ಗದಗ: ತಾಲೂಕಿನ ಅಂತೂರು ಬೆಂತೂರು ಗ್ರಾಮದ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 40ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡ ಆತಂಕಕಾರಿ ಘಟನೆ ಶನಿವಾರ ನಡೆದಿದೆ.
ಉಪ್ಪಿಟ್ಟು ಸೇವಿಸಿದ ಬಳಿಕ ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ಕೆಲವರಿಗೆ ವಾಂತಿಯಾಗಿದ್ದು, ಇನ್ನು ಕೆಲವರಿಗೆ ತಲೆ ಸುತ್ತು ಬಂದಿದೆ ಎಂದು ಹೇಳಲಾಗಿದೆ.
108 ಅಂಬುಲೆನ್ಸ್ ಮಾಹಿತಿ ನೀಡಿದ್ರೂ ಸರಿಯಾದ ವೇಳೆಗೆ ಬರಲಿಲ್ಲ. ಹೀಗಾಗಿ ಅಸ್ವಸ್ಥಗೊಂಡ ಮಕ್ಕಳಿಗೆ ಶಾಲೆಯ ಆವರಣದಲ್ಲೇ ಚಿಕಿತ್ಸೆ ನೀಡಲಾಗಿದೆ. 15ಕ್ಕೂ ಹೆಚ್ಚು ಮಕ್ಕಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ವಿಷಯ ಗೊತ್ತಾಗಿ ಬಿಸಿ ಊಟ ತಯಾರಕರ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿಕ್ಷಣ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬಂದಿಲ್ಲ ಎಂದು ತಿಳಿಯಲಾಗಿದೆ.