ಸ್ಥಳೀಯ ಸಂಸ್ಥೆ ಚುನಾವಣೆ – ಸುಪ್ರೀಂ ಕೋರ್ಟ್ ಆದೇಶ ಅಧ್ಯಯನಕ್ಕೆ ಸಿಎಂ ಸೂಚನೆ

Public TV
1 Min Read
BASAVARAJ BOMMAI 1

ನವದೆಹಲಿ: ಮಧ್ಯಪ್ರದೇಶಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಕುರಿತು ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ಸಂಪೂರ್ಣ ಅಧ್ಯಯನ ಮಾಡುವಂತೆ ಕಾನೂನು ಇಲಾಖೆಗೆ ಹಾಗೂ ಅಡ್ವೊಕೇಟ್ ಜನರಲ್ ಅವರಿಗೆ ತಿಳಿಸಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

supreme court 12

ನವದೆಹಲಿಯಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ಆದೇಶ ಪ್ರತಿ ನಮಗೆ ಬಂದಿಲ್ಲ. ಚುನಾವಣಾ ಆಯೋಗ ಏನು ತೀರ್ಮಾನ ಹೇಳುತ್ತದೆ ಅದನ್ನು ಪಾಲಿಸಲಾಗುವುದು ಎಂದು ಹೇಳಿದ್ದಾರೆ. ಇದನ್ನೂ ಓದಿ: ಶೀಘ್ರವೇ ಬಿಬಿಎಂಪಿ ಚುನಾವಣೆ: ಸುಪ್ರೀಂನಿಂದ ಮಹತ್ವದ ತೀರ್ಪು

ಸುಪ್ರೀಂ ಕೋರ್ಟ್ ಆದೇಶ ಎಲ್ಲಾ ರಾಜ್ಯಗಳಿಗೆ ಹಾಗೂ ಸ್ಥಳೀಯ ಸಂಸ್ಥೆಗಳಿಗೆ ಅನ್ವಯವಾಗುತ್ತದೆ. ಚುನಾವಣಾ ಆಯೋಗದೊಂದಿಗೆ ಚರ್ಚಿಸಿ ಅವರು ಸೂಚಿಸಿದಂತೆ ಕ್ರಮ ವಹಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿಂದು 129 ಮಂದಿಗೆ ಕೊರೊನಾ ಸೋಂಕು – 128 ಮಂದಿ ಗುಣಮುಖ

Share This Article
Leave a Comment

Leave a Reply

Your email address will not be published. Required fields are marked *