ಶಾಲೆಗೆ ಬೀಗ ಜಡಿದು ಬೀದಿಗಳಿದ ವಿದ್ಯಾರ್ಥಿಗಳು!

1 Min Read

ಬಾಗಲಕೋಟೆ: ಶಿಕ್ಷಕರ ಕೊರತೆ ಹಿನ್ನೆಲೆಯಿಂದ ಬೇಸತ್ತು ಇಂದು ವಿದ್ಯಾರ್ಥಿಗಳು ಶಾಲೆಗೆ ಬೀಗ ಜಡಿದು, ರಸ್ತೆ ತಡೆದು ಪ್ರತಿಭಟನೆ ನಡೆಸಿದ ಘಟನೆ ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಅಡಿಗುಡಿ ಗ್ರಾಮದಲ್ಲಿ ನಡೆದಿದೆ.

ಅಡಿಹುಡಿ ಗ್ರಾಮದ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ಕಳೆದ ಆರು ತಿಂಗಳಿಂದ ಗಣಿತ ಮತ್ತು ಇಂಗ್ಲಿಷ್ ಶಿಕ್ಷಕರ ಕೊರತೆ ಎದುರಿಸುತ್ತಿದ್ದಾರೆ. ಈ ಬಗ್ಗೆ ಅನೇಕ ಬಾರಿ ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಆದರೆ ಯಾರೂ ಮನವಿಗೆ ಸ್ಪಂದಿಸಿಲ್ಲ.

ಇಲಾಖೆಯ ಆದಿಕಾರಿಳ ಸ್ಪಂದನೆ ದೊರೆಯದಿದ್ದರಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು ಇಂದು ತಾವು ಕಲಿಯುತ್ತಿರುವ ಸರಕಾರಿ ಪ್ರೌಢಶಾಲೆಗೆ ತಾವೆ ಬೀಗ ಜಡಿದರು. ಜೊತೆಗೆ ಗ್ರಾಮದ ರಸ್ತೆ ತಡೆದು ಧರಣಿ ನಡೆಸಿದರು. ಶಿಕ್ಷಣ ಇಲಾಖೆ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿದರು.

ಶಿಕ್ಷಕರ ಕೊರತೆ ಹಿನ್ನೆಲೆ ಅಭ್ಯಾಸಕ್ಕೆ ತೊಂದರೆಯಾಗುತ್ತಿದ್ದು, ಕೂಡಲೆ ಶಿಕ್ಷಕರನ್ನು ನೇಮಿಸುವಂತೆ ಪ್ರತಿಔಟನೆಯ ವೇಳೆ ಆಗ್ರಹಿಸಿದ್ರು.

Share This Article
Leave a Comment

Leave a Reply

Your email address will not be published. Required fields are marked *