ತುಮಕೂರು: ಹೈದರಾಬಾದ್ ದಿಶಾ ಪ್ರಕರಣ ಅತ್ಯಾಚಾರಿಗಳನ್ನು ಸೈಬರಾಬಾದ್ ಪೊಲೀಸ್ ಆಯುಕ್ತ ವಿಶ್ವನಾಥ್ ಸಜ್ಜನರ್ ನೇತೃತ್ವದ ತಂಡ ಎನ್ಕೌಂಟರ್ ಮಾಡಿರುವ ಹಿನ್ನೆಲೆ ಸಂಭ್ರಮಾಚರಣೆ ವೇಳೆ ಕಳ್ಳಾಟವಾಡಿದ ಕಾಮುಕನಿಗೆ ಸಖತ್ ಗೂಸ ಬಿದ್ದಿದೆ.
ಇಡೀ ದೇಶವೇ ಹೈದರಾಬಾದ್ ಪೊಲೀಸರ ಕಾರ್ಯವನ್ನು ಶ್ಲಾಘಿಸಿದೆ. ಅತ್ಯಚಾರಿಗಳನ್ನು ಎನ್ಕೌಂಟರ್ ಮಾಡಿದ ಖುಷಿಯಲ್ಲಿ ತುಮಕೂರಿನಲ್ಲಿ ವಿದ್ಯಾರ್ಥಿಗಳು, ಸಾರ್ವಜನಿಕರು ಸಂಭ್ರಮಾಚರಣೆ ಮಾಡಿದ್ದಾರೆ. ತಿಪಟೂರು ನಗರದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು ಬಳಿ ವಿದ್ಯಾರ್ಥಿನಿಯರು, ಸಾರ್ವಜನಿಕರು ಸಿಹಿ ಹಂಚಿ ಸಂತೋಷಪಟ್ಟಿದ್ದಾರೆ. ಈ ನಡುವೆ ಹುಡಿಗಿಯರನ್ನ ಚುಡಾಯಿಸಿದ ವ್ಯಕ್ತಿಗೆ ವಿದ್ಯಾರ್ಥಿನಿಯರು ಹಾಗೂ ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿದ್ದಾರೆ.
ಕಾಮುಕರಿಗೆ ಪೊಲೀಸರು ಎನ್ಕೌಂಟರ್ ಮಾಡಿ ತಕ್ಕಶಾಸ್ತಿ ಮಾಡಿದ್ದಾರೆ ಎಂದು ಜನರು ಖುಷಿಪಟ್ಟು ಸಂಭ್ರಮಿಸುತ್ತಿದ್ದಾಗಲೇ ಈ ಘಟನೆ ನಡೆದಿರುವುದು ವಿರ್ಪಯಾಸ ಎಂದು ಸಾರ್ವಜನಿಕರು ಬೇಸರ ವ್ಯಕಪಡಿಸಿದ್ದಾರೆ.
ಹೈದರಾಬಾದ್-ಬೆಂಗಳೂರು ಹೈವೇ 44ರಲ್ಲಿ ಪೊಲೀಸರು ಅತ್ಯಾಚಾರಿಗಳನ್ನು ಎನ್ಕೌಂಟರ್ ಮಾಡಿದ್ದಾರೆ. ಕಾಮುಕರು ಪಶುವೈದ್ಯೆಯನ್ನು ಬೆಂಕಿ ಹಚ್ಚಿ ಸುಟ್ಟ ಸ್ಥಳದಲ್ಲೇ ಪೊಲೀಸರು ಅತ್ಯಾಚಾರಿಗಳ ಮೇಲೆ ಫೈರಿಂಗ್ ಮಾಡಿ ಹತ್ಯೆ ಮಾಡಿದ್ದಾರೆ. ಪಶುವೈದ್ಯೆಯನ್ನು ಸುಟ್ಟ ಘಟನಾ ಸ್ಥಳ ಮಹಜರು ವೇಳೆ ಆರೋಪಿಗಳು ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದರು. ಈ ವೇಳೆ ಪೊಲೀಸರು ನಾಲ್ವರು ಅತ್ಯಾಚಾರಿಗಳ ಮೇಲೆ ಎನ್ಕೌಂಟರ್ ಮಾಡಿದ್ದಾರೆ.