಕ್ಷಿಣ್ಯಕ್ಕೆ ಪ್ರಭಾವಿತರಾಗದೆ ಮತ ಚಲಾಯಿಸುತ್ತೇವೆ ಎಂಬ ಪ್ರತಿಜ್ಞಾವಿಧಿ ಭೋದಿಸಿದರು. ಈ ಬಾರಿ ಎಲ್ಲ ಪ್ರಜ್ಞಾವಂತರು ಮತಗಟ್ಟೆಗೆ ಬಂದು ಮತ ಚಲಾಯಿಸಲು. ಶೇ. 100 ರಷ್ಟು ಮತದಾನವಾಗಲಿ ಎಂಬ ಆಶಯವನ್ನು ವ್ಯಕ್ತಪಡಿಸಿದರು.

TAGGED:AwarenessDistrict AdministrationelectionsHuman ChainindiakarnatakaKoppalPublic TVvotingಕರ್ನಾಟಕಕೊಪ್ಪಳಚುನಾವಣೆಜಾಗೃತಿಜಿಲ್ಲಾಡಳಿತಪಬ್ಲಿಕ್ ಟಿವಿಭಾರತಮತದಾನಮಾನವ ಸರಪಳಿ

You Might Also Like

Bollywood

ಸಿದ್ಧಾರ್ಥ್ ಮಲ್ಹೋತ್ರಾ, ಕಿಯಾರಾ ಅಡ್ವಾಣಿ ದಂಪತಿಗೆ ಹೆಣ್ಣು ಮಗು ಜನನ

Public TV
By Public TV
7 hours ago
Bengaluru City

ಬೇಕರಿ, ದಿನಸಿ ಅಂಗಡಿಗಳಿಗೆ ಲಕ್ಷ ಲಕ್ಷ ಟ್ಯಾಕ್ಸ್‌ – ಬಂದ್‌ ಎಚ್ಚರಿಕೆ ಕೊಟ್ಟ ಮಾಲೀಕರು

Public TV
By Public TV
8 hours ago
Crime

ವಾಕಿಂಗ್ ವೇಳೆ ಕಾರು ಡಿಕ್ಕಿ – ಮ್ಯಾರಥಾನ್ ಓಟಗಾರ ಶತಾಯುಷಿ ಫೌಜಾ ಸಿಂಗ್ ಸಾವು

Public TV
By Public TV
8 hours ago
Bengaluru City

ಬೆಂಗಳೂರಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಹತ್ಯೆ

Public TV
By Public TV
8 hours ago
Big Bulletin

ಬಿಗ್‌ ಬುಲೆಟಿನ್‌ 15 July 2025 ಭಾಗ-1

Public TV
By Public TV
8 hours ago
Big Bulletin

ಬಿಗ್‌ ಬುಲೆಟಿನ್‌ 15 July 2025 ಭಾಗ-2

Public TV
By Public TV
8 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account