ಕಾಲೇಜು ಮುಚ್ಚುವ ಪ್ರಯತ್ನ-ವಿದ್ಯಾರ್ಥಿಗಳಿಂದ ಪ್ರತಿಭಟನೆ

Public TV
1 Min Read
TMK PRATIBATANE

ತುಮಕೂರು: ಜಿಲ್ಲೆಯ ಕೊರಟೆಗೆರೆ ತಾಲೂಕಿನಲ್ಲಿ ಸ್ಥಳೀಯ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಆರಂಭಿಸಿದ್ದ ಪಾಲಿಟೆಕ್ನಿಕ್ ಕಾಲೇಜು ಮುಚ್ಚುವ ಸ್ಥಿತಿಯಲ್ಲಿದೆ. ಆದ್ರೆ ದಿಡೀರ್ ಅಂತಾ ಕಾಲೇಜು ಮುಚ್ಚುವದರಿಂದ ತೊಂದರೆ ಆಗುತ್ತಿದೆ ಎಂದು ಕಾಲೇಜು ಆಡಳಿತ ಮಂಡಳಿ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.

ಕಾಲೇಜು ನಿರ್ವಹಣೆ ಮಾಡಲು ಸಾಧ್ಯವಾಗುತ್ತಿಲ್ಲ ಎಂಬುವ ನೆಪವೊಡ್ಡಿ ಬಂದ್ ಮಾಡಲು ಜಿಲ್ಲಾಡಳಿತ ನಿರ್ಧರಿಸಿದೆ. ಹಾಗಾಗಿ ಪ್ರಥಮ ವರ್ಷದ ಡಿಪ್ಲೋಮಾಗೆ ಪ್ರವೇಶಾತಿ ಪ್ರಕ್ರಿಯೆ ರದ್ದು ಮಾಡಲಾಗಿದೆ. ಇದರ ಜೊತೆಗೆ ದ್ವಿತೀಯ ಮತ್ತು ತೃತೀಯ ವರ್ಷದ ವಿದ್ಯಾರ್ಥಿಗಳಿಗೂ ಟಿ.ಸಿ.ಕೊಟ್ಟು ಕಳುಹಿಸಿಲು ಮುಂದಾಗಿದೆ. ಪರಿಣಾಮ ಪರೀಕ್ಷೆ ಬರೆಯಬೇಕಿದ್ದ ಸುಮಾರು 120 ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ 30 ಜನ ಸಿಬ್ಬಂದಿಗಳ ಭವಿಷ್ಯವೂ ಡೋಲಾಯಮಾನವಾಗಿದೆ. ಬೇರೆ ಕಾಲೇಜಿಗೆ ಹೋಗೋಣ ಅಂದರೂ ಎಲ್ಲಾ ಕಾಲೇಜುಗಳಲ್ಲಿ ಅಡ್ಮಿಷನ್ ಕ್ಲೋಸ್ ಆಗಿದೆ. ಇದರಿಂದ ವಿದ್ಯಾರ್ಥಿಗಳು ಕಾಲೇಜು ಮುಚ್ಚದಂತೆ ಪ್ರತಿಭಟನೆಯ ಹಾದಿ ತುಳಿದಿದ್ದಾರೆ.

ವಿದ್ಯಾರ್ಥಿಗಳ ಪ್ರತಿಭಟನೆಯಿಂದ ಎಚ್ಚೆತ್ತುಕೊಂಡ ಮಧುಗಿರಿ ಎ.ಸಿ. ದ್ವಿತೀಯ ಮತ್ತು ತೃತೀಯ ವರ್ಷದ ತರಗತಿಯನ್ನು ಸರ್ಕಾರದ ಆದೇಶ ಪುನರ್ ಆರಂಭಿಸುವ ಭರವಸೆ ಕೊಟ್ಟಿದ್ದಾರೆ. ಇದು ಕೇವಲ ಕಣ್ಣೊರೆಸುವ ತಂತ್ರ ಎಂದು ಆರೋಪಿಸಿದ ವಿದ್ಯಾರ್ಥಿಗಳು ಜಿಲ್ಲಾಡಳಿತ ನಡುನೀರಿನಲ್ಲಿ ಕೈ ಬಿಡಲಿದೆ ಎಂಬ ಭಯದಿಂದ ಹೋರಾಟ ಮುಂದುವರೆಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *